Homeಕರ್ನಾಟಕಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ದೈವಗಳ ಕೈಯ್ಯಲ್ಲಿ ಇರುವುದು ‘ಸುರಿಯ’ ಹೊರತು, ತಲವಾರು ಅಲ್ಲ, ತಲವಾರು ಹಿಡಿಯುವುದು ರೌಡಿಗಳು ಮತ್ತು ದುಷ್ಟರು ಎಂದು ದೂರು ನೀಡಿರುವ ಚಿತ್ತರಂಜನ್‌ ಅವರು ಹೇಳಿದ್ದಾರೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶವೊಂದರಲ್ಲಿ, ಪ್ರಚೋದನಕಾರಿ ಮತ್ತು ಅಶ್ಲೀಲ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕುಂದಾಪುರ ಎಂಬವರ ಮೇಲೆ ಬುಧವಾರ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳವಾರ ನಡೆದ ಸಮಾವೇಶದಲ್ಲಿ ಚೈತ್ರ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು. ಇದರ ವಿರುದ್ದ ರಾಜ್ಯ ಕಾಂಗ್ರೆಸ್ ಸಂಯೋಜಕರಾದ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಚೈತ್ರ ಮತ್ತು ಕಾರ್ಯಕ್ರಮವನ್ನು ಸಂಘಟಿಸಿದವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ತರಂಜನ್ ಶೆಟ್ಟಿ ಅವರು, “ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ ಅಲ್ಲಿನ ಇನ್ಸ್‌‌ಪೆಕ್ಟರ್ ಮೊದಲಿಗೆ ದೂರು ಸ್ವೀಕರಿಸಲು ನಿರಾಕರಿಸಿ, ‘ದೂರು ನೀಡುವ ಅವಶ್ಯಕತೆಯಿಲ್ಲ, ಈ ಬಗ್ಗೆ ದೂರು ದಾಖಲಾಗಿದೆ. ಅದೇ ದೂರಿನಲ್ಲಿ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು. ಆದರೆ ನಾನು ಒತ್ತಾಯ ಮಾಡಿ ದೂರು ದಾಖಲು ಮಾಡಿದ್ದೇನೆ. ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ, ನಾಳೆ ಕಮೀಷನ್ ಅವರನ್ನು ಭೇಟಿ ಮಾಡಲಿದ್ದೇನೆ. ನಾನು ಹೋರಾಟವನ್ನು ಮುಂದುವರೆಸಲಿದ್ದು, ಮುಖ್ಯಮಂತ್ರಿ ತನಕ ತೆರಳಲಿದ್ದೇನೆ” ಎಂದು ಹೇಳಿದರು.

“ಸುರತ್ಕಲ್‌‌‌ 20 ವರ್ಷದ ಹಿಂದೆ ಕೋಮು ಗಲಭೆಯಿಂದ ನಲುಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಂಘಪರಿವಾರದವರು ಅದನ್ನು ಇನ್ನೊಮ್ಮೆ ಮರುಕಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ರಾಜಕೀಯ ಲಾಭ ತೆಗೆದುಕೊಂಡು ಇವರು ಇನ್ನೊಮ್ಮೆ ಶಾಸಕ, ಸಚಿವರಾಗಿ ಅಧಿಕಾರ ಹಿಡಿಯುತ್ತಾರೆ. ಆದರೆ ಬಡಪಾಯಿ ಶೂದ್ರರು, ದಲಿತರು ಕತ್ತಿ ಹಿಡಿದುಕೊಂಡು ಜೈಲು ಪಾಲಾಗುತ್ತಾರೆ, ಇದು ಇವರ ಅಜೆಂಡಾ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಭರತ್‌ ಶೆಟ್ಟಿ ಕೂಡಾ ಇದ್ದರು ಎಂಬ ಮಾಹಿತಿಯಿದೆ. ಒಬ್ಬ ಶಾಸಕರಾಗಿ ಇಂತಹ ವಿಷಯಗಳಿಗೆ ಅವರು ಬೆಂಬಲ ಕೊಡುತ್ತಾರೆ ಎಂದರೆ ನಾಚಿಕೆಗೇಡಿನ ಸಂಗತಿ ಎಂದು ಚಿತ್ತರಂಜನ್ ಶೆಟ್ಟಿ ಎಂದು ತಿಳಿಸಿದರು.

