Homeಕರ್ನಾಟಕಭಾರತ್‌ ಜೋಡೋ ಯಾತ್ರೆ ಯಶಸ್ವಿಗೆ ಕೆಪಿಸಿಸಿಯಿಂದ ಸಮಿತಿಗಳ ರಚನೆ: ಡಿ.ಕೆ.ಶಿವಕುಮಾರ್‌

ಭಾರತ್‌ ಜೋಡೋ ಯಾತ್ರೆ ಯಶಸ್ವಿಗೆ ಕೆಪಿಸಿಸಿಯಿಂದ ಸಮಿತಿಗಳ ರಚನೆ: ಡಿ.ಕೆ.ಶಿವಕುಮಾರ್‌

- Advertisement -
- Advertisement -

ಕಾಂಗ್ರೆಸ್‌ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ (ಭಾರತ್ ಜೋಡೋ ಯಾತ್ರೆ) ಕರ್ನಾಟಕದಲ್ಲೂ ಸಾಗುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲ ಸಮಿತಿಗಳನ್ನು ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಮಾಧ್ಯಮಗಳಿಗೆ ಅವರು ನೀಡಿದ್ದಾರೆ. ಪ್ರಚಾರದ ಜವಾಬ್ದಾರಿಯನ್ನು ರಾಮಲಿಂಗಾರೆಡ್ಡಿ ಅವರಿಗೆ, ಬಳ್ಳಾರಿ ಬೃಹತ್ ಸಮಾವೇಶದ ಜವಾಬ್ದಾರಿಯನ್ನು ಪ್ರಚಾರ ಸಮಿತಿ ಅಧ್ಯಕ್ಷರ ನೇತೃತ್ವದ ಸಮಿತಿಗೆ ವಹಿಸಲಾಗಿದೆ. ಸಂಚಾರ ವ್ಯವಸ್ಥೆಯನ್ನು ರೇವಣ್ಣ ಅವರಿಗೆ, ಪ್ರತಿನಿತ್ಯದ ಸಭೆಗಳ ಜವಾಬ್ದಾರಿಯನ್ನು ಕೃಷ್ಣ ಭೈರೇಗೌಡ ಅವರ ನೇತೃತ್ವದ ಸಮಿತಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾಸ್ತವ್ಯ ವ್ಯವಸ್ಥೆಗೆ ದಿನೇಶ್ ಗುಂಡೂರಾವ್ ಅವರ ಸಮಿತಿ, ಮೈಸೂರು ಚಾಮರಾಜನಗರ ಭಾಗದ ಉಸ್ತುವಾರಿಯನ್ನು ಧ್ರುವನಾರಾಯಣ ಅವರ ಸಮಿತಿ, ಮೈಸೂರು ನಗರದ ಉಸ್ತುವಾರಿ ಮಹದೇವಪ್ಪ ಹಾಗೂ ಯತೀಂದ್ರ ಅವರಿಗೆ, ಮಂಡ್ಯ ಭಾಗದ ಉಸ್ತುವಾರಿ ಚಲುವರಾಯಸ್ವಾಮಿ, ತುಮಕೂರು ಭಾಗಕ್ಕೆ ಡಾ.ಜಿ.ಪರಮೇಶ್ವರ್, ಚಳ್ಳಕೆರೆ ಭಾಗದಲ್ಲಿ ಸಲೀಂ ಅಹ್ಮದ್ ಅವರು ಸ್ಥಳೀಯ ಶಾಸಕರ ಜತೆ ಜವಾಬ್ದಾರಿ ನಿಭಾಯಿಸುತ್ತಾರೆ. ರಾಯಚೂರು ಉಸ್ತುವಾರಿಯನ್ನು ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಅವರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಮಹಿಳೆಯರ ಸಂಘಟನೆಗೆ ಐದಾರು ತಂಡಗಳನ್ನು ರಚಿಸಲಾಗಿದೆ. ಗಾಂಧಿ ಜಯಂತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಿ.ಎಲ್. ಶಂಕರ್ ಅವರ ಉಸ್ತುವಾರಿ ನೀಡಲಾಗಿದೆ. ಉಳಿದ ಜವಾಬ್ದಾರಿಗಳನ್ನು ಬೇರೆ ಶಾಸಕರುಗಳಿಗೆ ನೀಡಲಾಗುವುದು. ಪದಾಧಿಕಾರಿಗಳು ತಮ್ಮ ಕ್ಷೇತ್ರಗಳಲ್ಲಿ ಸಂಘಟನೆ ಮಾಡಲಿದ್ದಾರೆ ಎಂದಿದ್ದಾರೆ.

