Homeಕರ್ನಾಟಕಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮೀಜಿ (ಋಷಿ ಕುಮಾರ ಸ್ವಾಮೀಜಿ) ಅವರಿಗೆ ಮಸಿ ಬಳಿದಿರುವುದು ಸುದ್ದಿಯಾಗಿದೆ.

ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಋಷಿಕುಮಾರ ಸ್ವಾಮೀಜಿಗೆ ಧಿಕ್ಕಾರ ಕೂಗಿ ಮುಖಕ್ಕೆ ಕಪ್ಪುಮಸಿ ಬಳಿದಿದ್ದಾರೆ.

ಘಟನೆ ಕುರಿತು ಕಾಳಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, “ನಾನು ಯಾರನ್ನು ಅವಮಾನಿಸಿಲ್ಲ. ದಾಖಲೆಗಳಿದ್ದರೆ ಕೋರ್ಟ್‌ನಲ್ಲಿ ದಾವೆ ಹೂಡಲಿ. ಇದರಿಂದ ನಾನೇನು ವಿಚಲಿತನಾಗಿಲ್ಲ” ಎನ್ನುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಳಿ ಸ್ವಾಮೀಜಿಯವರಿಗೆ ಮಸಿ ಬಳಿದಿರುವ ಸಂಗತಿಯ ಸುತ್ತ ಪರ ವಿರೋಧ ವ್ಯಕ್ತವಾಗಬಹುದು. ಆದರೆ ಕಾಳಿ ಸ್ವಾಮೀಜಿಯವರು ಸಮಾಜದಲ್ಲಿ ಬಿತ್ತುತ್ತಿರುವ ವಿಷ ಬೀಜಗಳನ್ನು ಯಾರೂ ಅಲ್ಲಗಳೆಯಲಾರರು. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಘಟಿಸುತ್ತಿರುವ ಕೋಮು ಕೇಂದ್ರಿತ ಪ್ರಕರಣಗಳಲ್ಲಿ ಕಾಳಿ ಸ್ವಾಮೀಜಿಯ ಉಪಸ್ಥಿತಿ ಇದ್ದೇ ಇರುತ್ತದೆ. ಸಂವಿಧಾನ ಬಾಹಿರವಾಗಿ, ಒಂದು ಸಮುದಾಯದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ, ಸಮಾಜದಲ್ಲಿ ದ್ವೇಷ ಬೆಳೆಸುತ್ತಾ ಕಾಳಿ ಸ್ವಾಮೀಜಿ ವೈಯಕ್ತಿಯ ಪ್ರಚಾರವನ್ನು ಪಡೆಯುತ್ತಿದ್ದಾರೆ. “ಎಲ್ಲ ಜನವರ್ಗವನ್ನು ಪ್ರೀತಿ, ಗೌರವದಿಂದ ಕಾಣುವವರು ನಿಜವಾದ ಸ್ವಾಮೀಜಿ” ಎನ್ನುತ್ತಾರೆ ಗದುಗಿನ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ. ಆದರೆ ಋಷಿಕುಮಾರ ಸ್ವಾಮೀಜಿಯಂಥವರು ಈ ಎಲ್ಲೆಗಳನ್ನು ಮೀರಿದಂತೆ ಕಾಣುತ್ತಾರೆ. ಹೀಗಾಗಿ ವಿಪರೀತ ಟ್ರೋಲ್‌ಗೂ ಒಳಗಾಗಿದ್ದಾರೆ. ಆದರೆ ಈ ಟ್ರೋಲ್‌ಗಳನ್ನೇ ಭೂಷಣವೆಂಬಂತೆ ಕಾಳಿ ಸ್ವಾಮೀಜಿ ಭಾವಿಸಿದ್ದಾರೇನೋ! ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ ಎಂಬ ಮಾತಿನಂತೆ ಕಾಳಿ ಸ್ವಾಮೀಜಿಯವರ ಕೋಮುದ್ವೇಷವಿಲ್ಲದೆ ಟ್ರೋಲ್‌ಗಳಾಗುತ್ತಿಲ್ಲ.

ಇದನ್ನೂ ಓದಿರಿ: ಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

ಮಸೀದಿ ಒಡೆಯಲು ಪ್ರಚೋದನೆ

ಶ್ರೀರಂಗಪಟ್ಟಣದಲ್ಲಿನ ಮಸೀದಿಯು ದೇವಸ್ಥಾನದ ಮೇಲೆ ನಿರ್ಮಾಣವಾಗಿದೆ. ಬಾಬ್ರಿ ಮಸೀದಿಯನ್ನು ಕೆಡವಿ ರಾಮ ಮಂದಿರ ನಿರ್ಮಾಣ ಮಾಡಿದಂತೆ ಶ್ರೀರಂಗಪಟ್ಟಣ ಮಸೀದಿಯನ್ನು ಕೆಡವಿ ಹನುಮ ಮಂದಿರವನ್ನು ಕಟ್ಟಬೇಕು ಎಂದಿದ್ದರು ಕಾಳಿ ಸ್ವಾಮೀಜಿ. ಬಳಿಕ ಅವರನ್ನು ಬಂಧಿಸಿ ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಆದರೆ ಮಸೀದಿಯನ್ನು ಕೆಡವಬೇಕೆಂಬ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತೆ ಸಮರ್ಥಿಸಿಕೊಂಡಿದ್ದರು.

