Homeಮುಖಪುಟಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ನಿಮ್ಮ ಪಕ್ಷದ ಶಾಸಕರು, ನಿಮ್ಮೆದುರೆ ಆ ಕೋಮುವಾದಿ ಹೇಳಿಕೆಗಳನ್ನು ನೀಡುವುದಕ್ಕೆ ನೀವು ಹೇಗೆ ಅವಕಾಶ ಕೊಟ್ಟಿರಿ? ನೀವು ಅದಕ್ಕೆ ಜವಾಬ್ದಾರರಲ್ಲವೇ?

- Advertisement -
- Advertisement -

ಕಳೆದ ವಾರ ಬಿಬಿಎಂಪಿ ಕೋವಿಡ್ ವಾರ್‌ ರೂಂನಲ್ಲಿ ಕೆಲಸ ಮಾಡುವ 205 ಜನರಲ್ಲಿ ಕೇವಲ 17 ಜನ ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಅವರ ಹೆಸರನ್ನು ಓದುವ ಮೂಲಕ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಸದ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಶಾಸಕರು ಕೋಮು ಆಯಾಮ ನೀಡಿ ವಿವಾದಕ್ಕೆ ಒಳಗಾಗಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ನೇರ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರರಾದ ಘಟನೆ ಸಂಭವಿಸಿದೆ.

ಕಳೆದ ವಾರ ಸಂಸದ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಶಾಸಕರು ಬಿಬಿಎಂಪಿ ಕೋವಿಡ್ ವಾರ್‌ ರೂಂ ಮೇಲೆ ದಾಳಿ ನಡೆಸಿದ್ದರು. 205 ಜನರಲ್ಲಿ ಕೇವಲ 17 ಜನ ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಅವರ ಹೆಸರನ್ನು ಓದಿದ ಸಂಸದ “ಇವರೆಲ್ಲಾ ಯಾರು? ಮೂರು ಶಿಪ್ಟ್‌ಗಳಲ್ಲಿ ಈ 17 ಜನರ ಹೆಸರಿದೆ, ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಳ್ಳಲಾಯಿತು? ಈ ಜನರು ಯಾರು” ಎಂದು ಪ್ರಶ್ನಿಸಿದ್ದರು. ತೇಜಸ್ವಿ ಸೂರ್ಯರವರ ಚಿಕ್ಕಪ್ಪ ಮತ್ತು ಬಸವನಗುಡಿ ಬಿಜೆಪಿ ಶಾಸಕ ಎಲ್. ಎ. ರವಿಸುಬ್ರಮಣ್ಯ “ನೀವೇನು ಮದರಾಸಗೆ ನೇಮಕಾತಿ ಮಾಡುತ್ತಿದ್ದೀರೊ ಇಲ್ಲ, ಕಾರ್ಪೋರೇಷನ್‌ಗೋ?” ಎಂದು ಪ್ರಶ್ನಿಸಿದ್ದರು. ಮತ್ತೊಬ್ಬ ಬಿಜೆಪಿ ಶಾಸಕ ಸತೀಶ್ ರೆಡ್ಡಿ “ಇವರ್ಯಾರು ಮೇಡಂ, ಇವರನ್ನು ಹೇಗೆ ನೇಮಕ ಮಾಡಲಾಯಿತು? ಹಜ್ ಸಮಿತಿಗೆ ನೇಮಕ ಮಾಡುವ ಹಾಗೆ ಈ 17 ಜನರನ್ನು ನೇಮಕ ಮಾಡಿದ್ದೀರಾ ಹೇಗೆ?” ಎಂದು ಕೂಗಾಡಿದ್ದರು.

ತದನಂತರ ಆ 17 ಜನ ಮುಸ್ಲಿಂ ಯುವಕರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು ಮತ್ತು ಅವರನ್ನು ಎರಡು ಬಾರಿ ಜಯನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು.