ಈ ಯಾತ್ರೆಗೆ ಪ್ರಿಯಾಂಕಾ ಗಾಂಧಿ ಅವರು ಆಗಮಿಸುತ್ತಾರಾ ಎಂಬ ಪ್ರಶ್ನೆಗೆ, “ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಪಾದಯಾತ್ರೆಗೆ ಆಗಮಿಸುತ್ತಾರೆ ಎಂಬ ಸುದ್ದಿ ಇದೆ. ಬಹುತೇಕ ರಾಷ್ಟ್ರೀಯ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ವೇಗಕ್ಕೆ ಬೇರೆಯವರು ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದೀರಿ ಎಂದು ಕೇಳಿದಾಗ, “ನಮ್ಮ ನಾಯಕರು ಸ್ಪಂದಿಸುತ್ತಿಲ್ಲ ಎಂದು ಹೇಳಿದವರು ಯಾರು? ಎಲ್ಲರೂ ಸ್ಪಂದಿಸುತ್ತಾ ಕೆಲಸ ಮಾಡುತ್ತಿದ್ದಾರೆ. ನನ್ನ ವೇಗ ಹೆಚ್ಚಾಗಿರಬಹುದು. ಕೆಲವರಿಗೆ ಅವರ ಕ್ಷೇತ್ರದಲ್ಲಿನ ಜವಾಬ್ದಾರಿ ಹೆಚ್ಚಾಗಿದೆ. ಎಲ್ಲವನ್ನೂ ನನ್ನಿಂದಲೇ ಮಾಡಲು ಆಗುವುದಿಲ್ಲ. ನಮ್ಮ ನಾಯಕರು ಅವರವರ ಕೆಲಸ ಮಾಡುತ್ತಿದ್ದಾರೆ. ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಪ್ರತಿ ಕ್ಷೇತ್ರಕ್ಕೂ ಹೋಗಬೇಕು, ಪ್ರಧಾನ ಕಾರ್ಯದರ್ಶಿಗಳು ಪ್ರತಿ ಪಂಚಾಯ್ತಿಗೆ ಹೋಗುವ ಜವಾಬ್ದಾರಿ ನೀಡಿದ್ದೇವೆ. ಆ ಪ್ರಕಾರ ಅವರು ಸಂಘಟನೆ ಮಾಡಬೇಕು. ಸಂಘಟನೆ ಇಲ್ಲದೇ ಯಶಸ್ಸು ಸಿಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯ ಸಭೆಯ ನಿಮ್ಮ ಮಾತಿನಲ್ಲಿ, ಬೇರೆಯವರು ಸಹಕಾರ ನೀಡುತ್ತಿಲ್ಲ ಎಂಬ ನೋವಿತ್ತು ಎಂದು ಹೇಳಿದಾಗ, “ನನಗೆ ಅಸಹಕಾರದ ನೋವಿಲ್ಲ. ಸರ್ಕಾರ ಅಧಿವೇಶನ ಕರೆದಾಗ ಕೇವಲ ವಿರೋಧ ಪಕ್ಷದ ನಾಯಕರೇ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಅವರಿಗೆ ನಾನು ಸೇರಿದಂತೆ 69 ಶಾಸಕರ ಸಹಕಾರ ಇರಬೇಕು. ಇನ್ನು ಸರ್ಕಾರದ ಪರ ನೂರಕ್ಕೂ ಹೆಚ್ಚು ಶಾಸಕರಿದ್ದರೂ ಸಚಿವರುಗಳು ಅಧಿವೇಶನಕ್ಕೆ ಬರುತ್ತಿಲ್ಲ. ಅವರು ಸರ್ಕಾರದ ಸಾಧನೆ ಕಾರ್ಯಕ್ರಮ ಮಾಡಿದಾಗ ಎಷ್ಟು ಜನ ಸಚಿವರು ಹೋಗಿದ್ದರು? ಏನಾಯ್ತು? ಎಷ್ಟು ಜನ ಇದ್ದರು. ಯಡಿಯೂರಪ್ಪ ಅವರ ಭಾಷಣ ಮುಗಿದ ನಂತರ ಎಲ್ಲರೂ ಖಾಲಿ ಆದರು. ಇದರ ಬಗ್ಗೆ ಯಾಕೆ ಮಾತನಾಡುವುದಿಲ್ಲ? ಅದನ್ನು ಅಸಹಕಾರ ಚಳವಳಿ ಎನ್ನುತ್ತೀರಾ? ನಾನು ನಮ್ಮ ಪದಾಧಿಕಾರಿಗಳಿಗೆ ಅವರ ಜವಾಬ್ದಾರಿ ತಿಳಿಸಿದ್ದೇನೆ ಅಷ್ಟೇ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿರಿ: ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

