Homeಕರ್ನಾಟಕಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ...

ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

- Advertisement -
- Advertisement -

ಬೆಂಗಳೂರಿನಲ್ಲಿದ್ದ ಹಲವಾರು ಕೆರೆಗಳು ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಯಾರಾದರೂ ಕೆರೆ ಉಳಿಸುವುದಕ್ಕಾಗಿ ಹೋರಾಟ ಮಾಡಿದರೆ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿತ್ತು. ಆದರೆ ಐತಿಹಾಸಿಕ ಮಹತ್ವ ಹೊಂದಿರುವ ಬೆಂಗಳೂರಿನ ಅತಿ ಹಳೆಯ ಕೆರೆಯಾದ ಬೇಗೂರು ಕೆರೆ ಉಳಿವಿಗಾಗಿ ಹೋರಾಡಿದವರನ್ನು ನಿಂದಿಸಲಾಗುತ್ತಿದೆ. ಅವರ ಜಾತಿ ಧರ್ಮವನ್ನು ಮುಂದೆ ಮಾಡಿ ಅವಹೇಳನ ಮಾಡಲಾಗುತ್ತಿದೆ. ಈ ದುಸ್ಥಿತಿಗೆ ಏನನ್ನಬೇಕೊ ತಿಳಿಯದು.

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಸಲು ಸೂಚನೆ ಕೂಡ ನೀಡಲಾಗಿತ್ತು. ಆದರೆ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಬಿಬಿಎಂಪಿ ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು. ಅಲ್ಲದೇ ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ಎಂಬುವವರೊಬ್ಬರು ಜುಲೈ 31 ರಂದು ಕೆರೆಯ ಬಳಿ ತೆರಳಿ ವಿಡಿಯೋವೊಂದನ್ನು ಮಾಡಿದ್ದಾರೆ. ಅದರಲ್ಲಿ “ಬಿಬಿಎಂಪಿ ಈ ಶಿವನ ವಿಗ್ರಹವನ್ನು ಏಕೆ ಪೂರ್ಣಗೊಳಿಸಿಲ್ಲ ಗೊತ್ತೆ? ಏಕೆಂದರೆ ಇಲ್ಲಿ ಶಿವನ ವಿಗ್ರಹ ಸ್ಥಾಪಿಸಿದರೆ ಅದು ಕ್ರಿಶ್ಚಿಯನ್ನರ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಅಂತೆ. ಹಾಗಾಗಿ ಅವರು ಹೈಕೋರ್ಟ್‌ಗೆ ಹೋಗಿ ಸ್ಟೇ ತಂದಿದ್ದಾರೆ. ನಾವೇನು ಶಿವನ ವಿಗ್ರಹವನ್ನು ಇಟಲಿ ಅಥವಾ ಅರಬ್ ದೇಶದಲ್ಲಿ ಕಟ್ಟುತ್ತಿದ್ದೇವೆಯೇ? ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ತದನಂತರ ಫೇಕ್‌ನ್ಯೂಸ್ ವೆಬ್‌ಸೈಟ್‌ ಎಂಬ ಆರೋಪ ಎದುರಿಸುತ್ತಿರುವ ಪೋಸ್ಟ್‌ಕಾರ್ಡ್ ಕನ್ನಡ ಎಂಬ ಫೇಸ್‌ಬುಕ್ ಪುಟದಲ್ಲಿ ಈ ಕೆರೆಗೆ ಸಂಬಂಧಿಸಿದ ಪೋಸ್ಟರ್ ಒಂದು ಪ್ರಕಟವಾಗಿದೆ. ಅದರಲ್ಲಿ “ಬೇಗೂರಿನಲ್ಲಿ 75% ಹಿಂದೂಗಳು ಮತಾಂತರವಾಗಿದ್ದಾರೆ. ಕ್ರೈಸ್ತ ಮಿಷನರಿಗಳು ಕೆರೆಯ ನೀರು ಸಂಗ್ರಹ ಕಡಿಮೆಯಾಗುತ್ತದೆ ಎಂಬ ಕುತಂತ್ರದಿಂದಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮುಂಚೆ ನೀಲಿ ಟಾರ್ಪಲ್ ಹಾಕಿ ಶಿವನ ವಿಗ್ರಹವನ್ನು ಮುಚ್ಚಲಾಗಿತ್ತು. ಆದರೆ ಕೇಸರಿ ಕಲಿಗಳು ಟಾರ್ಪಲ್ ತೆರೆದು ಶಿವನ ವಿಗ್ರಹ ಅನಾವರಣಗೊಳಿಸಿ ಭಗವಾ ಧ್ವಜ ಹಾರಿಸಿದ್ದಾರೆ. ಮುಂದೊಂದು ದಿನ ನಮ್ಮನ್ನೂ ಮಿಷನರಿಗಳು ಆಳುವ ದಿನ ಬಂದೀತು, ಜಾಗೃತನಾಗು ಹಿಂದೂ” ಎಂದು ಆರೋಪಿಸಲಾಗಿದೆ.

