Homeಕರ್ನಾಟಕಕೋಮುದ್ವೇಷ: ಕಾಳಿ ಸ್ವಾಮಿ ಮಾಡಿದ ಸಾಲುಸಾಲು ಪ್ರಚೋದನೆಗಳಿವು!

ಕೋಮುದ್ವೇಷ: ಕಾಳಿ ಸ್ವಾಮಿ ಮಾಡಿದ ಸಾಲುಸಾಲು ಪ್ರಚೋದನೆಗಳಿವು!

ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ನಿರಂತರ ದ್ವೇಷ ಕಾರುತ್ತಿರುವ ಕಾಳಿ ಸ್ವಾಮಿ ಮೇಲೆ ಸರ್ಕಾರ ಗಂಭೀರವಾದ ಕ್ರಮ ಜರುಗಿಸುವ ಅಗತ್ಯವಿದೆ.

- Advertisement -
- Advertisement -

“ಇನ್ನು ಒಂಬತ್ತು ಮುಸ್ಲಿಮರ ತಲೆಯನ್ನು ಕಡಿಯಬೇಕು” ಎಂದು ಪ್ರಚೋದನಾತ್ಮಕವಾಗಿ ಮಾತನಾಡಿದ ಕಾರಣ ಕಾಳಿ ಸ್ವಾಮಿ ಅಲಿಯಾಸ್ ಋಷಿಕುಮಾರ ಸ್ವಾಮೀಜಿ ವಿರುದ್ಧ ತುಮಕೂರಿನಲ್ಲಿ ಇಂದು ಪ್ರಕರಣ ದಾಖಲಾಗಿದೆ.

ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು ನೀಡುವ‍ ಕಾಳಿ ಸ್ವಾಮಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರ ಕೊಲೆಗೂ ಪ್ರಚೋದನೆ ನೀಡಿ ಈಗ ಸುದ್ದಿಯಲ್ಲಿದ್ದಾರೆ.

ಅತ್ಯಂತ ಅವಹೇಳನಕಾರಿಯಾಗಿ, ಸಮುದಾಯಗಳ ನಡುವೆ ದ್ವೇಷ ಬಿತ್ತುವಂತೆ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಅಣಕಿಸುವಂತೆ ಮಾತನಾಡಿರುವ ಕಾಳಿ ಸ್ವಾಮೀ, “ಇನ್ನೂ 9 ಜನ ಮುಸ್ಲಿಮರ ತಲೆ ಕಡಿಯಬೇಕು” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಈಗ ಪ್ರಕರಣ ದಾಖಲಾಗಿದೆ. ಶೀಘ್ರದಲ್ಲೇ ಪೊಲೀಸರು ಬಂಧಿಸುತ್ತಾರೋ ನೋಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾವಿ ಧರಿಸಿರುವ ವ್ಯಕ್ತಿಯೊಬ್ಬ ಹೀಗೆ ಅನಾಗರಿಕವಾಗಿ ಮಾತನಾಡುತ್ತಿರುವುದಕ್ಕೆ ಕನ್ನಡ ನಾಡಿನ ಜನತೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಕಾವಿಗೆ ಮಾಡುತ್ತಿರುವ ಅವಮಾನ ಇದೆಂದು ಪದೇ ಪದೇ ಜನಾಕ್ರೋಶ ವ್ಯಕ್ತವಾಗುತ್ತಿದ್ದರೂ ಕಾಳಿ ಸ್ವಾಮಿಯವರು ನಾಲಗೆ ಹರಿಬಿಡುವುದನ್ನು ನಿಲ್ಲಿಸಿಲ್ಲ.

ಇದನ್ನೂ ಓದಿರಿ: ಸಿಎಂ ಬೊಮ್ಮಾಯಿ, ಗೃಹಸಚಿವರನ್ನು ಕೊಲ್ಲಿ: ಕಾಳಿ ಸ್ವಾಮೀಜಿ ಪ್ರಚೋದನೆ

ಕಳೆದ ಕೆಲವು ತಿಂಗಳಿಂದ ಕಾಳಿ ಸ್ವಾಮಿ ಸಾಮಾಜಿಕವಾಗಿ ಉಂಟು ಮಾಡಿರುವ ಕ್ಷೋಭೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಕಾವಿ ಧರಿಸಿರುವ ವ್ಯಕ್ತಿಯೊಬ್ಬ ಮಾಡುತ್ತಿರುವ ಅವಾಂತರಗಳನ್ನು ಬೊಮ್ಮಾಯಿ ಸರ್ಕಾರ ಕಣ್ಣುಬಿಟ್ಟು ನೋಡಬೇಕಾದ ತುರ್ತಿದೆ.

