Homeಮುಖಪುಟಭಾರತದಲ್ಲಿ ಕೋಮು ಗಲಭೆ | 2024 ರಲ್ಲಿ 84% ಏರಿಕೆ - ವರದಿ

ಭಾರತದಲ್ಲಿ ಕೋಮು ಗಲಭೆ | 2024 ರಲ್ಲಿ 84% ಏರಿಕೆ – ವರದಿ

- Advertisement -
- Advertisement -

ಭಾರತದಲ್ಲಿ 2024 ರ ವೇಳೆಗೆ 59 ಕೋಮು ಗಲಭೆಗಳು ಸಂಭವಿಸಿವೆ ಎಂದು ಸೆಂಟರ್ ಫಾರ್ ಸ್ಟಡಿ ಆಫ್ ಸೊಸೈಟಿ ಅಂಡ್ ಸೆಕ್ಯುಲರಿಸಂನ ಹೊಸ ವರದಿ ತಿಳಿಸಿದೆ. 2023 ರಲ್ಲಿ ದೇಶದಲ್ಲಿ 32 ಅಂತಹ ಘಟನೆಗಳು ವರದಿಯಾಗಿದ್ದವು ಎಂದು ಹೇಳಿದ್ದು, ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ ಕೋಮುಗಲಭೆಗಳು 84% ಹೆಚ್ಚಾಗಿವೆ ಎಂದು ವರದಿಗಳು ಸೂಚಿಸಿವೆ. ಭಾರತದಲ್ಲಿ ಕೋಮು ಗಲಭೆ

ಹೆಜೆಮನಿ ಅಂಡ್ ಡೆಮೋಲಿಷನ್ಸ್: ದಿ ಟೇಲ್ ಆಫ್ ಕಮ್ಯುನಲ್ ರಾಯಿಟ್ಸ್ ಇನ್ ಇಂಡಿಯಾ ಇನ್ 2024 ಎಂಬ ಶೀರ್ಷಿಕೆಯ ವರದಿಯನ್ನು ಮಾನವ ಹಕ್ಕುಗಳ ಹೋರಾಟಗಾರರಾದ ಇರ್ಫಾನ್ ಎಂಜಿನಿಯರ್, ನೇಹಾ ದಭಾಡೆ ಮತ್ತು ಮಿಥಿಲಾ ರಾವತ್ ಬರೆದಿದ್ದಾರೆ. ಅವರ ಸಂಶೋಧನೆಗಳು ದಿ ಹಿಂದೂ, ದಿ ಟೈಮ್ಸ್ ಆಫ್ ಇಂಡಿಯಾ, ದಿ ಇಂಡಿಯನ್ ಎಕ್ಸ್‌ಪ್ರೆಸ್, ಶಹಾಫತ್ ಮತ್ತು ದಿ ಇಂಕ್ವಿಲಾಬ್ ಎಂಬ ಐದು ಪತ್ರಿಕೆಗಳ ಮುಂಬೈ ಆವೃತ್ತಿಗಳ ವರದಿಗಳನ್ನು ಆಧರಿಸಿವೆ. ಭಾರತದಲ್ಲಿ ಕೋಮು ಗಲಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗೃಹ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಭಾರತದಲ್ಲಿ ಕೋಮು ಗಲಭೆಗಳ ಸಮಗ್ರ ದಾಖಲೆಗಳನ್ನು ನಿರ್ವಹಿಸುತ್ತವೆ. ಆದರೆ ಅದರ ಡೇಟಾವನ್ನು ನಿಯಮಿತವಾಗಿ ಪ್ರಕಟಿಸುವುದನ್ನು ನಿಲ್ಲಿಸಿವೆ” ಎಂದು ಲೇಖಕರು ಹೇಳಿದ್ದಾರೆ.