“ಶ್ರೀರಂಗಪಟ್ಟಣ ಎಂದರೆ ಗತ ವೈಭವವನ್ನು ಸಾರುವ ನೆಲವೀಡು. ಗಂಗರು, ಹೊಯ್ಸಳರು, ಮೈಸೂರು ಅರಸರು, ಹೈದರಾಲಿ, ಟಿಪ್ಪು ಸುಲ್ತಾನ್ ಆಳಿದ ನೆಲ. ಎಲ್ಲಕ್ಕಿಂತ ಹೆಚ್ಚಾಗಿ ಶ್ರೀರಂಗಪಟ್ಟಣ ಎಂದರೆ ಹಿಂದೂ ಮುಸ್ಲಿಮರ ಭಾವೈಕ್ಯ ತಾಣ. ಸಾಮರಸ್ಯವೇ ಇಲ್ಲಿನ ಶಕ್ತಿ. ಇತ್ತೀಚೆಗೆ ಕೆಲವು ಮತಾಂಧ ಶಕ್ತಿಗಳು ಈ ಸಾಮರಸ್ಯವನ್ನು ಕದಡುವ ಕೆಲಸವನ್ನು ಮಾಡುತ್ತಿವೆ” ಎಂದು ತಮ್ಮ ವರದಿಯಲ್ಲಿ ಅಭಿಪ್ರಾಯತಾಳುತ್ತಾರೆ ಪ್ರಜಾವಾಣಿ ಪತ್ರಿಕೆಯ ಮೈಸೂರು ಬ್ಯುರೊ ಮುಖ್ಯಸ್ಥರಾದ ಕೆ.ನರಸಿಂಹಮೂರ್ತಿ. “ಸ್ಥಳೀಯವಾಗಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಹೊರಗಿನಿಂದ ಬಂದವರೇ ವಿವಾದವನ್ನು ಸೃಷ್ಟಿಸುತ್ತಿದ್ದಾರೆ” ಎಂಬ ಸಂಗತಿಯನ್ನು ತಮ್ಮ ವರದಿಯಲ್ಲಿ ಪ್ರಸ್ತಾಪಿಸುತ್ತಾರೆ.

ಆಜಾನ್‌ ವಿರುದ್ಧ ವಿವಾದ ಸೃಷ್ಟಿ 

ದಿನಕ್ಕೆ ಐದು ಬಾರಿ ಪ್ರಾರ್ಥನೆಯನ್ನು ಸಲ್ಲಿಸುವುದು ಇಸ್ಲಾಂನಲ್ಲಿ ನಡೆದು ಬಂದಿರುವ ಸಂಪ್ರದಾಯ. ಆಜಾನ್‌ ಅಥವಾ ಅದಾನ್‌ ಎಂಬುದು ಪ್ರಾರ್ಥನೆಗೆ ನೀಡುವ ಕರೆಯೇ ಹೊರತು, ಪ್ರಾರ್ಥನೆಯಲ್ಲ. ಆದರೆ ಆಜಾನ್‌ಗೆ ವಿರುದ್ಧವಾಗಿ ಹನುಮಾನ್ ಚಾಲೀಸ್ ಹಾಡುತ್ತೇವೆ ಎಂಬ ಚರ್ಚೆಯನ್ನು ಮುನ್ನೆಲೆಗೆ ತರಲಾಯಿತು. ಕ್ಯಾಮೆರಾ ಮುಂದೆ ಧಾರ್ಮಿಕತೆಯನ್ನು ಪ್ರದರ್ಶಿಸುವ ಕೆಲಸವೂ ಆಗುತ್ತಿದೆ.

ಆಜಾನ್‌ನ ಹಿನ್ನೆಲೆ ಉದ್ದೇಶ ತಿಳಿಯದ ಧರ್ಮಗುರು ಕಾಳಿ ಸ್ವಾಮೀಜಿ, ಮೈಕ್‌ ಹಿಡಿದು ರಾಮಜಪ ಮಾಡಿ ವಿಡಿಯೊ ಹರಿಬಿಟ್ಟಿದ್ದರು. ಬೆಂಗಳೂರಿನ ಚುಂಚನ ಘಟ್ಟದಲ್ಲಿರುವ ರಾಮಾಂಜನೇಯ ದೇವಾಲಯಲ್ಲಿ ಧ್ವನಿ ವರ್ಧಕ ಅಳವಡಿಸಿ ಬೆಳಗ್ಗೆ 5.33ಕ್ಕೆ 3 ಬಾರಿ ರಾಮ ಜಪ ಮಾಡಿದ್ದರು. ಇದು ಕೂಡ ಭಾರೀ ಟ್ರೋಲ್‌ಗೆ ಒಳಗಾಗಿತ್ತು.

