Homeಮುಖಪುಟಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕೀಯ ಕರ್ಮಕ್ಷೇತ್ರ ಶಿವಮೊಗ್ಗದಲ್ಲಿ ಶಾಂತಿ-ಸೌಹಾರ್ದತೆ ಕದಡುವ ಕೋಮು ರಾಜಕಾರಣ ಗರಿಬಿಚ್ಚಿದೆ. ಗುರುವಾರ ಬೆಳಗ್ಗೆ (ಡಿ.3) ಬಜರಂಗದಳದ ಕಾರ್ಯಕರ್ತ ನಾಗೇಶ್ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಈಗ ನಗರದಲ್ಲಿ ಕೋಮುಗಲಭೆಯ ಆತಂಕವನ್ನು ಸೃಷ್ಟಿಸಿದೆ. ಈ ಹಲ್ಲೆಯನ್ನು ಪ್ರತಿಭಟಿಸುವ ನೆಪದಲ್ಲಿ ಬಜರಂಗದಳ ಕಾರ್ಯಕರ್ತರು ಸಿನಿಮಾ ರಸ್ತೆಯಲ್ಲಿನ ಬಟ್ಟೆ ಮಾರ್ಕೆಟ್ ಗೆ ನುಗ್ಗಿ ಒಂದು ಕೋಮಿನ ಜನರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಕಾರವೆಂಬಂತೆ ಬೈಕ್ ನಲ್ಲಿ ಬಂದ ಮೂರ‍್ನಾಲ್ಕು ಜನ ಮುಸ್ಲಿಂ ಹುಡುಗರ ಗುಂಪೊಂದು ಮಾರಾಕಾಸ್ತ್ರಗಳಿಂದ ರವಿವರ್ಮ ಬೀದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋಗಳ ಗ್ಲಾಸ್ ಜಖಂ ಮಾಡಿ ಪರಾರಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ನಗರದಲ್ಲಿ ಕೋಮುಗಲಭೆ ವದಂತಿಗಳಿಗೆ ಕಾರಣವಾಗಿದ್ದು, ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿ ಬಂದಿದೆ. ಇಂತಹದ್ದೊಂದು ಸಂದರ್ಭಕ್ಕೆ ಕಾದು ಕುಳಿತಂತಿದ್ದ ಮತಿಗೇಡಿಗಳು ನಾಲಿಗೆ ಮಸೆದುಕೊಂಡು ಕೋಮುರಾಜಕಾರಣಕ್ಕೆ ಇಳಿದಿದ್ದಾರೆ.

ವಾಸ್ತವವಾಗಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರು ಯಾವ ಕೋಮಿನವರು ಮತ್ತು ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಇದುವರೆಗೂ ಪೊಲೀಸರ ತನಿಖೆಯಲ್ಲಿ ಕಂಡು ಬಂದಿಲ್ಲ. ಇದನ್ನು ಪೂರ್ವವಲಯ ಐಜಿಪಿ ರವಿ.ಎಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದರ ಸತ್ಯ ಬಯಲಾಗುವ ಮುಂಚೆಯೇ ಸಂಸದ ಬಿ.ವೈ ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಇದು ಹಿಂದೂ ವಿರೋಧಿಗಳ ಕೃತ್ಯ ಎಂದು ಸಾರಿಬಿಟ್ಟಿದ್ದಾರೆ. ನಾಗೇಶನ ಮೇಲೆ ನಡೆದ ಹಲ್ಲೆಗೆ ಪ್ರತಿಯಾಗಿ ಬಟ್ಟೆ ಮಾರ್ಕೆಟ್ ನಲ್ಲಿ ಬಜರಂಗದಳ ಕಾರ್ಯಕರ್ತರು ನಡೆಸಿದ ದಾಳಿಯೂ ಹಿಂದೂಗಳ ಪ್ರತಿಕಾರದ ಗೂಂಡಾಗಿರಿಯೇ ಆಗಿದೆ ಎಂದು ಈ ರಾಜ್ಯದ ಸಚಿವ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಅಲ್ಲಿಗೆ ಶಿವಮೊಗ್ಗದಲ್ಲೊಂದು ರಣರಂಗದ ದಳ್ಳುರಿಗೆ ಎಲ್ಲಾ ವೇದಿಕೆಯನ್ನು ಸಜ್ಜುಗೊಳಿಸುತ್ತಿರುವ ಆತಂಕ ಜನಸಾಮಾನ್ಯರ ನಿದ್ದೆಗೆಡಿಸಿದೆ.

