Homeಮುಖಪುಟಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ನಿಮ್ಮ ಪಕ್ಷದ ಶಾಸಕರು, ನಿಮ್ಮೆದುರೆ ಆ ಕೋಮುವಾದಿ ಹೇಳಿಕೆಗಳನ್ನು ನೀಡುವುದಕ್ಕೆ ನೀವು ಹೇಗೆ ಅವಕಾಶ ಕೊಟ್ಟಿರಿ? ನೀವು ಅದಕ್ಕೆ ಜವಾಬ್ದಾರರಲ್ಲವೇ?

- Advertisement -
- Advertisement -

ಕಳೆದ ವಾರ ಬಿಬಿಎಂಪಿ ಕೋವಿಡ್ ವಾರ್‌ ರೂಂನಲ್ಲಿ ಕೆಲಸ ಮಾಡುವ 205 ಜನರಲ್ಲಿ ಕೇವಲ 17 ಜನ ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಅವರ ಹೆಸರನ್ನು ಓದುವ ಮೂಲಕ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಸದ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಶಾಸಕರು ಕೋಮು ಆಯಾಮ ನೀಡಿ ವಿವಾದಕ್ಕೆ ಒಳಗಾಗಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ನೇರ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರರಾದ ಘಟನೆ ಸಂಭವಿಸಿದೆ.

ಕಳೆದ ವಾರ ಸಂಸದ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಶಾಸಕರು ಬಿಬಿಎಂಪಿ ಕೋವಿಡ್ ವಾರ್‌ ರೂಂ ಮೇಲೆ ದಾಳಿ ನಡೆಸಿದ್ದರು. 205 ಜನರಲ್ಲಿ ಕೇವಲ 17 ಜನ ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಅವರ ಹೆಸರನ್ನು ಓದಿದ ಸಂಸದ “ಇವರೆಲ್ಲಾ ಯಾರು? ಮೂರು ಶಿಪ್ಟ್‌ಗಳಲ್ಲಿ ಈ 17 ಜನರ ಹೆಸರಿದೆ, ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಳ್ಳಲಾಯಿತು? ಈ ಜನರು ಯಾರು” ಎಂದು ಪ್ರಶ್ನಿಸಿದ್ದರು. ತೇಜಸ್ವಿ ಸೂರ್ಯರವರ ಚಿಕ್ಕಪ್ಪ ಮತ್ತು ಬಸವನಗುಡಿ ಬಿಜೆಪಿ ಶಾಸಕ ಎಲ್. ಎ. ರವಿಸುಬ್ರಮಣ್ಯ “ನೀವೇನು ಮದರಾಸಗೆ ನೇಮಕಾತಿ ಮಾಡುತ್ತಿದ್ದೀರೊ ಇಲ್ಲ, ಕಾರ್ಪೋರೇಷನ್‌ಗೋ?” ಎಂದು ಪ್ರಶ್ನಿಸಿದ್ದರು. ಮತ್ತೊಬ್ಬ ಬಿಜೆಪಿ ಶಾಸಕ ಸತೀಶ್ ರೆಡ್ಡಿ “ಇವರ್ಯಾರು ಮೇಡಂ, ಇವರನ್ನು ಹೇಗೆ ನೇಮಕ ಮಾಡಲಾಯಿತು? ಹಜ್ ಸಮಿತಿಗೆ ನೇಮಕ ಮಾಡುವ ಹಾಗೆ ಈ 17 ಜನರನ್ನು ನೇಮಕ ಮಾಡಿದ್ದೀರಾ ಹೇಗೆ?” ಎಂದು ಕೂಗಾಡಿದ್ದರು.

ತದನಂತರ ಆ 17 ಜನ ಮುಸ್ಲಿಂ ಯುವಕರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು ಮತ್ತು ಅವರನ್ನು ಎರಡು ಬಾರಿ ಜಯನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು.

