Homeಕರ್ನಾಟಕಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

ಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

- Advertisement -
- Advertisement -

‘ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘ಸಮಯ ಕೊಲ್ಲುವ’ ತಂತ್ರ ಅಷ್ಟೇ ಆಗಿದೆ’ ಎಂದು ಆರೋಪಿಸಿದ್ದಾರೆ.

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು’ ಎಂದು ಸಿಎಂ ಆಗ್ರಹಿಸಿದ್ದಾರೆ.

‘ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯ ಇಲ್ಲ. ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು ಹೊರಟ ಹಾಗೆ ಕಾಣುತ್ತಿದೆ’ ಎಂದಿದ್ದಾರೆ.

‘ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡಬೇಕೆಂದು ಆಂಧ್ರಪ್ರದೇಶದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಬೇಡಿಕೆಯ ಪರಿಶೀಲನೆಗೆ ನೇಮಿಸಲಾದ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿದೆ ಎಂದು 2023ರ ಜುಲೈ 23ರಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದರು. ಇದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹಮೂರ್ತಿ ಅವರ ಪ್ರಶ್ನೆಗೆ ನೀಡಿದ್ದ ಉತ್ತರವಾಗಿತ್ತು. ಈಗ ಇದೇ ಸಚಿವ ಎ.ನಾರಾಯಣ ಸ್ವಾಮಿಯವರು ಒಳಮೀಸಲಾತಿಗೆ ಸಂವಿಧಾನದ ತಿದ್ದುಪಡಿಯ ಅಗತ್ಯ ಇಲ್ಲ ಎಂದು ಹೇಳುತ್ತಿರುವುದು ವಿಪರ್ಯಾಸ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ಎಂದಿನಂತೆ ಎರಡೆರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯ ಈಡೇರಿಕೆಯ ಹೊಣೆ ತಮ್ಮ ಹೆಗಲ ಮೇಲೆ ಬಿದ್ದ ನಂತರ ತಳಮಳಕ್ಕೀಡಾಗಿರುವ ಬಿಜೆಪಿ ನಾಯಕರು ತಲೆಗೊಬ್ಬರಂತೆ ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಿದ್ದಾರೆ; ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

‘ಪರಿಶಿಷ್ಟರ ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಅಗತ್ಯ ಇಲ್ಲ ಎಂದು ಮಾಜಿ ಸಚಿವ ಗೋವಿಂದಪ್ಪ ಕಾರಜೋಳ ಹೇಳುತ್ತಿದ್ದಾರೆ. ಸದಾಶಿವ ಆಯೋಗದ ವರದಿಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುತ್ತಿದ್ದಾರೆ. ಈ ರೀತಿಯ ನಿರಾಧಾರ ಮಾತುಗಳಿಂದ ತಮ್ಮ ಅಜ್ಞಾನವನ್ನು ತಾವೇ ಪ್ರದರ್ಶಿಸುತ್ತಿದ್ದೇವೆ ಎಂಬ ಅರಿವು ಇವರಿಗೆ ಇದ್ದ ಹಾಗಿಲ್ಲ’ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

‘ಮಾಜಿ ಸಚಿವ ಗೋವಿಂದ ಕಾರಜೋಳರಂತಹ ಹಿರಿಯ ದಲಿತ ನಾಯಕರು ಮತ್ತು ತಮ್ಮನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿ ಎಂದು ಕರೆದುಕೊಳ್ಳುವವರು ಕೂಡಾ ಸಂವಿಧಾನವನ್ನು ತಿರುಚಲು ಹೊರಟಿರುವುದು ವಿಷಾದನೀಯ. ಇಂತಹ ತಪ್ಪು ಮಾಹಿತಿಗಳನ್ನು ಮಾಜಿ ಸಚಿವ ಕಾರಜೋಳ ಹಂಚಿಕೊಳ್ಳುತ್ತಿರುವುದು ಖಂಡಿತ ಅವರ ಅಜ್ಞಾನದಿಂದ ಅಲ್ಲ, ದಲಿತ ವಿರೋಧಿಯಾಗಿರುವ ಆರ್.ಎಸ್.ಎಸ್ ಹೇಳಿಕೊಟ್ಟಿರುವ ಗಿಣಿಪಾಠವನ್ನು ಅವರು ಒಪ್ಪಿಸುತ್ತಿದ್ದಾರೆ ಅಷ್ಟೆ’ ಎಂದಿದ್ದಾರೆ.

‘ಎ.ಜೆ.ಸದಾಶಿವ ಆಯೋಗದ ವರದಿಯನ್ನು ನಮ್ಮ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇವರು ಮೂರುವರೆ ವರ್ಷಗಳ ಕಾಲ ತಾವು ರಾಜ್ಯದ ಮುಖ್ಯಮಂತ್ರಿಯಾಗಿರುವುದನ್ನು ಮರೆತೇ ಬಿಟ್ಟಿದ್ದಾರೆ. ಆದರೆ ರಾಜ್ಯದ ಜನತೆ ನೆನಪಲ್ಲಿ ಇಟ್ಟುಕೊಂಡಿದ್ದಾರೆ. ಈಗ ನಮ್ಮನ್ನು ಒತ್ತಾಯಿಸುವವರು ತಾವು ಅಧಿಕಾರದಲ್ಲಿದ್ದಾಗ ಯಾಕೆ ಸದಾಶಿವ ಆಯೋಗದ ವರದಿಯನ್ನು ಒಪ್ಪಿ ಜಾರಿಗೆ ತರಲಿಲ್ಲ? ಇಷ್ಟು ಮಾತ್ರವಲ್ಲ ಇದೇ ವಿಷಯದ ಅಧ್ಯಯನಕ್ಕೆ ಇನ್ನೊಂದು ಸಮಿತಿ ಮಾಡಿ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿರುವುದು ಕೂಡಾ ತಮ್ಮದೇ ನೇತೃತ್ವದ ಸರ್ಕಾರ ಎನ್ನುವುದನ್ನು ಬೊಮ್ಮಾಯಿಯವರೇ ಮರೆತಂತಿದೆ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ನಮ್ಮ ವಿರುದ್ದ ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ವೃಥಾ ಕಾಲಹರಣ ಮಾಡದೆ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಬೇಕು’ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...