Homeಅಂಕಣಗಳುಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

ಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

- Advertisement -
- Advertisement -

ಗುಜರಾತಿನಿಂದ ತೆವಳಿದ ಕೋಮು ಗಲಭೆಯ ವಿಖ್ಯಾತ ವಿಕರಾಳ ಮಾದರಿ ದೆಹಲಿಯ ಸಾವುಗಳನ್ನು ಅರ್ಧ ಶತಕದತ್ತ ಒಯ್ಯತೊಡಗಿದೆ. ನೈಋತ್ಯ ದೆಹಲಿಯ ಭಾರೀ ಚರಂಡಿಗಳಲ್ಲಿ ಕೊಳೆತ ಹೆಣಗಳು ತೇಲತೊಡಗಿವೆ. ರಣಕೇಕೆ, ರಕ್ತಪಾತ, ಅಟ್ಟಹಾಸ, ಅಕ್ರಂದನಗಳು ಅಡಗಿವೆ. ದಿಕ್ಕುಗಾಣದ ತಬ್ಬಲಿತನ, ದುಃಖ, ಆಘಾತಗಳು ಮಡುಗಟ್ಟಿವೆ. ಬದುಕುಗಳನ್ನು ಬಂಧು ಮಿತ್ರರನ್ನು ಕಳೆದುಕೊಂಡು ಬರಿಗೈಯಾಗಿರುವವರು ತಮ್ಮ ನೆಲದಲ್ಲೇ ಅನಾಥರಾಗಿದ್ದಾರೆ. ಪರಕೀಯತೆ ಮುತ್ತಿ ಕಾಡಿದೆ. ಬೆಂದ ಬದುಕುಗಳನ್ನು ಎಲ್ಲಿಂದ ಪುನಃ ಕಟ್ಟಬೇಕೋ ಕಾಣದಾಗಿದ್ದಾರೆ.

ಹದ್ದುಬಸ್ತುಗಳಿಲ್ಲದೆ ಹೂಂಕರಿಸಿದ ಕ್ರೌರ್ಯ ಅಮಾನುಷತೆ ಪೈಶಾಚಿಕ ನಗ್ನ ನರ್ತನದ ನಡುವೆ ಮಾನವೀಯತೆ ಮತ್ತು ಬಂಧುತ್ವದ ಪ್ರೀತಿ ಹರಿಸಿ ಜೀವಗಳನ್ನು ಕಾಪಾಡಿದ ಅನೇಕ ಉದಾಹರಣೆಗಳು ಕಾರ್ಮೋಡದ ನಡುವಿನ ಕೋಲ್ಮಿಂಚಿನಂತೆ ಗೋಚರಿಸಿವೆ.

ದೇಶದ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ಮೂಗಿನ ಕೆಳಗೆ ಮೂರು ದಿನಗಳ ಕಾಲ ಕಾನೂನು ಮತ್ತು ಸುವ್ಯವಸ್ಥೆ ಎಂಬುದು ಸಂಪೂರ್ಣ ಕುಸಿದು ಗಲಭೆಕೋರರ ಕಾಲ ಕೆಳಗೆ ನರಳಿದ ಪರಿ ಸೋಜಿಗ ಮತ್ತು ಖೇದ ಉಂಟು ಮಾಡಿದೆ. ದೆಹಲಿ ಪೊಲೀಸ್ ವ್ಯವಸ್ಥೆ ಖುದ್ದಾಗಿ ಮುಂದೆ ನಿಂತು ಕೊಲೆಗಡುಕ ಗಲಭೆಕೋರ ಗುಂಪುಗಳಿಗೆ ಉತ್ತೇಜನ ನೀಡಿದ ಅನೇಕ ಕರಾಳ ನಿದರ್ಶನಗಳು ಹೊರಬಿದ್ದಿವೆ.

ಇಂತಹ ಪೊಲೀಸ್ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟಿನ ನ್ಯಾಯಮೂರ್ತಿಯೊಬ್ಬರನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಲಾಗಿದೆ. ದಂಡಿಸಬೇಕಾದವರ ರಕ್ಷಣೆಗೆ ಮುಂದಾಗಿದೆ ಕೇಂದ್ರ ಸರ್ಕಾರ. ಪೊಲೀಸರನ್ನು ದಂಡಿಸುವುದು ಬಿಟ್ಟು ನ್ಯಾಯವನ್ನು ನೇಣಿಗೇರಿಸಲಾಗಿದೆ. ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಬಿಜೆಪಿ ತಲೆಯಾಳುಗಳ ವಿರುದ್ಧ ಕಾನೂನು ಮತ್ತು ಸುವ್ಯವಸ್ಥೆಯ ಕಿರುಬೆರಳು ಕೂಡ ಇದುವರೆಗೆ ಕದಲಲಿಲ್ಲ.