“ಕೋಟಿ ಚೆನ್ನಯ್ಯ ಅವರನ್ನು ಕೂಡಾ ಕಾರ್ಯಕ್ರಮದಲ್ಲಿ ಅವಮಾನಿಸಿದ್ದಾರೆ. ದೈವಗಳ ಕೈಯ್ಯಲ್ಲಿ ಇರುವುದು ಸುರಿಯ ಎಂಬ ಆಯುಧವೇ ಹೊರತು, ತಲವಾರು ಅಲ್ಲ. ತಲವಾರು ಹಿಡಿಯುವುದು ರೌಡಿಗಳು, ದುಷ್ಟರು. ತುಳುನಾಡಿನ ಮಹಾಪುರುಷರು ಹೋರಾಡಿದ್ದು ಆಗಿನ ಜಮೀನ್ದಾರಿ ವಿರುದ್ದವೆ ಹೊರತು ಮುಸ್ಲಿಮರ ವಿರುದ್ದ ಅಲ್ಲ. ಆದರೆ ಇವರು ದೈವಗಳ ಕುರಿತು ತಪ್ಪು ಕಲ್ಪನೆಯನ್ನು ಜನರ ತಲೆಗೆ ತುಂಬಿಸಿ ಕೋಮುಗಲಭೆಗೆ ಪ್ರಚೋದಿಸಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದನ್ನೂ ಓದಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಚಿತ್ರರಂಜನ್ ಅವರ ದೂರಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸುರತ್ಕಲ್ ಠಾಣೆಯ ಇನ್ಸ್‌ಪೆಕ್ಟರ್‌ ಚಂದ್ರಪ್ಪ ನಾಯಕ್, “ಮಂಗಳೂರಿಗೆ ನಾಳೆ ರಾಷ್ಟ್ರಪತಿ ಆಗಮಿಸುತ್ತಿರುವುದರಿಂದ ಈಗ ಅದರ ಬಂದೋಬಸ್ತಿನಲ್ಲಿ ಇದ್ದೇನೆ. ದೂರು ನೀಡಿದ್ದಾರೆ, ಇನ್ನೂ ಎಫ್‌ಐಆರ್‌ ಆಗಿಲ್ಲ, ಆಗಬಹುದು. ಠಾಣೆಗೆ ತೆರಳಿ ದೂರಿನ ಬಗ್ಗೆ ಪರಿಶೀಲಿಸುತ್ತೇನೆ” ಎಂದು ತಿಳಿಸಿದರು.

ಚೈತ್ರ ಕುಂದಾಪುರ ಅವರು ಮಂಗಳವಾರ ನಡೆದ ಸಭೆಯಲ್ಲಿ, “70% ದಷ್ಟು ಇರುವ ಹಿಂದೂಗಳು, ಮುಸ್ಲಿಂ ಹೆಣ್ಣು ಮಕ್ಕಳನ್ನು ಮತಾಂತರ ಮಾಡುವುದಕ್ಕೆ ಎರಡು ದಿನ ಸಾಕು. ಭಜರಂಗದಳದ ಕಾರ್ಯಕರ್ತರು ಮುಸ್ಲಿಂ ಹೆಣ್ಣು ಮಕ್ಕಳನ್ನು ಲವ್ ಮಾಡೋಕೆ ಹೊರಟರೆ, ಮುಸ್ಲಿಮರ ಮನೆಯಲ್ಲಿ ಬುರ್ಖಾ ಕಾಣುವುದಿಲ್ಲ. ಪ್ರತೀ ಮನೆಯ ಮುಸ್ಲಿಂ ಹೆಣ್ಣುಮಕ್ಕಳ ಹಣೆಗೆ ಕುಂಕುಮ ಇಟ್ಟು ಕರೆದುಕೊಂಡು ಬರುತ್ತೇವೆ. ನಮಗೆ ತಲವಾರು ಹಿಡಿಯಲು ಕಲಿಸಿದ್ದು ಕೋಟಿ ಚೆನ್ನಯ್ಯ..” ಎಂದು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಜೊತೆಗೆ, ಕಾಂಗ್ರೆಸ್‌ ನಾಯಕರೊಬ್ಬರ ಮಗಳನ್ನು ವೈಯಕ್ತಿವಾಗಿ ನಿಂದಿಸಿದ್ದರು.

ಸುರತ್ಕಲ್‌ನಲ್ಲಿ ಇತ್ತೀಚೆಗೆ, ಕಾರಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದರು. ಘಟನೆ ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಐವರನ್ನು ಬಂಧಿಸಲಾಗಿತ್ತು. ಆದರೆ ಅವರಿಗೆ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಲಾಗಿತ್ತು. ಇದನ್ನು ಕೂಡಾ ಸಾರ್ವಜನಿಕರು ಪ್ರಶ್ನಿಸಿದ್ದರು. ಆದರೆ ಬಜರಂಗದಳ ಈ ಘಟನೆಯನ್ನು ಬೆಂಬಲಿಸಿ ಮಂಗಳವಾರ ಸಮಾವೇಶವನ್ನು ನಡೆಸಿತ್ತು. ಇದರಲ್ಲಿ ಚೈತ್ರ ಕುಂದಾಪುರ ಅವರು ಭಾಷಣ ಮಾಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...