ಹಲಾಲ್‌ ಕಟ್‌ v/s ಜಟ್ಕಾ ಕಟ್‌

ಯುಗಾದಿ ವರ್‍ಸತೊಡಕಿನ ಆಚೀಚೆ ಹಲಾಲ್‌ ಕಟ್‌ಗೆ ವಿರುದ್ಧವಾಗಿ ಜಟ್ಕಾ ಕಟ್‌ ಎಂಬ ವಿವಾದ ಸೃಷ್ಟಿಯಾಯಿತು. ಮುಸ್ಲಿಮರ ಬಳಿ ಮಾಂಸ ಖರೀದಿಸಬೇಡಿ ಎಂದು ಹಬ್ಬಿಸಲಾಯಿತು. ಹಿಂದೂ ಸಮಾಜದ ಜನರೇ ಸರಿಯಾಗಿ ಝಾಡಿಸಿದ ಮೇಲೆ ವಿವಾದ ಬದಿಗೆ ಸರಿಯಿತು.

ಹಲಾಲ್‌ ಕಟ್‌ ಎಂದರೇನು? ಜಟ್ಕಾ ಕಟ್ ಎಂದರೇನು? ಎಂದು ಪ್ರಜ್ಞಾವಂತರು ವಿವರಿಸಿದರು. ತಿನ್ನುವ ಅನ್ನದಲ್ಲೆಲ್ಲ ಮತಾಂಧತೆಯನ್ನು ಹುಡುಕುವನ್ನು ಜನರು ಟೀಕಿಸಿದರು.

ಇದನ್ನೂ ಓದಿರಿ: ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?

ವಿವಾದ ಮುಂಚೂಣಿಯಲ್ಲಿದ್ದ ಸಂದರ್ಭದಲ್ಲಿ ಗಾಯಕ್ಕೆ ಉಪ್ಪು ಸವರುವ ಕೆಲಸ ಮಾಡಿದ ಕಾಳಿ ಸ್ವಾಮೀಜಿ, “ಹಿಂದೂ ಧರ್ಮದ ಯುವಕರು ಜಟ್ಕಾ ಮೀಟ್ ಅಂಗಡಿಗಳನ್ನು ತೆರೆಯುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ತಮ್ಮ ಕುಟುಂಬ ಹಾಗೂ ಹಿಂದೂ ಧರ್ಮವನ್ನು ಬಲಿಷ್ಠಗೊಳಿಸಬೇಕು” ಎಂದರು.

ಹಿಂದೂವೀ ಜಟ್ಕಾ ಮಾರ್ಟ್‌ ಎಂಬ ಮಳಿಗೆಯಲ್ಲಿ ದೇವರ ಫೋಟೋಕ್ಕೆ ಪೂಜೆ ಸಲ್ಲಿಸಿ ನಂತರ ಕರಿ ಕೋಳಿಯೊಂದನ್ನು ಜಟ್ಕಾ ಕಟ್ ಮಾಡಲು ಕಾಳಿ ಸ್ವಾಮೀಜಿ ಮುಂದಾದರು. ಈ ವಿಡಿಯೊ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಸ್ವಾಮೀಜಿಯರವ ವರ್ತನೆಯನ್ನು ಕೆಲವು ಸ್ವಾಮೀಜಿಗಳು ಟೀಕಿಸಿದ್ದರು. ಜನರು ವ್ಯಂಗ್ಯವಾಡಿದರು.

ವಿರೋಧ ಪಕ್ಷದ ನಾಯಕರ ಕುರಿತು ಅನವಶ್ಯಕವಾಗಿ ಹೇಳಿಕೆ ನೀಡುವಲ್ಲಿಯೂ ಕಾಳಿ ಸ್ವಾಮೀಜಿ ಮುಂದಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವನ್ನು ಮಾಡಿಕೊಳ್ಳುತ್ತಿದ್ದಾರೆ. ಜನರ ನಡುವೆ ದ್ವೇಷ ಹರಡಿಸುತ್ತಿರುವ ಇಂಥವರ ವಿರುದ್ಧ, ರಾಷ್ಟ್ರಕವಿ ಕುವೆಂಪು ಅವರು ಸಾರಿದಂತೆ ‘ಸರ್ವಜನಾಂಗದ ಶಾಂತಿಯ ತೋಟ’ವಾದ ಕರ್ನಾಟಕದ ಸ್ವಾಸ್ಥ್ಯವನ್ನು ಹಾಳು ಮಾಡುವವರ ವಿರುದ್ಧ ಕ್ರಮ ಜರುಗಿಸದೆ ಮೌನವಾಗಿರುವ ಸರ್ಕಾರ ಕುರಿತೂ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...