Homeಮುಖಪುಟಸಾಮಾನ್ಯ ಬಳಕೆಯ 8 ಔಷಧಿಗಳ ಬೆಲೆ 50% ಹೆಚ್ಚಿಸಲು ಕೇಂದ್ರ ನಿರ್ಧಾರ - ಕಾಂಗ್ರೆಸ್ ವಿರೋಧ

ಸಾಮಾನ್ಯ ಬಳಕೆಯ 8 ಔಷಧಿಗಳ ಬೆಲೆ 50% ಹೆಚ್ಚಿಸಲು ಕೇಂದ್ರ ನಿರ್ಧಾರ – ಕಾಂಗ್ರೆಸ್ ವಿರೋಧ

- Advertisement -
- Advertisement -

ಎಂಟು ಅಗತ್ಯ ಔಷಧಿಗಳ ಬೆಲೆಯನ್ನು 50% ರಷ್ಟು ಹೆಚ್ಚಿಸುವ ಕೇಂದ್ರದ ಬಿಜೆಪಿಯ ಮೋದಿ ಸರ್ಕಾರದ ನಿರ್ಧಾರದ ಬಗ್ಗೆ ವಿಪಕ್ಷ ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿದ್ದು, ಬೆಲೆ ಏರಿಕೆಯಿಂದ ರೋಗಿಗಳು ಮತ್ತು ಜನರ ಆರೋಗ್ಯ ರಕ್ಷಣೆಯ ಮೇಲೆ ಬೀರುವ ಪರಿಣಾಮವನ್ನು ನಿರ್ಣಯಿಸಲು ಸ್ವತಂತ್ರ ಪರಿಶೀಲನಾ ಸಮಿತಿ ರಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಒತ್ತಾಯಿಸಿದೆ. ಸಾಮಾನ್ಯ ಬಳಕೆಯ

ಸಾಮಾನ್ಯವಾಗಿ ಬಳಸುವ ಎಂಟು ಔಷಧಿಗಳ ಸೀಲಿಂಗ್ ಬೆಲೆಯನ್ನು 50%ದಷ್ಟು ಹೆಚ್ಚಿಸುವ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ (ಎನ್‌ಪಿಪಿಎ) ಇತ್ತೀಚಿನ ನಿರ್ಧಾರದ ಬಗ್ಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಮೋದಿಗೆ ಪತ್ರ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಟ್ಯಾಗೋರ್ ಅವರು ಈ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಈ ಬೆಲೆ ಹೆಚ್ಚಳಕ್ಕೆ ಸರ್ಕಾರವು ‘ಅಸಾಧಾರಣ ಸಂದರ್ಭಗಳು’ ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ಕಾರಣಗಳನ್ನು ಉಲ್ಲೇಖಿಸಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ಅಂತಹ ಮಹತ್ವದ ನಿರ್ಧಾರದ ಹಿಂದಿನ ತಾರ್ಕಿಕತೆಯನ್ನು ಸ್ಪಷ್ಟಪಡಿಸುವುದು ನಿರ್ಣಾಯಕ ಎಂದು ನಾನು ನಂಬುತ್ತೇನೆ” ಎಂದು ಪತ್ರದಲ್ಲಿ ಕೇಳಿದ್ದಾರೆ. ಸಾಮಾನ್ಯ ಬಳಕೆಯ

“ಈ ಬೆಲೆ ಏರಿಕೆಯು ಲಕ್ಷಾಂತರ ನಾಗರಿಕರಿಗೆ ಅಗತ್ಯವಾದ ಆಸ್ತಮಾ, ಕ್ಷಯ, ಬೈಪೋಲಾರ್ ಡಿಸಾರ್ಡರ್ ಮತ್ತು ಗ್ಲುಕೋಮಾದಂತಹ ರೋಗಗಳ ಪ್ರಮುಖ ಔಷಧಿಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದ್ದಾರೆ.

