Homeಚಳವಳಿಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಸಿಗಲು ಕಾರಣರಾದ ನಿಜವಾದ ಶಿಕ್ಷಣದ ಸಂತ ಅನಿಲ್ ಸದ್ಗೋಪಾಲ್

ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಸಿಗಲು ಕಾರಣರಾದ ನಿಜವಾದ ಶಿಕ್ಷಣದ ಸಂತ ಅನಿಲ್ ಸದ್ಗೋಪಾಲ್

ಭೊಪಾಲ್ ನಲ್ಲಿ ಸಂಭವಿಸಿದ ಅನಿಲ ದುರಂತ ಮತ್ತು ಅದರಿಂದಾದ ಸಾವು-ನೋವುಗಳನ್ನು ನೋಡಿ ನೊಂದರು. ಅಲ್ಲಿಂದ ಅವರು ಸಂತ್ರಸ್ಥ ಕುಟುಂಬಗಳಿಗೆ ನ್ಯಾಯಯುತ ಪರಿಹಾರಕ್ಕಾಗಿ ಹೋರಾಟಗಳನ್ನು ಮುನ್ನಡೆಸಿದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬಯೋಕೆಮೆಸ್ಟ್ರಿ ಮತ್ತು ಮಾಲಿಕ್ಯುಲರ್ ಬಯಾಲಿಜಿ ವಿಷಯದಲ್ಲಿ 1963ರಲ್ಲಿಯೇ ಅಮೇರಿಕಾಕ್ಕೆ ಹೋಗಿ ಸಂಶೋಧನೆ ನಡೆಸಿದ್ದ ಅನಿಲ್ ಸದ್ಗೋಪಾಲ್‍ರವರು ಭಾರತಕ್ಕೆ ಬಂದು ಮಾಡಿದ್ದು ಏನು ಗೊತ್ತೇ? ಮಧ್ಯಪ್ರದೇಶದ ಹೋಶಂಗಬಾದ್ ಜಿಲ್ಲೆಯ ಪಲಿಯ ಪಿಪಾರಿಯ ಎಂಬ ಹಳ್ಳಿಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಕೃಷಿ, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಪಾಠ ಮಾಡುತ್ತಿದ್ದರು. ವೈಜ್ಞಾನಿಕ ರೀತಿಯಲ್ಲಿ ಪಶು ಸಂಗೋಪನೆ ಮತ್ತು ಕಡಿಮೆ ಖರ್ಚಿನಲ್ಲಿ ನೀರಾವರಿಯ ವಿಧಾನಗಳ ಕುರಿತು ಪಾಠ ಮಾಡುತ್ತಿದ್ದ ಇವರ ನಂತರ 1972ರಲ್ಲಿ ಮಕ್ಕಳ ವಿಜ್ಞಾನ ಕಲಿಕೆಯ ಮೇಲೆ ಗಮನ ಹರಿಸಿದರು.

ನಂತರ ಇದು ಹೋಶಂಗಬಾದ್ ಸೈನ್ಸ್ ಟೀಚಿಂಗ್ ಪ್ರೊಗ್ರಾಮ್ ಎಂದೇ ಪ್ರಖ್ಯಾತವಾಯಿತು. ಅನಿಲ್ ಸದ್ಗೋಪಾಲ್ ರವರು ಕಿಶೋರ್ ಭಾರತಿ ಎಂಬ ತಮ್ಮ ಸಂಸ್ಥೆಯ ಮೂಲಕ 16 ಶಾಲೆಗಳಲ್ಲಿ ಆರಂಭಿಸಿದ ಈ ಮಾತೃಭಾಷೆಯಲ್ಲಿ ವಿಜ್ಞಾನ ಕಲಿಕೆ ಕಾರ್ಯಕ್ರಮ ಯಶಸ್ವಿಯಾದ್ದರಿಂದ ಸರ್ಕಾರ ಇಡೀ ಹೋಶಂಗಬಾದ್ ಜಿಲ್ಲೆಗೆ ವಿಸ್ತರಿಸಿತು. ಇದಕ್ಕೂ ಮೊದಲು ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‍ನಲ್ಲಿ ಸ್ವಲ್ಪ ಕಾಲ ಕೆಲಸ ಮಾಡಿದ್ದ ಅನಿಲ್ ಸದ್ಗೋಪಾಲ್‍ರವರು ಅಲ್ಲಿಂದ, ದೆಹಲಿ ವಿ.ವಿಯಿಂದ ಎಲ್ಲಾ ಕಡೆಗಳಿಂದ ವಿಜ್ಞಾನಿಗಳು ಈ ಪ್ರಯೋಗದಲ್ಲಿ ಪಾಲುದಾರರಾಗುವಂತೆ ಮಾಡಿದರು.