“ಅವರ ಮೇಲೆ ಯಾವುದೇ ಕ್ರಿಮಿಲಾಟಿಯನ್ನು ನಾನು ಹೂಡಿಲ್ಲ. ಅವರು ತಪ್ಪಿತಸ್ಥರೆಂದು ಅಧಿಕಾರಿಗಳು ಕೂಡ ಹೇಳಿಲ್ಲ. ಏಜೆನ್ಸಿ ಜೊತೆಗೆ ಕೆಲಸ ಮಾಡುವ ಗುತ್ತಿಗೆ ನೌಕರರು ಅವರು. ಅವರನ್ನು ಕೆಲಸಕ್ಕೆ ನೇಮಕ ಮಾಡುವುದಾಗಿ, ತೆಗೆದುಹಾಕುವುದಾಗಲಿ ತೇಜಸ್ವಿ ಸೂರ್ಯ ಆಗಲಿ, ಶಾಸಕರಾಗಲಿ ಮಾಡುವ ಕೆಲಸ ಅಲ್ಲ. ಬಿಬಿಎಂಪಿ ಮಾಡುವ ಕೆಲಸ ಅದು. ಅವರನ್ನು ಏಕೆ ತೆಗೆದುಹಾಕಿದರು ಎಂಬುದನ್ನು ಬಿಬಿಎಂಪಿಯವರಲ್ಲಿ ಕೇಳಿ” ಎಂದು ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹಾಗಾದರೆ ನೀವು 206 ಜನರ ಲಿಸ್ಟ್‌ನಲ್ಲಿ ಆ 17 ಮುಸ್ಲಿಮರ ಹೆಸರನ್ನು ಮಾತ್ರ ಓದಿದ್ದು ಏಕೆ ಎಂಬ ಪ್ರಶ್ನೆಗೆ “ಆ ಲಿಸ್ಟ್‌ನಲ್ಲಿ ಯಾರ ಹೆಸರಿದ್ದರೂ ನಾನು ಓದುತ್ತಿದ್ದೆ. ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಂಡಿರಿ ಎಂದು ಕೇಳಿದೆ. ನನಗೆ ಕೊಟ್ಟ ಲಿಸ್ಟ್‌ನಲ್ಲಿ ಅವರ ಹೆಸರು ಮಾತ್ರ ಇದ್ದವು. ನಂಬುವವರು ನಂಬಬಹುದು, ಬಿಡುವವರು ಬಿಡಬಹುದು” ಎಂದು ಹಾರಿಕೆಯ ಉತ್ತರ ನೀಡಿದರು.

ಹಾಗಾದರೆ ಅವರನ್ನು ಕೆಲಸದಿಂದ ಏಕೆ ತೆಗೆಯಲಾಯಿತು ಎಂಬ ಪ್ರಶ್ನೆಗೆ “ನಾನು ಅದನ್ನೇ ಕೇಳುತ್ತಿದ್ದೇನೆ. ನನಗೆ ಕೊಟ್ಟ ಪಟ್ಟಿ ಓದಿದೆ ಅಷ್ಟೇ. ಅವರನ್ನು ಏಕೆ, ಹೇಗೆ ನೇಮಕ ಮಾಡಿಕೊಳ್ಳಲಾಯಿತು? ಯಾವ ವಿಧಾನ ಅನುಸರಿಸಲಾಯಿತು ಎಂದು ಕೇಳಿದ್ದೇನೆ. ವಿಡಿಯೋ ಇದೆ ನೋಡಿ. ಏಕೆ 17 ಜನರನ್ನು ಪಟ್ಟಿ ಮಾಡಲಾಯಿತು ಎಂಬುದನ್ನು ನೀವು ಅಧಿಕಾರಿಗಳನ್ನು ಕೇಳಬೇಕು” ಎಂದರು.

