Homeಅಂಕಣಗಳುಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

ಬಂಗಾಳದಲ್ಲಿ ಕೇಕೆ ಹಾಕಿದೆ ಕೋಮುವಾದೀ ರಕ್ತದಾಹ

- Advertisement -
- Advertisement -

ಗುಜರಾತಿನಿಂದ ತೆವಳಿದ ಕೋಮು ಗಲಭೆಯ ವಿಖ್ಯಾತ ವಿಕರಾಳ ಮಾದರಿ ದೆಹಲಿಯ ಸಾವುಗಳನ್ನು ಅರ್ಧ ಶತಕದತ್ತ ಒಯ್ಯತೊಡಗಿದೆ. ನೈಋತ್ಯ ದೆಹಲಿಯ ಭಾರೀ ಚರಂಡಿಗಳಲ್ಲಿ ಕೊಳೆತ ಹೆಣಗಳು ತೇಲತೊಡಗಿವೆ. ರಣಕೇಕೆ, ರಕ್ತಪಾತ, ಅಟ್ಟಹಾಸ, ಅಕ್ರಂದನಗಳು ಅಡಗಿವೆ. ದಿಕ್ಕುಗಾಣದ ತಬ್ಬಲಿತನ, ದುಃಖ, ಆಘಾತಗಳು ಮಡುಗಟ್ಟಿವೆ. ಬದುಕುಗಳನ್ನು ಬಂಧು ಮಿತ್ರರನ್ನು ಕಳೆದುಕೊಂಡು ಬರಿಗೈಯಾಗಿರುವವರು ತಮ್ಮ ನೆಲದಲ್ಲೇ ಅನಾಥರಾಗಿದ್ದಾರೆ. ಪರಕೀಯತೆ ಮುತ್ತಿ ಕಾಡಿದೆ. ಬೆಂದ ಬದುಕುಗಳನ್ನು ಎಲ್ಲಿಂದ ಪುನಃ ಕಟ್ಟಬೇಕೋ ಕಾಣದಾಗಿದ್ದಾರೆ.

ಹದ್ದುಬಸ್ತುಗಳಿಲ್ಲದೆ ಹೂಂಕರಿಸಿದ ಕ್ರೌರ್ಯ ಅಮಾನುಷತೆ ಪೈಶಾಚಿಕ ನಗ್ನ ನರ್ತನದ ನಡುವೆ ಮಾನವೀಯತೆ ಮತ್ತು ಬಂಧುತ್ವದ ಪ್ರೀತಿ ಹರಿಸಿ ಜೀವಗಳನ್ನು ಕಾಪಾಡಿದ ಅನೇಕ ಉದಾಹರಣೆಗಳು ಕಾರ್ಮೋಡದ ನಡುವಿನ ಕೋಲ್ಮಿಂಚಿನಂತೆ ಗೋಚರಿಸಿವೆ.

ದೇಶದ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ಮೂಗಿನ ಕೆಳಗೆ ಮೂರು ದಿನಗಳ ಕಾಲ ಕಾನೂನು ಮತ್ತು ಸುವ್ಯವಸ್ಥೆ ಎಂಬುದು ಸಂಪೂರ್ಣ ಕುಸಿದು ಗಲಭೆಕೋರರ ಕಾಲ ಕೆಳಗೆ ನರಳಿದ ಪರಿ ಸೋಜಿಗ ಮತ್ತು ಖೇದ ಉಂಟು ಮಾಡಿದೆ. ದೆಹಲಿ ಪೊಲೀಸ್ ವ್ಯವಸ್ಥೆ ಖುದ್ದಾಗಿ ಮುಂದೆ ನಿಂತು ಕೊಲೆಗಡುಕ ಗಲಭೆಕೋರ ಗುಂಪುಗಳಿಗೆ ಉತ್ತೇಜನ ನೀಡಿದ ಅನೇಕ ಕರಾಳ ನಿದರ್ಶನಗಳು ಹೊರಬಿದ್ದಿವೆ.

ಇಂತಹ ಪೊಲೀಸ್ ವ್ಯವಸ್ಥೆಯನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟಿನ ನ್ಯಾಯಮೂರ್ತಿಯೊಬ್ಬರನ್ನು ರಾತ್ರೋರಾತ್ರಿ ಎತ್ತಂಗಡಿ ಮಾಡಲಾಗಿದೆ. ದಂಡಿಸಬೇಕಾದವರ ರಕ್ಷಣೆಗೆ ಮುಂದಾಗಿದೆ ಕೇಂದ್ರ ಸರ್ಕಾರ. ಪೊಲೀಸರನ್ನು ದಂಡಿಸುವುದು ಬಿಟ್ಟು ನ್ಯಾಯವನ್ನು ನೇಣಿಗೇರಿಸಲಾಗಿದೆ. ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಬಿಜೆಪಿ ತಲೆಯಾಳುಗಳ ವಿರುದ್ಧ ಕಾನೂನು ಮತ್ತು ಸುವ್ಯವಸ್ಥೆಯ ಕಿರುಬೆರಳು ಕೂಡ ಇದುವರೆಗೆ ಕದಲಲಿಲ್ಲ.

