Homeಕರ್ನಾಟಕಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ...

ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

- Advertisement -
- Advertisement -

ಬೆಂಗಳೂರಿನಲ್ಲಿದ್ದ ಹಲವಾರು ಕೆರೆಗಳು ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಯಾರಾದರೂ ಕೆರೆ ಉಳಿಸುವುದಕ್ಕಾಗಿ ಹೋರಾಟ ಮಾಡಿದರೆ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿತ್ತು. ಆದರೆ ಐತಿಹಾಸಿಕ ಮಹತ್ವ ಹೊಂದಿರುವ ಬೆಂಗಳೂರಿನ ಅತಿ ಹಳೆಯ ಕೆರೆಯಾದ ಬೇಗೂರು ಕೆರೆ ಉಳಿವಿಗಾಗಿ ಹೋರಾಡಿದವರನ್ನು ನಿಂದಿಸಲಾಗುತ್ತಿದೆ. ಅವರ ಜಾತಿ ಧರ್ಮವನ್ನು ಮುಂದೆ ಮಾಡಿ ಅವಹೇಳನ ಮಾಡಲಾಗುತ್ತಿದೆ. ಈ ದುಸ್ಥಿತಿಗೆ ಏನನ್ನಬೇಕೊ ತಿಳಿಯದು.

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಸಲು ಸೂಚನೆ ಕೂಡ ನೀಡಲಾಗಿತ್ತು. ಆದರೆ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಬಿಬಿಎಂಪಿ ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು. ಅಲ್ಲದೇ ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ಎಂಬುವವರೊಬ್ಬರು ಜುಲೈ 31 ರಂದು ಕೆರೆಯ ಬಳಿ ತೆರಳಿ ವಿಡಿಯೋವೊಂದನ್ನು ಮಾಡಿದ್ದಾರೆ. ಅದರಲ್ಲಿ “ಬಿಬಿಎಂಪಿ ಈ ಶಿವನ ವಿಗ್ರಹವನ್ನು ಏಕೆ ಪೂರ್ಣಗೊಳಿಸಿಲ್ಲ ಗೊತ್ತೆ? ಏಕೆಂದರೆ ಇಲ್ಲಿ ಶಿವನ ವಿಗ್ರಹ ಸ್ಥಾಪಿಸಿದರೆ ಅದು ಕ್ರಿಶ್ಚಿಯನ್ನರ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಅಂತೆ. ಹಾಗಾಗಿ ಅವರು ಹೈಕೋರ್ಟ್‌ಗೆ ಹೋಗಿ ಸ್ಟೇ ತಂದಿದ್ದಾರೆ. ನಾವೇನು ಶಿವನ ವಿಗ್ರಹವನ್ನು ಇಟಲಿ ಅಥವಾ ಅರಬ್ ದೇಶದಲ್ಲಿ ಕಟ್ಟುತ್ತಿದ್ದೇವೆಯೇ? ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ತದನಂತರ ಫೇಕ್‌ನ್ಯೂಸ್ ವೆಬ್‌ಸೈಟ್‌ ಎಂಬ ಆರೋಪ ಎದುರಿಸುತ್ತಿರುವ ಪೋಸ್ಟ್‌ಕಾರ್ಡ್ ಕನ್ನಡ ಎಂಬ ಫೇಸ್‌ಬುಕ್ ಪುಟದಲ್ಲಿ ಈ ಕೆರೆಗೆ ಸಂಬಂಧಿಸಿದ ಪೋಸ್ಟರ್ ಒಂದು ಪ್ರಕಟವಾಗಿದೆ. ಅದರಲ್ಲಿ “ಬೇಗೂರಿನಲ್ಲಿ 75% ಹಿಂದೂಗಳು ಮತಾಂತರವಾಗಿದ್ದಾರೆ. ಕ್ರೈಸ್ತ ಮಿಷನರಿಗಳು ಕೆರೆಯ ನೀರು ಸಂಗ್ರಹ ಕಡಿಮೆಯಾಗುತ್ತದೆ ಎಂಬ ಕುತಂತ್ರದಿಂದಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮುಂಚೆ ನೀಲಿ ಟಾರ್ಪಲ್ ಹಾಕಿ ಶಿವನ ವಿಗ್ರಹವನ್ನು ಮುಚ್ಚಲಾಗಿತ್ತು. ಆದರೆ ಕೇಸರಿ ಕಲಿಗಳು ಟಾರ್ಪಲ್ ತೆರೆದು ಶಿವನ ವಿಗ್ರಹ ಅನಾವರಣಗೊಳಿಸಿ ಭಗವಾ ಧ್ವಜ ಹಾರಿಸಿದ್ದಾರೆ. ಮುಂದೊಂದು ದಿನ ನಮ್ಮನ್ನೂ ಮಿಷನರಿಗಳು ಆಳುವ ದಿನ ಬಂದೀತು, ಜಾಗೃತನಾಗು ಹಿಂದೂ” ಎಂದು ಆರೋಪಿಸಲಾಗಿದೆ.