ರಾಷ್ಟ್ರಕವಿ ಕುವೆಂಪುವಿಗೆ ಅಗೌರವ ವಿವಾದ

ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮಿಯವರಿಗೆ ಮಸಿ ಬಳಿದ ಘಟನೆ ಮೇ ತಿಂಗಳಲ್ಲಿ ನಡೆದಿತ್ತು.

ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು. ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಧಿಕ್ಕಾರ ಕೂಗಿ ಮುಖಕ್ಕೆ ಕಪ್ಪುಮಸಿ ಬಳಿದಿದ್ದರು.

ಆ ನಂತರದಲ್ಲಿ ಸ್ವಲ್ಪ ಬದಿಗೆ ಸರಿದಿದ್ದ ಕಾಳಿ ಸ್ವಾಮಿ ಈಗ ಮತ್ತೆ ಕ್ಷೋಭೆ ಉಂಟು ಮಾಡಲು ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆಯ ಬಳಿಕ ಫಾಝಿಲ್‌ ಎಂಬ ಯುವಕನ ನೆತ್ತರು ಹರಿದಿದೆ. ಇನ್ನೂ ಒಂಬತ್ತು ಮುಸ್ಲಿಮರನ್ನು ಕೊಲ್ಲುತ್ತೇವೆ ಎಂದು ಕಾಳಿ ಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿರಿ: ಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

ಮಸೀದಿ ಒಡೆಯಲು ಪ್ರಚೋದನೆ

ಶ್ರೀರಂಗಪಟ್ಟಣದಲ್ಲಿನ ಮಸೀದಿಯು ದೇವಸ್ಥಾನದ ಮೇಲೆ ನಿರ್ಮಾಣವಾಗಿದೆ. ಬಾಬ್ರಿ ಮಸೀದಿಯನ್ನು ಕೆಡವಿ ರಾಮ ಮಂದಿರ ನಿರ್ಮಾಣ ಮಾಡಿದಂತೆ ಶ್ರೀರಂಗಪಟ್ಟಣ ಮಸೀದಿಯನ್ನು ಕೆಡವಿ ಹನುಮ ಮಂದಿರವನ್ನು ಕಟ್ಟಬೇಕು ಎಂದಿದ್ದರು ಕಾಳಿ ಸ್ವಾಮಿ. ಬಳಿಕ ಅವರನ್ನು ಬಂಧಿಸಿ ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಆದರೆ ಮಸೀದಿಯನ್ನು ಕೆಡವಬೇಕೆಂಬ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತೆ ಸಮರ್ಥಿಸಿಕೊಂಡಿದ್ದರು.

“ಶ್ರೀರಂಗಪಟ್ಟಣ ಎಂದರೆ ಗತ ವೈಭವವನ್ನು ಸಾರುವ ನೆಲವೀಡು. ಗಂಗರು, ಹೊಯ್ಸಳರು, ಮೈಸೂರು ಅರಸರು, ಹೈದರಾಲಿ, ಟಿಪ್ಪು ಸುಲ್ತಾನ್ ಆಳಿದ ನೆಲ. ಎಲ್ಲಕ್ಕಿಂತ ಹೆಚ್ಚಾಗಿ ಶ್ರೀರಂಗಪಟ್ಟಣ ಎಂದರೆ ಹಿಂದೂ ಮುಸ್ಲಿಮರ ಭಾವೈಕ್ಯ ತಾಣ. ಸಾಮರಸ್ಯವೇ ಇಲ್ಲಿನ ಶಕ್ತಿ. ಇತ್ತೀಚೆಗೆ ಕೆಲವು ಮತಾಂಧ ಶಕ್ತಿಗಳು ಈ ಸಾಮರಸ್ಯವನ್ನು ಕದಡುವ ಕೆಲಸವನ್ನು ಮಾಡುತ್ತಿವೆ” ಎಂದು ತಮ್ಮ ವರದಿಯಲ್ಲಿ ಅಭಿಪ್ರಾಯತಾಳುತ್ತಾರೆ ಪ್ರಜಾವಾಣಿ ಪತ್ರಿಕೆಯ ಮೈಸೂರು ಬ್ಯುರೊ ಮುಖ್ಯಸ್ಥರಾದ ಕೆ.ನರಸಿಂಹಮೂರ್ತಿ. “ಸ್ಥಳೀಯವಾಗಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಹೊರಗಿನಿಂದ ಬಂದವರೇ ವಿವಾದವನ್ನು ಸೃಷ್ಟಿಸುತ್ತಿದ್ದಾರೆ” ಎಂಬ ಸಂಗತಿಯನ್ನು ತಮ್ಮ ವರದಿಯಲ್ಲಿ ಪ್ರಸ್ತಾಪಿಸಿದ್ದರು.

