Homeಕರ್ನಾಟಕಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ದೈವಗಳ ಕೈಯ್ಯಲ್ಲಿ ಇರುವುದು ‘ಸುರಿಯ’ ಹೊರತು, ತಲವಾರು ಅಲ್ಲ, ತಲವಾರು ಹಿಡಿಯುವುದು ರೌಡಿಗಳು ಮತ್ತು ದುಷ್ಟರು ಎಂದು ದೂರು ನೀಡಿರುವ ಚಿತ್ತರಂಜನ್‌ ಅವರು ಹೇಳಿದ್ದಾರೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶವೊಂದರಲ್ಲಿ, ಪ್ರಚೋದನಕಾರಿ ಮತ್ತು ಅಶ್ಲೀಲ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕುಂದಾಪುರ ಎಂಬವರ ಮೇಲೆ ಬುಧವಾರ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳವಾರ ನಡೆದ ಸಮಾವೇಶದಲ್ಲಿ ಚೈತ್ರ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು. ಇದರ ವಿರುದ್ದ ರಾಜ್ಯ ಕಾಂಗ್ರೆಸ್ ಸಂಯೋಜಕರಾದ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಚೈತ್ರ ಮತ್ತು ಕಾರ್ಯಕ್ರಮವನ್ನು ಸಂಘಟಿಸಿದವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ತರಂಜನ್ ಶೆಟ್ಟಿ ಅವರು, “ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ ಅಲ್ಲಿನ ಇನ್ಸ್‌‌ಪೆಕ್ಟರ್ ಮೊದಲಿಗೆ ದೂರು ಸ್ವೀಕರಿಸಲು ನಿರಾಕರಿಸಿ, ‘ದೂರು ನೀಡುವ ಅವಶ್ಯಕತೆಯಿಲ್ಲ, ಈ ಬಗ್ಗೆ ದೂರು ದಾಖಲಾಗಿದೆ. ಅದೇ ದೂರಿನಲ್ಲಿ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು. ಆದರೆ ನಾನು ಒತ್ತಾಯ ಮಾಡಿ ದೂರು ದಾಖಲು ಮಾಡಿದ್ದೇನೆ. ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ, ನಾಳೆ ಕಮೀಷನ್ ಅವರನ್ನು ಭೇಟಿ ಮಾಡಲಿದ್ದೇನೆ. ನಾನು ಹೋರಾಟವನ್ನು ಮುಂದುವರೆಸಲಿದ್ದು, ಮುಖ್ಯಮಂತ್ರಿ ತನಕ ತೆರಳಲಿದ್ದೇನೆ” ಎಂದು ಹೇಳಿದರು.

“ಸುರತ್ಕಲ್‌‌‌ 20 ವರ್ಷದ ಹಿಂದೆ ಕೋಮು ಗಲಭೆಯಿಂದ ನಲುಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಂಘಪರಿವಾರದವರು ಅದನ್ನು ಇನ್ನೊಮ್ಮೆ ಮರುಕಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ರಾಜಕೀಯ ಲಾಭ ತೆಗೆದುಕೊಂಡು ಇವರು ಇನ್ನೊಮ್ಮೆ ಶಾಸಕ, ಸಚಿವರಾಗಿ ಅಧಿಕಾರ ಹಿಡಿಯುತ್ತಾರೆ. ಆದರೆ ಬಡಪಾಯಿ ಶೂದ್ರರು, ದಲಿತರು ಕತ್ತಿ ಹಿಡಿದುಕೊಂಡು ಜೈಲು ಪಾಲಾಗುತ್ತಾರೆ, ಇದು ಇವರ ಅಜೆಂಡಾ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಭರತ್‌ ಶೆಟ್ಟಿ ಕೂಡಾ ಇದ್ದರು ಎಂಬ ಮಾಹಿತಿಯಿದೆ. ಒಬ್ಬ ಶಾಸಕರಾಗಿ ಇಂತಹ ವಿಷಯಗಳಿಗೆ ಅವರು ಬೆಂಬಲ ಕೊಡುತ್ತಾರೆ ಎಂದರೆ ನಾಚಿಕೆಗೇಡಿನ ಸಂಗತಿ ಎಂದು ಚಿತ್ತರಂಜನ್ ಶೆಟ್ಟಿ ಎಂದು ತಿಳಿಸಿದರು.