ವರದಿಯ ಪ್ರಕಾರ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೋಮು ಗಲಭೆಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು 59 ರಲ್ಲಿ 12 ಕೋಮುಗಲಭೆಗಳು ನಡೆದಿದ್ದರೆ, ಇದರ ನಂತರ ಉತ್ತರ ಪ್ರದೇಶ ಮತ್ತು ಬಿಹಾರ ತಲಾ ಏಳು ಗಲಭೆಗಳು ವರದಿಯಾಗಿವೆ. ಈ ಗಲಭೆಗಳಲ್ಲಿ 13 ಜನರ ಸಾವಿಗೀಡಾಗಿದ್ದು, ಅದರಲ್ಲಿ 10 ಜನರು ಮುಸ್ಲಿಮರು ಮತ್ತು ಮೂವರು ಹಿಂದೂಗಳಾಗಿದ್ದಾರೆ ಎಂದು ವರದಿ ಉಲ್ಲೇಖಿಸಿವೆ.

“2024 ರಲ್ಲಿ ಭಾರತದಲ್ಲಿ ಕೋಮು ಗಲಭೆಗಳ ಸಂಖ್ಯೆಯಲ್ಲಿನ ಹೆಚ್ಚಳಕ್ಕೆ 2024 ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗಳು ಭಾಗಶಃ ಕಾರಣವೆಂದು ಹೇಳಬಹುದು” ಎಂದು ವರದಿ ಎತ್ತತೋರಿಸಿದೆ. ಹೆಚ್ಚಿನ ಕೋಮು ಗಲಭೆಗಳು (59 ಕೋಮುಗಲಭೆಗಳಲ್ಲಿ 26 ಗಲಭೆಗಳು) ಧಾರ್ಮಿಕ ಹಬ್ಬಗಳು ಅಥವಾ ಮೆರವಣಿಗೆಗಳ ಸಮಯದಲ್ಲಿ ಪ್ರಚೋದಿಸಲ್ಪಟ್ಟವು ಎಂದು ಅದು ಹೇಳಿದೆ. ಇದರಲ್ಲಿ ನಾಲ್ಕು ಗಲಭೆಗಳು ಜನವರಿ 2024 ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯ ದಿನದಂದು ನಡೆದಿದೆ.

ಸರಸ್ವತಿ ಪೂಜೆಯ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಏಳು ಗಲಭೆಗಳು ನಡೆದಿದ್ದರೆ, ಗಣೇಶ ಹಬ್ಬದ ಸಮಯದಲ್ಲಿ ನಾಲ್ಕು ಮತ್ತು ಬಕ್ರೀದ್ ಸಮಯದಲ್ಲಿ ಎರಡು ಗಲಭೆಗಳು ವರದಿಯಾಗಿವೆ. “ಈ ದತ್ತಾಂಶವು ಧಾರ್ಮಿಕ ಆಚರಣೆಗಳನ್ನು ಕೋಮು ಉದ್ವಿಗ್ನತೆ ಮತ್ತು ರಾಜಕೀಯಗೊಳಿಸುವಿಕೆ ಹೇಗೆ ಹೆಚ್ಚಾಗಿ ಬಳಸಲಾಗುತ್ತಿದೆ ಎಂಬುದನ್ನು ಎತ್ತಿ ತೋರಿಸುತ್ತದೆ” ಎಂದು ವರದಿಗಳು ತಿಳಿಸಿವೆ.

ಒಟ್ಟು ಆರು ಘಟನೆಗಳು ವಿವಾದಿತ ಪೂಜಾ ಸ್ಥಳಗಳಿಗೆ ಸಂಬಂಧಿಸಿವೆ ಎಂದು ವರದಿ ಹೇಳಿದೆ. ಬಿಜೆಪಿ ಪರ ಉಗ್ರ ಗುಂಪುಗಳು ಮಸೀದಿಗಳು ಮತ್ತು ದರ್ಗಾಗಳನ್ನು ಕಾನೂನುಬಾಹಿರ ಅಥವಾ ಹಿಂದೂ ಧಾರ್ಮಿಕ ಸ್ಥಳಗಳನ್ನು ಕೆಡವಿ ಕಟ್ಟಲಾಗಿದೆ ಎಂಬ ಅರೋಪಗಳು ಬಂದ ನಂತರ ಈ ಗಲಭೆ ನಡೆದಿದೆ ಎಂದು ವರದಿ ಹೇಳಿದೆ.

