Homeಕರ್ನಾಟಕಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ...

ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

- Advertisement -
- Advertisement -

ಬೆಂಗಳೂರಿನಲ್ಲಿದ್ದ ಹಲವಾರು ಕೆರೆಗಳು ಕಣ್ಮರೆಯಾಗಿರುವ ಹಿನ್ನೆಲೆಯಲ್ಲಿ ಯಾರಾದರೂ ಕೆರೆ ಉಳಿಸುವುದಕ್ಕಾಗಿ ಹೋರಾಟ ಮಾಡಿದರೆ ಅವರಿಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿತ್ತು. ಆದರೆ ಐತಿಹಾಸಿಕ ಮಹತ್ವ ಹೊಂದಿರುವ ಬೆಂಗಳೂರಿನ ಅತಿ ಹಳೆಯ ಕೆರೆಯಾದ ಬೇಗೂರು ಕೆರೆ ಉಳಿವಿಗಾಗಿ ಹೋರಾಡಿದವರನ್ನು ನಿಂದಿಸಲಾಗುತ್ತಿದೆ. ಅವರ ಜಾತಿ ಧರ್ಮವನ್ನು ಮುಂದೆ ಮಾಡಿ ಅವಹೇಳನ ಮಾಡಲಾಗುತ್ತಿದೆ. ಈ ದುಸ್ಥಿತಿಗೆ ಏನನ್ನಬೇಕೊ ತಿಳಿಯದು.

ಬೇಗೂರು ಕೆರೆ ಅಭಿವೃದ್ಧಿಗೆ 2018 ರ ಮಾರ್ಚ್ 17 ರಂದು ಅಂದಿನ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದರು. ಎರಡು ವರ್ಷಗಳಲ್ಲಿ ಕಾಮಗಾರಿ ಮುಗಿಸಲು ಸೂಚನೆ ಕೂಡ ನೀಡಲಾಗಿತ್ತು. ಆದರೆ ಕೆರೆ ಅಭಿವೃದ್ದಿ ಬದಲು ಕೆರೆಯ ಮಧ್ಯದಲ್ಲಿ ಕೃತಕ ದ್ವೀಪ ನಿರ್ಮಾಣ ಮಾಡಿ ಅಲ್ಲಿ ಶಿವನ ವಿಗ್ರಹ ಸ್ಥಾಪಿಸಲು ಬಿಬಿಎಂಪಿ ಮುಂದಾಗಿತ್ತು. ಇದು ಕೆರೆಯ ಸ್ವರೂಪವನ್ನು ಹಾಳು ಮಾಡುವುದಲ್ಲದೆ, ಕೆರೆಯ ವಿಸ್ತೀರ್ಣ ಮತ್ತು ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂಬ ಆತಂಕದಿಂದ ಕೆಲ ಪರಿಸರ ಹೋರಾಟಗಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಪ್ರಕರಣವನ್ನು ಆಲಿಸಿದ ಹೈಕೋರ್ಟ್ ಕೆರೆ ಪಾತ್ರವನ್ನು ಕಡಿಮೆ ಮಾಡುವ ಹಕ್ಕು ಯಾರಿಗೂ ಇಲ್ಲವೆಂದು ಸ್ಪಷ್ಟವಾಗಿ ತಿಳಿಸಿ ಶಿವನ ವಿಗ್ರಹ ಮತ್ತು ಕೃತಕ ದ್ವೀಪ ನಿರ್ಮಾಣಕ್ಕೆ ತಡೆ ನೀಡಿತ್ತು. ಆಗ ಕೋರ್ಟ್ ಆದೇಶದ ಮೇರೆಗೆ ನಿರ್ಮಾಣ ಹಂತದಲ್ಲಿದ್ದ ಶಿವನ ವಿಗ್ರಹವನ್ನು ನೀಲಿ ಬಣ್ಣದ ಟಾರ್ಪಲ್‌ನಿಂದ ಮುಚ್ಚಲಾಗಿತ್ತು. ಅಲ್ಲದೇ ವಿಗ್ರಹವನ್ನು ಅಲ್ಲಿಂದ ತೆರವುಗೊಳಿಸಲು ಬಿಬಿಎಂಪಿ ನಿರ್ಣಯ ಕೈಗೊಳ್ಳುವಂತೆ ಆದೇಶಿಸಿರುವ ನ್ಯಾಯಾಲಯ ಎರಡು ವಾರಗಳ ಸಮಯ ನೀಡಿದೆ.

