Homeಮುಖಪುಟಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕೀಯ ಕರ್ಮಕ್ಷೇತ್ರ ಶಿವಮೊಗ್ಗದಲ್ಲಿ ಶಾಂತಿ-ಸೌಹಾರ್ದತೆ ಕದಡುವ ಕೋಮು ರಾಜಕಾರಣ ಗರಿಬಿಚ್ಚಿದೆ. ಗುರುವಾರ ಬೆಳಗ್ಗೆ (ಡಿ.3) ಬಜರಂಗದಳದ ಕಾರ್ಯಕರ್ತ ನಾಗೇಶ್ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಈಗ ನಗರದಲ್ಲಿ ಕೋಮುಗಲಭೆಯ ಆತಂಕವನ್ನು ಸೃಷ್ಟಿಸಿದೆ. ಈ ಹಲ್ಲೆಯನ್ನು ಪ್ರತಿಭಟಿಸುವ ನೆಪದಲ್ಲಿ ಬಜರಂಗದಳ ಕಾರ್ಯಕರ್ತರು ಸಿನಿಮಾ ರಸ್ತೆಯಲ್ಲಿನ ಬಟ್ಟೆ ಮಾರ್ಕೆಟ್ ಗೆ ನುಗ್ಗಿ ಒಂದು ಕೋಮಿನ ಜನರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಕಾರವೆಂಬಂತೆ ಬೈಕ್ ನಲ್ಲಿ ಬಂದ ಮೂರ‍್ನಾಲ್ಕು ಜನ ಮುಸ್ಲಿಂ ಹುಡುಗರ ಗುಂಪೊಂದು ಮಾರಾಕಾಸ್ತ್ರಗಳಿಂದ ರವಿವರ್ಮ ಬೀದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋಗಳ ಗ್ಲಾಸ್ ಜಖಂ ಮಾಡಿ ಪರಾರಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ನಗರದಲ್ಲಿ ಕೋಮುಗಲಭೆ ವದಂತಿಗಳಿಗೆ ಕಾರಣವಾಗಿದ್ದು, ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿ ಬಂದಿದೆ. ಇಂತಹದ್ದೊಂದು ಸಂದರ್ಭಕ್ಕೆ ಕಾದು ಕುಳಿತಂತಿದ್ದ ಮತಿಗೇಡಿಗಳು ನಾಲಿಗೆ ಮಸೆದುಕೊಂಡು ಕೋಮುರಾಜಕಾರಣಕ್ಕೆ ಇಳಿದಿದ್ದಾರೆ.

ವಾಸ್ತವವಾಗಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರು ಯಾವ ಕೋಮಿನವರು ಮತ್ತು ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಇದುವರೆಗೂ ಪೊಲೀಸರ ತನಿಖೆಯಲ್ಲಿ ಕಂಡು ಬಂದಿಲ್ಲ. ಇದನ್ನು ಪೂರ್ವವಲಯ ಐಜಿಪಿ ರವಿ.ಎಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದರ ಸತ್ಯ ಬಯಲಾಗುವ ಮುಂಚೆಯೇ ಸಂಸದ ಬಿ.ವೈ ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಇದು ಹಿಂದೂ ವಿರೋಧಿಗಳ ಕೃತ್ಯ ಎಂದು ಸಾರಿಬಿಟ್ಟಿದ್ದಾರೆ. ನಾಗೇಶನ ಮೇಲೆ ನಡೆದ ಹಲ್ಲೆಗೆ ಪ್ರತಿಯಾಗಿ ಬಟ್ಟೆ ಮಾರ್ಕೆಟ್ ನಲ್ಲಿ ಬಜರಂಗದಳ ಕಾರ್ಯಕರ್ತರು ನಡೆಸಿದ ದಾಳಿಯೂ ಹಿಂದೂಗಳ ಪ್ರತಿಕಾರದ ಗೂಂಡಾಗಿರಿಯೇ ಆಗಿದೆ ಎಂದು ಈ ರಾಜ್ಯದ ಸಚಿವ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಅಲ್ಲಿಗೆ ಶಿವಮೊಗ್ಗದಲ್ಲೊಂದು ರಣರಂಗದ ದಳ್ಳುರಿಗೆ ಎಲ್ಲಾ ವೇದಿಕೆಯನ್ನು ಸಜ್ಜುಗೊಳಿಸುತ್ತಿರುವ ಆತಂಕ ಜನಸಾಮಾನ್ಯರ ನಿದ್ದೆಗೆಡಿಸಿದೆ.