ಈ ಮೂಲಕ ಕೆರೆ ಉಳಿವಿನ ಹೋರಾಟಕ್ಕೆ ಕೋಮ ಆಯಾಮ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಈ ಕೆರೆ ಒತ್ತುವರಿ ವಿರೋಧಿಸಿ ಅರ್ಜಿ ಸಲ್ಲಿಸಿರುವವರು ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್‌ ಸಂಸ್ಥೆಯ ಖ್ಯಾತ ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡನಾ ಅವರಾಗಿರುವುದಾಗಿದೆ. ಅವರು ಹಲವು ದಶಕಗಳಿಂದ ಪರಿಸರ ಹೋರಾಟದಲ್ಲಿದ್ದು, ಹತ್ತಾರು ಕೆರೆಗಳ ಉಳಿವಿಗೆ ಶ್ರಮಿಸಿದ್ದಾರೆ. ಅವರು ಸಲ್ಲಿಸಿದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಹಿನ್ನೆಲೆಯಲ್ಲಿ 2011 ರಲ್ಲಿ ಕೆರೆಗಳ ಉಳಿವಿಗೆ ಕೈಗೊಳ್ಳುವ ಕ್ರಿಯಾಯೋಜನೆ ರೂಪಿಸಿ ಎಂದು ಹೈಕೋರ್ಟ್ ಆದೇಶಿಸಿತ್ತು. ಅಲ್ಲದೇ 2012 ರಲ್ಲಿ ಕೆರೆಗಳ ಅನಿಯಂತ್ರಿತ ಖಾಸಗೀಕರಣದ ವಿರುದ್ಧ ತೀರ್ಪಿತ್ತಿತ್ತು.

ಈ ಹಿನ್ನೆಲೆಯಲ್ಲಿ ಕೆರೆ ಉಳಿಸುವ ಹೋರಾಟವನ್ನು ಕೋಮುವಾದೀಕರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾರ್ವಜನಿಕ ಹಕ್ಕೊತ್ತಾಯ ಪತ್ರ ಬಿಡುಗಡೆ ಮಾಡಲಾಗಿದೆ. “ಇಷ್ಟು ವರ್ಷಗಳಲ್ಲಿ ಇಲ್ಲಿ ಸುತ್ತ ಮುತ್ತ ವಾಸಿಸುತ್ತಿರುವ ಜನ ಆಹಾರ ಮತ್ತು ನೀರಿನ ಅಗತ್ಯವನ್ನು ಅರಿತು ಕೆರೆಗೆ ಯಾವುದೇ ಹಾನಿ ಮಾಡಿಲ್ಲ. ಆದರೆ ಈಗ ಇಲ್ಲಿ ಕೃತಕ ದ್ವೀಪ, ವಿಗ್ರಹ ಮತ್ತು ಸುತ್ತ ವಾಕಿಂಗ್ ಪಾಥ್ ಮಾಡುವ ಮೂಲಕ ಕೆರೆಯ ಸಾಮರ್ಥ್ಯವನ್ನು ಕುಗ್ಗಿಸಲಾಗುತ್ತಿದೆ. ಇದು ಸರಿಯಲ್ಲ. ಕೆರೆಯ ಪಕ್ಕದಲ್ಲಿಯೇ ಇರುವ ಬೇಗೂರು ಶಿವನ ದೇವಾಲಯದಲ್ಲಿ ವಿಗ್ರಹ ಪ್ರತಿಸ್ಥಾಪಿಸಿದರೆ ಎಲ್ಲರಿಗೂ ಕ್ಷೇಮ ಮತ್ತು ಕೆರೆ ಉಳಿಯುತ್ತದೆ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸಿ ಕೋಮು ಪ್ರಚೋದನೆ ಮಾಡುತ್ತಿರುವವರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು” ವಕೀಲರಾದ ವಿನಯ್ ಶ್ರೀನಿವಾಸ ಮತ್ತು ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡಾನ ಒತ್ತಾಯಿಸಿದ್ದಾರೆ.

ಇನ್ನು ಇಷ್ಟೆಲ್ಲಾ ವಿವಾದಗಳಿದ್ದರೂ ಶಾಸಕ ಎಂ. ಕೃಷ್ಣಪ್ಪ ತ್ವರಿತವಾಗಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದಾರೆ. ಇಂದು ಆಗಸ್ಟ್ 11 ರಂದು ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಈ ಬೆಳವಣಿಗೆಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

 


ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...