Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...