Homeಕರ್ನಾಟಕಭಾರತ್‌ ಜೋಡೋ ಯಾತ್ರೆ ಯಶಸ್ವಿಗೆ ಕೆಪಿಸಿಸಿಯಿಂದ ಸಮಿತಿಗಳ ರಚನೆ: ಡಿ.ಕೆ.ಶಿವಕುಮಾರ್‌

ಭಾರತ್‌ ಜೋಡೋ ಯಾತ್ರೆ ಯಶಸ್ವಿಗೆ ಕೆಪಿಸಿಸಿಯಿಂದ ಸಮಿತಿಗಳ ರಚನೆ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕಾಂಗ್ರೆಸ್‌ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ (ಭಾರತ್ ಜೋಡೋ ಯಾತ್ರೆ) ಕರ್ನಾಟಕದಲ್ಲೂ ಸಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲ ಸಮಿತಿಗಳನ್ನು ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಮಾಧ್ಯಮಗಳಿಗೆ ಅವರು ನೀಡಿದ್ದಾರೆ. ಪ್ರಚಾರದ ಜವಾಬ್ದಾರಿಯನ್ನು ರಾಮಲಿಂಗಾರೆಡ್ಡಿ ಅವರಿಗೆ, ಬಳ್ಳಾರಿ ಬೃಹತ್ ಸಮಾವೇಶದ ಜವಾಬ್ದಾರಿಯನ್ನು ಪ್ರಚಾರ ಸಮಿತಿ ಅಧ್ಯಕ್ಷರ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಸಂಚಾರ ವ್ಯವಸ್ಥೆಯನ್ನು ರೇವಣ್ಣ ಅವರಿಗೆ, ಪ್ರತಿನಿತ್ಯದ ಸಭೆಗಳ ಜವಾಬ್ದಾರಿಯನ್ನು ಕೃಷ್ಣ ಭೈರೇಗೌಡ ಅವರ ನೇತೃತ್ವದ ಸಮಿತಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾಸ್ತವ್ಯ ವ್ಯವಸ್ಥೆಗೆ ದಿನೇಶ್ ಗುಂಡೂರಾವ್ ಅವರ ಸಮಿತಿ, ಮೈಸೂರು ಚಾಮರಾಜನಗರ ಭಾಗದ ಉಸ್ತುವಾರಿಯನ್ನು ಧ್ರುವನಾರಾಯಣ ಅವರ ಸಮಿತಿ, ಮೈಸೂರು ನಗರದ ಉಸ್ತುವಾರಿ ಮಹದೇವಪ್ಪ ಹಾಗೂ ಯತೀಂದ್ರ ಅವರಿಗೆ, ಮಂಡ್ಯ ಭಾಗದ ಉಸ್ತುವಾರಿ ಚಲುವರಾಯಸ್ವಾಮಿ, ತುಮಕೂರು ಭಾಗಕ್ಕೆ ಡಾ.ಜಿ.ಪರಮೇಶ್ವರ್, ಚಳ್ಳಕೆರೆ ಭಾಗದಲ್ಲಿ ಸಲೀಂ ಅಹ್ಮದ್ ಅವರು ಸ್ಥಳೀಯ ಶಾಸಕರ ಜತೆ ಜವಾಬ್ದಾರಿ ನಿಭಾಯಿಸುತ್ತಾರೆ. ರಾಯಚೂರು ಉಸ್ತುವಾರಿಯನ್ನು ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಮಹಿಳೆಯರ ಸಂಘಟನೆಗೆ ಐದಾರು ತಂಡಗಳನ್ನು ರಚಿಸಲಾಗಿದೆ. ಗಾಂಧಿ ಜಯಂತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಿ.ಎಲ್. ಶಂಕರ್ ಅವರ ಉಸ್ತುವಾರಿ ನೀಡಲಾಗಿದೆ. ಉಳಿದ ಜವಾಬ್ದಾರಿಗಳನ್ನು ಬೇರೆ ಶಾಸಕರುಗಳಿಗೆ ನೀಡಲಾಗುವುದು. ಪದಾಧಿಕಾರಿಗಳು ತಮ್ಮ ಕ್ಷೇತ್ರಗಳಲ್ಲಿ ಸಂಘಟನೆ ಮಾಡಲಿದ್ದಾರೆ ಎಂದಿದ್ದಾರೆ.

