Homeಕರ್ನಾಟಕಕೋಮು ಪ್ರಚೋದನೆ: ತೇಜಸ್ವಿ ಸೂರ್ಯ ಹೇಳಿಕೆಗೆ ಬಿಜೆಪಿ ನಾಯಕರಲ್ಲಿ ಅಸಮಾಧಾನ

ಕೋಮು ಪ್ರಚೋದನೆ: ತೇಜಸ್ವಿ ಸೂರ್ಯ ಹೇಳಿಕೆಗೆ ಬಿಜೆಪಿ ನಾಯಕರಲ್ಲಿ ಅಸಮಾಧಾನ

- Advertisement -
- Advertisement -

ಬಿಜೆಪಿಯ ಯುವ ಘಟಕದ ಅಧ್ಯಕ್ಷ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ರಾಜಕೀಯ ಜೀವನವನ್ನು ವೃದ್ಧಿಸಿಕೊಳ್ಳಲು ಕೋಮು ಕೇಂದ್ರಿತ ಭಾಷಣಗಳನ್ನು ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅವರ ಕೆಲವು ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪಕ್ಷದ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರು ಉಡುಪಿಯ ಕೃಷ್ಣ ಮಠದಲ್ಲಿ ನಡೆದ ‘ವಿಶ್ವಾರ್ಪಣಮ್’ ಸಮಾರಂಭದಲ್ಲಿ ಮಾತನಾಡುತ್ತಾ, “ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿಯನ್ನು ನಿಗದಿ ಪಡಿಸಿ ಬೇರೆ ಧರ್ಮದವರನ್ನು ವಾಪಾಸ್ಸು ಹಿಂದೂ ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಮಾತ್ರವಲ್ಲ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ನಂತರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಭಾರಿ ವಿವಾದ ಸೃಷ್ಟಿಯಾಗಿತ್ತು. ತಮ್ಮ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ ತೇಜಸ್ವಿ ಸೂರ್ಯ, “ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದೆ. ತಪ್ಪಿಸಬಹುದಾಗಿದ್ದ ವಿವಾದವನ್ನು ಉಂಟುಮಾಡಿದ ನನ್ನ ಭಾಷಣದ ಕೆಲವು ಹೇಳಿಕೆಗಳಿಗಾಗಿ ವಿಷಾದಿಸುತ್ತೇನೆ. ಹಾಗಾಗಿ ಈ ಹೇಳಿಕೆಗಳನ್ನು ಬೇಷರತ್ತಾಗಿ ಹಿಂಪಡೆಯುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.

ಮುಂಬರುವ ಗೋವಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಹಿಂದೂ-ಕ್ರಿಶ್ಚಿಯನ್ ಮತಗಳ ಬಲವರ್ಧನೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ತೇಜಸ್ವಿ ಸೂರ್ಯ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಬರುತ್ತಿರುವ ಪ್ರತಿಕ್ರಿಯೆಗಳನ್ನು ಗಮನಿಸಿರುವ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಸೂರ್ಯ ಅವರು ತಮ್ಮ ಹಲವು ಕೋಮುವಾದಿ ಹೇಳಿಕೆಗಳಿಂದ ಬಿಜೆಪಿ ನಾಯಕರು ಮೌನವಹಿಸಿದ್ದರೂ ಇತ್ತೀಚೆಗೆ ಉಡುಪಿ ಮಠದಲ್ಲಿ ಅವರು ನೀಡಿದ್ದ ಹೇಳಿಕೆಗೆ ಸಮ್ಮತಿ ಸೂಚಿಸಿಲ್ಲ.

“ನಮ್ಮ ಪಕ್ಷವು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಪ್ರತಿಪಾದಿಸುತ್ತದೆ. ಪೇಜಾವರ ಮಠದಲ್ಲಿ ಅವರು ಹೇಳಿಕೆ ನೀಡಿದ್ದರು. ಸ್ವಾಮೀಜಿ ಹಿಂದೂ ಧರ್ಮದ ಪರವಾಗಿ ನಿಂತಿದ್ದರೂ, ಈ ಮಠವು ಎಲ್ಲರನ್ನೂ ಒಳಗೊಳ್ಳುವ ಸ್ವಭಾವ ಹೊಂದಿದೆ. ಮಠದ ವೇದಿಕೆಯನ್ನು ಬಳಸಿಕೊಂಡು ಹೇಳಿಕೆ ನೀಡಿದ್ದಕ್ಕೆ ಮಠದಲ್ಲಿಯೂ ಅಸಮಾಧಾನ ವ್ಯಕ್ತವಾಗಿದೆ ಎಂಬ ಭಾವನೆ ರಾಜ್ಯ ಬಿಜೆಪಿ ನಾಯಕರಲ್ಲಿದೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಸೂರ್ಯ ಅವರ ಹೇಳಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಲ್ಲಿ ಕೇಳಿದಾಗ, “ಇದಕ್ಕೆ ನನ್ನ ಯಾವುದೇ ಪ್ರತಿಕ್ರಿಯೆಗಳಿಲ್ಲ. ಸೂರ್ಯ ನಮ್ಮ ಪಕ್ಷದ ನಾಯಕ ಮತ್ತು ಅಂತಹ ಯಾವುದೇ ಸಮಸ್ಯೆ ಇದ್ದಾಗ, ನಾನು ನೇರವಾಗಿ ಅವರೊಂದಿಗೆ ಮಾತನಾಡುತ್ತೇನೆ, ಮಾಧ್ಯಮಗಳೊಂದಿಗೆ ಅಲ್ಲ” ಎಂದು ತಿಳಿಸಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನಿಕಟವರ್ತಿ ಎಂದೇ ಗುರುತಿಸಲಾಗಿರುವ ಸೂರ್ಯ ಅವರು ತಮ್ಮ ಕಾರ್ಯವೈಖರಿಯಿಂದ ಹಲವಾರು ರಾಜ್ಯ ನಾಯಕರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ರಾಜ್ಯ ನಾಯಕರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂಬಂತೆ ವರ್ತಿಸುತ್ತಾರೆ ಎಂದು ಕರ್ನಾಟಕ ಬಿಜೆಪಿ ನಾಯಕರೊಬ್ಬರು ಟೀಕಿಸಿದ್ದಾರೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...