Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...