ಈ ಯಾತ್ರೆಗೆ ಪ್ರಿಯಾಂಕಾ ಗಾಂಧಿ ಅವರು ಆಗಮಿಸುತ್ತಾರಾ ಎಂಬ ಪ್ರಶ್ನೆಗೆ, “ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಪಾದಯಾತ್ರೆಗೆ ಆಗಮಿಸುತ್ತಾರೆ ಎಂಬ ಸುದ್ದಿ ಇದೆ. ಬಹುತೇಕ ರಾಷ್ಟ್ರೀಯ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ವೇಗಕ್ಕೆ ಬೇರೆಯವರು ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದೀರಿ ಎಂದು ಕೇಳಿದಾಗ, “ನಮ್ಮ ನಾಯಕರು ಸ್ಪಂದಿಸುತ್ತಿಲ್ಲ ಎಂದು ಹೇಳಿದವರು ಯಾರು? ಎಲ್ಲರೂ ಸ್ಪಂದಿಸುತ್ತಾ ಕೆಲಸ ಮಾಡುತ್ತಿದ್ದಾರೆ. ನನ್ನ ವೇಗ ಹೆಚ್ಚಾಗಿರಬಹುದು. ಕೆಲವರಿಗೆ ಅವರ ಕ್ಷೇತ್ರದಲ್ಲಿನ ಜವಾಬ್ದಾರಿ ಹೆಚ್ಚಾಗಿದೆ. ಎಲ್ಲವನ್ನೂ ನನ್ನಿಂದಲೇ ಮಾಡಲು ಆಗುವುದಿಲ್ಲ. ನಮ್ಮ ನಾಯಕರು ಅವರವರ ಕೆಲಸ ಮಾಡುತ್ತಿದ್ದಾರೆ. ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪ್ರತಿ ಕ್ಷೇತ್ರಕ್ಕೂ ಹೋಗಬೇಕು, ಪ್ರಧಾನ ಕಾರ್ಯದರ್ಶಿಗಳು ಪ್ರತಿ ಪಂಚಾಯ್ತಿಗೆ ಹೋಗುವ ಜವಾಬ್ದಾರಿ ನೀಡಿದ್ದೇವೆ. ಆ ಪ್ರಕಾರ ಅವರು ಸಂಘಟನೆ ಮಾಡಬೇಕು. ಸಂಘಟನೆ ಇಲ್ಲದೇ ಯಶಸ್ಸು ಸಿಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಸಭೆಯ ನಿಮ್ಮ ಮಾತಿನಲ್ಲಿ, ಬೇರೆಯವರು ಸಹಕಾರ ನೀಡುತ್ತಿಲ್ಲ ಎಂಬ ನೋವಿತ್ತು ಎಂದು ಹೇಳಿದಾಗ, “ನನಗೆ ಅಸಹಕಾರದ ನೋವಿಲ್ಲ. ಸರ್ಕಾರ ಅಧಿವೇಶನ ಕರೆದಾಗ ಕೇವಲ ವಿರೋಧ ಪಕ್ಷದ ನಾಯಕರೇ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಅವರಿಗೆ ನಾನು ಸೇರಿದಂತೆ 69 ಶಾಸಕರ ಸಹಕಾರ ಇರಬೇಕು. ಇನ್ನು ಸರ್ಕಾರದ ಪರ ನೂರಕ್ಕೂ ಹೆಚ್ಚು ಶಾಸಕರಿದ್ದರೂ ಸಚಿವರುಗಳು ಅಧಿವೇಶನಕ್ಕೆ ಬರುತ್ತಿಲ್ಲ. ಅವರು ಸರ್ಕಾರದ ಸಾಧನೆ ಕಾರ್ಯಕ್ರಮ ಮಾಡಿದಾಗ ಎಷ್ಟು ಜನ ಸಚಿವರು ಹೋಗಿದ್ದರು? ಏನಾಯ್ತು? ಎಷ್ಟು ಜನ ಇದ್ದರು. ಯಡಿಯೂರಪ್ಪ ಅವರ ಭಾಷಣ ಮುಗಿದ ನಂತರ ಎಲ್ಲರೂ ಖಾಲಿ ಆದರು. ಇದರ ಬಗ್ಗೆ ಯಾಕೆ ಮಾತನಾಡುವುದಿಲ್ಲ? ಅದನ್ನು ಅಸಹಕಾರ ಚಳವಳಿ ಎನ್ನುತ್ತೀರಾ? ನಾನು ನಮ್ಮ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿ ತಿಳಿಸಿದ್ದೇನೆ ಅಷ್ಟೇ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

“ನಮ್ಮ ಶಾಸಕರುಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಟಾರ್ಗೆಟ್ ನೀಡಿದ್ದಾರೆ. ಶಾಸಕರು ಎಂದರೆ ಕೇವಲ ಮದುವೆ ಸಮಾರಂಭ, ಟೇಪ್ ಕಟ್ ಕಾರ್ಯಕ್ರಮಕ್ಕೆ ಹೋಗುವುದಲ್ಲ. ಮನೆ ಮನೆಗೆ ಹೋಗಿ ಬೂತ್ ಯಾತ್ರಾ ಮಾಡಬೇಕು ಎಂದು ಬಯಸುತ್ತೇನೆ. ಅವರು ಮೊದಲು ತಮ್ಮ ಹೊಲ ಚೆನ್ನಾಗಿ ಬೇಸಾಯ ಮಾಡಬೇಕು. ನಂತರ ಬಿತ್ತನೆ ಮಾಡಬೇಕು ಎಂದು ಹೇಳಿದ್ದೇನೆ” ಎಂದಿದ್ದಾರೆ.

ಇ.ಡಿ. ವಿಚಾರಣೆಗೆ ಹಾಜರಾಗುತ್ತೀರ ಎಂದು ಕೇಳಿದಾಗ, “ಮೈಸೂರು ಪ್ರವಾಸ ಮುಗಿಸಿದ ಬಳಿಕ ದೆಹಲಿಗೆ ಹೋಗಿ ಇಡಿ ತನಿಖೆ ಎದುರಿಸುತ್ತೇನೆ. ಅವರು ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಅಲ್ಲಿಗೆ ಹೋಗಿ ವಿಚಾರ ತಿಳಿಯುತ್ತೇನೆ. ಯಡಿಯೂರಪ್ಪ ಅವರ ಸರ್ಕಾರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ನೀಡಿದ್ದು, ಅದನ್ನು ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ ಹಾಕಿದ್ದೇನೆ. ಮೊದಲ ಬಾರಿಗೆ ಇಡಿ ನೋಟಿಸ್ ಬಂದಿದೆ. ಅವರ ಬಳಿ ಎಲ್ಲಾ ಮಾಹಿತಿ ಇದೆ. ಆದರೂ ಹೊಸತಾಗಿ ಯಾಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...