Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...