Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...