ಕೊರೋನಾ ಸಂದರ್ಭದಲ್ಲೆ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಪ್ರಯತ್ನಗಳು ವಿಫಲವಾಗಿದ್ದವು. ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಷಡ್ಯಂತ್ರಗಳು ಅವರದ್ದೇ ಪಕ್ಷ ಪರಿವಾರದಿಂದ ನಡೆದಿತ್ತು ಎಂಬ ಗುಪ್ತಚರ ವರದಿಯೂ ಬಹಿರಂಗವಾಗಿತ್ತು. ಲಾಕ್ ಡೌನ್ ನಿಂದ ಗುಜರಾತ್‌ನಲ್ಲಿ ಸಿಲುಕಿಕೊಂಡಿದ್ದ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಏಳು ಜನ ತಬ್ಲಿಘಿಗಳನ್ನು ಖುದ್ದು ಮುಖ್ಯಮಂತ್ರಿಗಳೇ ವಿಶೇಷ ಬಸ್ಸಿನಲ್ಲಿ ಕರೆತರಿಸಿ ಶಿವಮೊಗ್ಗದಲ್ಲಿ ಕ್ವಾರಂಟೈನ್ ಗೊಳಪಡಿಸಿ ನಂತರ ಶಿಕಾರಿಪುರ ತಲುಪಿಸಿದ್ದರು. ರಾಜ್ಯದಲ್ಲಿ ತಬ್ಲಿಘಿಗಳ ವಿರುದ್ದ ಬಿಜೆಪಿ ಮತ್ತು ಪರಿವಾರದ ಸಂಘಟನೆಗಳು ದ್ವೇಷ ಹರಡುವಲ್ಲಿ ನಿರತರಾಗಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂತಹ ಪ್ರಚೋದನೆಗಳನ್ನು ಸಹಿಸುವುದಿಲ್ಲ. ಅಲ್ಪಸಂಖ್ಯಾತರ ಮೇಲೆ ದಾಳಿನಡೆದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿ ತಮ್ಮದೇ ಪಕ್ಷದವರ ಕೋಮುರಾಜಕಾರಣಕ್ಕೆ ಕಡಿವಾಣ ಹಾಕಿದ್ದರು. ಈ ಕಾರಣದಿಂದಾಗಿ ಹಿಂದೂ ಮತೀಯ ಸಂಘಟನೆಗಳಿಗೆ ಯಡಿಯೂರಪ್ಪ ಅಪಥ್ಯವಾಗಿ ಕಂಡಿದ್ದಾರೆ. ಬಹುಶಃ ಗುಪ್ತಚರ ವರದಿಯಂತೆ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಯ ಹುನ್ನಾರವನ್ನು ಯಡಿಯೂರಪ್ಪ ಅವರು ಬಗ್ಗುಬಡಿದಿದ್ದರು.

2010 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗಲೇ ಕನ್ನಡದ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನದಲ್ಲಿ ಬುರ್ಖಾ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ನೆಪದಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರೂ ಪೊಲೀಸರ ಗುಂಡಿಗೆ ಬಲಿಯಾಗಿ, ಹತ್ತಾರು ಜನ ಗಾಯಗೊಂಡು, ಲಕ್ಷಾಂತರ ರೂಪಾಯಿಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗುವುದರೊಂದಿಗೆ ಕೊನೆಗೊಂಡಿತ್ತು.

2015 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತವಿರುವಾಗ ನಗರದಲ್ಲಿ ವಿಶ್ವನಾಥ್ ಶೆಟ್ಟಿ ಎಂಬಾತನ ಕೊಲೆಯ ಹಿನ್ನಲೆಯಲ್ಲಿ ನಗರದಲ್ಲಿ ಕೋಮುಗಲಭೆ ನಡೆದಿದ್ದು, ಅಂದಿನ ಇನ್ಸ್‌ಪೆಕ್ಟರ್ ಮಂಜುನಾಥ್, ಡಿವೈಎಸ್ಪಿ ಪಿ.ಓ ಶಿವಕುಮಾರ್ ಅವರುಗಳು ವರ್ಗಾವಣೆಯ ತಲೆದಂಡಕ್ಕೆ ಗುರಿಯಾದರು. ತೀರ್ಥಹಳ್ಳಿಯಲ್ಲಿ ಬಾಲಕಿ ನಂದಿತ ಸಾವಿನ ಪ್ರಕರಣದಲ್ಲೂ ಕೋಮು ರಾಜಕಾರಣದ ದಳ್ಳುರಿಗೆ ತೀರ್ಥಹಳ್ಳಿ ಮತ್ತು ಅವತ್ತಿನ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೈರಾಣಾಗಿ ಹೋಗಿದ್ದರು.