ದೇಶದ ಅನೇಕ ರೋಗಿಗಳು ಮತ್ತು ಅವರ ಕುಟುಂಬಗಳು ಅಗತ್ಯ ಚಿಕಿತ್ಸೆಗಳನ್ನು ಪಡೆಯಲು ಈಗಾಗಲೆ ಹಣಕಾಸಿನ ಸಮಸ್ಯೆ ಎದುರಿಸುತ್ತಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಔಷಧದ ಬೆಲೆಗಳಲ್ಲಿನ ಈ ಹಠಾತ್ ಹೆಚ್ಚಳವು ಇಂತಹ ವ್ಯಕ್ತಿಗಳ ಮೇಲೆ ಹೆಚ್ಚುವರಿ ಹೊರೆಯನ್ನು ಉಂಟುಮಾಡಬಹುದು ಮತ್ತು ಅವರ ಆರೋಗ್ಯದ ಮೇಲೆ ಅವರು ರಾಜಿ ಮಾಡುವ ಸಂಭವವಿರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಈ ಬೆಲೆ ಏರಿಕೆಗೆ ಅಗತ್ಯವಾದ ಅಸಾಮಾನ್ಯ ಸಂದರ್ಭಗಳ ಬಗ್ಗೆ ಹೆಚ್ಚು ವಿವರವಾದ ವಿವರಣೆಯನ್ನು ನೀಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಇದಲ್ಲದೆ, ರೋಗಿಗಳು ಮತ್ತು ಆರೋಗ್ಯ ಕ್ಷೇತ್ರದ ಮೇಲೆ ಈ ಬೆಲೆ ಹೆಚ್ಚಳದ ನೈಜ ಪರಿಣಾಮವನ್ನು ನಿರ್ಣಯಿಸಲು ಸ್ವತಂತ್ರ ಪರಿಶೀಲನಾ ಸಮಿತಿಯನ್ನು ಸ್ಥಾಪಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಇಂತಹ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕಾಗಿದ್ದು ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಅತ್ಯಗತ್ಯವಾಗಿದೆ. ಸಂಪೂರ್ಣ ಪರಿಶೀಲನೆಯು ಒಳ್ಳೆಯ ನೀತಿಗಳು ತರುವಂತೆ ಮಾಡುತ್ತದೆ. ಹೀಗಾದರೆ ಅಗತ್ಯ ಔಷಧಗಳು ಕೈಗೆಟುಕುವ ದರರಲ್ಲಿ ಎಲ್ಲರಿಗೂ ಪಡೆಯುವಂತೆ ಇರುತ್ತದೆ” ಎಂದು ಸಂಸದ ಟ್ಯಾಗೋರ್ ಹೇಳಿದ್ದಾರೆ.

ಅಕ್ಟೋಬರ್ 14 ರಂದು ಕೇಂದ್ರ ಸರ್ಕಾರವು ಎಂಟು ಔಷಧಿಗಳ 11 ನಿಗದಿತ ಸೂತ್ರೀಕರಣಗಳನ್ನು ಅವುಗಳ ಪ್ರಸ್ತುತ ಸೀಲಿಂಗ್ ಬೆಲೆಯ ಶೇಕಡಾ 50 ರಷ್ಟು ಹೆಚ್ಚಿಸಲು ಅನುಮೋದಿಸಿದೆ ಎಂದು ಘೋಷಿಸಿತ್ತು. ಔಷಧೀಯ ಪದಾರ್ಥಗಳ ನಿರಂತರ ಹೆಚ್ಚಳವಾದ ವೆಚ್ಚ ಸೇರಿದಂತೆ ವಿವಿಧ ಕಾರಣಗಳನ್ನು ಉಲ್ಲೇಖಿಸಿ ಬೆಲೆಗಳ ಏರಿಕೆಗಾಗಿ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಮಾಡಿತ್ತು.

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...