Homeಮುಖಪುಟಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

- Advertisement -
- Advertisement -

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ ನಡೆದ ಮಹಿಳೆಯರ ಶಾಟ್‌ಪುಟ್ ಎಫ್‌57 ಸ್ಪರ್ಧೆಯಲ್ಲಿ ಅವರು ಚಿನ್ನ ಗೆದ್ದಿದ್ದಾರೆ.

40 ವರ್ಷ ವಯಸ್ಸಿನ ಶರ್ಮಿಳಾ ಸಿಡಬ್ಲ್ಯೂಜಿನಲ್ಲಿ ಪ್ಯಾರಾ-ಅಥ್ಲೆಟಿಕ್ಸ್‌ ಪದಕಕ್ಕಾಗಿ ಭಾರತದ 20 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿದ್ದಾರೆ. ಆ ಮೂಲಕ 9.81 ಮೀಟರ್ ದೂರ ಎಸೆದು ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.

ವಿವಾದಾತ್ಮಕ ಸಂದರ್ಭಗಳ ನಡುವೆ ಭಾರತೀಯರ ಪ್ರತಿಭಟನೆಯ ನಂತರ ಭಾರತದ ಶಿಲ್ಪಾ ಶೈಲಾ ಅವರಿಗೆ ಕಂಚಿನ ಪದಕ ನೀಡಲಾಯಿತು. ಶೈಲಾ 7.26 ಮೀಟರ್ ವೈಯಕ್ತಿಕ ಅತ್ಯುತ್ತಮ ಪ್ರಯತ್ನ ಮಾಡಿದ್ದರು.

ನೈಜೀರಿಯಾದ ಯುಚಾರಿಯಾ ಇಯಾಜಿ ಅವರನ್ನು ಆರಂಭದಲ್ಲಿ ಕಂಚಿನ ಪದಕ ಸ್ಥಾನದಲ್ಲಿ ಇರಿಸಲಾಗಿತ್ತು. ಆದರೆ, ಭಾರತದ ಪ್ರತಿಭಟನೆ ಮತ್ತು ಅಧಿಕೃತ ಪರಿಶೀಲನೆಯ ನಂತರ, ಅವರ ಏಕೈಕ ಮಾನ್ಯ ಅಂಕವನ್ನು ಫೌಲ್ ಎಂದು ನಿರ್ಣಯಿಸಲಾಯಿತು.

ಇದರಿಂದಾಗಿ ಶೈಲಾ ಅವರನ್ನು ಆರಂಭಿಕ ನಾಲ್ಕನೇ ಸ್ಥಾನದಿಂದ ಕಂಚಿಗೆ ಬಡ್ತಿ ನೀಡಲಾಯಿತು. ಆದರೆ, ನೈಜೀರಿಯಾ ಕೂಡ ಇದಕ್ಕೆ ಪ್ರತಿಯಾಗಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ಸೋಮವಾರ ರಾತ್ರಿ ನಡೆದ ಶರ್ಮಿಳಾ ಅವರ ಪ್ರದರ್ಶನವು, ಫಲಿತಾಂಶಕ್ಕೆ ಮಾತ್ರ ಸೀಮಿತವಾಗಿರದೆ, ಅವರು ಜೀವನದಲ್ಲಿ ಇಲ್ಲಿಯವರೆಗೆ ಬರಲು ತೆಗೆದುಕೊಂಡ ಸಂಕಲ್ಪಕ್ಕೂ ಒಂದು ಉದಾಹರಣೆಯಾಗಿದೆ.

ಹರಿಯಾಣದ ಚಿತ್ರೋಲಿಯವರಾದ ಶರ್ಮಿಳಾ ಅವರ ಎಡಗಾಲು ಎರಡು ವರ್ಷ ವಯಸ್ಸಿನಲ್ಲಿ ಪೋಲಿಯೊದಿಂದ ದುರ್ಬಲವಾಗಿತ್ತು.

ಭಾರತೀಯ ಕ್ರೀಡಾ ಪ್ರಾಧಿಕಾರ ಹಂಚಿಕೊಂಡ ಪ್ರೊಫೈಲ್ ಪ್ರಕಾರ, ಶರ್ಮಿಳಾ ಅವರಿಗೆ ಅತ್ಯಂತ ಚಿಕ್ಕ ವಯಸ್ಸಿನಲ್ಲೇ ವಿವಾಹವಾಯಿತು. ಕುಟುಂಬದ ಬೆಂಬಲದೊಂದಿಗೆ ಜೀವನವನ್ನು ಕಟ್ಟಿಕೊಳ್ಳುವ ಮೊದಲೇ ಅವರು ಕಷ್ಟದ ದಾಂಪತ್ಯದಲ್ಲಿ ಸಿಲುಕಿಕೊಂಡರು. ಗಂಡನಿಂದ ಬೇರ್ಪಟ್ಟ ಬಳಿಕ ಅವರು ಅಂತಿಮವಾಗಿ ರೇವಾರಿಯ ಉದ್ಯಮಿ ಅಜಿತ್ ಸಿಂಗ್ ಅವರನ್ನು ಮರು ವಿವಾಹವಾದರು, ಈಗ ಅವರಿಗೆ ಇಬ್ಬರು ಮಕ್ಕಳಿದ್ದಾರೆ.

2020 ರಲ್ಲಿ ಶರ್ಮಿಳಾ ಪ್ಯಾರಾ ಅಥ್ಲೆಟಿಕ್ಸ್ ವೃತ್ತಿಜೀವನವನ್ನು ಪ್ರಾರಂಭಿಸಲು ಪ್ರೋತ್ಸಾಹಿಸಿದವರು ಅಜಿತ್.

ತರಬೇತುದಾರ ಟೆಕ್ ಚಂದ್ ಅವರ ಮಾರ್ಗದರ್ಶನದಲ್ಲಿ ಒಂದು ವರ್ಷದೊಳಗೆ ಅವರು ರಾಷ್ಟ್ರೀಯ ಚಾಂಪಿಯನ್‌ಶಿಪ್ ಗೆದ್ದರು. ಅಂದಿನಿಂದ ಶಾಟ್ ಪುಟ್ ಮತ್ತು ಡಿಸ್ಕಸ್ ಥ್ರೋ (ಎಫ್‌57) ಸ್ಪರ್ಧೆಗಳಲ್ಲಿ ಭಾರತದ ಪ್ರಮುಖ ಪ್ಯಾರಾ ಥ್ರೋವರ್‌ಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.

ಈ ವರ್ಷ ಫಝಾ ಇಂಟರ್ನ್ಯಾಷನಲ್ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಶರ್ಮಿಳಾ ಚಿನ್ನದ ಪದಕ ಗೆದ್ದರು. ಅವರು 2022 ರ ಬರ್ಮಿಂಗ್ಹ್ಯಾಮ್ ಕ್ರೀಡಾಕೂಟದಲ್ಲಿಯೂ ಭಾಗವಹಿಸಿ ನಾಲ್ಕನೇ ಸ್ಥಾನ ಪಡೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...