ಕೊರೋನಾ ಸಂದರ್ಭದಲ್ಲೆ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಪ್ರಯತ್ನಗಳು ವಿಫಲವಾಗಿದ್ದವು. ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಷಡ್ಯಂತ್ರಗಳು ಅವರದ್ದೇ ಪಕ್ಷ ಪರಿವಾರದಿಂದ ನಡೆದಿತ್ತು ಎಂಬ ಗುಪ್ತಚರ ವರದಿಯೂ ಬಹಿರಂಗವಾಗಿತ್ತು. ಲಾಕ್ ಡೌನ್ ನಿಂದ ಗುಜರಾತ್‌ನಲ್ಲಿ ಸಿಲುಕಿಕೊಂಡಿದ್ದ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಏಳು ಜನ ತಬ್ಲಿಘಿಗಳನ್ನು ಖುದ್ದು ಮುಖ್ಯಮಂತ್ರಿಗಳೇ ವಿಶೇಷ ಬಸ್ಸಿನಲ್ಲಿ ಕರೆತರಿಸಿ ಶಿವಮೊಗ್ಗದಲ್ಲಿ ಕ್ವಾರಂಟೈನ್ ಗೊಳಪಡಿಸಿ ನಂತರ ಶಿಕಾರಿಪುರ ತಲುಪಿಸಿದ್ದರು. ರಾಜ್ಯದಲ್ಲಿ ತಬ್ಲಿಘಿಗಳ ವಿರುದ್ದ ಬಿಜೆಪಿ ಮತ್ತು ಪರಿವಾರದ ಸಂಘಟನೆಗಳು ದ್ವೇಷ ಹರಡುವಲ್ಲಿ ನಿರತರಾಗಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂತಹ ಪ್ರಚೋದನೆಗಳನ್ನು ಸಹಿಸುವುದಿಲ್ಲ. ಅಲ್ಪಸಂಖ್ಯಾತರ ಮೇಲೆ ದಾಳಿನಡೆದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿ ತಮ್ಮದೇ ಪಕ್ಷದವರ ಕೋಮುರಾಜಕಾರಣಕ್ಕೆ ಕಡಿವಾಣ ಹಾಕಿದ್ದರು. ಈ ಕಾರಣದಿಂದಾಗಿ ಹಿಂದೂ ಮತೀಯ ಸಂಘಟನೆಗಳಿಗೆ ಯಡಿಯೂರಪ್ಪ ಅಪಥ್ಯವಾಗಿ ಕಂಡಿದ್ದಾರೆ. ಬಹುಶಃ ಗುಪ್ತಚರ ವರದಿಯಂತೆ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಯ ಹುನ್ನಾರವನ್ನು ಯಡಿಯೂರಪ್ಪ ಅವರು ಬಗ್ಗುಬಡಿದಿದ್ದರು.

2010 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗಲೇ ಕನ್ನಡದ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನದಲ್ಲಿ ಬುರ್ಖಾ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ನೆಪದಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರೂ ಪೊಲೀಸರ ಗುಂಡಿಗೆ ಬಲಿಯಾಗಿ, ಹತ್ತಾರು ಜನ ಗಾಯಗೊಂಡು, ಲಕ್ಷಾಂತರ ರೂಪಾಯಿಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗುವುದರೊಂದಿಗೆ ಕೊನೆಗೊಂಡಿತ್ತು.

2015 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತವಿರುವಾಗ ನಗರದಲ್ಲಿ ವಿಶ್ವನಾಥ್ ಶೆಟ್ಟಿ ಎಂಬಾತನ ಕೊಲೆಯ ಹಿನ್ನಲೆಯಲ್ಲಿ ನಗರದಲ್ಲಿ ಕೋಮುಗಲಭೆ ನಡೆದಿದ್ದು, ಅಂದಿನ ಇನ್ಸ್‌ಪೆಕ್ಟರ್ ಮಂಜುನಾಥ್, ಡಿವೈಎಸ್ಪಿ ಪಿ.ಓ ಶಿವಕುಮಾರ್ ಅವರುಗಳು ವರ್ಗಾವಣೆಯ ತಲೆದಂಡಕ್ಕೆ ಗುರಿಯಾದರು. ತೀರ್ಥಹಳ್ಳಿಯಲ್ಲಿ ಬಾಲಕಿ ನಂದಿತ ಸಾವಿನ ಪ್ರಕರಣದಲ್ಲೂ ಕೋಮು ರಾಜಕಾರಣದ ದಳ್ಳುರಿಗೆ ತೀರ್ಥಹಳ್ಳಿ ಮತ್ತು ಅವತ್ತಿನ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೈರಾಣಾಗಿ ಹೋಗಿದ್ದರು.

