Homeಮುಖಪುಟಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕೀಯ ಕರ್ಮಕ್ಷೇತ್ರ ಶಿವಮೊಗ್ಗದಲ್ಲಿ ಶಾಂತಿ-ಸೌಹಾರ್ದತೆ ಕದಡುವ ಕೋಮು ರಾಜಕಾರಣ ಗರಿಬಿಚ್ಚಿದೆ. ಗುರುವಾರ ಬೆಳಗ್ಗೆ (ಡಿ.3) ಬಜರಂಗದಳದ ಕಾರ್ಯಕರ್ತ ನಾಗೇಶ್ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಈಗ ನಗರದಲ್ಲಿ ಕೋಮುಗಲಭೆಯ ಆತಂಕವನ್ನು ಸೃಷ್ಟಿಸಿದೆ. ಈ ಹಲ್ಲೆಯನ್ನು ಪ್ರತಿಭಟಿಸುವ ನೆಪದಲ್ಲಿ ಬಜರಂಗದಳ ಕಾರ್ಯಕರ್ತರು ಸಿನಿಮಾ ರಸ್ತೆಯಲ್ಲಿನ ಬಟ್ಟೆ ಮಾರ್ಕೆಟ್ ಗೆ ನುಗ್ಗಿ ಒಂದು ಕೋಮಿನ ಜನರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಕಾರವೆಂಬಂತೆ ಬೈಕ್ ನಲ್ಲಿ ಬಂದ ಮೂರ‍್ನಾಲ್ಕು ಜನ ಮುಸ್ಲಿಂ ಹುಡುಗರ ಗುಂಪೊಂದು ಮಾರಾಕಾಸ್ತ್ರಗಳಿಂದ ರವಿವರ್ಮ ಬೀದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋಗಳ ಗ್ಲಾಸ್ ಜಖಂ ಮಾಡಿ ಪರಾರಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ನಗರದಲ್ಲಿ ಕೋಮುಗಲಭೆ ವದಂತಿಗಳಿಗೆ ಕಾರಣವಾಗಿದ್ದು, ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿ ಬಂದಿದೆ. ಇಂತಹದ್ದೊಂದು ಸಂದರ್ಭಕ್ಕೆ ಕಾದು ಕುಳಿತಂತಿದ್ದ ಮತಿಗೇಡಿಗಳು ನಾಲಿಗೆ ಮಸೆದುಕೊಂಡು ಕೋಮುರಾಜಕಾರಣಕ್ಕೆ ಇಳಿದಿದ್ದಾರೆ.

ವಾಸ್ತವವಾಗಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರು ಯಾವ ಕೋಮಿನವರು ಮತ್ತು ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಇದುವರೆಗೂ ಪೊಲೀಸರ ತನಿಖೆಯಲ್ಲಿ ಕಂಡು ಬಂದಿಲ್ಲ. ಇದನ್ನು ಪೂರ್ವವಲಯ ಐಜಿಪಿ ರವಿ.ಎಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದರ ಸತ್ಯ ಬಯಲಾಗುವ ಮುಂಚೆಯೇ ಸಂಸದ ಬಿ.ವೈ ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಇದು ಹಿಂದೂ ವಿರೋಧಿಗಳ ಕೃತ್ಯ ಎಂದು ಸಾರಿಬಿಟ್ಟಿದ್ದಾರೆ. ನಾಗೇಶನ ಮೇಲೆ ನಡೆದ ಹಲ್ಲೆಗೆ ಪ್ರತಿಯಾಗಿ ಬಟ್ಟೆ ಮಾರ್ಕೆಟ್ ನಲ್ಲಿ ಬಜರಂಗದಳ ಕಾರ್ಯಕರ್ತರು ನಡೆಸಿದ ದಾಳಿಯೂ ಹಿಂದೂಗಳ ಪ್ರತಿಕಾರದ ಗೂಂಡಾಗಿರಿಯೇ ಆಗಿದೆ ಎಂದು ಈ ರಾಜ್ಯದ ಸಚಿವ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಅಲ್ಲಿಗೆ ಶಿವಮೊಗ್ಗದಲ್ಲೊಂದು ರಣರಂಗದ ದಳ್ಳುರಿಗೆ ಎಲ್ಲಾ ವೇದಿಕೆಯನ್ನು ಸಜ್ಜುಗೊಳಿಸುತ್ತಿರುವ ಆತಂಕ ಜನಸಾಮಾನ್ಯರ ನಿದ್ದೆಗೆಡಿಸಿದೆ.

