Homeಅಂಕಣಗಳುಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

ಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

- Advertisement -
- Advertisement -

ಗುಜರಾತಿನಿಂದ ತೆವಳಿದ ಕೋಮು ಗಲಭೆಯ ವಿಖ್ಯಾತ ವಿಕರಾಳ ಮಾದರಿ ದೆಹಲಿಯ ಸಾವುಗಳನ್ನು ಅರ್ಧ ಶತಕದತ್ತ ಒಯ್ಯತೊಡಗಿದೆ. ನೈಋತ್ಯ ದೆಹಲಿಯ ಭಾರೀ ಚರಂಡಿಗಳಲ್ಲಿ ಕೊಳೆತ ಹೆಣಗಳು ತೇಲತೊಡಗಿವೆ. ರಣಕೇಕೆ, ರಕ್ತಪಾತ, ಅಟ್ಟಹಾಸ, ಅಕ್ರಂದನಗಳು ಅಡಗಿವೆ. ದಿಕ್ಕುಗಾಣದ ತಬ್ಬಲಿತನ, ದುಃಖ, ಆಘಾತಗಳು ಮಡುಗಟ್ಟಿವೆ. ಬದುಕುಗಳನ್ನು ಬಂಧು ಮಿತ್ರರನ್ನು ಕಳೆದುಕೊಂಡು ಬರಿಗೈಯಾಗಿರುವವರು ತಮ್ಮ ನೆಲದಲ್ಲೇ ಅನಾಥರಾಗಿದ್ದಾರೆ. ಪರಕೀಯತೆ ಮುತ್ತಿ ಕಾಡಿದೆ. ಬೆಂದ ಬದುಕುಗಳನ್ನು ಎಲ್ಲಿಂದ ಪುನಃ ಕಟ್ಟಬೇಕೋ ಕಾಣದಾಗಿದ್ದಾರೆ.

ಹದ್ದುಬಸ್ತುಗಳಿಲ್ಲದೆ ಹೂಂಕರಿಸಿದ ಕ್ರೌರ್ಯ ಅಮಾನುಷತೆ ಪೈಶಾಚಿಕ ನಗ್ನ ನರ್ತನದ ನಡುವೆ ಮಾನವೀಯತೆ ಮತ್ತು ಬಂಧುತ್ವದ ಪ್ರೀತಿ ಹರಿಸಿ ಜೀವಗಳನ್ನು ಕಾಪಾಡಿದ ಅನೇಕ ಉದಾಹರಣೆಗಳು ಕಾರ್ಮೋಡದ ನಡುವಿನ ಕೋಲ್ಮಿಂಚಿನಂತೆ ಗೋಚರಿಸಿವೆ.

ದೇಶದ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ಮೂಗಿನ ಕೆಳಗೆ ಮೂರು ದಿನಗಳ ಕಾಲ ಕಾನೂನು ಮತ್ತು ಸುವ್ಯವಸ್ಥೆ ಎಂಬುದು ಸಂಪೂರ್ಣ ಕುಸಿದು ಗಲಭೆಕೋರರ ಕಾಲ ಕೆಳಗೆ ನರಳಿದ ಪರಿ ಸೋಜಿಗ ಮತ್ತು ಖೇದ ಉಂಟು ಮಾಡಿದೆ. ದೆಹಲಿ ಪೊಲೀಸ್ ವ್ಯವಸ್ಥೆ ಖುದ್ದಾಗಿ ಮುಂದೆ ನಿಂತು ಕೊಲೆಗಡುಕ ಗಲಭೆಕೋರ ಗುಂಪುಗಳಿಗೆ ಉತ್ತೇಜನ ನೀಡಿದ ಅನೇಕ ಕರಾಳ ನಿದರ್ಶನಗಳು ಹೊರಬಿದ್ದಿವೆ.

ಇಂತಹ ಪೊಲೀಸ್ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟಿನ ನ್ಯಾಯಮೂರ್ತಿಯೊಬ್ಬರನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಲಾಗಿದೆ. ದಂಡಿಸಬೇಕಾದವರ ರಕ್ಷಣೆಗೆ ಮುಂದಾಗಿದೆ ಕೇಂದ್ರ ಸರ್ಕಾರ. ಪೊಲೀಸರನ್ನು ದಂಡಿಸುವುದು ಬಿಟ್ಟು ನ್ಯಾಯವನ್ನು ನೇಣಿಗೇರಿಸಲಾಗಿದೆ. ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಬಿಜೆಪಿ ತಲೆಯಾಳುಗಳ ವಿರುದ್ಧ ಕಾನೂನು ಮತ್ತು ಸುವ್ಯವಸ್ಥೆಯ ಕಿರುಬೆರಳು ಕೂಡ ಇದುವರೆಗೆ ಕದಲಲಿಲ್ಲ.