ಆ ಸಂದರ್ಭದಲ್ಲಿ ಮದರಸ ಮತ್ತು ಹಜ್ ಎಂಬ ಪದಗಳನ್ನು ಏಕೆ ಬಳಕೆ ಮಾಡಲಾಯಿತು ಎಂಬ ಪತ್ರಕರ್ತರ ಪ್ರಶ್ನೆಗೆ “ನಾನು ಯಾವ ಪದಗಳನ್ನು ಬಳಸಿಲ್ಲ. ನಾನು ಏನು ಮಾತನಾಡಿದ್ದೇನೊ, ಯಾವ ವಿಚಾರ ಬಳಸಿದ್ದೆನೋ ಅದಕ್ಕೆ ಮಾತ್ರ ನಾನು ಜವಾಬ್ದಾರನಾಗಿದ್ದೇನೆ” ಎಂದು ತೇಜಸ್ವಿ ಸೂರ್ಯ ಹೇಳಿದರು.

ಆಗ ಪತ್ರಕರ್ತರು ಅಂದು ನಿಮ್ಮ ಜೊತೆಗಿದ್ದ ನಿಮ್ಮ ಪಕ್ಷದ ಶಾಸಕರು, ನಿಮ್ಮೆದುರೆ ಆ ಪದಗಳನ್ನು ಬಳಸಿದ್ದಾರೆ. ಆ ಕೋಮುವಾದಿ ಹೇಳಿಕೆಗಳನ್ನು ನೀಡುವುದಕ್ಕೆ ನೀವು ಹೇಗೆ ಅವಕಾಶ ಕೊಟ್ಟಿರಿ? ನೀವು ಅದಕ್ಕೆ ಜವಾಬ್ದಾರರಲ್ಲವೇ ಎಂದು ಪ್ರಶ್ನಿಸಿದರು. ಅದಕ್ಕೆ ತೇಜಸ್ವಿ ಸೂರ್ಯ ಯಾವುದೇ ಉತ್ತರ ಕೊಡದೇ ನಿರುತ್ತರರಾದರು.

ನಂತರ ನಿಮಗೆ ನಿಮ್ಮದೇ ಅಜೆಂಡಾ ಇದೆ. ನನಗೆ ನನ್ನದೇ ಅಜೆಂಡಾ ಇದೆ. ನನ್ನ ಅಜೆಂಡ ಜನರಿಗೆ ಸತ್ಯ ಹೇಳುವುದು. ಜನರ ಜೀವ ರಕ್ಷಿಸುವುದು. ಈ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ಸಂಸದರು ಹೇಳಿದರು.

ಇದರಲ್ಲಿ ನಿಮ್ಮ ತಪ್ಪಿಲ್ಲ ಎಂದಾದರೆ ನೀವು ಓದಿದ ಆ 17 ಜನರನ್ನು ಜಯನಗರ ಪೊಲೀಸರು ವಿಚಾರಣೆ ನಡೆಸಿದ್ದೇಕೆ ಎಂದು ಪತ್ರಕರ್ತರು ಪ್ರಶ್ನಿಸಿದರು. ಇದಕ್ಕೆ ತಬ್ಬಿಬ್ಬಾಗಿ ಉತ್ತರಿಸದ ತೇಜಸ್ವಿ ಸೂರ್ಯ, ಬೇರೆ ಯಾವುದಾದರೂ ಪ್ರಶ್ನೆಗಳಿವೆಯೇ ಎಂದರು.

ಪ್ರಕರಣ ಬೆಳಕಿಗೆ ನಂತರ ನೀವು ಹೆಸರಿಸಿದವರಿಗೂ, ಬೆಡ್ ಬ್ಲಾಕ್‌ಗೂ ಯಾವುದೇ ಸಂಬಂಧವಿರಲಿಲ್ಲ. ಹಾಗಾದರೂ ನೀವು ಉನ್ನತ ಅಧಿಕಾರಿಗಳು ಕೊಟ್ಟ ಲಿಸ್ಟ್ ಅನ್ನು ಏಕೆ ಓದಿದಿರಿ? ಎಂದು ಪತ್ರಕರ್ತರ ಪ್ರಶ್ನಿಸಿದರು. ಅದಕ್ಕೂ ತಡಬಡಾಯಿಸಿದ ಸಂಸದರು “ನಾನು ಸತ್ಯವನ್ನು ಉತ್ತರಿಸಿದ್ದೇನೆ” ಎಂದು ಹೇಳುವ ಮೂಲಕ ಪ್ರಶ್ನೆಗೆ ಉತ್ತರಿಸಲಿಲ್ಲ.. ಮತ್ತು ಮತ್ತೆ ಯಾವುದೇ ಪ್ರಶ್ನೆ ಬಾರದಂತೆ ತಡೆದರು.

