Homeಮುಖಪುಟಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

ನಿಮ್ಮ ಪಕ್ಷದ ಶಾಸಕರು, ನಿಮ್ಮೆದುರೆ ಆ ಕೋಮುವಾದಿ ಹೇಳಿಕೆಗಳನ್ನು ನೀಡುವುದಕ್ಕೆ ನೀವು ಹೇಗೆ ಅವಕಾಶ ಕೊಟ್ಟಿರಿ? ನೀವು ಅದಕ್ಕೆ ಜವಾಬ್ದಾರರಲ್ಲವೇ?

- Advertisement -
- Advertisement -

ಕಳೆದ ವಾರ ಬಿಬಿಎಂಪಿ ಕೋವಿಡ್ ವಾರ್‌ ರೂಂನಲ್ಲಿ ಕೆಲಸ ಮಾಡುವ 205 ಜನರಲ್ಲಿ ಕೇವಲ 17 ಜನ ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಅವರ ಹೆಸರನ್ನು ಓದುವ ಮೂಲಕ ಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಸದ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಶಾಸಕರು ಕೋಮು ಆಯಾಮ ನೀಡಿ ವಿವಾದಕ್ಕೆ ಒಳಗಾಗಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ನೇರ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರರಾದ ಘಟನೆ ಸಂಭವಿಸಿದೆ.

ಕಳೆದ ವಾರ ಸಂಸದ ತೇಜಸ್ವಿ ಸೂರ್ಯ ಮತ್ತು ಬಿಜೆಪಿ ಶಾಸಕರು ಬಿಬಿಎಂಪಿ ಕೋವಿಡ್ ವಾರ್‌ ರೂಂ ಮೇಲೆ ದಾಳಿ ನಡೆಸಿದ್ದರು. 205 ಜನರಲ್ಲಿ ಕೇವಲ 17 ಜನ ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಅವರ ಹೆಸರನ್ನು ಓದಿದ ಸಂಸದ “ಇವರೆಲ್ಲಾ ಯಾರು? ಮೂರು ಶಿಪ್ಟ್‌ಗಳಲ್ಲಿ ಈ 17 ಜನರ ಹೆಸರಿದೆ, ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಳ್ಳಲಾಯಿತು? ಈ ಜನರು ಯಾರು” ಎಂದು ಪ್ರಶ್ನಿಸಿದ್ದರು. ತೇಜಸ್ವಿ ಸೂರ್ಯರವರ ಚಿಕ್ಕಪ್ಪ ಮತ್ತು ಬಸವನಗುಡಿ ಬಿಜೆಪಿ ಶಾಸಕ ಎಲ್. ಎ. ರವಿಸುಬ್ರಮಣ್ಯ “ನೀವೇನು ಮದರಾಸಗೆ ನೇಮಕಾತಿ ಮಾಡುತ್ತಿದ್ದೀರೊ ಇಲ್ಲ, ಕಾರ್ಪೋರೇಷನ್‌ಗೋ?” ಎಂದು ಪ್ರಶ್ನಿಸಿದ್ದರು. ಮತ್ತೊಬ್ಬ ಬಿಜೆಪಿ ಶಾಸಕ ಸತೀಶ್ ರೆಡ್ಡಿ “ಇವರ್ಯಾರು ಮೇಡಂ, ಇವರನ್ನು ಹೇಗೆ ನೇಮಕ ಮಾಡಲಾಯಿತು? ಹಜ್ ಸಮಿತಿಗೆ ನೇಮಕ ಮಾಡುವ ಹಾಗೆ ಈ 17 ಜನರನ್ನು ನೇಮಕ ಮಾಡಿದ್ದೀರಾ ಹೇಗೆ?” ಎಂದು ಕೂಗಾಡಿದ್ದರು.

ತದನಂತರ ಆ 17 ಜನ ಮುಸ್ಲಿಂ ಯುವಕರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು ಮತ್ತು ಅವರನ್ನು ಎರಡು ಬಾರಿ ಜಯನಗರ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು.