ವರ್ಗಾವಣೆಯಾದ ನ್ಯಾಯಮೂರ್ತಿಯವರ ಜಾಗದಲ್ಲಿ ಕುಳಿತು ವಿಚಾರಣೆ ನಡೆಸಿದ ಮತ್ತೊಂದು ನ್ಯಾಯಪೀಠ ದೆಹಲಿ ಪೊಲೀಸರ ನಿಷ್ಕ್ರಿಯತೆ ಕುರಿತ ಕೇಸಿನ ವಿಚಾರಣೆಯನ್ನು ಒಂದೂವರೆ ತಿಂಗಳ ಕಾಲ ಮುಂದಕ್ಕೆ ಹಾಕಿದೆ. ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಶಾಂತಿಯಾತ್ರೆಯಲ್ಲೂ ಕೋಮುವಾದವನ್ನು ಬಡಿದೆಬ್ಬಿಸುವ ಪ್ರಯತ್ನ ಮಾಡಿದ ಕುರಿತು ಆಳುವ ವ್ಯವಸ್ಥೆ ಮೌನ ಕಿವಿಗಡಚಿಕ್ಕಿದೆ. ಜೈಲಿಗೆ ಅಟ್ಟಬೇಕಾದ ವ್ಯಕ್ತಿಗೆ ವೈ ಕೆಟಗರಿಯ ಸರ್ಕಾರಿ ಮೈಗಾವಲನ್ನು ಒದಗಿಸಿರುವುದು ವಿಕೃತಿಯ ಪರಮಾವಧಿ.

ದೆಹಲಿಯ ನರಮೇಧದ ಬೂದಿ ಇನ್ನೂ ಪೂರ್ಣ ತಣಿದಿಲ್ಲ. ರಕ್ತದಾಹದ ರಣಕೇಕೆ ಬಂಗಾಳದಲ್ಲಿ ಮೊಳಗಿದೆ. ದೆಹಲಿ ವಿಧಾನಸಭಾ ಚುನಾವಣೆಗಳ ಪ್ರಚಾರವನ್ನು ದ್ವೇಷ ಮತ್ತು ಧೃವೀಕರಣದಿಂದ ತುಂಬಿಸಿದ ಗೃಹಮಂತ್ರಿಯವರು ಕೊಲ್ಕತ್ತಾಕ್ಕೆ ಕಾಲಿಟ್ಟಿದ್ದಾರೆ. ಅಲ್ಲಿಯೂ ಚುನಾವಣೆಗಳು ಕದ ಬಡಿಯುತ್ತಿವೆ. ‘ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ’ ಘೋಷಣೆಗಳು ಬಂಗಾಳದಲ್ಲಿಯೂ ಕೇಳಿ ಬಂದಿವೆ. ದೆಹಲಿಯ ನರಮೇಧ ಬಂಗಾಳಕ್ಕೆ ಪಯಣಿಸದಿರಲಿ. ಈಶಾನ್ಯ ಭಾರತ ಮತ್ತೊಮ್ಮೆ ಭುಗಿಲೇಳತೊಡಗಿದೆ. ದೆಹಲಿಯಂತೆ ಮೇಘಾಲಯದಲ್ಲೂ ಎನ್.ಆರ್.ಸಿ. ಮತ್ತು ಸಿ.ಎ.ಎ. ಜನರ ಪ್ರಾಣಗಳನ್ನು ಬಲಿ ಪಡೆಯತೊಡಗಿವೆ. ಇರಿತಗಳಿಂದ ಮೂವರು ಅಸುನೀಗಿದ್ದಾರೆ. ಕೇಂದ್ರ ಸರ್ಕಾರ ಹೊತ್ತಿಸಿರುವ ಪೌರತ್ವದ ಕಿಚ್ಚು ಬಗೆಬಗೆಯ ಧೃವೀಕರಣಗಳನ್ನು ಬಿತ್ತಿ ಬೆಳೆಸತೊಡಗಿದೆ.

