Homeಕರ್ನಾಟಕಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

ಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

- Advertisement -
- Advertisement -

‘ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘ಸಮಯ ಕೊಲ್ಲುವ’ ತಂತ್ರ ಅಷ್ಟೇ ಆಗಿದೆ’ ಎಂದು ಆರೋಪಿಸಿದ್ದಾರೆ.

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು’ ಎಂದು ಸಿಎಂ ಆಗ್ರಹಿಸಿದ್ದಾರೆ.

‘ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯ ಇಲ್ಲ. ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು ಹೊರಟ ಹಾಗೆ ಕಾಣುತ್ತಿದೆ’ ಎಂದಿದ್ದಾರೆ.

‘ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡಬೇಕೆಂದು ಆಂಧ್ರಪ್ರದೇಶದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಬೇಡಿಕೆಯ ಪರಿಶೀಲನೆಗೆ ನೇಮಿಸಲಾದ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿದೆ ಎಂದು 2023ರ ಜುಲೈ 23ರಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದರು. ಇದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹಮೂರ್ತಿ ಅವರ ಪ್ರಶ್ನೆಗೆ ನೀಡಿದ್ದ ಉತ್ತರವಾಗಿತ್ತು. ಈಗ ಇದೇ ಸಚಿವ ಎ.ನಾರಾಯಣ ಸ್ವಾಮಿಯವರು ಒಳಮೀಸಲಾತಿಗೆ ಸಂವಿಧಾನದ ತಿದ್ದುಪಡಿಯ ಅಗತ್ಯ ಇಲ್ಲ ಎಂದು ಹೇಳುತ್ತಿರುವುದು ವಿಪರ್ಯಾಸ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ಎಂದಿನಂತೆ ಎರಡೆರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯ ಈಡೇರಿಕೆಯ ಹೊಣೆ ತಮ್ಮ ಹೆಗಲ ಮೇಲೆ ಬಿದ್ದ ನಂತರ ತಳಮಳಕ್ಕೀಡಾಗಿರುವ ಬಿಜೆಪಿ ನಾಯಕರು ತಲೆಗೊಬ್ಬರಂತೆ ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಿದ್ದಾರೆ; ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

‘ಪರಿಶಿಷ್ಟರ ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಅಗತ್ಯ ಇಲ್ಲ ಎಂದು ಮಾಜಿ ಸಚಿವ ಗೋವಿಂದಪ್ಪ ಕಾರಜೋಳ ಹೇಳುತ್ತಿದ್ದಾರೆ. ಸದಾಶಿವ ಆಯೋಗದ ವರದಿಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುತ್ತಿದ್ದಾರೆ. ಈ ರೀತಿಯ ನಿರಾಧಾರ ಮಾತುಗಳಿಂದ ತಮ್ಮ ಅಜ್ಞಾನವನ್ನು ತಾವೇ ಪ್ರದರ್ಶಿಸುತ್ತಿದ್ದೇವೆ ಎಂಬ ಅರಿವು ಇವರಿಗೆ ಇದ್ದ ಹಾಗಿಲ್ಲ’ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

‘ಮಾಜಿ ಸಚಿವ ಗೋವಿಂದ ಕಾರಜೋಳರಂತಹ ಹಿರಿಯ ದಲಿತ ನಾಯಕರು ಮತ್ತು ತಮ್ಮನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿ ಎಂದು ಕರೆದುಕೊಳ್ಳುವವರು ಕೂಡಾ ಸಂವಿಧಾನವನ್ನು ತಿರುಚಲು ಹೊರಟಿರುವುದು ವಿಷಾದನೀಯ. ಇಂತಹ ತಪ್ಪು ಮಾಹಿತಿಗಳನ್ನು ಮಾಜಿ ಸಚಿವ ಕಾರಜೋಳ ಹಂಚಿಕೊಳ್ಳುತ್ತಿರುವುದು ಖಂಡಿತ ಅವರ ಅಜ್ಞಾನದಿಂದ ಅಲ್ಲ, ದಲಿತ ವಿರೋಧಿಯಾಗಿರುವ ಆರ್.ಎಸ್.ಎಸ್ ಹೇಳಿಕೊಟ್ಟಿರುವ ಗಿಣಿಪಾಠವನ್ನು ಅವರು ಒಪ್ಪಿಸುತ್ತಿದ್ದಾರೆ ಅಷ್ಟೆ’ ಎಂದಿದ್ದಾರೆ.

‘ಎ.ಜೆ.ಸದಾಶಿವ ಆಯೋಗದ ವರದಿಯನ್ನು ನಮ್ಮ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇವರು ಮೂರುವರೆ ವರ್ಷಗಳ ಕಾಲ ತಾವು ರಾಜ್ಯದ ಮುಖ್ಯಮಂತ್ರಿಯಾಗಿರುವುದನ್ನು ಮರೆತೇ ಬಿಟ್ಟಿದ್ದಾರೆ. ಆದರೆ ರಾಜ್ಯದ ಜನತೆ ನೆನಪಲ್ಲಿ ಇಟ್ಟುಕೊಂಡಿದ್ದಾರೆ. ಈಗ ನಮ್ಮನ್ನು ಒತ್ತಾಯಿಸುವವರು ತಾವು ಅಧಿಕಾರದಲ್ಲಿದ್ದಾಗ ಯಾಕೆ ಸದಾಶಿವ ಆಯೋಗದ ವರದಿಯನ್ನು ಒಪ್ಪಿ ಜಾರಿಗೆ ತರಲಿಲ್ಲ? ಇಷ್ಟು ಮಾತ್ರವಲ್ಲ ಇದೇ ವಿಷಯದ ಅಧ್ಯಯನಕ್ಕೆ ಇನ್ನೊಂದು ಸಮಿತಿ ಮಾಡಿ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿರುವುದು ಕೂಡಾ ತಮ್ಮದೇ ನೇತೃತ್ವದ ಸರ್ಕಾರ ಎನ್ನುವುದನ್ನು ಬೊಮ್ಮಾಯಿಯವರೇ ಮರೆತಂತಿದೆ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ನಮ್ಮ ವಿರುದ್ದ ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ವೃಥಾ ಕಾಲಹರಣ ಮಾಡದೆ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಬೇಕು’ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...