Homeಕರ್ನಾಟಕಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಇಲಾಖಾ ತನಿಖೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಉತ್ತರ ಉಪ ವಿಭಾಗದ ಎಸಿಪಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ.

ಮಹಿಳೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದನ್ನು ಗಮನಿಸಿದ ರಾಜ್ಯ ಮಹಿಳಾ ಆಯೋಗ ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಮಿಷನರ್‌ಗೆ ಸೂಚಿಸಿತ್ತು ಎಂದು ವರದಿ ಉಲ್ಲೇಖಿಸಿದೆ.

“ನನ್ನ ಗಂಡನ ವಿರುದ್ಧ ಸುಳ್ಳು ಪ್ರಕರಣವೊಂದು ದಾಖಲಾಗಿತ್ತು. ಆ ಸಂಬಂಧ ಪೊಲೀಸರು ಅವರನ್ನು ಬಂಧಿಸಿದ್ದರು. ಗಂಡನನ್ನು ಬಿಡುಗಡೆ ಮಾಡಬೇಕಾದರೆ ತನ್ನ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಇನ್‌ಸ್ಪೆಕ್ಟರ್ ಸಂದೇಶ್ ಒತ್ತಾಯಿಸಿದ್ದಾರೆ. 25 ಲಕ್ಷ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಒಪ್ಪದಿದ್ದರೆ ನನ್ನ ಗಂಡನ ವಿರುದ್ದ ರೌಡಿ ಶೀಟ್ ತೆರೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ” ಎಂದು ಮಹಿಳೆಯೊಬ್ಬರು ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.

“ಇನ್‌ಸ್ಪೆಕ್ಟರ್ ಸಂದೇಶ್ ನನಗೆ ಮಾತ್ರವಲ್ಲದೆ ಇತರ ಹಲವು ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಾರೆ. ನಾನು ಪೊಲೀಸ್ ಠಾಣೆಗೆ ಹೋದಾಗ ವಾಹನ ನಿಲುಗಡೆ ಜಾಗದಲ್ಲಿ ನನಗೆ ಬೆದರಿಕೆ ಹಾಕಿದ್ದಾರೆ. ಅವರು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಲಂಚ ಕೊಟ್ಟು ಪೊಲೀಸ್ ಹುದ್ದೆ ಗಿಟ್ಟಿಸಿಕೊಂಡಿದ್ದಾಗಿ ಹೇಳಿದ್ದಾರೆ. ನೀನು ಯಾರಿಗೆ ದೂರು ಕೊಟ್ಟರೂ ನನಗೆ ಏನೂ ಆಗುವುದಿಲ್ಲ ಎಂದು ಬೆದರಿಸಿದ್ದಾರೆ” ಎಂದು ಮಹಿಳೆ ಟಿವಿ ವಾಹಿನಿಗಳಲ್ಲಿ ಆರೋಪ ಮಾಡಿದ್ದಾರೆ.

ಇನ್‌ಸ್ಪೆಕ್ಟರ್ ಸಂದೇಶ್ ಮೊಬೈಲ್‌ನಲ್ಲಿ ಹಾಡು ಹಾಕಿ ಮಹಿಯೊಬ್ಬರೊಂದಿಗೆ ಡ್ಯಾನ್ಸ್ ಮಾಡುವಂತೆ ಒತ್ತಾಯಿಸುವ, ಅವರ ಕೈಯನ್ನು ಬಲವಂತವಾಗಿ ಹಿಡಿದು ಡ್ಯಾನ್ಸ್‌ ಮಾಡುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಮಾಧ್ಯಮಗಳು ಪ್ರಕಟಿಸಿರುವ ಮತ್ತೊಂದು ಸಿಸಿಟಿವಿ ವಿಡಿಯೋದಲ್ಲಿ ಸಂದೇಶ್ ಅವರು ರಾತ್ರಿ ಹೊತ್ತು ಮನೆಯೊಂದರ ಗೇಟ್ ಹಾರಿ ಒಳ ಹೋಗುವ ದೃಶ್ಯವಿದೆ. ಇವೆಲ್ಲವೂ ಸಂತ್ರಸ್ತ ಮಹಿಳೆಯರು ಸಂಗ್ರಹಿಸಿದ ಸಾಕ್ಷ್ಯಗಳು ಎಂದು ಮಹಿಳೆ ತಿಳಿಸಿದ್ದಾರೆ.

“ನನಗೆ ಇನ್‌ಸ್ಪೆಕ್ಟರ್ ಸಂದೇಶ್ ಕಿರುಕುಳ ನೀಡುತ್ತಿದ್ದ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರಿಗೆ ಪತ್ರ ಬರೆದು ಹೇಳಿಕೊಂಡಿದ್ದೇನೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೊಲೀಸ್ ಆಯುಕ್ತರಿಗೆ ಬರೆದ ಪತ್ರಕ್ಕೆ ವಿಷಯವನ್ನು ವಿಲೇ ಮಾಡಲಾಗಿದೆ ಎಂದು ಹಿಂಬರಹ ಕೊಟ್ಟಿದ್ದಾರೆ. ಆದರೆ, ಒಮ್ಮೆಯೂ ನನ್ನನ್ನು ವಿಚಾರಣೆ ಮಾಡಿಲ್ಲ” ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ಇನ್‌ಸ್ಪೆಕ್ಟರ್ ಸಂದೇಶ್‌ಗೆ ಸಂಬಂಧಪಟ್ಟ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆತನ ವಿರುದ್ದ ಕಠಿಣ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿ ಬಂದಿದೆ.

ಮಹಿಳೆ ದೂರು ನೀಡಿಲ್ಲ : ಕಮಿಷನರ್

“ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಮಹಿಳೆ ನನಗೆ ಯಾವುದೇ ದೂರು ನೀಡಿಲ್ಲ. ಯಾವುದೇ ಸಂತ್ರಸ್ತ ವ್ಯಕ್ತಿ ಬಂದು ದೂರು ನೀಡಿದರೂ ಆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಇನ್‌ಸ್ಪೆಕ್ಟರ್ ವಿರುದ್ದ ಮಾಡಲಾದ ಆರೋಪಗಳ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ನಗರ ಉತ್ತರ ಉಪವಿಭಾಗ ಎಸಿಪಿಯವರಿಗೆ ಸೂಚಿಸಿದ್ದೇನೆ. ಎಸಿಪಿಯಿಂದ ವರದಿ ಬಂದ ಬಳಿಕ ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...