Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...