Homeಕರ್ನಾಟಕಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

ಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

- Advertisement -
- Advertisement -

‘ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘ಸಮಯ ಕೊಲ್ಲುವ’ ತಂತ್ರ ಅಷ್ಟೇ ಆಗಿದೆ’ ಎಂದು ಆರೋಪಿಸಿದ್ದಾರೆ.

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು’ ಎಂದು ಸಿಎಂ ಆಗ್ರಹಿಸಿದ್ದಾರೆ.

‘ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯ ಇಲ್ಲ. ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು ಹೊರಟ ಹಾಗೆ ಕಾಣುತ್ತಿದೆ’ ಎಂದಿದ್ದಾರೆ.

‘ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡಬೇಕೆಂದು ಆಂಧ್ರಪ್ರದೇಶದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಬೇಡಿಕೆಯ ಪರಿಶೀಲನೆಗೆ ನೇಮಿಸಲಾದ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿದೆ ಎಂದು 2023ರ ಜುಲೈ 23ರಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದರು. ಇದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹಮೂರ್ತಿ ಅವರ ಪ್ರಶ್ನೆಗೆ ನೀಡಿದ್ದ ಉತ್ತರವಾಗಿತ್ತು. ಈಗ ಇದೇ ಸಚಿವ ಎ.ನಾರಾಯಣ ಸ್ವಾಮಿಯವರು ಒಳಮೀಸಲಾತಿಗೆ ಸಂವಿಧಾನದ ತಿದ್ದುಪಡಿಯ ಅಗತ್ಯ ಇಲ್ಲ ಎಂದು ಹೇಳುತ್ತಿರುವುದು ವಿಪರ್ಯಾಸ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ಎಂದಿನಂತೆ ಎರಡೆರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯ ಈಡೇರಿಕೆಯ ಹೊಣೆ ತಮ್ಮ ಹೆಗಲ ಮೇಲೆ ಬಿದ್ದ ನಂತರ ತಳಮಳಕ್ಕೀಡಾಗಿರುವ ಬಿಜೆಪಿ ನಾಯಕರು ತಲೆಗೊಬ್ಬರಂತೆ ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಿದ್ದಾರೆ; ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

‘ಪರಿಶಿಷ್ಟರ ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಅಗತ್ಯ ಇಲ್ಲ ಎಂದು ಮಾಜಿ ಸಚಿವ ಗೋವಿಂದಪ್ಪ ಕಾರಜೋಳ ಹೇಳುತ್ತಿದ್ದಾರೆ. ಸದಾಶಿವ ಆಯೋಗದ ವರದಿಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುತ್ತಿದ್ದಾರೆ. ಈ ರೀತಿಯ ನಿರಾಧಾರ ಮಾತುಗಳಿಂದ ತಮ್ಮ ಅಜ್ಞಾನವನ್ನು ತಾವೇ ಪ್ರದರ್ಶಿಸುತ್ತಿದ್ದೇವೆ ಎಂಬ ಅರಿವು ಇವರಿಗೆ ಇದ್ದ ಹಾಗಿಲ್ಲ’ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

‘ಮಾಜಿ ಸಚಿವ ಗೋವಿಂದ ಕಾರಜೋಳರಂತಹ ಹಿರಿಯ ದಲಿತ ನಾಯಕರು ಮತ್ತು ತಮ್ಮನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿ ಎಂದು ಕರೆದುಕೊಳ್ಳುವವರು ಕೂಡಾ ಸಂವಿಧಾನವನ್ನು ತಿರುಚಲು ಹೊರಟಿರುವುದು ವಿಷಾದನೀಯ. ಇಂತಹ ತಪ್ಪು ಮಾಹಿತಿಗಳನ್ನು ಮಾಜಿ ಸಚಿವ ಕಾರಜೋಳ ಹಂಚಿಕೊಳ್ಳುತ್ತಿರುವುದು ಖಂಡಿತ ಅವರ ಅಜ್ಞಾನದಿಂದ ಅಲ್ಲ, ದಲಿತ ವಿರೋಧಿಯಾಗಿರುವ ಆರ್.ಎಸ್.ಎಸ್ ಹೇಳಿಕೊಟ್ಟಿರುವ ಗಿಣಿಪಾಠವನ್ನು ಅವರು ಒಪ್ಪಿಸುತ್ತಿದ್ದಾರೆ ಅಷ್ಟೆ’ ಎಂದಿದ್ದಾರೆ.

‘ಎ.ಜೆ.ಸದಾಶಿವ ಆಯೋಗದ ವರದಿಯನ್ನು ನಮ್ಮ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇವರು ಮೂರುವರೆ ವರ್ಷಗಳ ಕಾಲ ತಾವು ರಾಜ್ಯದ ಮುಖ್ಯಮಂತ್ರಿಯಾಗಿರುವುದನ್ನು ಮರೆತೇ ಬಿಟ್ಟಿದ್ದಾರೆ. ಆದರೆ ರಾಜ್ಯದ ಜನತೆ ನೆನಪಲ್ಲಿ ಇಟ್ಟುಕೊಂಡಿದ್ದಾರೆ. ಈಗ ನಮ್ಮನ್ನು ಒತ್ತಾಯಿಸುವವರು ತಾವು ಅಧಿಕಾರದಲ್ಲಿದ್ದಾಗ ಯಾಕೆ ಸದಾಶಿವ ಆಯೋಗದ ವರದಿಯನ್ನು ಒಪ್ಪಿ ಜಾರಿಗೆ ತರಲಿಲ್ಲ? ಇಷ್ಟು ಮಾತ್ರವಲ್ಲ ಇದೇ ವಿಷಯದ ಅಧ್ಯಯನಕ್ಕೆ ಇನ್ನೊಂದು ಸಮಿತಿ ಮಾಡಿ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿರುವುದು ಕೂಡಾ ತಮ್ಮದೇ ನೇತೃತ್ವದ ಸರ್ಕಾರ ಎನ್ನುವುದನ್ನು ಬೊಮ್ಮಾಯಿಯವರೇ ಮರೆತಂತಿದೆ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ನಮ್ಮ ವಿರುದ್ದ ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ವೃಥಾ ಕಾಲಹರಣ ಮಾಡದೆ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಬೇಕು’ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...