1982ರಲ್ಲಿ ಏಕಲವ್ಯ ಸಂಸ್ಥೆ ಆರಂಭಿಸಿ ಶಾಲಾ ಮಕ್ಕಳೊಡನೆ ಕೆಲಸ ಮಾಡುತ್ತಿದ್ದ ಸದ್ಗೋಪಾಲ್‍ರವರು 1984ರಲ್ಲಿ ಪಕ್ಕದ ಭೊಪಾಲ್ ನಲ್ಲಿ ಸಂಭವಿಸಿದ ಅನಿಲ ದುರಂತ ಮತ್ತು ಅದರಿಂದಾದ ಸಾವು-ನೋವುಗಳನ್ನು ನೋಡಿ ನೊಂದರು. ಅಲ್ಲಿಂದ ಅವರು ಸಂತ್ರಸ್ಥ ಕುಟುಂಬಗಳಿಗೆ ನ್ಯಾಯಯುತ ಪರಿಹಾರಕ್ಕಾಗಿ ಹೋರಾಟಗಳನ್ನು ಮುನ್ನಡೆಸಿದರು.

ಸದ್ಗೋಪಾಲ್‍ರವರ ಅಪಾರ ವಿದ್ವತ್ತು ಮತ್ತು ಜ್ಞಾನವನ್ನು ಮನಗಂಡಿದ್ದ ಭಾರತ ಸರ್ಕಾರ 1990ರಲ್ಲಿ ಆಚಾರ್ಯ ರಾಮಮೂರ್ತಿ ರಿವ್ಯೂ ಕಮಿಟಿಗೆ ಇವರನ್ನು ಸದಸ್ಯರನ್ನಾಗಿ ನೇಮಿಸಲಾಯಿತು. 1986ರ ಹೊಸ ಶಿಕ್ಷಣ ನೀತಿಯನ್ನು ವಿಮರ್ಶೆಗೊಳಪಡಿಸುವುದು ಇವರ ಜವಾಬ್ದಾರಿಯಾಗಿತ್ತು. ಆದರೆ ಶಿಕ್ಷಣ ಸಾರ್ವತ್ರಿಕರಣದಿಂದ ಹಿಂದೆ ಸರಿಯುವ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದ್ದರಿಂದ ಅವರು ಆ ಸಮಿತಿಗೆ ರಾಜಿನಾಮೆ ನೀಡಿ ಹೊರಬಂದರು.

ಇದೇ ಸಂದರ್ಭದಲ್ಲಿ ಛತ್ತಿಸ್‍ಘಡ ಮುಕ್ತಿ ಮೋರ್ಚಾದ ಸ್ಥಾಪಕರಾಗಿದ್ದ ಬಹುದೊಡ್ಡ ಹೋರಾಟ ಹೋರಾಟಗಾರ ಶಂಕರ್ ಗುಹಾ ನಿಯೋಗಿಯವರ ಹತ್ಯೆಯಾಗಿತ್ತು. ಈ ಕುರಿತು ಹೆಚ್ಚಿನ ಸಂಶೋಧನೆ ಮತ್ತು ಪುಸ್ತಕ ಬರೆಯಲು ಸದ್ಗೋಪಾಲ್‍ರವರು 1992 ರಲ್ಲಿ ದೆಹಲಿಗೆ ಬಂದರು. 1994ರಲ್ಲಿ ದೆಹಲಿ ವಿ.ವಿಯಲ್ಲಿ ಪ್ರಾಧ್ಯಾಪಕರಾಗಿ ಸೇರಿದರು. 1998ರಿಂದ 2001ರವರೆಗೆ ಡಿರ್ಪಾಟೆಮೆಂಟ್ ಆಫ್ ಎಜುಕೇಷನ್‍ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು.