ವರ್ಗಾವಣೆಯಾದ ನ್ಯಾಯಮೂರ್ತಿಯವರ ಜಾಗದಲ್ಲಿ ಕುಳಿತು ವಿಚಾರಣೆ ನಡೆಸಿದ ಮತ್ತೊಂದು ನ್ಯಾಯಪೀಠ ದೆಹಲಿ ಪೊಲೀಸರ ನಿಷ್ಕ್ರಿಯತೆ ಕುರಿತ ಕೇಸಿನ ವಿಚಾರಣೆಯನ್ನು ಒಂದೂವರೆ ತಿಂಗಳ ಕಾಲ ಮುಂದಕ್ಕೆ ಹಾಕಿದೆ. ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಶಾಂತಿಯಾತ್ರೆಯಲ್ಲೂ ಕೋಮುವಾದವನ್ನು ಬಡಿದೆಬ್ಬಿಸುವ ಪ್ರಯತ್ನ ಮಾಡಿದ ಕುರಿತು ಆಳುವ ವ್ಯವಸ್ಥೆ ಮೌನ ಕಿವಿಗಡಚಿಕ್ಕಿದೆ. ಜೈಲಿಗೆ ಅಟ್ಟಬೇಕಾದ ವ್ಯಕ್ತಿಗೆ ವೈ ಕೆಟಗರಿಯ ಸರ್ಕಾರಿ ಮೈಗಾವಲನ್ನು ಒದಗಿಸಿರುವುದು ವಿಕೃತಿಯ ಪರಮಾವಧಿ.

ದೆಹಲಿಯ ನರಮೇಧದ ಬೂದಿ ಇನ್ನೂ ಪೂರ್ಣ ತಣಿದಿಲ್ಲ. ರಕ್ತದಾಹದ ರಣಕೇಕೆ ಬಂಗಾಳದಲ್ಲಿ ಮೊಳಗಿದೆ. ದೆಹಲಿ ವಿಧಾನಸಭಾ ಚುನಾವಣೆಗಳ ಪ್ರಚಾರವನ್ನು ದ್ವೇಷ ಮತ್ತು ಧೃವೀಕರಣದಿಂದ ತುಂಬಿಸಿದ ಗೃಹಮಂತ್ರಿಯವರು ಕೊಲ್ಕತ್ತಾಕ್ಕೆ ಕಾಲಿಟ್ಟಿದ್ದಾರೆ. ಅಲ್ಲಿಯೂ ಚುನಾವಣೆಗಳು ಕದ ಬಡಿಯುತ್ತಿವೆ. ‘ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ’ ಘೋಷಣೆಗಳು ಬಂಗಾಳದಲ್ಲಿಯೂ ಕೇಳಿ ಬಂದಿವೆ. ದೆಹಲಿಯ ನರಮೇಧ ಬಂಗಾಳಕ್ಕೆ ಪಯಣಿಸದಿರಲಿ. ಈಶಾನ್ಯ ಭಾರತ ಮತ್ತೊಮ್ಮೆ ಭುಗಿಲೇಳತೊಡಗಿದೆ. ದೆಹಲಿಯಂತೆ ಮೇಘಾಲಯದಲ್ಲೂ ಎನ್.ಆರ್.ಸಿ. ಮತ್ತು ಸಿ.ಎ.ಎ. ಜನರ ಪ್ರಾಣಗಳನ್ನು ಬಲಿ ಪಡೆಯತೊಡಗಿವೆ. ಇರಿತಗಳಿಂದ ಮೂವರು ಅಸುನೀಗಿದ್ದಾರೆ. ಕೇಂದ್ರ ಸರ್ಕಾರ ಹೊತ್ತಿಸಿರುವ ಪೌರತ್ವದ ಕಿಚ್ಚು ಬಗೆಬಗೆಯ ಧೃವೀಕರಣಗಳನ್ನು ಬಿತ್ತಿ ಬೆಳೆಸತೊಡಗಿದೆ.

