Homeಕರ್ನಾಟಕಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ...

ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

- Advertisement -
- Advertisement -

ಬೆಂಗಳೂರಿನಲ್ಲಿದ್ದ ಹಲವಾರು ಕೆರೆಗಳು ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಯಾರಾದರೂ ಕೆರೆ ಉಳಿಸುವುದಕ್ಕಾಗಿ ಹೋರಾಟ ಮಾಡಿದರೆ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿತ್ತು. ಆದರೆ ಐತಿಹಾಸಿಕ ಮಹತ್ವ ಹೊಂದಿರುವ ಬೆಂಗಳೂರಿನ ಅತಿ ಹಳೆಯ ಕೆರೆಯಾದ ಬೇಗೂರು ಕೆರೆ ಉಳಿವಿಗಾಗಿ ಹೋರಾಡಿದವರನ್ನು ನಿಂದಿಸಲಾಗುತ್ತಿದೆ. ಅವರ ಜಾತಿ ಧರ್ಮವನ್ನು ಮುಂದೆ ಮಾಡಿ ಅವಹೇಳನ ಮಾಡಲಾಗುತ್ತಿದೆ. ಈ ದುಸ್ಥಿತಿಗೆ ಏನನ್ನಬೇಕೊ ತಿಳಿಯದು.

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಸಲು ಸೂಚನೆ ಕೂಡ ನೀಡಲಾಗಿತ್ತು. ಆದರೆ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಬಿಬಿಎಂಪಿ ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು. ಅಲ್ಲದೇ ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ಎಂಬುವವರೊಬ್ಬರು ಜುಲೈ 31 ರಂದು ಕೆರೆಯ ಬಳಿ ತೆರಳಿ ವಿಡಿಯೋವೊಂದನ್ನು ಮಾಡಿದ್ದಾರೆ. ಅದರಲ್ಲಿ “ಬಿಬಿಎಂಪಿ ಈ ಶಿವನ ವಿಗ್ರಹವನ್ನು ಏಕೆ ಪೂರ್ಣಗೊಳಿಸಿಲ್ಲ ಗೊತ್ತೆ? ಏಕೆಂದರೆ ಇಲ್ಲಿ ಶಿವನ ವಿಗ್ರಹ ಸ್ಥಾಪಿಸಿದರೆ ಅದು ಕ್ರಿಶ್ಚಿಯನ್ನರ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಅಂತೆ. ಹಾಗಾಗಿ ಅವರು ಹೈಕೋರ್ಟ್‌ಗೆ ಹೋಗಿ ಸ್ಟೇ ತಂದಿದ್ದಾರೆ. ನಾವೇನು ಶಿವನ ವಿಗ್ರಹವನ್ನು ಇಟಲಿ ಅಥವಾ ಅರಬ್ ದೇಶದಲ್ಲಿ ಕಟ್ಟುತ್ತಿದ್ದೇವೆಯೇ? ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ತದನಂತರ ಫೇಕ್‌ನ್ಯೂಸ್ ವೆಬ್‌ಸೈಟ್‌ ಎಂಬ ಆರೋಪ ಎದುರಿಸುತ್ತಿರುವ ಪೋಸ್ಟ್‌ಕಾರ್ಡ್ ಕನ್ನಡ ಎಂಬ ಫೇಸ್‌ಬುಕ್ ಪುಟದಲ್ಲಿ ಈ ಕೆರೆಗೆ ಸಂಬಂಧಿಸಿದ ಪೋಸ್ಟರ್ ಒಂದು ಪ್ರಕಟವಾಗಿದೆ. ಅದರಲ್ಲಿ “ಬೇಗೂರಿನಲ್ಲಿ 75% ಹಿಂದೂಗಳು ಮತಾಂತರವಾಗಿದ್ದಾರೆ. ಕ್ರೈಸ್ತ ಮಿಷನರಿಗಳು ಕೆರೆಯ ನೀರು ಸಂಗ್ರಹ ಕಡಿಮೆಯಾಗುತ್ತದೆ ಎಂಬ ಕುತಂತ್ರದಿಂದಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮುಂಚೆ ನೀಲಿ ಟಾರ್ಪಲ್ ಹಾಕಿ ಶಿವನ ವಿಗ್ರಹವನ್ನು ಮುಚ್ಚಲಾಗಿತ್ತು. ಆದರೆ ಕೇಸರಿ ಕಲಿಗಳು ಟಾರ್ಪಲ್ ತೆರೆದು ಶಿವನ ವಿಗ್ರಹ ಅನಾವರಣಗೊಳಿಸಿ ಭಗವಾ ಧ್ವಜ ಹಾರಿಸಿದ್ದಾರೆ. ಮುಂದೊಂದು ದಿನ ನಮ್ಮನ್ನೂ ಮಿಷನರಿಗಳು ಆಳುವ ದಿನ ಬಂದೀತು, ಜಾಗೃತನಾಗು ಹಿಂದೂ” ಎಂದು ಆರೋಪಿಸಲಾಗಿದೆ.