“ಅವರ ಮೇಲೆ ಯಾವುದೇ ಕ್ರಿಮಿಲಾಟಿಯನ್ನು ನಾನು ಹೂಡಿಲ್ಲ. ಅವರು ತಪ್ಪಿತಸ್ಥರೆಂದು ಅಧಿಕಾರಿಗಳು ಕೂಡ ಹೇಳಿಲ್ಲ. ಏಜೆನ್ಸಿ ಜೊತೆಗೆ ಕೆಲಸ ಮಾಡುವ ಗುತ್ತಿಗೆ ನೌಕರರು ಅವರು. ಅವರನ್ನು ಕೆಲಸಕ್ಕೆ ನೇಮಕ ಮಾಡುವುದಾಗಿ, ತೆಗೆದುಹಾಕುವುದಾಗಲಿ ತೇಜಸ್ವಿ ಸೂರ್ಯ ಆಗಲಿ, ಶಾಸಕರಾಗಲಿ ಮಾಡುವ ಕೆಲಸ ಅಲ್ಲ. ಬಿಬಿಎಂಪಿ ಮಾಡುವ ಕೆಲಸ ಅದು. ಅವರನ್ನು ಏಕೆ ತೆಗೆದುಹಾಕಿದರು ಎಂಬುದನ್ನು ಬಿಬಿಎಂಪಿಯವರಲ್ಲಿ ಕೇಳಿ” ಎಂದು ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹಾಗಾದರೆ ನೀವು 206 ಜನರ ಲಿಸ್ಟ್‌ನಲ್ಲಿ ಆ 17 ಮುಸ್ಲಿಮರ ಹೆಸರನ್ನು ಮಾತ್ರ ಓದಿದ್ದು ಏಕೆ ಎಂಬ ಪ್ರಶ್ನೆಗೆ “ಆ ಲಿಸ್ಟ್‌ನಲ್ಲಿ ಯಾರ ಹೆಸರಿದ್ದರೂ ನಾನು ಓದುತ್ತಿದ್ದೆ. ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಂಡಿರಿ ಎಂದು ಕೇಳಿದೆ. ನನಗೆ ಕೊಟ್ಟ ಲಿಸ್ಟ್‌ನಲ್ಲಿ ಅವರ ಹೆಸರು ಮಾತ್ರ ಇದ್ದವು. ನಂಬುವವರು ನಂಬಬಹುದು, ಬಿಡುವವರು ಬಿಡಬಹುದು” ಎಂದು ಹಾರಿಕೆಯ ಉತ್ತರ ನೀಡಿದರು.

ಹಾಗಾದರೆ ಅವರನ್ನು ಕೆಲಸದಿಂದ ಏಕೆ ತೆಗೆಯಲಾಯಿತು ಎಂಬ ಪ್ರಶ್ನೆಗೆ “ನಾನು ಅದನ್ನೇ ಕೇಳುತ್ತಿದ್ದೇನೆ. ನನಗೆ ಕೊಟ್ಟ ಪಟ್ಟಿ ಓದಿದೆ ಅಷ್ಟೇ. ಅವರನ್ನು ಏಕೆ, ಹೇಗೆ ನೇಮಕ ಮಾಡಿಕೊಳ್ಳಲಾಯಿತು? ಯಾವ ವಿಧಾನ ಅನುಸರಿಸಲಾಯಿತು ಎಂದು ಕೇಳಿದ್ದೇನೆ. ವಿಡಿಯೋ ಇದೆ ನೋಡಿ. ಏಕೆ 17 ಜನರನ್ನು ಪಟ್ಟಿ ಮಾಡಲಾಯಿತು ಎಂಬುದನ್ನು ನೀವು ಅಧಿಕಾರಿಗಳನ್ನು ಕೇಳಬೇಕು” ಎಂದರು.