ವರ್ಗಾವಣೆಯಾದ ನ್ಯಾಯಮೂರ್ತಿಯವರ ಜಾಗದಲ್ಲಿ ಕುಳಿತು ವಿಚಾರಣೆ ನಡೆಸಿದ ಮತ್ತೊಂದು ನ್ಯಾಯಪೀಠ ದೆಹಲಿ ಪೊಲೀಸರ ನಿಷ್ಕ್ರಿಯತೆ ಕುರಿತ ಕೇಸಿನ ವಿಚಾರಣೆಯನ್ನು ಒಂದೂವರೆ ತಿಂಗಳ ಕಾಲ ಮುಂದಕ್ಕೆ ಹಾಕಿದೆ. ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಶಾಂತಿಯಾತ್ರೆಯಲ್ಲೂ ಕೋಮುವಾದವನ್ನು ಬಡಿದೆಬ್ಬಿಸುವ ಪ್ರಯತ್ನ ಮಾಡಿದ ಕುರಿತು ಆಳುವ ವ್ಯವಸ್ಥೆ ಮೌನ ಕಿವಿಗಡಚಿಕ್ಕಿದೆ. ಜೈಲಿಗೆ ಅಟ್ಟಬೇಕಾದ ವ್ಯಕ್ತಿಗೆ ವೈ ಕೆಟಗರಿಯ ಸರ್ಕಾರಿ ಮೈಗಾವಲನ್ನು ಒದಗಿಸಿರುವುದು ವಿಕೃತಿಯ ಪರಮಾವಧಿ.

ದೆಹಲಿಯ ನರಮೇಧದ ಬೂದಿ ಇನ್ನೂ ಪೂರ್ಣ ತಣಿದಿಲ್ಲ. ರಕ್ತದಾಹದ ರಣಕೇಕೆ ಬಂಗಾಳದಲ್ಲಿ ಮೊಳಗಿದೆ. ದೆಹಲಿ ವಿಧಾನಸಭಾ ಚುನಾವಣೆಗಳ ಪ್ರಚಾರವನ್ನು ದ್ವೇಷ ಮತ್ತು ಧೃವೀಕರಣದಿಂದ ತುಂಬಿಸಿದ ಗೃಹಮಂತ್ರಿಯವರು ಕೊಲ್ಕತ್ತಾಕ್ಕೆ ಕಾಲಿಟ್ಟಿದ್ದಾರೆ. ಅಲ್ಲಿಯೂ ಚುನಾವಣೆಗಳು ಕದ ಬಡಿಯುತ್ತಿವೆ. ‘ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ’ ಘೋಷಣೆಗಳು ಬಂಗಾಳದಲ್ಲಿಯೂ ಕೇಳಿ ಬಂದಿವೆ. ದೆಹಲಿಯ ನರಮೇಧ ಬಂಗಾಳಕ್ಕೆ ಪಯಣಿಸದಿರಲಿ. ಈಶಾನ್ಯ ಭಾರತ ಮತ್ತೊಮ್ಮೆ ಭುಗಿಲೇಳತೊಡಗಿದೆ. ದೆಹಲಿಯಂತೆ ಮೇಘಾಲಯದಲ್ಲೂ ಎನ್.ಆರ್.ಸಿ. ಮತ್ತು ಸಿ.ಎ.ಎ. ಜನರ ಪ್ರಾಣಗಳನ್ನು ಬಲಿ ಪಡೆಯತೊಡಗಿವೆ. ಇರಿತಗಳಿಂದ ಮೂವರು ಅಸುನೀಗಿದ್ದಾರೆ. ಕೇಂದ್ರ ಸರ್ಕಾರ ಹೊತ್ತಿಸಿರುವ ಪೌರತ್ವದ ಕಿಚ್ಚು ಬಗೆಬಗೆಯ ಧೃವೀಕರಣಗಳನ್ನು ಬಿತ್ತಿ ಬೆಳೆಸತೊಡಗಿದೆ.