ಈ ಮೂಲಕ ಕೆರೆ ಉಳಿವಿನ ಹೋರಾಟಕ್ಕೆ ಕೋಮ ಆಯಾಮ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಈ ಕೆರೆ ಒತ್ತುವರಿ ವಿರೋಧಿಸಿ ಅರ್ಜಿ ಸಲ್ಲಿಸಿರುವವರು ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್‌ ಸಂಸ್ಥೆಯ ಖ್ಯಾತ ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡನಾ ಅವರಾಗಿರುವುದಾಗಿದೆ. ಅವರು ಹಲವು ದಶಕಗಳಿಂದ ಪರಿಸರ ಹೋರಾಟದಲ್ಲಿದ್ದು, ಹತ್ತಾರು ಕೆರೆಗಳ ಉಳಿವಿಗೆ ಶ್ರಮಿಸಿದ್ದಾರೆ. ಅವರು ಸಲ್ಲಿಸಿದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಹಿನ್ನೆಲೆಯಲ್ಲಿ 2011 ರಲ್ಲಿ ಕೆರೆಗಳ ಉಳಿವಿಗೆ ಕೈಗೊಳ್ಳುವ ಕ್ರಿಯಾಯೋಜನೆ ರೂಪಿಸಿ ಎಂದು ಹೈಕೋರ್ಟ್ ಆದೇಶಿಸಿತ್ತು. ಅಲ್ಲದೇ 2012 ರಲ್ಲಿ ಕೆರೆಗಳ ಅನಿಯಂತ್ರಿತ ಖಾಸಗೀಕರಣದ ವಿರುದ್ಧ ತೀರ್ಪಿತ್ತಿತ್ತು.

ಈ ಹಿನ್ನೆಲೆಯಲ್ಲಿ ಕೆರೆ ಉಳಿಸುವ ಹೋರಾಟವನ್ನು ಕೋಮುವಾದೀಕರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾರ್ವಜನಿಕ ಹಕ್ಕೊತ್ತಾಯ ಪತ್ರ ಬಿಡುಗಡೆ ಮಾಡಲಾಗಿದೆ. “ಇಷ್ಟು ವರ್ಷಗಳಲ್ಲಿ ಇಲ್ಲಿ ಸುತ್ತ ಮುತ್ತ ವಾಸಿಸುತ್ತಿರುವ ಜನ ಆಹಾರ ಮತ್ತು ನೀರಿನ ಅಗತ್ಯವನ್ನು ಅರಿತು ಕೆರೆಗೆ ಯಾವುದೇ ಹಾನಿ ಮಾಡಿಲ್ಲ. ಆದರೆ ಈಗ ಇಲ್ಲಿ ಕೃತಕ ದ್ವೀಪ, ವಿಗ್ರಹ ಮತ್ತು ಸುತ್ತ ವಾಕಿಂಗ್ ಪಾಥ್ ಮಾಡುವ ಮೂಲಕ ಕೆರೆಯ ಸಾಮರ್ಥ್ಯವನ್ನು ಕುಗ್ಗಿಸಲಾಗುತ್ತಿದೆ. ಇದು ಸರಿಯಲ್ಲ. ಕೆರೆಯ ಪಕ್ಕದಲ್ಲಿಯೇ ಇರುವ ಬೇಗೂರು ಶಿವನ ದೇವಾಲಯದಲ್ಲಿ ವಿಗ್ರಹ ಪ್ರತಿಸ್ಥಾಪಿಸಿದರೆ ಎಲ್ಲರಿಗೂ ಕ್ಷೇಮ ಮತ್ತು ಕೆರೆ ಉಳಿಯುತ್ತದೆ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸಿ ಕೋಮು ಪ್ರಚೋದನೆ ಮಾಡುತ್ತಿರುವವರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು” ವಕೀಲರಾದ ವಿನಯ್ ಶ್ರೀನಿವಾಸ ಮತ್ತು ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡಾನ ಒತ್ತಾಯಿಸಿದ್ದಾರೆ.

ಇನ್ನು ಇಷ್ಟೆಲ್ಲಾ ವಿವಾದಗಳಿದ್ದರೂ ಶಾಸಕ ಎಂ. ಕೃಷ್ಣಪ್ಪ ತ್ವರಿತವಾಗಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದಾರೆ. ಇಂದು ಆಗಸ್ಟ್ 11 ರಂದು ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಈ ಬೆಳವಣಿಗೆಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

 


ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...