ವಾರಣಾಸಿಯ ಜ್ಞಾನವಾಪಿ ಮಸೀದಿ, ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಜೌನ್‌ಪುರದ ಅತಲಾ ಮಸೀದಿ ಸೇರಿದಂತೆ 10 ಮಸೀದಿಗಳು ಮತ್ತು ದೇವಾಲಯಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ ನ್ಯಾಯಾಲಯಗಳಲ್ಲಿ ಕನಿಷ್ಠ 18 ಮೊಕದ್ದಮೆಗಳು ಬಾಕಿ ಉಳಿದಿವೆ. ಪ್ರಾಚೀನ ಹಿಂದೂ ದೇವಾಲಯಗಳನ್ನು ಕೆಡವಿ ಈ ಮಸೀದಿಗಳನ್ನು ನಿರ್ಮಿಸಲಾಗಿದೆ ಎಂದು ಪ್ರಕರಣ ದಾಖಲಿಸಿರುವ ಬಿಜೆಪಿ ಬೆಂಬಲಿಗರು ಹೇಳಿಕೊಂಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಕೋಮು ಗಲಭೆಗಳ ಪ್ರಕರಣಗಳಲ್ಲಿ ಸರ್ಕಾರವು “ಮುಸ್ಲಿಂ ಸಮುದಾಯವನ್ನು ಅಸಮಾನವಾಗಿ ಗುರಿಯಾಗಿಸಿಕೊಂಡಿದೆ” ಎಂಬ ಪ್ರವೃತ್ತಿಯನ್ನು ಗಮನಿಸಿದ್ದೇವೆ ಎಂದು ಲೇಖಕರು ಹೇಳಿದ್ದಾರೆ. “ಈ ಕ್ರಮಗಳಲ್ಲಿ ಮುಸ್ಲಿಮರ ಒಡೆತನದ ಆಸ್ತಿಗಳನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸುವುದು ಗಮನಾರ್ಹ ಆರ್ಥಿಕ ಹಾನಿಯನ್ನುಂಟುಮಾಡುತ್ತದೆ. ಹೆಚ್ಚುವರಿಯಾಗಿ, ರಾಜ್ಯ ಸರ್ಕಾರವು ಪ್ರಕರಣಗಳನ್ನು ದಾಖಲಿಸಿದ್ದು, ಮುಸ್ಲಿಂ ಸಮುದಾಯದ ಸದಸ್ಯರನ್ನು ಕೋಮು ಗಲಭೆಗಳ ಸಮಯದಲ್ಲಿ ಹಿಂಸಾಚಾರಕ್ಕೆ ಬಲಿಯಾದ ಸಂದರ್ಭಗಳಲ್ಲಿಯೂ ಸಹ ಅವರನ್ನು ಸಿಲುಕಿಸಿದೆ.” ಎಂದು ಹೇಳಿದ್ದಾರೆ.