ಬುಡಕಟ್ಟುಗಳ ಭಾರತವಾಗಿರುವ ಈಶಾನ್ಯದಲ್ಲಿ ಅಸ್ಮಿತೆಯ ಪ್ರಶ್ನೆ ಬಲು ಸೂಕ್ಷ್ಮದ್ದು. ಅಸ್ಸಾಮಿನಲ್ಲಿ ಎನ್.ಆರ್.ಸಿ. ಮತ್ತು ಆನಂತರದ ಸಿ.ಎ.ಎ. ಈ ಸೀಮೆಯ ಶಾಂತಿಯನ್ನು ಗಾಢವಾಗಿ ಕದಡಿವೆ. ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಈ ಅಶಾಂತಿಯ ಭೂತವನ್ನು ಬಡಿದೆಬ್ಬಿಸಿ ಹಬ್ಬಿಸಿರುವವರು ರಾಜಕಾರಣಿಗಳು. ಈ ಭೂತ ತಮ್ಮ ಮುಷ್ಠಿಯ ಬಂಧಿ ಎಂಬ ಭ್ರಮೆಯಲ್ಲಿ ಮುಳುಗಿದ್ದಾರೆ. ಈ ಹಿಡಿತದಿಂದ .ಬಿಡಿಸಿಕೊಂಡು ಅಕರಾಳ ವಿಕರಾಳ ರೂಪ ಧರಿಸಿ ಅಮಾಯಕರ ಬೇಟೆಯಲ್ಲಿ ತೊಡಗಿದೆ. ತನ್ನನ್ನು ಬಡಿದೆಬ್ಬಿಸಿದವರನ್ನೂ ಇಂದಲ್ಲ ನಾಳೆ ಬಲಿ ತೆಗೆದುಕೊಂಡೀತು. ಹಚ್ಚಲಾಗುವ ಕಿಚ್ಚಿಗೆ ಹಿಂದೂಗಳು- ಮುಸಲ್ಮಾನರು ಎಂಬ ಧರ್ಮ ಇರುವುದಿಲ್ಲ. ಉರಿ ಉರಿದು, ಕಂಡದ್ದನ್ನೆಲ್ಲ ಬೂದಿಯಾಗಿಸುವುದೊಂದೇ ಅದರ ನಿಜ ಧರ್ಮ. ಸಿ.ಎ.ಎ. ಮತ್ತು ಎನ್.ಆರ್.ಸಿ. ಈಶಾನ್ಯ ಭಾರತದಲ್ಲಿ ಎಬ್ಬಿಸಿರುವ ಶಂಕೆ ಮತ್ತು ಭಯ ಬೇರೆಯದೇ ಆದದ್ದು. ಸಿ.ಎ.ಎ. ಅಡಿಯಲ್ಲಿ ಹಿಂದೂ-ಬೌದ್ಧ-ಕ್ರೈಸ್ತರ ಹೆಸರಿನಲ್ಲಿ ‘ಹೊರಗಿನವರು’ ಬಂದು ಬೀಡು ಬಿಟ್ಟು, ತಮ್ಮ ನೆಲ ಜಲ ಸಂಸ್ಕೃತಿ ಅಸ್ಮಿತೆಯ ಮೇಲೆ ದಾಳಿ ನಡೆಸಿ ರಾಜಕೀಯ ಅಧಿಕಾರವನ್ನೂ ಕಿತ್ತುಕೊಂಡಾರು, ತಮ್ಮ ನೆಲದಲ್ಲಿ ತಾವೇ ಪರಕೀಯರಂತೆ ಬದುಕಬೇಕಾದೀತು ಎಂಬುದು ಈಶಾನ್ಯ ರಾಜ್ಯಗಳ ಜನಸಮುದಾಯಗಳ ಆಶಂಕೆ. ನೆಲದ ಮಕ್ಕಳಾದ ಬುಡಕಟ್ಟುಗಳು ಮತ್ತು ಪರಕೀಯರು ಎಂಬ ರೂಪವನ್ನು ಸಿ.ಎ.ಎ.- ಎನ್.ಆರ್.ಸಿ. ಧರಿಸಿದೆ. ಇಬ್ಬರ ನಡುವೆ ರಕ್ತಸಿಕ್ತ ಕದನವನ್ನು ಹುಟ್ಟಿ ಹಾಕಿದೆ. ಮೊನ್ನೆ ಮೇಘಾಲಯದಲ್ಲಿ ನಡೆದ ಇಂತಹ ಘರ್ಷಣೆಗಳಲ್ಲಿ ಸತ್ತ ಮೂವರ ಪೈಕಿ ಇಬ್ಬರು ಅಸ್ಸಾಮಿನವರು. ಬುಡಕಟ್ಟು ಜನಾಂಗಗಳು ಪರಕೀಯರು ಎಂದು ಭಾವಿಸುವ ‘ಇತರರು’. ಇವರು ಹಿಂದೂಗಳೇ ಇರಬಹುದು, ಮುಸಲ್ಮಾನರೂ ಆಗಿರಬಹುದು.

ಸಿ.ಎ.ಎ.-ಎನ್.ಆರ್.ಸಿ. ತರಲೇಬೇಕೆಂಬ ಜಿದ್ದು ಸಮುದಾಯಗಳ ನಡುವೆ ಅಪನಂಬಿಕೆ ಮತ್ತು ಬಿಗುವಿನ ಭಾವಗಳನ್ನು ದಟ್ಟಗೊಳಿಸತೊಡಗಿವೆ ಎಂಬ ವಾಸ್ತವವನ್ನು ಸರ್ಕಾರ ಗುರುತಿಸಿ ಒಪ್ಪಿಕೊಳ್ಳಬೇಕು. ಒಪ್ಪಿಕೊಂಡರೆ ಹೊರದಾರಿ ತಾನಾಗಿಯೇ ಗೋಚರಿಸೀತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...