ಬುಡಕಟ್ಟುಗಳ ಭಾರತವಾಗಿರುವ ಈಶಾನ್ಯದಲ್ಲಿ ಅಸ್ಮಿತೆಯ ಪ್ರಶ್ನೆ ಬಲು ಸೂಕ್ಷ್ಮದ್ದು. ಅಸ್ಸಾಮಿನಲ್ಲಿ ಎನ್.ಆರ್.ಸಿ. ಮತ್ತು ಆನಂತರದ ಸಿ.ಎ.ಎ. ಈ ಸೀಮೆಯ ಶಾಂತಿಯನ್ನು ಗಾಢವಾಗಿ ಕದಡಿವೆ. ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಈ ಅಶಾಂತಿಯ ಭೂತವನ್ನು ಬಡಿದೆಬ್ಬಿಸಿ ಹಬ್ಬಿಸಿರುವವರು ರಾಜಕಾರಣಿಗಳು. ಈ ಭೂತ ತಮ್ಮ ಮುಷ್ಠಿಯ ಬಂಧಿ ಎಂಬ ಭ್ರಮೆಯಲ್ಲಿ ಮುಳುಗಿದ್ದಾರೆ. ಈ ಹಿಡಿತದಿಂದ .ಬಿಡಿಸಿಕೊಂಡು ಅಕರಾಳ ವಿಕರಾಳ ರೂಪ ಧರಿಸಿ ಅಮಾಯಕರ ಬೇಟೆಯಲ್ಲಿ ತೊಡಗಿದೆ. ತನ್ನನ್ನು ಬಡಿದೆಬ್ಬಿಸಿದವರನ್ನೂ ಇಂದಲ್ಲ ನಾಳೆ ಬಲಿ ತೆಗೆದುಕೊಂಡೀತು. ಹಚ್ಚಲಾಗುವ ಕಿಚ್ಚಿಗೆ ಹಿಂದೂಗಳು- ಮುಸಲ್ಮಾನರು ಎಂಬ ಧರ್ಮ ಇರುವುದಿಲ್ಲ. ಉರಿ ಉರಿದು, ಕಂಡದ್ದನ್ನೆಲ್ಲ ಬೂದಿಯಾಗಿಸುವುದೊಂದೇ ಅದರ ನಿಜ ಧರ್ಮ. ಸಿ.ಎ.ಎ. ಮತ್ತು ಎನ್.ಆರ್.ಸಿ. ಈಶಾನ್ಯ ಭಾರತದಲ್ಲಿ ಎಬ್ಬಿಸಿರುವ ಶಂಕೆ ಮತ್ತು ಭಯ ಬೇರೆಯದೇ ಆದದ್ದು. ಸಿ.ಎ.ಎ. ಅಡಿಯಲ್ಲಿ ಹಿಂದೂ-ಬೌದ್ಧ-ಕ್ರೈಸ್ತರ ಹೆಸರಿನಲ್ಲಿ ‘ಹೊರಗಿನವರು’ ಬಂದು ಬೀಡು ಬಿಟ್ಟು, ತಮ್ಮ ನೆಲ ಜಲ ಸಂಸ್ಕೃತಿ ಅಸ್ಮಿತೆಯ ಮೇಲೆ ದಾಳಿ ನಡೆಸಿ ರಾಜಕೀಯ ಅಧಿಕಾರವನ್ನೂ ಕಿತ್ತುಕೊಂಡಾರು, ತಮ್ಮ ನೆಲದಲ್ಲಿ ತಾವೇ ಪರಕೀಯರಂತೆ ಬದುಕಬೇಕಾದೀತು ಎಂಬುದು ಈಶಾನ್ಯ ರಾಜ್ಯಗಳ ಜನಸಮುದಾಯಗಳ ಆಶಂಕೆ. ನೆಲದ ಮಕ್ಕಳಾದ ಬುಡಕಟ್ಟುಗಳು ಮತ್ತು ಪರಕೀಯರು ಎಂಬ ರೂಪವನ್ನು ಸಿ.ಎ.ಎ.- ಎನ್.ಆರ್.ಸಿ. ಧರಿಸಿದೆ. ಇಬ್ಬರ ನಡುವೆ ರಕ್ತಸಿಕ್ತ ಕದನವನ್ನು ಹುಟ್ಟಿ ಹಾಕಿದೆ. ಮೊನ್ನೆ ಮೇಘಾಲಯದಲ್ಲಿ ನಡೆದ ಇಂತಹ ಘರ್ಷಣೆಗಳಲ್ಲಿ ಸತ್ತ ಮೂವರ ಪೈಕಿ ಇಬ್ಬರು ಅಸ್ಸಾಮಿನವರು. ಬುಡಕಟ್ಟು ಜನಾಂಗಗಳು ಪರಕೀಯರು ಎಂದು ಭಾವಿಸುವ ‘ಇತರರು’. ಇವರು ಹಿಂದೂಗಳೇ ಇರಬಹುದು, ಮುಸಲ್ಮಾನರೂ ಆಗಿರಬಹುದು.

ಸಿ.ಎ.ಎ.-ಎನ್.ಆರ್.ಸಿ. ತರಲೇಬೇಕೆಂಬ ಜಿದ್ದು ಸಮುದಾಯಗಳ ನಡುವೆ ಅಪನಂಬಿಕೆ ಮತ್ತು ಬಿಗುವಿನ ಭಾವಗಳನ್ನು ದಟ್ಟಗೊಳಿಸತೊಡಗಿವೆ ಎಂಬ ವಾಸ್ತವವನ್ನು ಸರ್ಕಾರ ಗುರುತಿಸಿ ಒಪ್ಪಿಕೊಳ್ಳಬೇಕು. ಒಪ್ಪಿಕೊಂಡರೆ ಹೊರದಾರಿ ತಾನಾಗಿಯೇ ಗೋಚರಿಸೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...