ಆದರೆ ಪ್ರಕರಣ ಇನ್ನು ವಿಚಾರಣಾ ಹಂತದಲ್ಲಿರುವಾಗಲೇ ಮತ್ತು ತಡೆಯಾಜ್ಞೆಯಿದ್ದರೂ ಅದನ್ನು ಲೆಕ್ಕಿಸದೇ ಕೆಲ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಆ ಟಾರ್ಪಲ್ ಕಿತ್ತುಹಾಕಿ ವಿಗ್ರಹ ಅನಾವರಣ ಮಾಡಿದ್ದಾರೆ. ಅಲ್ಲದೆ ಕೇಸರಿ ಬಾವುಟಗಳನ್ನು ನೆಟ್ಟಿದ್ದಾರೆ.

ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತ ಎಂದು ಹೇಳಿಕೊಳ್ಳುವ ಪುನಿತ್ ಕೆರೆಹಳ್ಳಿ ಎಂಬುವವರೊಬ್ಬರು ಜುಲೈ 31 ರಂದು ಕೆರೆಯ ಬಳಿ ತೆರಳಿ ವಿಡಿಯೋವೊಂದನ್ನು ಮಾಡಿದ್ದಾರೆ. ಅದರಲ್ಲಿ “ಬಿಬಿಎಂಪಿ ಈ ಶಿವನ ವಿಗ್ರಹವನ್ನು ಏಕೆ ಪೂರ್ಣಗೊಳಿಸಿಲ್ಲ ಗೊತ್ತೆ? ಏಕೆಂದರೆ ಇಲ್ಲಿ ಶಿವನ ವಿಗ್ರಹ ಸ್ಥಾಪಿಸಿದರೆ ಅದು ಕ್ರಿಶ್ಚಿಯನ್ನರ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತದೆ ಅಂತೆ. ಹಾಗಾಗಿ ಅವರು ಹೈಕೋರ್ಟ್‌ಗೆ ಹೋಗಿ ಸ್ಟೇ ತಂದಿದ್ದಾರೆ. ನಾವೇನು ಶಿವನ ವಿಗ್ರಹವನ್ನು ಇಟಲಿ ಅಥವಾ ಅರಬ್ ದೇಶದಲ್ಲಿ ಕಟ್ಟುತ್ತಿದ್ದೇವೆಯೇ? ಹಿಂದೂಗಳು ಈಗಲಾದರೂ ಎಚ್ಚೆತ್ತುಕೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ತದನಂತರ ಫೇಕ್‌ನ್ಯೂಸ್ ವೆಬ್‌ಸೈಟ್‌ ಎಂಬ ಆರೋಪ ಎದುರಿಸುತ್ತಿರುವ ಪೋಸ್ಟ್‌ಕಾರ್ಡ್ ಕನ್ನಡ ಎಂಬ ಫೇಸ್‌ಬುಕ್ ಪುಟದಲ್ಲಿ ಈ ಕೆರೆಗೆ ಸಂಬಂಧಿಸಿದ ಪೋಸ್ಟರ್ ಒಂದು ಪ್ರಕಟವಾಗಿದೆ. ಅದರಲ್ಲಿ “ಬೇಗೂರಿನಲ್ಲಿ 75% ಹಿಂದೂಗಳು ಮತಾಂತರವಾಗಿದ್ದಾರೆ. ಕ್ರೈಸ್ತ ಮಿಷನರಿಗಳು ಕೆರೆಯ ನೀರು ಸಂಗ್ರಹ ಕಡಿಮೆಯಾಗುತ್ತದೆ ಎಂಬ ಕುತಂತ್ರದಿಂದಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮುಂಚೆ ನೀಲಿ ಟಾರ್ಪಲ್ ಹಾಕಿ ಶಿವನ ವಿಗ್ರಹವನ್ನು ಮುಚ್ಚಲಾಗಿತ್ತು. ಆದರೆ ಕೇಸರಿ ಕಲಿಗಳು ಟಾರ್ಪಲ್ ತೆರೆದು ಶಿವನ ವಿಗ್ರಹ ಅನಾವರಣಗೊಳಿಸಿ ಭಗವಾ ಧ್ವಜ ಹಾರಿಸಿದ್ದಾರೆ. ಮುಂದೊಂದು ದಿನ ನಮ್ಮನ್ನೂ ಮಿಷನರಿಗಳು ಆಳುವ ದಿನ ಬಂದೀತು, ಜಾಗೃತನಾಗು ಹಿಂದೂ” ಎಂದು ಆರೋಪಿಸಲಾಗಿದೆ.

