Homeಅಂಕಣಗಳುಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

ಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

- Advertisement -
- Advertisement -

ಗುಜರಾತಿನಿಂದ ತೆವಳಿದ ಕೋಮು ಗಲಭೆಯ ವಿಖ್ಯಾತ ವಿಕರಾಳ ಮಾದರಿ ದೆಹಲಿಯ ಸಾವುಗಳನ್ನು ಅರ್ಧ ಶತಕದತ್ತ ಒಯ್ಯತೊಡಗಿದೆ. ನೈಋತ್ಯ ದೆಹಲಿಯ ಭಾರೀ ಚರಂಡಿಗಳಲ್ಲಿ ಕೊಳೆತ ಹೆಣಗಳು ತೇಲತೊಡಗಿವೆ. ರಣಕೇಕೆ, ರಕ್ತಪಾತ, ಅಟ್ಟಹಾಸ, ಅಕ್ರಂದನಗಳು ಅಡಗಿವೆ. ದಿಕ್ಕುಗಾಣದ ತಬ್ಬಲಿತನ, ದುಃಖ, ಆಘಾತಗಳು ಮಡುಗಟ್ಟಿವೆ. ಬದುಕುಗಳನ್ನು ಬಂಧು ಮಿತ್ರರನ್ನು ಕಳೆದುಕೊಂಡು ಬರಿಗೈಯಾಗಿರುವವರು ತಮ್ಮ ನೆಲದಲ್ಲೇ ಅನಾಥರಾಗಿದ್ದಾರೆ. ಪರಕೀಯತೆ ಮುತ್ತಿ ಕಾಡಿದೆ. ಬೆಂದ ಬದುಕುಗಳನ್ನು ಎಲ್ಲಿಂದ ಪುನಃ ಕಟ್ಟಬೇಕೋ ಕಾಣದಾಗಿದ್ದಾರೆ.

ಹದ್ದುಬಸ್ತುಗಳಿಲ್ಲದೆ ಹೂಂಕರಿಸಿದ ಕ್ರೌರ್ಯ ಅಮಾನುಷತೆ ಪೈಶಾಚಿಕ ನಗ್ನ ನರ್ತನದ ನಡುವೆ ಮಾನವೀಯತೆ ಮತ್ತು ಬಂಧುತ್ವದ ಪ್ರೀತಿ ಹರಿಸಿ ಜೀವಗಳನ್ನು ಕಾಪಾಡಿದ ಅನೇಕ ಉದಾಹರಣೆಗಳು ಕಾರ್ಮೋಡದ ನಡುವಿನ ಕೋಲ್ಮಿಂಚಿನಂತೆ ಗೋಚರಿಸಿವೆ.

ದೇಶದ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ಮೂಗಿನ ಕೆಳಗೆ ಮೂರು ದಿನಗಳ ಕಾಲ ಕಾನೂನು ಮತ್ತು ಸುವ್ಯವಸ್ಥೆ ಎಂಬುದು ಸಂಪೂರ್ಣ ಕುಸಿದು ಗಲಭೆಕೋರರ ಕಾಲ ಕೆಳಗೆ ನರಳಿದ ಪರಿ ಸೋಜಿಗ ಮತ್ತು ಖೇದ ಉಂಟು ಮಾಡಿದೆ. ದೆಹಲಿ ಪೊಲೀಸ್ ವ್ಯವಸ್ಥೆ ಖುದ್ದಾಗಿ ಮುಂದೆ ನಿಂತು ಕೊಲೆಗಡುಕ ಗಲಭೆಕೋರ ಗುಂಪುಗಳಿಗೆ ಉತ್ತೇಜನ ನೀಡಿದ ಅನೇಕ ಕರಾಳ ನಿದರ್ಶನಗಳು ಹೊರಬಿದ್ದಿವೆ.

ಇಂತಹ ಪೊಲೀಸ್ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟಿನ ನ್ಯಾಯಮೂರ್ತಿಯೊಬ್ಬರನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಲಾಗಿದೆ. ದಂಡಿಸಬೇಕಾದವರ ರಕ್ಷಣೆಗೆ ಮುಂದಾಗಿದೆ ಕೇಂದ್ರ ಸರ್ಕಾರ. ಪೊಲೀಸರನ್ನು ದಂಡಿಸುವುದು ಬಿಟ್ಟು ನ್ಯಾಯವನ್ನು ನೇಣಿಗೇರಿಸಲಾಗಿದೆ. ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಬಿಜೆಪಿ ತಲೆಯಾಳುಗಳ ವಿರುದ್ಧ ಕಾನೂನು ಮತ್ತು ಸುವ್ಯವಸ್ಥೆಯ ಕಿರುಬೆರಳು ಕೂಡ ಇದುವರೆಗೆ ಕದಲಲಿಲ್ಲ.