“ನಮ್ಮ ಶಾಸಕರುಗಳಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಟಾರ್ಗೆಟ್ ನೀಡಿದ್ದಾರೆ. ಶಾಸಕರು ಎಂದರೆ ಕೇವಲ ಮದುವೆ ಸಮಾರಂಭ, ಟೇಪ್ ಕಟ್ ಕಾರ್ಯಕ್ರಮಕ್ಕೆ ಹೋಗುವುದಲ್ಲ. ಮನೆ ಮನೆಗೆ ಹೋಗಿ ಬೂತ್ ಯಾತ್ರಾ ಮಾಡಬೇಕು ಎಂದು ಬಯಸುತ್ತೇನೆ. ಅವರು ಮೊದಲು ತಮ್ಮ ಹೊಲ ಚೆನ್ನಾಗಿ ಬೇಸಾಯ ಮಾಡಬೇಕು. ನಂತರ ಬಿತ್ತನೆ ಮಾಡಬೇಕು ಎಂದು ಹೇಳಿದ್ದೇನೆ” ಎಂದಿದ್ದಾರೆ.

ಇ.ಡಿ. ವಿಚಾರಣೆಗೆ ಹಾಜರಾಗುತ್ತೀರ ಎಂದು ಕೇಳಿದಾಗ, “ಮೈಸೂರು ಪ್ರವಾಸ ಮುಗಿಸಿದ ಬಳಿಕ ದೆಹಲಿಗೆ ಹೋಗಿ ಇಡಿ ತನಿಖೆ ಎದುರಿಸುತ್ತೇನೆ. ಅವರು ಯಾವ ಕಾರಣಕ್ಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಅಲ್ಲಿಗೆ ಹೋಗಿ ವಿಚಾರ ತಿಳಿಯುತ್ತೇನೆ. ಯಡಿಯೂರಪ್ಪ ಅವರ ಸರ್ಕಾರ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ನೀಡಿದ್ದು, ಅದನ್ನು ಪ್ರಶ್ನಿಸಿ ಹೈಕೋರ್ಟ್‌‌ನಲ್ಲಿ ಅರ್ಜಿ ಹಾಕಿದ್ದೇನೆ. ಮೊದಲ ಬಾರಿಗೆ ಇಡಿ ನೋಟಿಸ್ ಬಂದಿದೆ. ಅವರ ಬಳಿ ಎಲ್ಲಾ ಮಾಹಿತಿ ಇದೆ. ಆದರೂ ಹೊಸತಾಗಿ ಯಾಕೆ ಕರೆದಿದ್ದಾರೆ ಎಂದು ಗೊತ್ತಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗುತ್ತೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...