Homeಕರ್ನಾಟಕಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಇಲಾಖಾ ತನಿಖೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಉತ್ತರ ಉಪ ವಿಭಾಗದ ಎಸಿಪಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ.

ಮಹಿಳೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದನ್ನು ಗಮನಿಸಿದ ರಾಜ್ಯ ಮಹಿಳಾ ಆಯೋಗ ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಮಿಷನರ್‌ಗೆ ಸೂಚಿಸಿತ್ತು ಎಂದು ವರದಿ ಉಲ್ಲೇಖಿಸಿದೆ.

“ನನ್ನ ಗಂಡನ ವಿರುದ್ಧ ಸುಳ್ಳು ಪ್ರಕರಣವೊಂದು ದಾಖಲಾಗಿತ್ತು. ಆ ಸಂಬಂಧ ಪೊಲೀಸರು ಅವರನ್ನು ಬಂಧಿಸಿದ್ದರು. ಗಂಡನನ್ನು ಬಿಡುಗಡೆ ಮಾಡಬೇಕಾದರೆ ತನ್ನ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಇನ್‌ಸ್ಪೆಕ್ಟರ್ ಸಂದೇಶ್ ಒತ್ತಾಯಿಸಿದ್ದಾರೆ. 25 ಲಕ್ಷ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಒಪ್ಪದಿದ್ದರೆ ನನ್ನ ಗಂಡನ ವಿರುದ್ದ ರೌಡಿ ಶೀಟ್ ತೆರೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ” ಎಂದು ಮಹಿಳೆಯೊಬ್ಬರು ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.

“ಇನ್‌ಸ್ಪೆಕ್ಟರ್ ಸಂದೇಶ್ ನನಗೆ ಮಾತ್ರವಲ್ಲದೆ ಇತರ ಹಲವು ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಾರೆ. ನಾನು ಪೊಲೀಸ್ ಠಾಣೆಗೆ ಹೋದಾಗ ವಾಹನ ನಿಲುಗಡೆ ಜಾಗದಲ್ಲಿ ನನಗೆ ಬೆದರಿಕೆ ಹಾಕಿದ್ದಾರೆ. ಅವರು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಲಂಚ ಕೊಟ್ಟು ಪೊಲೀಸ್ ಹುದ್ದೆ ಗಿಟ್ಟಿಸಿಕೊಂಡಿದ್ದಾಗಿ ಹೇಳಿದ್ದಾರೆ. ನೀನು ಯಾರಿಗೆ ದೂರು ಕೊಟ್ಟರೂ ನನಗೆ ಏನೂ ಆಗುವುದಿಲ್ಲ ಎಂದು ಬೆದರಿಸಿದ್ದಾರೆ” ಎಂದು ಮಹಿಳೆ ಟಿವಿ ವಾಹಿನಿಗಳಲ್ಲಿ ಆರೋಪ ಮಾಡಿದ್ದಾರೆ.

ಇನ್‌ಸ್ಪೆಕ್ಟರ್ ಸಂದೇಶ್ ಮೊಬೈಲ್‌ನಲ್ಲಿ ಹಾಡು ಹಾಕಿ ಮಹಿಯೊಬ್ಬರೊಂದಿಗೆ ಡ್ಯಾನ್ಸ್ ಮಾಡುವಂತೆ ಒತ್ತಾಯಿಸುವ, ಅವರ ಕೈಯನ್ನು ಬಲವಂತವಾಗಿ ಹಿಡಿದು ಡ್ಯಾನ್ಸ್‌ ಮಾಡುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಮಾಧ್ಯಮಗಳು ಪ್ರಕಟಿಸಿರುವ ಮತ್ತೊಂದು ಸಿಸಿಟಿವಿ ವಿಡಿಯೋದಲ್ಲಿ ಸಂದೇಶ್ ಅವರು ರಾತ್ರಿ ಹೊತ್ತು ಮನೆಯೊಂದರ ಗೇಟ್ ಹಾರಿ ಒಳ ಹೋಗುವ ದೃಶ್ಯವಿದೆ. ಇವೆಲ್ಲವೂ ಸಂತ್ರಸ್ತ ಮಹಿಳೆಯರು ಸಂಗ್ರಹಿಸಿದ ಸಾಕ್ಷ್ಯಗಳು ಎಂದು ಮಹಿಳೆ ತಿಳಿಸಿದ್ದಾರೆ.

“ನನಗೆ ಇನ್‌ಸ್ಪೆಕ್ಟರ್ ಸಂದೇಶ್ ಕಿರುಕುಳ ನೀಡುತ್ತಿದ್ದ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರಿಗೆ ಪತ್ರ ಬರೆದು ಹೇಳಿಕೊಂಡಿದ್ದೇನೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೊಲೀಸ್ ಆಯುಕ್ತರಿಗೆ ಬರೆದ ಪತ್ರಕ್ಕೆ ವಿಷಯವನ್ನು ವಿಲೇ ಮಾಡಲಾಗಿದೆ ಎಂದು ಹಿಂಬರಹ ಕೊಟ್ಟಿದ್ದಾರೆ. ಆದರೆ, ಒಮ್ಮೆಯೂ ನನ್ನನ್ನು ವಿಚಾರಣೆ ಮಾಡಿಲ್ಲ” ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ಇನ್‌ಸ್ಪೆಕ್ಟರ್ ಸಂದೇಶ್‌ಗೆ ಸಂಬಂಧಪಟ್ಟ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆತನ ವಿರುದ್ದ ಕಠಿಣ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿ ಬಂದಿದೆ.

ಮಹಿಳೆ ದೂರು ನೀಡಿಲ್ಲ : ಕಮಿಷನರ್

“ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಮಹಿಳೆ ನನಗೆ ಯಾವುದೇ ದೂರು ನೀಡಿಲ್ಲ. ಯಾವುದೇ ಸಂತ್ರಸ್ತ ವ್ಯಕ್ತಿ ಬಂದು ದೂರು ನೀಡಿದರೂ ಆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಇನ್‌ಸ್ಪೆಕ್ಟರ್ ವಿರುದ್ದ ಮಾಡಲಾದ ಆರೋಪಗಳ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ನಗರ ಉತ್ತರ ಉಪವಿಭಾಗ ಎಸಿಪಿಯವರಿಗೆ ಸೂಚಿಸಿದ್ದೇನೆ. ಎಸಿಪಿಯಿಂದ ವರದಿ ಬಂದ ಬಳಿಕ ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...