ಬುಡಕಟ್ಟುಗಳ ಭಾರತವಾಗಿರುವ ಈಶಾನ್ಯದಲ್ಲಿ ಅಸ್ಮಿತೆಯ ಪ್ರಶ್ನೆ ಬಲು ಸೂಕ್ಷ್ಮದ್ದು. ಅಸ್ಸಾಮಿನಲ್ಲಿ ಎನ್.ಆರ್.ಸಿ. ಮತ್ತು ಆನಂತರದ ಸಿ.ಎ.ಎ. ಈ ಸೀಮೆಯ ಶಾಂತಿಯನ್ನು ಗಾಢವಾಗಿ ಕದಡಿವೆ. ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಈ ಅಶಾಂತಿಯ ಭೂತವನ್ನು ಬಡಿದೆಬ್ಬಿಸಿ ಹಬ್ಬಿಸಿರುವವರು ರಾಜಕಾರಣಿಗಳು. ಈ ಭೂತ ತಮ್ಮ ಮುಷ್ಠಿಯ ಬಂಧಿ ಎಂಬ ಭ್ರಮೆಯಲ್ಲಿ ಮುಳುಗಿದ್ದಾರೆ. ಈ ಹಿಡಿತದಿಂದ .ಬಿಡಿಸಿಕೊಂಡು ಅಕರಾಳ ವಿಕರಾಳ ರೂಪ ಧರಿಸಿ ಅಮಾಯಕರ ಬೇಟೆಯಲ್ಲಿ ತೊಡಗಿದೆ. ತನ್ನನ್ನು ಬಡಿದೆಬ್ಬಿಸಿದವರನ್ನೂ ಇಂದಲ್ಲ ನಾಳೆ ಬಲಿ ತೆಗೆದುಕೊಂಡೀತು. ಹಚ್ಚಲಾಗುವ ಕಿಚ್ಚಿಗೆ ಹಿಂದೂಗಳು- ಮುಸಲ್ಮಾನರು ಎಂಬ ಧರ್ಮ ಇರುವುದಿಲ್ಲ. ಉರಿ ಉರಿದು, ಕಂಡದ್ದನ್ನೆಲ್ಲ ಬೂದಿಯಾಗಿಸುವುದೊಂದೇ ಅದರ ನಿಜ ಧರ್ಮ. ಸಿ.ಎ.ಎ. ಮತ್ತು ಎನ್.ಆರ್.ಸಿ. ಈಶಾನ್ಯ ಭಾರತದಲ್ಲಿ ಎಬ್ಬಿಸಿರುವ ಶಂಕೆ ಮತ್ತು ಭಯ ಬೇರೆಯದೇ ಆದದ್ದು. ಸಿ.ಎ.ಎ. ಅಡಿಯಲ್ಲಿ ಹಿಂದೂ-ಬೌದ್ಧ-ಕ್ರೈಸ್ತರ ಹೆಸರಿನಲ್ಲಿ ‘ಹೊರಗಿನವರು’ ಬಂದು ಬೀಡು ಬಿಟ್ಟು, ತಮ್ಮ ನೆಲ ಜಲ ಸಂಸ್ಕೃತಿ ಅಸ್ಮಿತೆಯ ಮೇಲೆ ದಾಳಿ ನಡೆಸಿ ರಾಜಕೀಯ ಅಧಿಕಾರವನ್ನೂ ಕಿತ್ತುಕೊಂಡಾರು, ತಮ್ಮ ನೆಲದಲ್ಲಿ ತಾವೇ ಪರಕೀಯರಂತೆ ಬದುಕಬೇಕಾದೀತು ಎಂಬುದು ಈಶಾನ್ಯ ರಾಜ್ಯಗಳ ಜನಸಮುದಾಯಗಳ ಆಶಂಕೆ. ನೆಲದ ಮಕ್ಕಳಾದ ಬುಡಕಟ್ಟುಗಳು ಮತ್ತು ಪರಕೀಯರು ಎಂಬ ರೂಪವನ್ನು ಸಿ.ಎ.ಎ.- ಎನ್.ಆರ್.ಸಿ. ಧರಿಸಿದೆ. ಇಬ್ಬರ ನಡುವೆ ರಕ್ತಸಿಕ್ತ ಕದನವನ್ನು ಹುಟ್ಟಿ ಹಾಕಿದೆ. ಮೊನ್ನೆ ಮೇಘಾಲಯದಲ್ಲಿ ನಡೆದ ಇಂತಹ ಘರ್ಷಣೆಗಳಲ್ಲಿ ಸತ್ತ ಮೂವರ ಪೈಕಿ ಇಬ್ಬರು ಅಸ್ಸಾಮಿನವರು. ಬುಡಕಟ್ಟು ಜನಾಂಗಗಳು ಪರಕೀಯರು ಎಂದು ಭಾವಿಸುವ ‘ಇತರರು’. ಇವರು ಹಿಂದೂಗಳೇ ಇರಬಹುದು, ಮುಸಲ್ಮಾನರೂ ಆಗಿರಬಹುದು.

ಸಿ.ಎ.ಎ.-ಎನ್.ಆರ್.ಸಿ. ತರಲೇಬೇಕೆಂಬ ಜಿದ್ದು ಸಮುದಾಯಗಳ ನಡುವೆ ಅಪನಂಬಿಕೆ ಮತ್ತು ಬಿಗುವಿನ ಭಾವಗಳನ್ನು ದಟ್ಟಗೊಳಿಸತೊಡಗಿವೆ ಎಂಬ ವಾಸ್ತವವನ್ನು ಸರ್ಕಾರ ಗುರುತಿಸಿ ಒಪ್ಪಿಕೊಳ್ಳಬೇಕು. ಒಪ್ಪಿಕೊಂಡರೆ ಹೊರದಾರಿ ತಾನಾಗಿಯೇ ಗೋಚರಿಸೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...