Homeಕರ್ನಾಟಕಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

ಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

- Advertisement -
- Advertisement -

‘ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘ಸಮಯ ಕೊಲ್ಲುವ’ ತಂತ್ರ ಅಷ್ಟೇ ಆಗಿದೆ’ ಎಂದು ಆರೋಪಿಸಿದ್ದಾರೆ.

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು’ ಎಂದು ಸಿಎಂ ಆಗ್ರಹಿಸಿದ್ದಾರೆ.

‘ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯ ಇಲ್ಲ. ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು ಹೊರಟ ಹಾಗೆ ಕಾಣುತ್ತಿದೆ’ ಎಂದಿದ್ದಾರೆ.

‘ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡಬೇಕೆಂದು ಆಂಧ್ರಪ್ರದೇಶದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಬೇಡಿಕೆಯ ಪರಿಶೀಲನೆಗೆ ನೇಮಿಸಲಾದ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿದೆ ಎಂದು 2023ರ ಜುಲೈ 23ರಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದರು. ಇದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹಮೂರ್ತಿ ಅವರ ಪ್ರಶ್ನೆಗೆ ನೀಡಿದ್ದ ಉತ್ತರವಾಗಿತ್ತು. ಈಗ ಇದೇ ಸಚಿವ ಎ.ನಾರಾಯಣ ಸ್ವಾಮಿಯವರು ಒಳಮೀಸಲಾತಿಗೆ ಸಂವಿಧಾನದ ತಿದ್ದುಪಡಿಯ ಅಗತ್ಯ ಇಲ್ಲ ಎಂದು ಹೇಳುತ್ತಿರುವುದು ವಿಪರ್ಯಾಸ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ಎಂದಿನಂತೆ ಎರಡೆರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯ ಈಡೇರಿಕೆಯ ಹೊಣೆ ತಮ್ಮ ಹೆಗಲ ಮೇಲೆ ಬಿದ್ದ ನಂತರ ತಳಮಳಕ್ಕೀಡಾಗಿರುವ ಬಿಜೆಪಿ ನಾಯಕರು ತಲೆಗೊಬ್ಬರಂತೆ ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಿದ್ದಾರೆ; ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

‘ಪರಿಶಿಷ್ಟರ ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಅಗತ್ಯ ಇಲ್ಲ ಎಂದು ಮಾಜಿ ಸಚಿವ ಗೋವಿಂದಪ್ಪ ಕಾರಜೋಳ ಹೇಳುತ್ತಿದ್ದಾರೆ. ಸದಾಶಿವ ಆಯೋಗದ ವರದಿಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುತ್ತಿದ್ದಾರೆ. ಈ ರೀತಿಯ ನಿರಾಧಾರ ಮಾತುಗಳಿಂದ ತಮ್ಮ ಅಜ್ಞಾನವನ್ನು ತಾವೇ ಪ್ರದರ್ಶಿಸುತ್ತಿದ್ದೇವೆ ಎಂಬ ಅರಿವು ಇವರಿಗೆ ಇದ್ದ ಹಾಗಿಲ್ಲ’ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

‘ಮಾಜಿ ಸಚಿವ ಗೋವಿಂದ ಕಾರಜೋಳರಂತಹ ಹಿರಿಯ ದಲಿತ ನಾಯಕರು ಮತ್ತು ತಮ್ಮನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿ ಎಂದು ಕರೆದುಕೊಳ್ಳುವವರು ಕೂಡಾ ಸಂವಿಧಾನವನ್ನು ತಿರುಚಲು ಹೊರಟಿರುವುದು ವಿಷಾದನೀಯ. ಇಂತಹ ತಪ್ಪು ಮಾಹಿತಿಗಳನ್ನು ಮಾಜಿ ಸಚಿವ ಕಾರಜೋಳ ಹಂಚಿಕೊಳ್ಳುತ್ತಿರುವುದು ಖಂಡಿತ ಅವರ ಅಜ್ಞಾನದಿಂದ ಅಲ್ಲ, ದಲಿತ ವಿರೋಧಿಯಾಗಿರುವ ಆರ್.ಎಸ್.ಎಸ್ ಹೇಳಿಕೊಟ್ಟಿರುವ ಗಿಣಿಪಾಠವನ್ನು ಅವರು ಒಪ್ಪಿಸುತ್ತಿದ್ದಾರೆ ಅಷ್ಟೆ’ ಎಂದಿದ್ದಾರೆ.

‘ಎ.ಜೆ.ಸದಾಶಿವ ಆಯೋಗದ ವರದಿಯನ್ನು ನಮ್ಮ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇವರು ಮೂರುವರೆ ವರ್ಷಗಳ ಕಾಲ ತಾವು ರಾಜ್ಯದ ಮುಖ್ಯಮಂತ್ರಿಯಾಗಿರುವುದನ್ನು ಮರೆತೇ ಬಿಟ್ಟಿದ್ದಾರೆ. ಆದರೆ ರಾಜ್ಯದ ಜನತೆ ನೆನಪಲ್ಲಿ ಇಟ್ಟುಕೊಂಡಿದ್ದಾರೆ. ಈಗ ನಮ್ಮನ್ನು ಒತ್ತಾಯಿಸುವವರು ತಾವು ಅಧಿಕಾರದಲ್ಲಿದ್ದಾಗ ಯಾಕೆ ಸದಾಶಿವ ಆಯೋಗದ ವರದಿಯನ್ನು ಒಪ್ಪಿ ಜಾರಿಗೆ ತರಲಿಲ್ಲ? ಇಷ್ಟು ಮಾತ್ರವಲ್ಲ ಇದೇ ವಿಷಯದ ಅಧ್ಯಯನಕ್ಕೆ ಇನ್ನೊಂದು ಸಮಿತಿ ಮಾಡಿ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿರುವುದು ಕೂಡಾ ತಮ್ಮದೇ ನೇತೃತ್ವದ ಸರ್ಕಾರ ಎನ್ನುವುದನ್ನು ಬೊಮ್ಮಾಯಿಯವರೇ ಮರೆತಂತಿದೆ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ನಮ್ಮ ವಿರುದ್ದ ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ವೃಥಾ ಕಾಲಹರಣ ಮಾಡದೆ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಬೇಕು’ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...