ಆ ಸಂದರ್ಭದಲ್ಲಿ ಮದರಸ ಮತ್ತು ಹಜ್ ಎಂಬ ಪದಗಳನ್ನು ಏಕೆ ಬಳಕೆ ಮಾಡಲಾಯಿತು ಎಂಬ ಪತ್ರಕರ್ತರ ಪ್ರಶ್ನೆಗೆ “ನಾನು ಯಾವ ಪದಗಳನ್ನು ಬಳಸಿಲ್ಲ. ನಾನು ಏನು ಮಾತನಾಡಿದ್ದೇನೊ, ಯಾವ ವಿಚಾರ ಬಳಸಿದ್ದೆನೋ ಅದಕ್ಕೆ ಮಾತ್ರ ನಾನು ಜವಾಬ್ದಾರನಾಗಿದ್ದೇನೆ” ಎಂದು ತೇಜಸ್ವಿ ಸೂರ್ಯ ಹೇಳಿದರು.

ಆಗ ಪತ್ರಕರ್ತರು ಅಂದು ನಿಮ್ಮ ಜೊತೆಗಿದ್ದ ನಿಮ್ಮ ಪಕ್ಷದ ಶಾಸಕರು, ನಿಮ್ಮೆದುರೆ ಆ ಪದಗಳನ್ನು ಬಳಸಿದ್ದಾರೆ. ಆ ಕೋಮುವಾದಿ ಹೇಳಿಕೆಗಳನ್ನು ನೀಡುವುದಕ್ಕೆ ನೀವು ಹೇಗೆ ಅವಕಾಶ ಕೊಟ್ಟಿರಿ? ನೀವು ಅದಕ್ಕೆ ಜವಾಬ್ದಾರರಲ್ಲವೇ ಎಂದು ಪ್ರಶ್ನಿಸಿದರು. ಅದಕ್ಕೆ ತೇಜಸ್ವಿ ಸೂರ್ಯ ಯಾವುದೇ ಉತ್ತರ ಕೊಡದೇ ನಿರುತ್ತರರಾದರು.

ನಂತರ ನಿಮಗೆ ನಿಮ್ಮದೇ ಅಜೆಂಡಾ ಇದೆ. ನನಗೆ ನನ್ನದೇ ಅಜೆಂಡಾ ಇದೆ. ನನ್ನ ಅಜೆಂಡ ಜನರಿಗೆ ಸತ್ಯ ಹೇಳುವುದು. ಜನರ ಜೀವ ರಕ್ಷಿಸುವುದು. ಈ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ಸಂಸದರು ಹೇಳಿದರು.

ಇದರಲ್ಲಿ ನಿಮ್ಮ ತಪ್ಪಿಲ್ಲ ಎಂದಾದರೆ ನೀವು ಓದಿದ ಆ 17 ಜನರನ್ನು ಜಯನಗರ ಪೊಲೀಸರು ವಿಚಾರಣೆ ನಡೆಸಿದ್ದೇಕೆ ಎಂದು ಪತ್ರಕರ್ತರು ಪ್ರಶ್ನಿಸಿದರು. ಇದಕ್ಕೆ ತಬ್ಬಿಬ್ಬಾಗಿ ಉತ್ತರಿಸದ ತೇಜಸ್ವಿ ಸೂರ್ಯ, ಬೇರೆ ಯಾವುದಾದರೂ ಪ್ರಶ್ನೆಗಳಿವೆಯೇ ಎಂದರು.

ಪ್ರಕರಣ ಬೆಳಕಿಗೆ ನಂತರ ನೀವು ಹೆಸರಿಸಿದವರಿಗೂ, ಬೆಡ್ ಬ್ಲಾಕ್‌ಗೂ ಯಾವುದೇ ಸಂಬಂಧವಿರಲಿಲ್ಲ. ಹಾಗಾದರೂ ನೀವು ಉನ್ನತ ಅಧಿಕಾರಿಗಳು ಕೊಟ್ಟ ಲಿಸ್ಟ್ ಅನ್ನು ಏಕೆ ಓದಿದಿರಿ? ಎಂದು ಪತ್ರಕರ್ತರ ಪ್ರಶ್ನಿಸಿದರು. ಅದಕ್ಕೂ ತಡಬಡಾಯಿಸಿದ ಸಂಸದರು “ನಾನು ಸತ್ಯವನ್ನು ಉತ್ತರಿಸಿದ್ದೇನೆ” ಎಂದು ಹೇಳುವ ಮೂಲಕ ಪ್ರಶ್ನೆಗೆ ಉತ್ತರಿಸಲಿಲ್ಲ.. ಮತ್ತು ಮತ್ತೆ ಯಾವುದೇ ಪ್ರಶ್ನೆ ಬಾರದಂತೆ ತಡೆದರು.