ವರ್ಗಾವಣೆಯಾದ ನ್ಯಾಯಮೂರ್ತಿಯವರ ಜಾಗದಲ್ಲಿ ಕುಳಿತು ವಿಚಾರಣೆ ನಡೆಸಿದ ಮತ್ತೊಂದು ನ್ಯಾಯಪೀಠ ದೆಹಲಿ ಪೊಲೀಸರ ನಿಷ್ಕ್ರಿಯತೆ ಕುರಿತ ಕೇಸಿನ ವಿಚಾರಣೆಯನ್ನು ಒಂದೂವರೆ ತಿಂಗಳ ಕಾಲ ಮುಂದಕ್ಕೆ ಹಾಕಿದೆ. ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಶಾಂತಿಯಾತ್ರೆಯಲ್ಲೂ ಕೋಮುವಾದವನ್ನು ಬಡಿದೆಬ್ಬಿಸುವ ಪ್ರಯತ್ನ ಮಾಡಿದ ಕುರಿತು ಆಳುವ ವ್ಯವಸ್ಥೆ ಮೌನ ಕಿವಿಗಡಚಿಕ್ಕಿದೆ. ಜೈಲಿಗೆ ಅಟ್ಟಬೇಕಾದ ವ್ಯಕ್ತಿಗೆ ವೈ ಕೆಟಗರಿಯ ಸರ್ಕಾರಿ ಮೈಗಾವಲನ್ನು ಒದಗಿಸಿರುವುದು ವಿಕೃತಿಯ ಪರಮಾವಧಿ.

ದೆಹಲಿಯ ನರಮೇಧದ ಬೂದಿ ಇನ್ನೂ ಪೂರ್ಣ ತಣಿದಿಲ್ಲ. ರಕ್ತದಾಹದ ರಣಕೇಕೆ ಬಂಗಾಳದಲ್ಲಿ ಮೊಳಗಿದೆ. ದೆಹಲಿ ವಿಧಾನಸಭಾ ಚುನಾವಣೆಗಳ ಪ್ರಚಾರವನ್ನು ದ್ವೇಷ ಮತ್ತು ಧೃವೀಕರಣದಿಂದ ತುಂಬಿಸಿದ ಗೃಹಮಂತ್ರಿಯವರು ಕೊಲ್ಕತ್ತಾಕ್ಕೆ ಕಾಲಿಟ್ಟಿದ್ದಾರೆ. ಅಲ್ಲಿಯೂ ಚುನಾವಣೆಗಳು ಕದ ಬಡಿಯುತ್ತಿವೆ. ‘ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ’ ಘೋಷಣೆಗಳು ಬಂಗಾಳದಲ್ಲಿಯೂ ಕೇಳಿ ಬಂದಿವೆ. ದೆಹಲಿಯ ನರಮೇಧ ಬಂಗಾಳಕ್ಕೆ ಪಯಣಿಸದಿರಲಿ. ಈಶಾನ್ಯ ಭಾರತ ಮತ್ತೊಮ್ಮೆ ಭುಗಿಲೇಳತೊಡಗಿದೆ. ದೆಹಲಿಯಂತೆ ಮೇಘಾಲಯದಲ್ಲೂ ಎನ್.ಆರ್.ಸಿ. ಮತ್ತು ಸಿ.ಎ.ಎ. ಜನರ ಪ್ರಾಣಗಳನ್ನು ಬಲಿ ಪಡೆಯತೊಡಗಿವೆ. ಇರಿತಗಳಿಂದ ಮೂವರು ಅಸುನೀಗಿದ್ದಾರೆ. ಕೇಂದ್ರ ಸರ್ಕಾರ ಹೊತ್ತಿಸಿರುವ ಪೌರತ್ವದ ಕಿಚ್ಚು ಬಗೆಬಗೆಯ ಧೃವೀಕರಣಗಳನ್ನು ಬಿತ್ತಿ ಬೆಳೆಸತೊಡಗಿದೆ.