ಇದೀಗ ಯಡಿಯೂರಪ್ಪನವರೆ ಮುಖ್ಯಮಂತ್ರಿಗಳಾಗಿರುವಾಗ ಶಿವಮೊಗ್ಗ ನಗರದಲ್ಲಿ ಮತ್ತೊಂದು ಸುತ್ತಿನ ಕೋಮುಗಲಭೆಯ ಆತಂಕ ಮನೆ ಮಾಡಿದೆ. ಘಟನೆ ನಡೆದ ಬೆನ್ನೆಲ್ಲೆ ತರಾತುರಿ ಎಂಬಂತೆ ಸಂಸದ ಬಿ.ವೈ ರಾಘವೇಂದ್ರ ಇದೊಂದು ಮುಸ್ಲಿಂ ಗುಂಪು ನಡೆಸಿದ ದಾಳಿ ಎಂದು ಹೇಳುವ ಮೂಲಕ ದುಡುಕಿದರೆ, ಇಂದು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಂದಿನಂತೆ ದ್ವೇಷದ ಮಾತುಗಳನ್ನಾಡಿದ್ದಾರೆ. ಮುಸ್ಲಿಂ ಗೂಂಡಾಗಳು ನಾಗೇಶನ ಮೇಲೆ ನಡೆಸಿದ ಹಲ್ಲೆಗೆ ಪ್ರತಿಯಾಗಿ ಹಿಂದೂಗಳು ಗೂಂಡಾಗಿರಿ ಮಾಡಿದ್ದಾರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲಿಗೆ ಎಲ್ಲವೂ ಸ್ಪಷ್ಟವಾಗಿದೆ. ನಗರದ ಜನತೆ ಆತಂಕದಿಂದ ದಿನದೂಡುವಂತಾಗಿದೆ.

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ. ಪೊಲೀಸ್ ವರಿಷ್ಟಾಧಿಕಾರಿಗಳಿಂದ ಠಾಣಾವ್ಯಾಪ್ತಿಯ ಕಾನ್ಸ್ಟೇಬಲ್ ವರೆಗೂ ಎಲ್ಲಾ ವರ್ಗಾವಣೆಗಳು ಬಿ.ವೈ ರಾಘವೇಂದ್ರ ನ ಮರ್ಜಿಯಲ್ಲೆ ನಡೆದಿವೆ. ಇದು ಈಶ್ವರಪ್ಪ ಅವರ ಅಸಹನೆಗೆ ಕಾರಣವಾಗಿದೆ. ಪ್ರತಿಕಾರಕ್ಕೆ ಈಶ್ವರಪ್ಪ ಕಾಲದ ನಿರೀಕ್ಷೆಯಲ್ಲಿದ್ದಾರೆ. ಹಾಗಂತ ನಗರದಲ್ಲಿ ಕೋಮುಗಲಭೆಯೆಂದೆ ಕರೆಯುತ್ತಿರುವ ಘಟನೆಗಳ ಹಿಂದೆ ಯಡಿಯೂರಪ್ಪ ಅವರಿಗೆ ಇಕ್ಕಟ್ಟು ತಂದಿಡುವ ಮತೀಯ ರಾಜಕಾರಣವಿದೆ ಎಂಬುದನ್ನು ಈಗಲೆ ನಿಖರವಾಗಿ ಹೇಳಲು ಬರುವುದಿಲ್ಲ. ಆದರೆ ಈಶ್ವರಪ್ಪ ಅವರ ಮಾತುಗಳು ಮಾತ್ರ ಕೋಮುಗಲಭೆಯ ಕಿಡಿಯನ್ನು ಹಚ್ಚುವ , ರಾಜಕೀಯ ಏಟುಗಳನ್ನು ಕೊಡುವ ಸೂಚನೆ ನೀಡುತ್ತಿಲ್ಲ ಎಂಬುದನ್ನು‌ ನಿರಾಕರಿಸಲಾಗದು.

  • ಎನ್‌. ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ; ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...