ಕೊರೋನಾ ಸಂದರ್ಭದಲ್ಲೆ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಪ್ರಯತ್ನಗಳು ವಿಫಲವಾಗಿದ್ದವು. ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಷಡ್ಯಂತ್ರಗಳು ಅವರದ್ದೇ ಪಕ್ಷ ಪರಿವಾರದಿಂದ ನಡೆದಿತ್ತು ಎಂಬ ಗುಪ್ತಚರ ವರದಿಯೂ ಬಹಿರಂಗವಾಗಿತ್ತು. ಲಾಕ್ ಡೌನ್ ನಿಂದ ಗುಜರಾತ್‌ನಲ್ಲಿ ಸಿಲುಕಿಕೊಂಡಿದ್ದ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಏಳು ಜನ ತಬ್ಲಿಘಿಗಳನ್ನು ಖುದ್ದು ಮುಖ್ಯಮಂತ್ರಿಗಳೇ ವಿಶೇಷ ಬಸ್ಸಿನಲ್ಲಿ ಕರೆತರಿಸಿ ಶಿವಮೊಗ್ಗದಲ್ಲಿ ಕ್ವಾರಂಟೈನ್ ಗೊಳಪಡಿಸಿ ನಂತರ ಶಿಕಾರಿಪುರ ತಲುಪಿಸಿದ್ದರು. ರಾಜ್ಯದಲ್ಲಿ ತಬ್ಲಿಘಿಗಳ ವಿರುದ್ದ ಬಿಜೆಪಿ ಮತ್ತು ಪರಿವಾರದ ಸಂಘಟನೆಗಳು ದ್ವೇಷ ಹರಡುವಲ್ಲಿ ನಿರತರಾಗಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂತಹ ಪ್ರಚೋದನೆಗಳನ್ನು ಸಹಿಸುವುದಿಲ್ಲ. ಅಲ್ಪಸಂಖ್ಯಾತರ ಮೇಲೆ ದಾಳಿನಡೆದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿ ತಮ್ಮದೇ ಪಕ್ಷದವರ ಕೋಮುರಾಜಕಾರಣಕ್ಕೆ ಕಡಿವಾಣ ಹಾಕಿದ್ದರು. ಈ ಕಾರಣದಿಂದಾಗಿ ಹಿಂದೂ ಮತೀಯ ಸಂಘಟನೆಗಳಿಗೆ ಯಡಿಯೂರಪ್ಪ ಅಪಥ್ಯವಾಗಿ ಕಂಡಿದ್ದಾರೆ. ಬಹುಶಃ ಗುಪ್ತಚರ ವರದಿಯಂತೆ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಯ ಹುನ್ನಾರವನ್ನು ಯಡಿಯೂರಪ್ಪ ಅವರು ಬಗ್ಗುಬಡಿದಿದ್ದರು.

2010 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗಲೇ ಕನ್ನಡದ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನದಲ್ಲಿ ಬುರ್ಖಾ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ನೆಪದಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರೂ ಪೊಲೀಸರ ಗುಂಡಿಗೆ ಬಲಿಯಾಗಿ, ಹತ್ತಾರು ಜನ ಗಾಯಗೊಂಡು, ಲಕ್ಷಾಂತರ ರೂಪಾಯಿಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗುವುದರೊಂದಿಗೆ ಕೊನೆಗೊಂಡಿತ್ತು.

2015 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತವಿರುವಾಗ ನಗರದಲ್ಲಿ ವಿಶ್ವನಾಥ್ ಶೆಟ್ಟಿ ಎಂಬಾತನ ಕೊಲೆಯ ಹಿನ್ನಲೆಯಲ್ಲಿ ನಗರದಲ್ಲಿ ಕೋಮುಗಲಭೆ ನಡೆದಿದ್ದು, ಅಂದಿನ ಇನ್ಸ್‌ಪೆಕ್ಟರ್ ಮಂಜುನಾಥ್, ಡಿವೈಎಸ್ಪಿ ಪಿ.ಓ ಶಿವಕುಮಾರ್ ಅವರುಗಳು ವರ್ಗಾವಣೆಯ ತಲೆದಂಡಕ್ಕೆ ಗುರಿಯಾದರು. ತೀರ್ಥಹಳ್ಳಿಯಲ್ಲಿ ಬಾಲಕಿ ನಂದಿತ ಸಾವಿನ ಪ್ರಕರಣದಲ್ಲೂ ಕೋಮು ರಾಜಕಾರಣದ ದಳ್ಳುರಿಗೆ ತೀರ್ಥಹಳ್ಳಿ ಮತ್ತು ಅವತ್ತಿನ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೈರಾಣಾಗಿ ಹೋಗಿದ್ದರು.