ಆಜಾನ್‌ ವಿರುದ್ಧ ವಿವಾದ ಸೃಷ್ಟಿ 

ದಿನಕ್ಕೆ ಐದು ಬಾರಿ ಪ್ರಾರ್ಥನೆಯನ್ನು ಸಲ್ಲಿಸುವುದು ಇಸ್ಲಾಂನಲ್ಲಿ ನಡೆದು ಬಂದಿರುವ ಸಂಪ್ರದಾಯ. ಆಜಾನ್‌ ಅಥವಾ ಅದಾನ್‌ ಎಂಬುದು ಪ್ರಾರ್ಥನೆಗೆ ನೀಡುವ ಕರೆಯೇ ಹೊರತು, ಪ್ರಾರ್ಥನೆಯಲ್ಲ. ಆದರೆ ಆಜಾನ್‌ಗೆ ವಿರುದ್ಧವಾಗಿ ಹನುಮಾನ್ ಚಾಲೀಸ್ ಹಾಡುತ್ತೇವೆ ಎಂಬ ಚರ್ಚೆಯನ್ನು ಮುನ್ನೆಲೆಗೆ ತರಲಾಯಿತು. ಕ್ಯಾಮೆರಾ ಮುಂದೆ ಧಾರ್ಮಿಕತೆಯನ್ನು ಪ್ರದರ್ಶಿಸುವ ಕೆಲಸವೂ ಆಯಿತು.

ಆಜಾನ್‌ನ ಹಿನ್ನೆಲೆ ಉದ್ದೇಶ ತಿಳಿಯದ ಧರ್ಮಗುರು ಕಾಳಿ ಸ್ವಾಮಿ, ಮೈಕ್‌ ಹಿಡಿದು ರಾಮಜಪ ಮಾಡಿ ವಿಡಿಯೊ ಹರಿಬಿಟ್ಟಿದ್ದರು. ಬೆಂಗಳೂರಿನ ಚುಂಚನ ಘಟ್ಟದಲ್ಲಿರುವ ರಾಮಾಂಜನೇಯ ದೇವಾಲಯಲ್ಲಿ ಧ್ವನಿ ವರ್ಧಕ ಅಳವಡಿಸಿ ಬೆಳಿಗ್ಗೆ 5.33ಕ್ಕೆ 3 ಬಾರಿ ರಾಮ ಜಪ ಮಾಡಿದ್ದರು. ಇದು ಕೂಡ ಭಾರೀ ಟ್ರೋಲ್‌ಗೆ ಒಳಗಾಗಿತ್ತು.

ಹಲಾಲ್‌ ಕಟ್‌ v/s ಜಟ್ಕಾ ಕಟ್‌

ಯುಗಾದಿ ವರ್‍ಸತೊಡಕಿನ ಆಚೀಚೆ ಹಲಾಲ್‌ ಕಟ್‌ಗೆ ವಿರುದ್ಧವಾಗಿ ಜಟ್ಕಾ ಕಟ್‌ ಎಂಬ ವಿವಾದ ಸೃಷ್ಟಿಯಾಯಿತು. ಮುಸ್ಲಿಮರ ಬಳಿ ಮಾಂಸ ಖರೀದಿಸಬೇಡಿ ಎಂದು ಹಬ್ಬಿಸಲಾಯಿತು. ಹಿಂದೂ ಸಮಾಜದ ಜನರೇ ಸರಿಯಾಗಿ ಝಾಡಿಸಿದ ಮೇಲೆ ವಿವಾದ ಬದಿಗೆ ಸರಿಯಿತು.

ಹಲಾಲ್‌ ಕಟ್‌ ಎಂದರೇನು? ಜಟ್ಕಾ ಕಟ್ ಎಂದರೇನು? ಎಂದು ಪ್ರಜ್ಞಾವಂತರು ವಿವರಿಸಿದರು. ತಿನ್ನುವ ಅನ್ನದಲ್ಲೆಲ್ಲ ಮತಾಂಧತೆಯನ್ನು ಹುಡುಕುವುದನ್ನು ಜನರು ಟೀಕಿಸಿದರು.

