Homeಮುಖಪುಟಎಸ್‌ಸಿ, ಎಸ್‌ಟಿಯಲ್ಲಿ 'ಕೆನೆಪದರ'ಕ್ಕೆ ಅವಕಾಶವಿಲ್ಲ, ಸಂವಿಧಾನಕ್ಕೆ ಬದ್ದ : ಕೇಂದ್ರ ಸರ್ಕಾರ

ಎಸ್‌ಸಿ, ಎಸ್‌ಟಿಯಲ್ಲಿ ‘ಕೆನೆಪದರ’ಕ್ಕೆ ಅವಕಾಶವಿಲ್ಲ, ಸಂವಿಧಾನಕ್ಕೆ ಬದ್ದ : ಕೇಂದ್ರ ಸರ್ಕಾರ

- Advertisement -
- Advertisement -

ಎಸ್‌ಸಿ, ಎಸ್‌ಟಿಯಲ್ಲಿ ಕೆನೆಪದರಕ್ಕೆ ಅವಕಾಶವಿಲ್ಲ. ಈ ವಿಚಾರದಲ್ಲಿ ಎನ್‌ಡಿಎ ಸರ್ಕಾರ ಸಂವಿಧಾನಕ್ಕೆ ಬದ್ದವಾಗಿ ಇರಲಿದೆ ಎಂದು ನಿನ್ನೆ (ಆ.9) ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, “ಡಾ. ಬಿಆರ್ ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿಯಲ್ಲಿ ಕೆನೆಪದರಕ್ಕೆ ಯಾವುದೇ ಅವಕಾಶವಿಲ್ಲ” ಎಂದು ಹೇಳಿದ್ದಾರೆ.

“ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಕುರಿತು ಕೆಲವು ಸಲಹೆಗಳನ್ನು ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಸಚಿವ ಸಂಪುಟ ಸಭೆಯಲ್ಲಿ ವಿವರವಾದ ಚರ್ಚೆ ನಡೆದಿದೆ” ಎಂದು ವೈಷ್ಣವ್ ತಿಳಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಇಲಾಖೆ ಸಚಿವರು ಈ ವಿಷಯ ಎತ್ತಿದರೇ? ಎಂಬ ಪ್ರಶ್ನೆಗೆ ಉತ್ತರಿಸಲು ವೈಷ್ಣವ್ ನಿರಾಕರಿಸಿದ್ದಾರೆ. ಸಂಪುಟ ಸಭೆಯಲ್ಲಿ ಕೆನೆಪದರ ವಿಷಯವನ್ನು ಒಂದು ವಿಷಯವನ್ನಾಗಿ ಎತ್ತಿಕೊಳ್ಳಲಾಗಿತ್ತು. ಎಸ್‌ಸಿ, ಎಸ್‌ಟಿಯಲ್ಲಿ ಕೆನೆಪದರಕ್ಕೆ ಅವಕಾಶವಿಲ್ಲ. ಈ ವಿಚಾರದಲ್ಲಿ ಎನ್‌ಡಿಎ ಸರ್ಕಾರ ಸಂವಿಧಾನಕ್ಕೆ ಬದ್ಧವಾಗಿ ಇರಲಿದೆ ಎಂದು ಪುನರುಚ್ಚರಿಸಿದ್ದಾರೆ.

ಒಳ ಮೀಸಲಾತಿ ಸಂಬಂಧ ಶಾಸಕಾಂಗದ ಕಡೆಯಿಂದ ಯಾವುದಾದರು ಬದಲಾವಣೆಗಳನ್ನು ಯೋಜಿಸಲಾಗಿದೆಯೇ? ಎಂಬ ಪ್ರಶ್ನೆಗೆ, ” ಸಚಿವ ಸಂಪುಟ ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ನಾನು ನಿಮಗೆ ಹೇಳಿದ್ದೇನೆ” ಎಂದು ವೈಷ್ಣವ್ ಜಾರಿಕೊಂಡಿದ್ದಾರೆ.