ವಿಜ್ಞಾನ ಚಳವಳಿಯಲ್ಲಿ ಸದಾ ಮುಂದಿದ್ದ ಇವರು ಜನ ವಿಜ್ಞಾನ ಚಳವಳಿ ಜಾಥಾದ ಮುಖ್ಯಸ್ಥರಾಗಿದ್ದರು. 2004ರಲ್ಲಿ ಇವರನ್ನು ಸೆಂಟ್ರಲ್ ಅಡ್ವೈಸರಿ ಬೋರ್ಡ್ ಆಫ್ ಎಜುಕೇಷನ್‍ನ ಸದಸ್ಯರನ್ನಾಗಿ ನೇಮಿಸಲಾಯಿತು. ಆನಂತರ 2005ರಲ್ಲಿ ಈಗ ಜಾರಿಯಲ್ಲಿರುವ ಆರ್‍ಟಿಈ ಶಿಕ್ಷಣ ಹಕ್ಕು ಕಾಯ್ದೆಯ ರಚನಾ ಸಮಿತಿಯ ಸದಸ್ಯರಾಗಿದ್ದರು. ದೇಶದ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಸಮಾನ ಶಿಕ್ಷಣವನ್ನು ಜಾರಿಗೊಳಿಸುವುದು, ತಾರತಮ್ಯವನ್ನು ನಿವಾರಿಸುವಂತಹ ಮಹತ್ವದ ಅಂಶಗಳನ್ನು ಅದರಲ್ಲಿ ಇವರು ಸೇರಿಸಿದ್ದರು. ಆದರೆ ಇವರು ಭಾಗವಾಗಿದ್ದ ಸಮಿತಿ ಸಲ್ಲಿಸಿದ ವರದಿಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರ ಮಂಡಿಸಿತು. ಇದರಿಂದ ಬೇಸರಗೊಂಡ ಇವರು ತಮ್ಮ ವಿರೋಧವನ್ನು ದಾಖಲಿಸಿ ಸಮಿತಿಗೆ ರಾಜಿನಾಮೇ ನೀಡ ಹೊರಬಂದರು.

ಆಗ ಅವರು ಆರ್‍ಟಿಈಯನ್ನು ಜಾರಿಗೊಳಿಸುವ ಮುನ್ನ ತಿದ್ದುಪಡಿ ಮಾಡಬೇಕೆಂಬ ಆಂದೋಲನವನ್ನು ಶುರು ಮಾಡಿದರು. ಸಮಾನ ಶಾಲೆಯನ್ನು ಜಾರಿಗೆ ತರಬೇಕೇಂಬುದು ಅವರ ಪ್ರಮುಖ ಹಕ್ಕೊತ್ತಾಯವಾಗಿತ್ತು.

ಒಂದು ಹಳ್ಳಿಯನ್ನು/ ನಗರದ ನಿಗಧಿತ ಪ್ರದೇಶ ತೆಗೆದುಕೊಂಡರೆ ಅಲ್ಲಿ ಒಂದೇ ಸುಸಜ್ಜಿತ ಸರ್ಕಾರಿ ಶಾಲೆ ಇರಬೇಕು. ಆ ನೆರಹೊರೆಯ ಎಲ್ಲಾ ಜಾತಿ ವರ್ಗದ ಮಕ್ಕಳು ಅದೇ ಶಾಲೆಗೆ ಬರಬೇಕು. (ಶ್ರೀಮಂತ – ಬಡವ, ಮೇಲುಜಾತಿ-ತಳಸಮುದಾಯ ಎಲ್ಲರೂ ಸೇರಿ) ಆಗ ಅಲ್ಲಿನ ಶಿಕ್ಷಕರು ಅತ್ಯುತ್ತಮವಾಗಿ ಬೋಧಿಸುವುದಲ್ಲದೇ ಉತ್ತಮ ಗುಣಮಟ್ಟದ ಶಿಕ್ಷಣ ಸಾಧ್ಯ ಎಂಬುದು ಇವರ ಕನಸಾಗಿತ್ತು. ಇದನ್ನೇ ನೆರೆಹೊರೆ ಆಧಾರಿತ ಸಮಾನ ಶಾಲಾ ಪದ್ದತಿಯೆಂದು ಕರೆದು ಇದರ ಜಾರಿಗಾಗಿ ಒತ್ತಾಯಿಸಿದರು.