“ಅವರ ಮೇಲೆ ಯಾವುದೇ ಕ್ರಿಮಿಲಾಟಿಯನ್ನು ನಾನು ಹೂಡಿಲ್ಲ. ಅವರು ತಪ್ಪಿತಸ್ಥರೆಂದು ಅಧಿಕಾರಿಗಳು ಕೂಡ ಹೇಳಿಲ್ಲ. ಏಜೆನ್ಸಿ ಜೊತೆಗೆ ಕೆಲಸ ಮಾಡುವ ಗುತ್ತಿಗೆ ನೌಕರರು ಅವರು. ಅವರನ್ನು ಕೆಲಸಕ್ಕೆ ನೇಮಕ ಮಾಡುವುದಾಗಿ, ತೆಗೆದುಹಾಕುವುದಾಗಲಿ ತೇಜಸ್ವಿ ಸೂರ್ಯ ಆಗಲಿ, ಶಾಸಕರಾಗಲಿ ಮಾಡುವ ಕೆಲಸ ಅಲ್ಲ. ಬಿಬಿಎಂಪಿ ಮಾಡುವ ಕೆಲಸ ಅದು. ಅವರನ್ನು ಏಕೆ ತೆಗೆದುಹಾಕಿದರು ಎಂಬುದನ್ನು ಬಿಬಿಎಂಪಿಯವರಲ್ಲಿ ಕೇಳಿ” ಎಂದು ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹಾಗಾದರೆ ನೀವು 206 ಜನರ ಲಿಸ್ಟ್‌ನಲ್ಲಿ ಆ 17 ಮುಸ್ಲಿಮರ ಹೆಸರನ್ನು ಮಾತ್ರ ಓದಿದ್ದು ಏಕೆ ಎಂಬ ಪ್ರಶ್ನೆಗೆ “ಆ ಲಿಸ್ಟ್‌ನಲ್ಲಿ ಯಾರ ಹೆಸರಿದ್ದರೂ ನಾನು ಓದುತ್ತಿದ್ದೆ. ಇವರನ್ನು ಹೇಗೆ ಕೆಲಸಕ್ಕೆ ತೆಗೆದುಕೊಂಡಿರಿ ಎಂದು ಕೇಳಿದೆ. ನನಗೆ ಕೊಟ್ಟ ಲಿಸ್ಟ್‌ನಲ್ಲಿ ಅವರ ಹೆಸರು ಮಾತ್ರ ಇದ್ದವು. ನಂಬುವವರು ನಂಬಬಹುದು, ಬಿಡುವವರು ಬಿಡಬಹುದು” ಎಂದು ಹಾರಿಕೆಯ ಉತ್ತರ ನೀಡಿದರು.

ಹಾಗಾದರೆ ಅವರನ್ನು ಕೆಲಸದಿಂದ ಏಕೆ ತೆಗೆಯಲಾಯಿತು ಎಂಬ ಪ್ರಶ್ನೆಗೆ “ನಾನು ಅದನ್ನೇ ಕೇಳುತ್ತಿದ್ದೇನೆ. ನನಗೆ ಕೊಟ್ಟ ಪಟ್ಟಿ ಓದಿದೆ ಅಷ್ಟೇ. ಅವರನ್ನು ಏಕೆ, ಹೇಗೆ ನೇಮಕ ಮಾಡಿಕೊಳ್ಳಲಾಯಿತು? ಯಾವ ವಿಧಾನ ಅನುಸರಿಸಲಾಯಿತು ಎಂದು ಕೇಳಿದ್ದೇನೆ. ವಿಡಿಯೋ ಇದೆ ನೋಡಿ. ಏಕೆ 17 ಜನರನ್ನು ಪಟ್ಟಿ ಮಾಡಲಾಯಿತು ಎಂಬುದನ್ನು ನೀವು ಅಧಿಕಾರಿಗಳನ್ನು ಕೇಳಬೇಕು” ಎಂದರು.

