Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...