ಶುಕ್ರವಾರ ಸಂಪುಟ ಸಭೆಗೂ ಮುನ್ನ ಎಸ್‌ಸಿ ಮತ್ತು ಎಸ್‌ಟಿ ಸಂಸದರ ನಿಯೋಗ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಒಳಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಚರ್ಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ “ಇಂದು ಎಸ್‌ಸಿ, ಎಸ್‌ಟಿ ಸಂಸದರ ನಿಯೋಗ ನನ್ನನ್ನು ಭೇಟಿ ಮಾಡಿದ್ದಾರೆ. ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ನಾವು ಬದ್ದರಾಗಿದ್ದೇವೆ” ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಪೀಠವು 6:1 ಬಹುಮತದ ತೀರ್ಪಿನಲ್ಲಿ ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಎಸ್‌ಸಿ ಸಮುದಾಯಗಳನ್ನು ಉಪ-ವರ್ಗೀಕರಿಸಲು ರಾಜ್ಯ ಸರ್ಕಾರಗಳಿಗೆ ಅವಕಾಶ ಇದೆ ಎಂದಿತ್ತು.

ತೀರ್ಪು ಪ್ರಕಟಿಸುವ ವೇಳೆ ಎಸ್‌ಸಿ, ಎಸ್‌ಟಿಯಲ್ಲಿ ಕೆನೆಪದರವನ್ನು ಗುರುತಿಸುವ ನೀತಿಯನ್ನು ರಾಜ್ಯಗಳು ರೂಪಿಸಬೇಕು ಮತ್ತು ಅವರಿಗೆ ಮೀಸಲಾತಿಯ ಪ್ರಯೋಜನವನ್ನು ನಿರಾಕರಿಸಬೇಕು ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ಹೇಳಿದ್ದರು.

ಪ್ರಧಾನಿಯನ್ನು ಭೇಟಿಯಾದ ನಿಯೋಗದ ಭಾಗವಾಗಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ಸಿಕಂದರ್ ಕುಮಾರ್ ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ್ದು, “ಕೆನೆಪದರ ಕುರಿತ ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಾವೆಲ್ಲರೂ ಚಿಂತಿತರಾಗಿದ್ದೆವು. ಈ ವಿಷಯದಲ್ಲಿ ಕಳವಳ ವ್ಯಕ್ತಪಡಿಸಿ ಜನರು ನಮಗೆ ಕರೆ ಮಾಡುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಬಿಜೆಪಿ ಸಂಸದ ಫಗ್ಗನ್ ಸಿಂಗ್ ಕುಲಸ್ತೆ ಮಾತನಾಡಿ, “ಕೆನೆಪದರದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ಅವಲೋಕನವನ್ನು ಕಾರ್ಯಗತಗೊಳಿಸಬಾರದು ಎಂದು ನಿಯೋಗವು ಪ್ರಧಾನಿಗೆ ತನ್ನ ಜ್ಞಾಪಕ ಪತ್ರದಲ್ಲಿ ಒತ್ತಾಯಿಸಿದೆ” ಎಂದಿದ್ದಾರೆ.

“ಪ್ರಧಾನಿ ಕೂಡ ಇದೇ ರೀತಿಯ ಅಭಿಪ್ರಾಯವನ್ನು ಹೊಂದಿದ್ದು, ಅವರು ಈ ವಿಷಯವನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ಚಿಂತಿಸಬೇಡಿ, ಎಸ್‌ಸಿ-ಎಸ್‌ಟಿಯಲ್ಲಿ ಕೆನೆಪದರ ಜಾರಿಗೆ ತರುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ” ಎಂದು ಕುಲಸ್ತೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ : “ನೀವು ಮಾತನಾಡುವ ಟೋನ್ ಸರಿಯಿಲ್ಲ” : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ; ಕ್ಷಮೆ ಕೇಳುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...