ಒಟ್ಟಿನಲ್ಲಿ ಪತ್ರಕರ್ತರ ಕಷ್ಟಕರವಾದ ಬಹುಮುಖ್ಯ ಪ್ರಶ್ನೆಗಳಿಗೆ ತೇಜಸ್ವಿ ಸೂರ್ಯ ಉತ್ತರಿಸಲೇ ಇಲ್ಲ. ಈ ಪತ್ರಿಕಾಗೋಷ್ಠಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಪತ್ರಕರ್ತರ ಈ ಪ್ರಶ್ನೆಗಳಿಗಾಗಿ ಅವರನ್ನು ಅಭಿನಂದಿಸಲಾಗಿದೆ.

ಇನ್ನು ವಾರ್‌ ರೂಂ ಮೇಲೆ ದಾಳಿ ಮಾಡಿದಾಗ ಸಂಸದ ತೇಜಸ್ವಿ ಸೂರ್ಯ ಜೊತೆಗಿದ್ದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿಯವರೆ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿದ್ದರೆಂದು ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳು ವರದಿ ಮಾಡಿದ್ದವು. ಶಾಸಕರ ಪಿಎಯನ್ನು ಬಂಧಿಸುವಂತೆ ಒತ್ತಡ ಹೇರಲಾಗಿತ್ತು.

ತೇಜಸ್ವಿ ಸೂರ್ಯರವರ ಈ ನಡೆ ವಿರುದ್ಧ ಹಲವೆಡೆ ದೂರು ದಾಖಲಾಗಿವೆ. ಕೆಲಸದಿಂದ ಅಮಾನತ್ತಾಗಿದ್ದ 17 ಜನ ಅಮಾಯಕರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ.


ಇದನ್ನೂ ಓದಿ: ಅನ್ಯಾಯಕ್ಕೆ ಒಳಗಾದವರು ಇಲ್ಲದಿದ್ದಾಗ ತೆರಳಿ ಕ್ಷಮೆ ಯಾಚಿಸಿದ ತೇಜಸ್ವಿ ಸೂರ್ಯ: ಸಾರ್ವಜನಿಕ ಕ್ಷಮೆ ಯಾಚನೆಗೆ ಒತ್ತಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸತ್ಯವನ್ನೇ ನುಡಿದು,ನಿಜಾಂಶಗಳನ್ನೇ..ಬಯಲು ಮಾಡಲಾಗಿದೆ.ಜನರು ಇದನ್ನು ಖಂಡಿತವಾಗಿ ನಿರೀಕ್ಷೆ ಮಾಡಿದ್ದರು.ಲಪಟಾಯಿಸುವವರಿಗೆ ಏನೂ ಸಿಗದಿದ್ದಾಗ ಇಂತಹ ಘನ ಕಾರ್ಯಗಳನ್ನು ತಾವೇ ಬಯಲುಗೊಳಿಸಿಕೊಂಡು ಬಿಡುತ್ತಾರೆಂಬುದಕ್ಕೆ *ಬೆಡ್ ಬ್ಲಾಕಿಂಗ್ ದಂಧೆ* ತಾಜಾ ಉದಾಹರಣೆ..
    ನೀವೇನಂತೀರೀ..!?

  2. ಮಾಧ್ಯಮದವರಿಗೆ ಜನಹಿತ ಚಿಂತನೆಯ ಬದಲು ರಾಜಕೀಯ ವೇ ಮುಖ್ಯವಾಗಿತ್ತು. ಸೂರ್ಯ ರವರು ಸರಿಯಾಗಿ ಉತ್ತರಿಸಿದರು.

  3. Mr Surya was correct in what he said. He said media is trying to divert the issue from finding a solution to the Covid bed blocking scam to a political and communal issue. Some members of the media were not happy. You seem to be one of them. As long as media is dishonest, they have no right to make comments like this.

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...