ನಂತರ 2009ರಲ್ಲಿ ಇವರು ಶಿಕ್ಷಣದ ಹಕ್ಕಿಗಾಗಿ ಅಖಿಲ ಭಾರತ ವೇದಿಕೆಯನ್ನು ಪ್ರಾರಂಭಿಸಿದರು. ಶಿಕ್ಷಣ ತಜ್ಞರು, ಪ್ರಾಧ್ಯಾಪಕರು, ಪೋಷಕರು, ವಿದ್ಯಾರ್ಥಿಗಳು, ಚಳವಳಿಗಾರರು ಎಲ್ಲರನ್ನು ಒಳಗೊಂಡಿರುವ ಈ ವೇದಿಕೆ ಶಿಕ್ಷಣದ ವ್ಯಾಪರವನ್ನು ತಡೆಗಟ್ಟಿ ಸಮಾನ ಶಾಲೆಗಳು ಜಾರಿಯಾಗಬೇಕೆಂದು ಒತ್ತಾಯಿಸುತ್ತಿದೆ. ಅನಿಲ್ ಸದ್ಗೋಪಾಲ್‍ರವರು ಹಲವು ಬಾರಿ ಕರ್ನಾಟಕಕ್ಕೂ ಬಂದು ಶಿಕ್ಷಣದ ಕುರಿತು ಹಲವು ಮಹತ್ವದ ಉಪನ್ಯಾಸಗಳನ್ನು ನೀಡಿದ್ದಾರೆ.

79 ವರ್ಷದ ಇಂತಹ ಸರಳಜೀವಿ, ಈಗಲೂ ದಿನಕ್ಕೆ ನಿಜವಾಗಿಯೂ 18ಗಂಟೆಗಿಂತಲೂ ಹೆಚ್ಚು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಈ ಶಿಕ್ಷಣ ಸಂತನನ್ನು ಜ್ಞಾಪಿಸಿಕೊಳ್ಳಲು ಒಂದು ಕಾರಣವಿದೆ. ಮೊನ್ನೆಯಷ್ಟೇ ಇವರಿಗೆ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ವತಿಯಿಂದ ಕೊಡಲಾಗುವ ಹೋಮಿಬಾಬ ಅವಾರ್ಡ್ ಪಡೆದಿದ್ದಾರೆ. ಪ್ರತಿ ಎರಡು ವರ್ಷಕ್ಕೊಮ್ಮೆ ಶಿಕ್ಷಣ ಮತ್ತು ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಳ್ಳುವವರಿಗೆ ಕೊಡಲಾಗುವ ಈ ಪ್ರಶಸ್ತಿ ಅನಿಲ್ ಸದ್ಗೋಪಾಲ್‍ರವರು ವಿಜ್ಞಾನ ಚಳವಳಿಗೆ ನೀಡಿದ ಜೀವಮಾನದ ಸಾಧನೆಗಾಗಿ ನೀಡಲಾಗಿದೆ.

ಪ್ರಶಸ್ತಿ ಪಡೆದು ಮಾತನಾಡಿರುವ ಅನಿಲ್ ಸದ್ಗೋಪಾಲ್‍ರವರು ಈ ಪ್ರಶಸ್ತಿ ನಮ್ಮ ಇಡೀ ತಂಡಕ್ಕೆ ಸೇರಬೇಕು. ಅವರಿಲ್ಲದಿದ್ದರೆ ನಾನೊಬ್ಬನೇ 1972ರಿಂದ ಇಲ್ಲಿವರೆಗೂ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎನ್ನುವ ಮೂಲಕ ತಮ್ಮ ವಿನಯತೆಯನ್ನು ಮೆರೆದಿದ್ದಾರೆ. ಅವರ ಹೋರಾಟಕ್ಕೆ ಜಯ ಸಿಗಲೆಂದು ಆಶಿಸೋಣ.

ಇದನ್ನು ಓದಿ: ಅತ್ಯುತ್ತಮ ಶಿಕ್ಷಣ ನೀಡುವ ರಾಷ್ಟ್ರಗಳಲ್ಲಿ ಫಿನ್‍ಲ್ಯಾಂಡ್ ನಂಬರ್ 1 ಆಗಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...