ಇದೀಗ ಯಡಿಯೂರಪ್ಪನವರೆ ಮುಖ್ಯಮಂತ್ರಿಗಳಾಗಿರುವಾಗ ಶಿವಮೊಗ್ಗ ನಗರದಲ್ಲಿ ಮತ್ತೊಂದು ಸುತ್ತಿನ ಕೋಮುಗಲಭೆಯ ಆತಂಕ ಮನೆ ಮಾಡಿದೆ. ಘಟನೆ ನಡೆದ ಬೆನ್ನೆಲ್ಲೆ ತರಾತುರಿ ಎಂಬಂತೆ ಸಂಸದ ಬಿ.ವೈ ರಾಘವೇಂದ್ರ ಇದೊಂದು ಮುಸ್ಲಿಂ ಗುಂಪು ನಡೆಸಿದ ದಾಳಿ ಎಂದು ಹೇಳುವ ಮೂಲಕ ದುಡುಕಿದರೆ, ಇಂದು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಂದಿನಂತೆ ದ್ವೇಷದ ಮಾತುಗಳನ್ನಾಡಿದ್ದಾರೆ. ಮುಸ್ಲಿಂ ಗೂಂಡಾಗಳು ನಾಗೇಶನ ಮೇಲೆ ನಡೆಸಿದ ಹಲ್ಲೆಗೆ ಪ್ರತಿಯಾಗಿ ಹಿಂದೂಗಳು ಗೂಂಡಾಗಿರಿ ಮಾಡಿದ್ದಾರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲಿಗೆ ಎಲ್ಲವೂ ಸ್ಪಷ್ಟವಾಗಿದೆ. ನಗರದ ಜನತೆ ಆತಂಕದಿಂದ ದಿನದೂಡುವಂತಾಗಿದೆ.

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ. ಪೊಲೀಸ್ ವರಿಷ್ಟಾಧಿಕಾರಿಗಳಿಂದ ಠಾಣಾವ್ಯಾಪ್ತಿಯ ಕಾನ್ಸ್ಟೇಬಲ್ ವರೆಗೂ ಎಲ್ಲಾ ವರ್ಗಾವಣೆಗಳು ಬಿ.ವೈ ರಾಘವೇಂದ್ರ ನ ಮರ್ಜಿಯಲ್ಲೆ ನಡೆದಿವೆ. ಇದು ಈಶ್ವರಪ್ಪ ಅವರ ಅಸಹನೆಗೆ ಕಾರಣವಾಗಿದೆ. ಪ್ರತಿಕಾರಕ್ಕೆ ಈಶ್ವರಪ್ಪ ಕಾಲದ ನಿರೀಕ್ಷೆಯಲ್ಲಿದ್ದಾರೆ. ಹಾಗಂತ ನಗರದಲ್ಲಿ ಕೋಮುಗಲಭೆಯೆಂದೆ ಕರೆಯುತ್ತಿರುವ ಘಟನೆಗಳ ಹಿಂದೆ ಯಡಿಯೂರಪ್ಪ ಅವರಿಗೆ ಇಕ್ಕಟ್ಟು ತಂದಿಡುವ ಮತೀಯ ರಾಜಕಾರಣವಿದೆ ಎಂಬುದನ್ನು ಈಗಲೆ ನಿಖರವಾಗಿ ಹೇಳಲು ಬರುವುದಿಲ್ಲ. ಆದರೆ ಈಶ್ವರಪ್ಪ ಅವರ ಮಾತುಗಳು ಮಾತ್ರ ಕೋಮುಗಲಭೆಯ ಕಿಡಿಯನ್ನು ಹಚ್ಚುವ , ರಾಜಕೀಯ ಏಟುಗಳನ್ನು ಕೊಡುವ ಸೂಚನೆ ನೀಡುತ್ತಿಲ್ಲ ಎಂಬುದನ್ನು‌ ನಿರಾಕರಿಸಲಾಗದು.

  • ಎನ್‌. ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ; ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...