ಬುಡಕಟ್ಟುಗಳ ಭಾರತವಾಗಿರುವ ಈಶಾನ್ಯದಲ್ಲಿ ಅಸ್ಮಿತೆಯ ಪ್ರಶ್ನೆ ಬಲು ಸೂಕ್ಷ್ಮದ್ದು. ಅಸ್ಸಾಮಿನಲ್ಲಿ ಎನ್.ಆರ್.ಸಿ. ಮತ್ತು ಆನಂತರದ ಸಿ.ಎ.ಎ. ಈ ಸೀಮೆಯ ಶಾಂತಿಯನ್ನು ಗಾಢವಾಗಿ ಕದಡಿವೆ. ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಈ ಅಶಾಂತಿಯ ಭೂತವನ್ನು ಬಡಿದೆಬ್ಬಿಸಿ ಹಬ್ಬಿಸಿರುವವರು ರಾಜಕಾರಣಿಗಳು. ಈ ಭೂತ ತಮ್ಮ ಮುಷ್ಠಿಯ ಬಂಧಿ ಎಂಬ ಭ್ರಮೆಯಲ್ಲಿ ಮುಳುಗಿದ್ದಾರೆ. ಈ ಹಿಡಿತದಿಂದ .ಬಿಡಿಸಿಕೊಂಡು ಅಕರಾಳ ವಿಕರಾಳ ರೂಪ ಧರಿಸಿ ಅಮಾಯಕರ ಬೇಟೆಯಲ್ಲಿ ತೊಡಗಿದೆ. ತನ್ನನ್ನು ಬಡಿದೆಬ್ಬಿಸಿದವರನ್ನೂ ಇಂದಲ್ಲ ನಾಳೆ ಬಲಿ ತೆಗೆದುಕೊಂಡೀತು. ಹಚ್ಚಲಾಗುವ ಕಿಚ್ಚಿಗೆ ಹಿಂದೂಗಳು- ಮುಸಲ್ಮಾನರು ಎಂಬ ಧರ್ಮ ಇರುವುದಿಲ್ಲ. ಉರಿ ಉರಿದು, ಕಂಡದ್ದನ್ನೆಲ್ಲ ಬೂದಿಯಾಗಿಸುವುದೊಂದೇ ಅದರ ನಿಜ ಧರ್ಮ. ಸಿ.ಎ.ಎ. ಮತ್ತು ಎನ್.ಆರ್.ಸಿ. ಈಶಾನ್ಯ ಭಾರತದಲ್ಲಿ ಎಬ್ಬಿಸಿರುವ ಶಂಕೆ ಮತ್ತು ಭಯ ಬೇರೆಯದೇ ಆದದ್ದು. ಸಿ.ಎ.ಎ. ಅಡಿಯಲ್ಲಿ ಹಿಂದೂ-ಬೌದ್ಧ-ಕ್ರೈಸ್ತರ ಹೆಸರಿನಲ್ಲಿ ‘ಹೊರಗಿನವರು’ ಬಂದು ಬೀಡು ಬಿಟ್ಟು, ತಮ್ಮ ನೆಲ ಜಲ ಸಂಸ್ಕೃತಿ ಅಸ್ಮಿತೆಯ ಮೇಲೆ ದಾಳಿ ನಡೆಸಿ ರಾಜಕೀಯ ಅಧಿಕಾರವನ್ನೂ ಕಿತ್ತುಕೊಂಡಾರು, ತಮ್ಮ ನೆಲದಲ್ಲಿ ತಾವೇ ಪರಕೀಯರಂತೆ ಬದುಕಬೇಕಾದೀತು ಎಂಬುದು ಈಶಾನ್ಯ ರಾಜ್ಯಗಳ ಜನಸಮುದಾಯಗಳ ಆಶಂಕೆ. ನೆಲದ ಮಕ್ಕಳಾದ ಬುಡಕಟ್ಟುಗಳು ಮತ್ತು ಪರಕೀಯರು ಎಂಬ ರೂಪವನ್ನು ಸಿ.ಎ.ಎ.- ಎನ್.ಆರ್.ಸಿ. ಧರಿಸಿದೆ. ಇಬ್ಬರ ನಡುವೆ ರಕ್ತಸಿಕ್ತ ಕದನವನ್ನು ಹುಟ್ಟಿ ಹಾಕಿದೆ. ಮೊನ್ನೆ ಮೇಘಾಲಯದಲ್ಲಿ ನಡೆದ ಇಂತಹ ಘರ್ಷಣೆಗಳಲ್ಲಿ ಸತ್ತ ಮೂವರ ಪೈಕಿ ಇಬ್ಬರು ಅಸ್ಸಾಮಿನವರು. ಬುಡಕಟ್ಟು ಜನಾಂಗಗಳು ಪರಕೀಯರು ಎಂದು ಭಾವಿಸುವ ‘ಇತರರು’. ಇವರು ಹಿಂದೂಗಳೇ ಇರಬಹುದು, ಮುಸಲ್ಮಾನರೂ ಆಗಿರಬಹುದು.

ಸಿ.ಎ.ಎ.-ಎನ್.ಆರ್.ಸಿ. ತರಲೇಬೇಕೆಂಬ ಜಿದ್ದು ಸಮುದಾಯಗಳ ನಡುವೆ ಅಪನಂಬಿಕೆ ಮತ್ತು ಬಿಗುವಿನ ಭಾವಗಳನ್ನು ದಟ್ಟಗೊಳಿಸತೊಡಗಿವೆ ಎಂಬ ವಾಸ್ತವವನ್ನು ಸರ್ಕಾರ ಗುರುತಿಸಿ ಒಪ್ಪಿಕೊಳ್ಳಬೇಕು. ಒಪ್ಪಿಕೊಂಡರೆ ಹೊರದಾರಿ ತಾನಾಗಿಯೇ ಗೋಚರಿಸೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...