ಆ ಸಂದರ್ಭದಲ್ಲಿ ಮದರಸ ಮತ್ತು ಹಜ್ ಎಂಬ ಪದಗಳನ್ನು ಏಕೆ ಬಳಕೆ ಮಾಡಲಾಯಿತು ಎಂಬ ಪತ್ರಕರ್ತರ ಪ್ರಶ್ನೆಗೆ “ನಾನು ಯಾವ ಪದಗಳನ್ನು ಬಳಸಿಲ್ಲ. ನಾನು ಏನು ಮಾತನಾಡಿದ್ದೇನೊ, ಯಾವ ವಿಚಾರ ಬಳಸಿದ್ದೆನೋ ಅದಕ್ಕೆ ಮಾತ್ರ ನಾನು ಜವಾಬ್ದಾರನಾಗಿದ್ದೇನೆ” ಎಂದು ತೇಜಸ್ವಿ ಸೂರ್ಯ ಹೇಳಿದರು.

ಆಗ ಪತ್ರಕರ್ತರು ಅಂದು ನಿಮ್ಮ ಜೊತೆಗಿದ್ದ ನಿಮ್ಮ ಪಕ್ಷದ ಶಾಸಕರು, ನಿಮ್ಮೆದುರೆ ಆ ಪದಗಳನ್ನು ಬಳಸಿದ್ದಾರೆ. ಆ ಕೋಮುವಾದಿ ಹೇಳಿಕೆಗಳನ್ನು ನೀಡುವುದಕ್ಕೆ ನೀವು ಹೇಗೆ ಅವಕಾಶ ಕೊಟ್ಟಿರಿ? ನೀವು ಅದಕ್ಕೆ ಜವಾಬ್ದಾರರಲ್ಲವೇ ಎಂದು ಪ್ರಶ್ನಿಸಿದರು. ಅದಕ್ಕೆ ತೇಜಸ್ವಿ ಸೂರ್ಯ ಯಾವುದೇ ಉತ್ತರ ಕೊಡದೇ ನಿರುತ್ತರರಾದರು.

ನಂತರ ನಿಮಗೆ ನಿಮ್ಮದೇ ಅಜೆಂಡಾ ಇದೆ. ನನಗೆ ನನ್ನದೇ ಅಜೆಂಡಾ ಇದೆ. ನನ್ನ ಅಜೆಂಡ ಜನರಿಗೆ ಸತ್ಯ ಹೇಳುವುದು. ಜನರ ಜೀವ ರಕ್ಷಿಸುವುದು. ಈ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ಸಂಸದರು ಹೇಳಿದರು.

ಇದರಲ್ಲಿ ನಿಮ್ಮ ತಪ್ಪಿಲ್ಲ ಎಂದಾದರೆ ನೀವು ಓದಿದ ಆ 17 ಜನರನ್ನು ಜಯನಗರ ಪೊಲೀಸರು ವಿಚಾರಣೆ ನಡೆಸಿದ್ದೇಕೆ ಎಂದು ಪತ್ರಕರ್ತರು ಪ್ರಶ್ನಿಸಿದರು. ಇದಕ್ಕೆ ತಬ್ಬಿಬ್ಬಾಗಿ ಉತ್ತರಿಸದ ತೇಜಸ್ವಿ ಸೂರ್ಯ, ಬೇರೆ ಯಾವುದಾದರೂ ಪ್ರಶ್ನೆಗಳಿವೆಯೇ ಎಂದರು.

ಪ್ರಕರಣ ಬೆಳಕಿಗೆ ನಂತರ ನೀವು ಹೆಸರಿಸಿದವರಿಗೂ, ಬೆಡ್ ಬ್ಲಾಕ್‌ಗೂ ಯಾವುದೇ ಸಂಬಂಧವಿರಲಿಲ್ಲ. ಹಾಗಾದರೂ ನೀವು ಉನ್ನತ ಅಧಿಕಾರಿಗಳು ಕೊಟ್ಟ ಲಿಸ್ಟ್ ಅನ್ನು ಏಕೆ ಓದಿದಿರಿ? ಎಂದು ಪತ್ರಕರ್ತರ ಪ್ರಶ್ನಿಸಿದರು. ಅದಕ್ಕೂ ತಡಬಡಾಯಿಸಿದ ಸಂಸದರು “ನಾನು ಸತ್ಯವನ್ನು ಉತ್ತರಿಸಿದ್ದೇನೆ” ಎಂದು ಹೇಳುವ ಮೂಲಕ ಪ್ರಶ್ನೆಗೆ ಉತ್ತರಿಸಲಿಲ್ಲ.. ಮತ್ತು ಮತ್ತೆ ಯಾವುದೇ ಪ್ರಶ್ನೆ ಬಾರದಂತೆ ತಡೆದರು.

