Homeಕರ್ನಾಟಕಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ...

ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

- Advertisement -
- Advertisement -

ಬೆಂಗಳೂರಿನಲ್ಲಿದ್ದ ಹಲವಾರು ಕೆರೆಗಳು ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಯಾರಾದರೂ ಕೆರೆ ಉಳಿಸುವುದಕ್ಕಾಗಿ ಹೋರಾಟ ಮಾಡಿದರೆ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿತ್ತು. ಆದರೆ ಐತಿಹಾಸಿಕ ಮಹತ್ವ ಹೊಂದಿರುವ ಬೆಂಗಳೂರಿನ ಅತಿ ಹಳೆಯ ಕೆರೆಯಾದ ಬೇಗೂರು ಕೆರೆ ಉಳಿವಿಗಾಗಿ ಹೋರಾಡಿದವರನ್ನು ನಿಂದಿಸಲಾಗುತ್ತಿದೆ. ಅವರ ಜಾತಿ ಧರ್ಮವನ್ನು ಮುಂದೆ ಮಾಡಿ ಅವಹೇಳನ ಮಾಡಲಾಗುತ್ತಿದೆ. ಈ ದುಸ್ಥಿತಿಗೆ ಏನನ್ನಬೇಕೊ ತಿಳಿಯದು.

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಸಲು ಸೂಚನೆ ಕೂಡ ನೀಡಲಾಗಿತ್ತು. ಆದರೆ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಬಿಬಿಎಂಪಿ ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು. ಅಲ್ಲದೇ ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ಎಂಬುವವರೊಬ್ಬರು ಜುಲೈ 31 ರಂದು ಕೆರೆಯ ಬಳಿ ತೆರಳಿ ವಿಡಿಯೋವೊಂದನ್ನು ಮಾಡಿದ್ದಾರೆ. ಅದರಲ್ಲಿ “ಬಿಬಿಎಂಪಿ ಈ ಶಿವನ ವಿಗ್ರಹವನ್ನು ಏಕೆ ಪೂರ್ಣಗೊಳಿಸಿಲ್ಲ ಗೊತ್ತೆ? ಏಕೆಂದರೆ ಇಲ್ಲಿ ಶಿವನ ವಿಗ್ರಹ ಸ್ಥಾಪಿಸಿದರೆ ಅದು ಕ್ರಿಶ್ಚಿಯನ್ನರ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಅಂತೆ. ಹಾಗಾಗಿ ಅವರು ಹೈಕೋರ್ಟ್‌ಗೆ ಹೋಗಿ ಸ್ಟೇ ತಂದಿದ್ದಾರೆ. ನಾವೇನು ಶಿವನ ವಿಗ್ರಹವನ್ನು ಇಟಲಿ ಅಥವಾ ಅರಬ್ ದೇಶದಲ್ಲಿ ಕಟ್ಟುತ್ತಿದ್ದೇವೆಯೇ? ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ತದನಂತರ ಫೇಕ್‌ನ್ಯೂಸ್ ವೆಬ್‌ಸೈಟ್‌ ಎಂಬ ಆರೋಪ ಎದುರಿಸುತ್ತಿರುವ ಪೋಸ್ಟ್‌ಕಾರ್ಡ್ ಕನ್ನಡ ಎಂಬ ಫೇಸ್‌ಬುಕ್ ಪುಟದಲ್ಲಿ ಈ ಕೆರೆಗೆ ಸಂಬಂಧಿಸಿದ ಪೋಸ್ಟರ್ ಒಂದು ಪ್ರಕಟವಾಗಿದೆ. ಅದರಲ್ಲಿ “ಬೇಗೂರಿನಲ್ಲಿ 75% ಹಿಂದೂಗಳು ಮತಾಂತರವಾಗಿದ್ದಾರೆ. ಕ್ರೈಸ್ತ ಮಿಷನರಿಗಳು ಕೆರೆಯ ನೀರು ಸಂಗ್ರಹ ಕಡಿಮೆಯಾಗುತ್ತದೆ ಎಂಬ ಕುತಂತ್ರದಿಂದಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮುಂಚೆ ನೀಲಿ ಟಾರ್ಪಲ್ ಹಾಕಿ ಶಿವನ ವಿಗ್ರಹವನ್ನು ಮುಚ್ಚಲಾಗಿತ್ತು. ಆದರೆ ಕೇಸರಿ ಕಲಿಗಳು ಟಾರ್ಪಲ್ ತೆರೆದು ಶಿವನ ವಿಗ್ರಹ ಅನಾವರಣಗೊಳಿಸಿ ಭಗವಾ ಧ್ವಜ ಹಾರಿಸಿದ್ದಾರೆ. ಮುಂದೊಂದು ದಿನ ನಮ್ಮನ್ನೂ ಮಿಷನರಿಗಳು ಆಳುವ ದಿನ ಬಂದೀತು, ಜಾಗೃತನಾಗು ಹಿಂದೂ” ಎಂದು ಆರೋಪಿಸಲಾಗಿದೆ.