ಇದೀಗ ಯಡಿಯೂರಪ್ಪನವರೆ ಮುಖ್ಯಮಂತ್ರಿಗಳಾಗಿರುವಾಗ ಶಿವಮೊಗ್ಗ ನಗರದಲ್ಲಿ ಮತ್ತೊಂದು ಸುತ್ತಿನ ಕೋಮುಗಲಭೆಯ ಆತಂಕ ಮನೆ ಮಾಡಿದೆ. ಘಟನೆ ನಡೆದ ಬೆನ್ನೆಲ್ಲೆ ತರಾತುರಿ ಎಂಬಂತೆ ಸಂಸದ ಬಿ.ವೈ ರಾಘವೇಂದ್ರ ಇದೊಂದು ಮುಸ್ಲಿಂ ಗುಂಪು ನಡೆಸಿದ ದಾಳಿ ಎಂದು ಹೇಳುವ ಮೂಲಕ ದುಡುಕಿದರೆ, ಇಂದು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಂದಿನಂತೆ ದ್ವೇಷದ ಮಾತುಗಳನ್ನಾಡಿದ್ದಾರೆ. ಮುಸ್ಲಿಂ ಗೂಂಡಾಗಳು ನಾಗೇಶನ ಮೇಲೆ ನಡೆಸಿದ ಹಲ್ಲೆಗೆ ಪ್ರತಿಯಾಗಿ ಹಿಂದೂಗಳು ಗೂಂಡಾಗಿರಿ ಮಾಡಿದ್ದಾರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲಿಗೆ ಎಲ್ಲವೂ ಸ್ಪಷ್ಟವಾಗಿದೆ. ನಗರದ ಜನತೆ ಆತಂಕದಿಂದ ದಿನದೂಡುವಂತಾಗಿದೆ.

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ. ಪೊಲೀಸ್ ವರಿಷ್ಟಾಧಿಕಾರಿಗಳಿಂದ ಠಾಣಾವ್ಯಾಪ್ತಿಯ ಕಾನ್ಸ್ಟೇಬಲ್ ವರೆಗೂ ಎಲ್ಲಾ ವರ್ಗಾವಣೆಗಳು ಬಿ.ವೈ ರಾಘವೇಂದ್ರ ನ ಮರ್ಜಿಯಲ್ಲೆ ನಡೆದಿವೆ. ಇದು ಈಶ್ವರಪ್ಪ ಅವರ ಅಸಹನೆಗೆ ಕಾರಣವಾಗಿದೆ. ಪ್ರತಿಕಾರಕ್ಕೆ ಈಶ್ವರಪ್ಪ ಕಾಲದ ನಿರೀಕ್ಷೆಯಲ್ಲಿದ್ದಾರೆ. ಹಾಗಂತ ನಗರದಲ್ಲಿ ಕೋಮುಗಲಭೆಯೆಂದೆ ಕರೆಯುತ್ತಿರುವ ಘಟನೆಗಳ ಹಿಂದೆ ಯಡಿಯೂರಪ್ಪ ಅವರಿಗೆ ಇಕ್ಕಟ್ಟು ತಂದಿಡುವ ಮತೀಯ ರಾಜಕಾರಣವಿದೆ ಎಂಬುದನ್ನು ಈಗಲೆ ನಿಖರವಾಗಿ ಹೇಳಲು ಬರುವುದಿಲ್ಲ. ಆದರೆ ಈಶ್ವರಪ್ಪ ಅವರ ಮಾತುಗಳು ಮಾತ್ರ ಕೋಮುಗಲಭೆಯ ಕಿಡಿಯನ್ನು ಹಚ್ಚುವ , ರಾಜಕೀಯ ಏಟುಗಳನ್ನು ಕೊಡುವ ಸೂಚನೆ ನೀಡುತ್ತಿಲ್ಲ ಎಂಬುದನ್ನು‌ ನಿರಾಕರಿಸಲಾಗದು.

  • ಎನ್‌. ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ; ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...