ಸೆಪ್ಟೆಂಬರ್ ವರೆಗೆ, ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂಬ ಹೇಳಿಕೆಗಳನ್ನು ಬಳಸಿಕೊಂಡು ಮಹಾರಾಷ್ಟ್ರದಲ್ಲಿ ಕೋಮು ಘರ್ಷಣೆಗಳು ನಡೆದ ಪ್ರದೇಶದಲ್ಲಿ ಮುಸ್ಲಿಮರಿಗೆ ಸೇರಿದ 19 ಆಸ್ತಿಗಳನ್ನು, ದೆಹಲಿಯಲ್ಲಿ ಮಸೀದಿ, ಉತ್ತರಾಖಂಡದಲ್ಲಿ ಮದರಸಾ, ಅಸ್ಸಾಂನಲ್ಲಿ ಸಾವಿರಾರು ಬಂಗಾಳಿ ಮೂಲದ ಮುಸ್ಲಿಮರ ತಾತ್ಕಾಲಿಕ ಮನೆಗಳನ್ನು, ಮಧ್ಯಪ್ರದೇಶದಲ್ಲಿ ಗೋಮಾಂಸ ಕಳ್ಳಸಾಗಣೆದಾರರೆಂದು ಹೇಳಲಾಗುವ 11 ಮನೆಗಳನ್ನು ಮತ್ತು ರಾಜಸ್ಥಾನದಲ್ಲಿ ತನ್ನ ಹಿಂದೂ ಸಹಪಾಠಿಯನ್ನು ಇರಿದ ಆರೋಪ ಹೊತ್ತಿರುವ ಮುಸ್ಲಿಂ ಹದಿಹರೆಯದವರ ಬಾಡಿಗೆ ಮನೆಯನ್ನು ಕೆಡವಲಾಗಿದೆ ಎಂದು ಸ್ಕ್ರಾಲ್ ವರದಿ ಮಾಡಿದೆ.

ಹೆಚ್ಚುವರಿಯಾಗಿ, 2024 ರಲ್ಲಿ 13 ಗುಂಪು ಹತ್ಯೆ ಪ್ರಕರಣಗಳು ನಡೆದಿದ್ದು, ಇದರಿಂದಾಗಿ 11 ಸಾವುಗಳು ಸಂಭವಿಸಿವೆ – ಒಂದು ಹಿಂದೂ, ಒಂದು ಕ್ರಿಶ್ಚಿಯನ್ ಮತ್ತು ಒಂಬತ್ತು ಮುಸ್ಲಿಮರು. “2023 ರಲ್ಲಿ ದಾಖಲಾದ 21 ಗುಂಪು ಹತ್ಯೆ ಘಟನೆಗಳಿಗೆ ಹೋಲಿಸಿದರೆ ಇದು ಇಳಿಕೆಯನ್ನು ಸೂಚಿಸುತ್ತದೆಯಾದರೂ, ಅಂತಹ ದಾಳಿಗಳು ನಿರಂತರವಾಗಿ ಸಂಭವಿಸುತ್ತಿರುವುದು ಗಂಭೀರ ಕಳವಳಕಾರಿ ಘಟನೆಗಳಾಗಿವೆ” ಎಂದು ವರದಿ ಹೇಳಿದೆ.

ಒಟ್ಟು ಏಳು ಗುಂಪು ಹತ್ಯೆ ಪ್ರಕರಣಗಳು ಗೋ ಜಾಗೃತಿ ಅಥವಾ ಗೋಹತ್ಯೆಯ ಆರೋಪಗಳಿಗೆ ಸಂಬಂಧಿಸಿವೆ. ಆದರೆ ಉಳಿದವುಗಳಿಗೆ ಅಂತರ್ಧರ್ಮ ಸಂಬಂಧಗಳ ಆರೋಪಗಳು ಮತ್ತು ಮುಸ್ಲಿಮರನ್ನು ಅವರ ಧಾರ್ಮಿಕ ಗುರುತಿಗಾಗಿ ಗುರಿಯಾಗಿಸಿಕೊಂಡು ನಡೆದ ಹಲ್ಲೆಗಳು ಕಾರಣ ಎಂದು ವರದಿ ಹೇಳಿದೆ.

ಇದನ್ನೂಓದಿ:  ಕೇರಳ| ಹುಲಿ ದಾಳಿಯಿಂದ ಮಹಿಳೆ ಸಾವು; ಮಾನಂತವಾಡಿಯಲ್ಲಿ 48 ಗಂಟೆಗಳ ಕರ್ಫ್ಯೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...