ಇದನ್ನೂ ಓದಿರಿ: ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?

ವಿವಾದ ಮುಂಚೂಣಿಯಲ್ಲಿದ್ದ ಸಂದರ್ಭದಲ್ಲಿ ಗಾಯಕ್ಕೆ ಉಪ್ಪು ಸವರುವ ಕೆಲಸ ಮಾಡಿದ ಕಾಳಿ ಸ್ವಾಮೀಜಿ, “ಹಿಂದೂ ಧರ್ಮದ ಯುವಕರು ಜಟ್ಕಾ ಮೀಟ್ ಅಂಗಡಿಗಳನ್ನು ತೆರೆಯುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ತಮ್ಮ ಕುಟುಂಬ ಹಾಗೂ ಹಿಂದೂ ಧರ್ಮವನ್ನು ಬಲಿಷ್ಠಗೊಳಿಸಬೇಕು” ಎಂದರು.

ಹಿಂದೂವೀ ಜಟ್ಕಾ ಮಾರ್ಟ್‌ ಎಂಬ ಮಳಿಗೆಯಲ್ಲಿ ದೇವರ ಫೋಟೋಕ್ಕೆ ಪೂಜೆ ಸಲ್ಲಿಸಿ ನಂತರ ಕರಿ ಕೋಳಿಯೊಂದನ್ನು ಜಟ್ಕಾ ಕಟ್ ಮಾಡಲು ಕಾಳಿ ಸ್ವಾಮಿ ಮುಂದಾದರು. ಈ ವಿಡಿಯೊ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಕಾಳಿ ಸ್ವಾಮಿಯವರ ವರ್ತನೆಯನ್ನು ಕೆಲವು ಸ್ವಾಮೀಜಿಗಳು ಟೀಕಿಸಿದ್ದರು. ಜನರು ವ್ಯಂಗ್ಯವಾಡಿದರು.

ಕೋಮು ಕೇಂದ್ರಿತ ಪ್ರಕರಣಗಳಲ್ಲಿ ಕಾಳಿ ಸ್ವಾಮೀಯವರ ಉಪಸ್ಥಿತಿ ಇದ್ದೇ ಇರುತ್ತದೆ. ಸಂವಿಧಾನ ಬಾಹಿರವಾಗಿ, ಒಂದು ಸಮುದಾಯದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ, ಸಮಾಜದಲ್ಲಿ ದ್ವೇಷ ಬೆಳೆಸುತ್ತಾ ಕಾಳಿ ಸ್ವಾಮೀಜಿ ವೈಯಕ್ತಿಯ ಪ್ರಚಾರವನ್ನು ಪಡೆಯುತ್ತಿದ್ದಾರೆ. ಇಂಥವರ ಎದುರು ಲೋಗೋಗಳನ್ನು ಹಿಡಿಯುವ ಮಾಧ್ಯಮ ಮಂದಿಯೂ ಪಾಠ ಕಲಿತಂತೆ ಕಾಣುತ್ತಿಲ್ಲ.

“ಎಲ್ಲ ಜನವರ್ಗವನ್ನು ಪ್ರೀತಿ, ಗೌರವದಿಂದ ಕಾಣುವವರು ನಿಜವಾದ ಸ್ವಾಮೀಜಿ” ಎನ್ನುತ್ತಾರೆ ಗದುಗಿನ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ. ಆದರೆ ಋಷಿಕುಮಾರ ಸ್ವಾಮಿಯಂಥವರು ಈ ಎಲ್ಲೆಗಳನ್ನು ಮೀರಿದಂತೆ ಕಾಣುತ್ತಾರೆ. ಹೀಗಾಗಿ ವಿಪರೀತ ಟ್ರೋಲ್‌ಗೂ ಒಳಗಾಗಿದ್ದಾರೆ. ಆದರೆ ಈ ಟ್ರೋಲ್‌ಗಳನ್ನೇ ಭೂಷಣವೆಂಬಂತೆ ಕಾಳಿ ಸ್ವಾಮೀಜಿ ಭಾವಿಸಿದ್ದಾರೇನೋ! ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು- ಇಂತಹ ಫ್ರಿಂಜ್‌ ಎಲಿಮೆಂಟ್‌ಗಳ ವಿರುದ್ಧ ಕ್ರಮ ಜರುಗಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...