ಈ ಮೂಲಕ ಕೆರೆ ಉಳಿವಿನ ಹೋರಾಟಕ್ಕೆ ಕೋಮ ಆಯಾಮ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಈ ಕೆರೆ ಒತ್ತುವರಿ ವಿರೋಧಿಸಿ ಅರ್ಜಿ ಸಲ್ಲಿಸಿರುವವರು ಎನ್ವಿರಾನ್ಮೆಂಟ್ ಸಪೋರ್ಟ್ ಗ್ರೂಪ್‌ ಸಂಸ್ಥೆಯ ಖ್ಯಾತ ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡನಾ ಅವರಾಗಿರುವುದಾಗಿದೆ. ಅವರು ಹಲವು ದಶಕಗಳಿಂದ ಪರಿಸರ ಹೋರಾಟದಲ್ಲಿದ್ದು, ಹತ್ತಾರು ಕೆರೆಗಳ ಉಳಿವಿಗೆ ಶ್ರಮಿಸಿದ್ದಾರೆ. ಅವರು ಸಲ್ಲಿಸಿದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಹಿನ್ನೆಲೆಯಲ್ಲಿ 2011 ರಲ್ಲಿ ಕೆರೆಗಳ ಉಳಿವಿಗೆ ಕೈಗೊಳ್ಳುವ ಕ್ರಿಯಾಯೋಜನೆ ರೂಪಿಸಿ ಎಂದು ಹೈಕೋರ್ಟ್ ಆದೇಶಿಸಿತ್ತು. ಅಲ್ಲದೇ 2012 ರಲ್ಲಿ ಕೆರೆಗಳ ಅನಿಯಂತ್ರಿತ ಖಾಸಗೀಕರಣದ ವಿರುದ್ಧ ತೀರ್ಪಿತ್ತಿತ್ತು.

ಈ ಹಿನ್ನೆಲೆಯಲ್ಲಿ ಕೆರೆ ಉಳಿಸುವ ಹೋರಾಟವನ್ನು ಕೋಮುವಾದೀಕರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾರ್ವಜನಿಕ ಹಕ್ಕೊತ್ತಾಯ ಪತ್ರ ಬಿಡುಗಡೆ ಮಾಡಲಾಗಿದೆ. “ಇಷ್ಟು ವರ್ಷಗಳಲ್ಲಿ ಇಲ್ಲಿ ಸುತ್ತ ಮುತ್ತ ವಾಸಿಸುತ್ತಿರುವ ಜನ ಆಹಾರ ಮತ್ತು ನೀರಿನ ಅಗತ್ಯವನ್ನು ಅರಿತು ಕೆರೆಗೆ ಯಾವುದೇ ಹಾನಿ ಮಾಡಿಲ್ಲ. ಆದರೆ ಈಗ ಇಲ್ಲಿ ಕೃತಕ ದ್ವೀಪ, ವಿಗ್ರಹ ಮತ್ತು ಸುತ್ತ ವಾಕಿಂಗ್ ಪಾಥ್ ಮಾಡುವ ಮೂಲಕ ಕೆರೆಯ ಸಾಮರ್ಥ್ಯವನ್ನು ಕುಗ್ಗಿಸಲಾಗುತ್ತಿದೆ. ಇದು ಸರಿಯಲ್ಲ. ಕೆರೆಯ ಪಕ್ಕದಲ್ಲಿಯೇ ಇರುವ ಬೇಗೂರು ಶಿವನ ದೇವಾಲಯದಲ್ಲಿ ವಿಗ್ರಹ ಪ್ರತಿಸ್ಥಾಪಿಸಿದರೆ ಎಲ್ಲರಿಗೂ ಕ್ಷೇಮ ಮತ್ತು ಕೆರೆ ಉಳಿಯುತ್ತದೆ. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸಿ ಕೋಮು ಪ್ರಚೋದನೆ ಮಾಡುತ್ತಿರುವವರ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು” ವಕೀಲರಾದ ವಿನಯ್ ಶ್ರೀನಿವಾಸ ಮತ್ತು ಪರಿಸರ ಹೋರಾಟಗಾರರಾದ ಲಿಯೋ ಸಾಲ್ಡಾನ ಒತ್ತಾಯಿಸಿದ್ದಾರೆ.

ಇನ್ನು ಇಷ್ಟೆಲ್ಲಾ ವಿವಾದಗಳಿದ್ದರೂ ಶಾಸಕ ಎಂ. ಕೃಷ್ಣಪ್ಪ ತ್ವರಿತವಾಗಿ ಕಾಮಗಾರಿ ಆರಂಭಿಸಲು ಸೂಚನೆ ನೀಡಿದ್ದಾರೆ. ಇಂದು ಆಗಸ್ಟ್ 11 ರಂದು ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಈ ಬೆಳವಣಿಗೆಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

 


ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...