“ಕೋಟಿ ಚೆನ್ನಯ್ಯ ಅವರನ್ನು ಕೂಡಾ ಕಾರ್ಯಕ್ರಮದಲ್ಲಿ ಅವಮಾನಿಸಿದ್ದಾರೆ. ದೈವಗಳ ಕೈಯ್ಯಲ್ಲಿ ಇರುವುದು ಸುರಿಯ ಎಂಬ ಆಯುಧವೇ ಹೊರತು, ತಲವಾರು ಅಲ್ಲ. ತಲವಾರು ಹಿಡಿಯುವುದು ರೌಡಿಗಳು, ದುಷ್ಟರು. ತುಳುನಾಡಿನ ಮಹಾಪುರುಷರು ಹೋರಾಡಿದ್ದು ಆಗಿನ ಜಮೀನ್ದಾರಿ ವಿರುದ್ದವೆ ಹೊರತು ಮುಸ್ಲಿಮರ ವಿರುದ್ದ ಅಲ್ಲ. ಆದರೆ ಇವರು ದೈವಗಳ ಕುರಿತು ತಪ್ಪು ಕಲ್ಪನೆಯನ್ನು ಜನರ ತಲೆಗೆ ತುಂಬಿಸಿ ಕೋಮುಗಲಭೆಗೆ ಪ್ರಚೋದಿಸಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದನ್ನೂ ಓದಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಚಿತ್ರರಂಜನ್ ಅವರ ದೂರಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸುರತ್ಕಲ್ ಠಾಣೆಯ ಇನ್ಸ್‌ಪೆಕ್ಟರ್‌ ಚಂದ್ರಪ್ಪ ನಾಯಕ್, “ಮಂಗಳೂರಿಗೆ ನಾಳೆ ರಾಷ್ಟ್ರಪತಿ ಆಗಮಿಸುತ್ತಿರುವುದರಿಂದ ಈಗ ಅದರ ಬಂದೋಬಸ್ತಿನಲ್ಲಿ ಇದ್ದೇನೆ. ದೂರು ನೀಡಿದ್ದಾರೆ, ಇನ್ನೂ ಎಫ್‌ಐಆರ್‌ ಆಗಿಲ್ಲ, ಆಗಬಹುದು. ಠಾಣೆಗೆ ತೆರಳಿ ದೂರಿನ ಬಗ್ಗೆ ಪರಿಶೀಲಿಸುತ್ತೇನೆ” ಎಂದು ತಿಳಿಸಿದರು.

ಚೈತ್ರ ಕುಂದಾಪುರ ಅವರು ಮಂಗಳವಾರ ನಡೆದ ಸಭೆಯಲ್ಲಿ, “70% ದಷ್ಟು ಇರುವ ಹಿಂದೂಗಳು, ಮುಸ್ಲಿಂ ಹೆಣ್ಣು ಮಕ್ಕಳನ್ನು ಮತಾಂತರ ಮಾಡುವುದಕ್ಕೆ ಎರಡು ದಿನ ಸಾಕು. ಭಜರಂಗದಳದ ಕಾರ್ಯಕರ್ತರು ಮುಸ್ಲಿಂ ಹೆಣ್ಣು ಮಕ್ಕಳನ್ನು ಲವ್ ಮಾಡೋಕೆ ಹೊರಟರೆ, ಮುಸ್ಲಿಮರ ಮನೆಯಲ್ಲಿ ಬುರ್ಖಾ ಕಾಣುವುದಿಲ್ಲ. ಪ್ರತೀ ಮನೆಯ ಮುಸ್ಲಿಂ ಹೆಣ್ಣುಮಕ್ಕಳ ಹಣೆಗೆ ಕುಂಕುಮ ಇಟ್ಟು ಕರೆದುಕೊಂಡು ಬರುತ್ತೇವೆ. ನಮಗೆ ತಲವಾರು ಹಿಡಿಯಲು ಕಲಿಸಿದ್ದು ಕೋಟಿ ಚೆನ್ನಯ್ಯ..” ಎಂದು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಜೊತೆಗೆ, ಕಾಂಗ್ರೆಸ್‌ ನಾಯಕರೊಬ್ಬರ ಮಗಳನ್ನು ವೈಯಕ್ತಿವಾಗಿ ನಿಂದಿಸಿದ್ದರು.

ಸುರತ್ಕಲ್‌ನಲ್ಲಿ ಇತ್ತೀಚೆಗೆ, ಕಾರಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದರು. ಘಟನೆ ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಐವರನ್ನು ಬಂಧಿಸಲಾಗಿತ್ತು. ಆದರೆ ಅವರಿಗೆ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಲಾಗಿತ್ತು. ಇದನ್ನು ಕೂಡಾ ಸಾರ್ವಜನಿಕರು ಪ್ರಶ್ನಿಸಿದ್ದರು. ಆದರೆ ಬಜರಂಗದಳ ಈ ಘಟನೆಯನ್ನು ಬೆಂಬಲಿಸಿ ಮಂಗಳವಾರ ಸಮಾವೇಶವನ್ನು ನಡೆಸಿತ್ತು. ಇದರಲ್ಲಿ ಚೈತ್ರ ಕುಂದಾಪುರ ಅವರು ಭಾಷಣ ಮಾಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...