ಒಟ್ಟಿನಲ್ಲಿ ಪತ್ರಕರ್ತರ ಕಷ್ಟಕರವಾದ ಬಹುಮುಖ್ಯ ಪ್ರಶ್ನೆಗಳಿಗೆ ತೇಜಸ್ವಿ ಸೂರ್ಯ ಉತ್ತರಿಸಲೇ ಇಲ್ಲ. ಈ ಪತ್ರಿಕಾಗೋಷ್ಠಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಪತ್ರಕರ್ತರ ಈ ಪ್ರಶ್ನೆಗಳಿಗಾಗಿ ಅವರನ್ನು ಅಭಿನಂದಿಸಲಾಗಿದೆ.

ಇನ್ನು ವಾರ್‌ ರೂಂ ಮೇಲೆ ದಾಳಿ ಮಾಡಿದಾಗ ಸಂಸದ ತೇಜಸ್ವಿ ಸೂರ್ಯ ಜೊತೆಗಿದ್ದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿಯವರೆ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿದ್ದರೆಂದು ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳು ವರದಿ ಮಾಡಿದ್ದವು. ಶಾಸಕರ ಪಿಎಯನ್ನು ಬಂಧಿಸುವಂತೆ ಒತ್ತಡ ಹೇರಲಾಗಿತ್ತು.

ತೇಜಸ್ವಿ ಸೂರ್ಯರವರ ಈ ನಡೆ ವಿರುದ್ಧ ಹಲವೆಡೆ ದೂರು ದಾಖಲಾಗಿವೆ. ಕೆಲಸದಿಂದ ಅಮಾನತ್ತಾಗಿದ್ದ 17 ಜನ ಅಮಾಯಕರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ.


ಇದನ್ನೂ ಓದಿ: ಅನ್ಯಾಯಕ್ಕೆ ಒಳಗಾದವರು ಇಲ್ಲದಿದ್ದಾಗ ತೆರಳಿ ಕ್ಷಮೆ ಯಾಚಿಸಿದ ತೇಜಸ್ವಿ ಸೂರ್ಯ: ಸಾರ್ವಜನಿಕ ಕ್ಷಮೆ ಯಾಚನೆಗೆ ಒತ್ತಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸತ್ಯವನ್ನೇ ನುಡಿದು,ನಿಜಾಂಶಗಳನ್ನೇ..ಬಯಲು ಮಾಡಲಾಗಿದೆ.ಜನರು ಇದನ್ನು ಖಂಡಿತವಾಗಿ ನಿರೀಕ್ಷೆ ಮಾಡಿದ್ದರು.ಲಪಟಾಯಿಸುವವರಿಗೆ ಏನೂ ಸಿಗದಿದ್ದಾಗ ಇಂತಹ ಘನ ಕಾರ್ಯಗಳನ್ನು ತಾವೇ ಬಯಲುಗೊಳಿಸಿಕೊಂಡು ಬಿಡುತ್ತಾರೆಂಬುದಕ್ಕೆ *ಬೆಡ್ ಬ್ಲಾಕಿಂಗ್ ದಂಧೆ* ತಾಜಾ ಉದಾಹರಣೆ..
    ನೀವೇನಂತೀರೀ..!?

  2. ಮಾಧ್ಯಮದವರಿಗೆ ಜನಹಿತ ಚಿಂತನೆಯ ಬದಲು ರಾಜಕೀಯ ವೇ ಮುಖ್ಯವಾಗಿತ್ತು. ಸೂರ್ಯ ರವರು ಸರಿಯಾಗಿ ಉತ್ತರಿಸಿದರು.

  3. Mr Surya was correct in what he said. He said media is trying to divert the issue from finding a solution to the Covid bed blocking scam to a political and communal issue. Some members of the media were not happy. You seem to be one of them. As long as media is dishonest, they have no right to make comments like this.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...