ಈ ಮೂಲಕ ಕೆರೆ ಉಳಿವಿನ ಹೋರಾಟಕ್ಕೆ ಕೋಮ ಆಯಾಮ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಈ ಕೆರೆ ಒತ್ತುವರಿ ವಿರೋಧಿಸಿ ಅರ್ಜಿ ಸಲ್ಲಿಸಿರುವವರು ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್‌ ಸಂಸ್ಥೆಯ ಖ್ಯಾತ ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡನಾ ಅವರಾಗಿರುವುದಾಗಿದೆ. ಅವರು ಹಲವು ದಶಕಗಳಿಂದ ಪರಿಸರ ಹೋರಾಟದಲ್ಲಿದ್ದು, ಹತ್ತಾರು ಕೆರೆಗಳ ಉಳಿವಿಗೆ ಶ್ರಮಿಸಿದ್ದಾರೆ. ಅವರು ಸಲ್ಲಿಸಿದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಹಿನ್ನೆಲೆಯಲ್ಲಿ 2011 ರಲ್ಲಿ ಕೆರೆಗಳ ಉಳಿವಿಗೆ ಕೈಗೊಳ್ಳುವ ಕ್ರಿಯಾಯೋಜನೆ ರೂಪಿಸಿ ಎಂದು ಹೈಕೋರ್ಟ್ ಆದೇಶಿಸಿತ್ತು. ಅಲ್ಲದೇ 2012 ರಲ್ಲಿ ಕೆರೆಗಳ ಅನಿಯಂತ್ರಿತ ಖಾಸಗೀಕರಣದ ವಿರುದ್ಧ ತೀರ್ಪಿತ್ತಿತ್ತು.

ಈ ಹಿನ್ನೆಲೆಯಲ್ಲಿ ಕೆರೆ ಉಳಿಸುವ ಹೋರಾಟವನ್ನು ಕೋಮುವಾದೀಕರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾರ್ವಜನಿಕ ಹಕ್ಕೊತ್ತಾಯ ಪತ್ರ ಬಿಡುಗಡೆ ಮಾಡಲಾಗಿದೆ. “ಇಷ್ಟು ವರ್ಷಗಳಲ್ಲಿ ಇಲ್ಲಿ ಸುತ್ತ ಮುತ್ತ ವಾಸಿಸುತ್ತಿರುವ ಜನ ಆಹಾರ ಮತ್ತು ನೀರಿನ ಅಗತ್ಯವನ್ನು ಅರಿತು ಕೆರೆಗೆ ಯಾವುದೇ ಹಾನಿ ಮಾಡಿಲ್ಲ. ಆದರೆ ಈಗ ಇಲ್ಲಿ ಕೃತಕ ದ್ವೀಪ, ವಿಗ್ರಹ ಮತ್ತು ಸುತ್ತ ವಾಕಿಂಗ್ ಪಾಥ್ ಮಾಡುವ ಮೂಲಕ ಕೆರೆಯ ಸಾಮರ್ಥ್ಯವನ್ನು ಕುಗ್ಗಿಸಲಾಗುತ್ತಿದೆ. ಇದು ಸರಿಯಲ್ಲ. ಕೆರೆಯ ಪಕ್ಕದಲ್ಲಿಯೇ ಇರುವ ಬೇಗೂರು ಶಿವನ ದೇವಾಲಯದಲ್ಲಿ ವಿಗ್ರಹ ಪ್ರತಿಸ್ಥಾಪಿಸಿದರೆ ಎಲ್ಲರಿಗೂ ಕ್ಷೇಮ ಮತ್ತು ಕೆರೆ ಉಳಿಯುತ್ತದೆ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸಿ ಕೋಮು ಪ್ರಚೋದನೆ ಮಾಡುತ್ತಿರುವವರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು” ವಕೀಲರಾದ ವಿನಯ್ ಶ್ರೀನಿವಾಸ ಮತ್ತು ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡಾನ ಒತ್ತಾಯಿಸಿದ್ದಾರೆ.

ಇನ್ನು ಇಷ್ಟೆಲ್ಲಾ ವಿವಾದಗಳಿದ್ದರೂ ಶಾಸಕ ಎಂ. ಕೃಷ್ಣಪ್ಪ ತ್ವರಿತವಾಗಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದಾರೆ. ಇಂದು ಆಗಸ್ಟ್ 11 ರಂದು ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಈ ಬೆಳವಣಿಗೆಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

 


ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...