Homeಮುಖಪುಟ‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದ ಸುಮಾರು ಮೂರು ತಿಂಗಳ ನಂತರ, ಗೋವಾದ ಮಾಜಿ ಶಾಸಕ ಲಾವೂ ಮಮಲ್ದರ್‌ ಸೇರಿದಂತೆ ಅದರ ಐದು ಪ್ರಾಥಮಿಕ ಸದಸ್ಯರು ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷವು ಕೋಮುವಾದಿಯಾಗಿದ್ದು, ಓಟಿಗಾಗಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ನಡುವೆ ವಿಭಜನೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಗೋವಾದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಲಿದೆ.

“ನಾವು ಗೋವಾ ಮತ್ತು ಗೋವನ್ನರಿಗೆ ಉಜ್ವಲ ದಿನಗಳನ್ನು ತರುತ್ತೇವೆ ಎಂಬ ಭರವಸೆಯೊಂದಿಗೆ ಟಿಎಂಸಿಗೆ ಸೇರಿದ್ದೇವೆ. ಆದರೆ ಟಿಎಂಸಿ ಗೋವಾ ಮತ್ತು ಗೋವನ್ನರನ್ನು ಅರ್ಥಮಾಡಿಕೊಂಡಿಲ್ಲ ಎಂಬುವುದು ದುರದೃಷ್ಟಕರ” ಎಂದು ರಾಜೀನಾಮೆ ನೀಡಿದ ನಾಯಕರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

“ಹಿಂದೂ ಮತಗಳನ್ನು ಮಹಾರಾಷ್ಟ್ರವಾದಿ ಗೋಮಾಂತಕ್‌ ಪಾರ್ಟಿ ಕಡೆಗೆ ಮತ್ತು ಕ್ಯಾಥೋಲಿಕ್ ಮತಗಳನ್ನು ಟಿಎಂಸಿ ಕಡೆಗೆ ಧ್ರುವೀಕರಿಸುತ್ತಿದ್ದು, ಈ ಕ್ರಮವು ಸಂಪೂರ್ಣವಾಗಿ ಕೋಮುವಾದಿತನದ್ದಾಗಿದೆ.

ಗೋವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಪಕ್ಷದೊಂದಿಗೆ ನಾವು ಮುಂದುವರಿಯಲು ಬಯಸುವುದಿಲ್ಲ. ಗೋವಾವನ್ನು ವಿಭಜಿಸಲು ನಾವು ನಾವು ಬಿಡುವುದಿಲ್ಲ, ರಾಜ್ಯದ ಜಾತ್ಯತೀತತೆಯನ್ನು ನಾವು ರಕ್ಷಿಸುತ್ತೇವೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಲಾವೂ ಮಮಲ್ದರ್‌ ಅವರು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಸೇರಿದ್ದರು. ಫೆಬ್ರವರಿ 2022 ರಲ್ಲಿ ನಡೆಯಲಿರುವ ಗೋವಾ ಅಸೆಂಬ್ಲಿ ಚುನಾವಣೆಯಲ್ಲಿ ಎಲ್ಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದ ರಾಜ್ಯದ ಮೊದಲ ಕೆಲವು ಸ್ಥಳೀಯ ನಾಯಕರಲ್ಲಿ ಅವರು ಒಬ್ಬರಾಗಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ಈ ಹಿಂದೆ, ಗೋವಾ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ತೃಣಮೂಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಪೋಂಡಾ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಲಾವೂ ಮಮಲ್ದರ್‌‌ ಆರೋಪಿಸಿದ್ದಾರೆ.

“ಟಿಎಂಸಿ ಕೋಮುವಾದಿ ಪಕ್ಷವಲ್ಲ ಎಂದು ನಾನು ಭಾವಿಸಿದ್ದೆ. ಆದರೆ ಡಿಸೆಂಬರ್ 5 ರಂದು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ) ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಮೈತ್ರಿ ಘೋಷಿಸಲಾಯಿತು. ಹೀಗಾಗಿ ಟಿಎಂಸಿ ಕೂಡ ಕೋಮುವಾದಿ ಎಂದು ನಾನು ಕಂಡುಕೊಂಡೆ” ಎಂದು ಎಂಜಿಪಿಯನ್ನು ತೊರೆದು ತೃಣಮೂಲ ಪಕ್ಷ ಸೇರಿದ್ದ ಅವರು ಹೇಳಿದ್ದಾರೆ.

ಮುಂಬರುವ ಚುನಾವಣೆಗಳಿಗಾಗಿ ತೃಣಮೂಲ ಕಾಂಗ್ರೆಸ್ ತೀವ್ರವಾಗಿ ಪ್ರಚಾರ ನಡೆಸುತ್ತಿದೆ. ಪಕ್ಷವು ಗೋವಾದ ಮಾಜಿ ಮುಖ್ಯಮಂತ್ರಿ ಲುಜಿನ್ಹೋ ಫಲೈರೊ ಅವರನ್ನು ಟಿಎಂಸಿ ಸೇರ್ಪಡೆಗೊಳಿಸಿದೆ. ಈ ತಿಂಗಳ ಆರಂಭದಲ್ಲಿ, ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಗೋವಾಕ್ಕೆ ಭೇಟಿ ನೀಡಿ ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದರು. 2022 ರ ಆರಂಭದಲ್ಲಿ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಗೋವಾದಲ್ಲಿ ಟಿಎಂಸಿಯೊಂದಿಗೆ ಮೈತ್ರಿ ಇಲ್ಲ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...