Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....