ಈ ಮೂಲಕ ಕೆರೆ ಉಳಿವಿನ ಹೋರಾಟಕ್ಕೆ ಕೋಮ ಆಯಾಮ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಈ ಕೆರೆ ಒತ್ತುವರಿ ವಿರೋಧಿಸಿ ಅರ್ಜಿ ಸಲ್ಲಿಸಿರುವವರು ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್‌ ಸಂಸ್ಥೆಯ ಖ್ಯಾತ ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡನಾ ಅವರಾಗಿರುವುದಾಗಿದೆ. ಅವರು ಹಲವು ದಶಕಗಳಿಂದ ಪರಿಸರ ಹೋರಾಟದಲ್ಲಿದ್ದು, ಹತ್ತಾರು ಕೆರೆಗಳ ಉಳಿವಿಗೆ ಶ್ರಮಿಸಿದ್ದಾರೆ. ಅವರು ಸಲ್ಲಿಸಿದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಹಿನ್ನೆಲೆಯಲ್ಲಿ 2011 ರಲ್ಲಿ ಕೆರೆಗಳ ಉಳಿವಿಗೆ ಕೈಗೊಳ್ಳುವ ಕ್ರಿಯಾಯೋಜನೆ ರೂಪಿಸಿ ಎಂದು ಹೈಕೋರ್ಟ್ ಆದೇಶಿಸಿತ್ತು. ಅಲ್ಲದೇ 2012 ರಲ್ಲಿ ಕೆರೆಗಳ ಅನಿಯಂತ್ರಿತ ಖಾಸಗೀಕರಣದ ವಿರುದ್ಧ ತೀರ್ಪಿತ್ತಿತ್ತು.

ಈ ಹಿನ್ನೆಲೆಯಲ್ಲಿ ಕೆರೆ ಉಳಿಸುವ ಹೋರಾಟವನ್ನು ಕೋಮುವಾದೀಕರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾರ್ವಜನಿಕ ಹಕ್ಕೊತ್ತಾಯ ಪತ್ರ ಬಿಡುಗಡೆ ಮಾಡಲಾಗಿದೆ. “ಇಷ್ಟು ವರ್ಷಗಳಲ್ಲಿ ಇಲ್ಲಿ ಸುತ್ತ ಮುತ್ತ ವಾಸಿಸುತ್ತಿರುವ ಜನ ಆಹಾರ ಮತ್ತು ನೀರಿನ ಅಗತ್ಯವನ್ನು ಅರಿತು ಕೆರೆಗೆ ಯಾವುದೇ ಹಾನಿ ಮಾಡಿಲ್ಲ. ಆದರೆ ಈಗ ಇಲ್ಲಿ ಕೃತಕ ದ್ವೀಪ, ವಿಗ್ರಹ ಮತ್ತು ಸುತ್ತ ವಾಕಿಂಗ್ ಪಾಥ್ ಮಾಡುವ ಮೂಲಕ ಕೆರೆಯ ಸಾಮರ್ಥ್ಯವನ್ನು ಕುಗ್ಗಿಸಲಾಗುತ್ತಿದೆ. ಇದು ಸರಿಯಲ್ಲ. ಕೆರೆಯ ಪಕ್ಕದಲ್ಲಿಯೇ ಇರುವ ಬೇಗೂರು ಶಿವನ ದೇವಾಲಯದಲ್ಲಿ ವಿಗ್ರಹ ಪ್ರತಿಸ್ಥಾಪಿಸಿದರೆ ಎಲ್ಲರಿಗೂ ಕ್ಷೇಮ ಮತ್ತು ಕೆರೆ ಉಳಿಯುತ್ತದೆ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸಿ ಕೋಮು ಪ್ರಚೋದನೆ ಮಾಡುತ್ತಿರುವವರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು” ವಕೀಲರಾದ ವಿನಯ್ ಶ್ರೀನಿವಾಸ ಮತ್ತು ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡಾನ ಒತ್ತಾಯಿಸಿದ್ದಾರೆ.

ಇನ್ನು ಇಷ್ಟೆಲ್ಲಾ ವಿವಾದಗಳಿದ್ದರೂ ಶಾಸಕ ಎಂ. ಕೃಷ್ಣಪ್ಪ ತ್ವರಿತವಾಗಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದಾರೆ. ಇಂದು ಆಗಸ್ಟ್ 11 ರಂದು ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಈ ಬೆಳವಣಿಗೆಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

 


ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...