ಒಟ್ಟಿನಲ್ಲಿ ಪತ್ರಕರ್ತರ ಕಷ್ಟಕರವಾದ ಬಹುಮುಖ್ಯ ಪ್ರಶ್ನೆಗಳಿಗೆ ತೇಜಸ್ವಿ ಸೂರ್ಯ ಉತ್ತರಿಸಲೇ ಇಲ್ಲ. ಈ ಪತ್ರಿಕಾಗೋಷ್ಠಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಪತ್ರಕರ್ತರ ಈ ಪ್ರಶ್ನೆಗಳಿಗಾಗಿ ಅವರನ್ನು ಅಭಿನಂದಿಸಲಾಗಿದೆ.

ಇನ್ನು ವಾರ್‌ ರೂಂ ಮೇಲೆ ದಾಳಿ ಮಾಡಿದಾಗ ಸಂಸದ ತೇಜಸ್ವಿ ಸೂರ್ಯ ಜೊತೆಗಿದ್ದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿಯವರೆ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿದ್ದರೆಂದು ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳು ವರದಿ ಮಾಡಿದ್ದವು. ಶಾಸಕರ ಪಿಎಯನ್ನು ಬಂಧಿಸುವಂತೆ ಒತ್ತಡ ಹೇರಲಾಗಿತ್ತು.

ತೇಜಸ್ವಿ ಸೂರ್ಯರವರ ಈ ನಡೆ ವಿರುದ್ಧ ಹಲವೆಡೆ ದೂರು ದಾಖಲಾಗಿವೆ. ಕೆಲಸದಿಂದ ಅಮಾನತ್ತಾಗಿದ್ದ 17 ಜನ ಅಮಾಯಕರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ.


ಇದನ್ನೂ ಓದಿ: ಅನ್ಯಾಯಕ್ಕೆ ಒಳಗಾದವರು ಇಲ್ಲದಿದ್ದಾಗ ತೆರಳಿ ಕ್ಷಮೆ ಯಾಚಿಸಿದ ತೇಜಸ್ವಿ ಸೂರ್ಯ: ಸಾರ್ವಜನಿಕ ಕ್ಷಮೆ ಯಾಚನೆಗೆ ಒತ್ತಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸತ್ಯವನ್ನೇ ನುಡಿದು,ನಿಜಾಂಶಗಳನ್ನೇ..ಬಯಲು ಮಾಡಲಾಗಿದೆ.ಜನರು ಇದನ್ನು ಖಂಡಿತವಾಗಿ ನಿರೀಕ್ಷೆ ಮಾಡಿದ್ದರು.ಲಪಟಾಯಿಸುವವರಿಗೆ ಏನೂ ಸಿಗದಿದ್ದಾಗ ಇಂತಹ ಘನ ಕಾರ್ಯಗಳನ್ನು ತಾವೇ ಬಯಲುಗೊಳಿಸಿಕೊಂಡು ಬಿಡುತ್ತಾರೆಂಬುದಕ್ಕೆ *ಬೆಡ್ ಬ್ಲಾಕಿಂಗ್ ದಂಧೆ* ತಾಜಾ ಉದಾಹರಣೆ..
    ನೀವೇನಂತೀರೀ..!?

  2. ಮಾಧ್ಯಮದವರಿಗೆ ಜನಹಿತ ಚಿಂತನೆಯ ಬದಲು ರಾಜಕೀಯ ವೇ ಮುಖ್ಯವಾಗಿತ್ತು. ಸೂರ್ಯ ರವರು ಸರಿಯಾಗಿ ಉತ್ತರಿಸಿದರು.

  3. Mr Surya was correct in what he said. He said media is trying to divert the issue from finding a solution to the Covid bed blocking scam to a political and communal issue. Some members of the media were not happy. You seem to be one of them. As long as media is dishonest, they have no right to make comments like this.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...