Homeಮುಖಪುಟನ್ಯಾಯಾಲಯ ನಿರ್ಬಂಧ ಉಲ್ಲಂಘಿಸಿ ಕೋಮು ಪ್ರಚೋದಿತ ಹೇಳಿಕೆ: ಮತ್ತೊಮ್ಮೆ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

ನ್ಯಾಯಾಲಯ ನಿರ್ಬಂಧ ಉಲ್ಲಂಘಿಸಿ ಕೋಮು ಪ್ರಚೋದಿತ ಹೇಳಿಕೆ: ಮತ್ತೊಮ್ಮೆ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

- Advertisement -
- Advertisement -

ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ರನ್ನು ಮತ್ತೊಮ್ಮೆ ಪೊಲೀಸರು ಬಂಧಿಸಿದ್ದಾರೆ. ಬಿಡುಗಡೆಗೊಂಡ ನಂತರ ನ್ಯಾಯಾಲಯದ ನಿರ್ಬಂಧದ ಹೊರತಾಗಿಯೂ ವಿಡಿಯೋ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರಿಂದ ಅವರನ್ನು ಮತ್ತೆ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

“ತೆಲಂಗಾಣದ ಪೊಲೀಸರು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯ ಕೈಗೊಂಬೆಯಾಗಿದ್ದಾರೆ. ಅವರ ಬೆಂಬಲಿಗರಿಗೆ ದೇವಾಲಯಗಳ ಮೇಲೆ ಕಲ್ಲು ಎಸೆಯಲು ಮುಕ್ತ ಅವಕಾಶ ನೀಡಲಾಗಿದೆ. ಆದರೂ ಎಫ್‌ಐಆರ್ ಇಲ್ಲ, ಯಾರ ಬಂಧನವಿಲ್ಲ” ಎಂದು ರಾಜಾ ಸಿಂಗ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಸಿಎಂ ಕೆಸಿಆರ್ ಮಗ ಕೆಟಿಆರ್ ನಾಸ್ತಿಕರಾಗಿದ್ದಾರೆ. ಅವರು ಯಾವ ಧರ್ಮವನ್ನೂ ನಂಬುವುದಿಲ್ಲ. ಆದರೆ ಆತನ ಪಕ್ಷ ಮತಗಳಿಗಾಗಿ ಎಐಎಂಐಎಂ ಪಕ್ಷದ ಓವೈಸಿ ಜೊತೆ ಕೈಜೋಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಮಿಡಿಯನ್ ಮುನಾವರ್ ಫಾರೂಕಿಯ ಪ್ರದರ್ಶನವನ್ನು ನಾವು ರದ್ದುಗೊಳಿಸಿದ್ದೆವು. ಆತ ಟ್ವಿಟರ್‌ನಲ್ಲಿ ಕೆಟಿಆರ್‌ರನ್ನು ಸಂಪರ್ಕಿಸಿ ಮತ್ತೆ ಪ್ರದರ್ಶನ ಮಾಡಿದ್ದಾರೆ. ಅಲ್ಲಿ 5000 ಪೊಲೀಸರನ್ನು ನಿಯೋಜಿಸಲಾಗಿದೆ. ನಾಲ್ಕು ಐಎಎಸ್ ಅಧಿಕಾರಿಗಳನ್ನು ಹಾಕಿ ಪ್ರದರ್ಶನ ಯಶಸ್ವಿಗೊಳಿಸಲಾಗಿದೆ. ಮುನಾವರ್ ಫಾರೂಕಿಯನ್ನು ಕರೆಸಿ ನಮ್ಮ ದೇವರನ್ನು ಹಂಗಿಸಲಾಗುತ್ತಿದೆ. ಇದೇ ತೆಲಂಗಾಣದಲ್ಲಿ ಕೋಮು ವಾತವರಣ ಇರುವುದಕ್ಕೆ ಕಾರಣ ಎಂದು ರಾಜಾ ಸಿಂಗ್ ಹೇಳಿದ್ದಾರೆ.

ಬಿಜೆಪಿಯು ಅವರನ್ನು ಉಚ್ಛಾಟಿಸುವುದರ ಕುರಿತು ಪ್ರತಿಕ್ರಿಯಿಸಿದ್ದು, “ನಾನು ಯಾವುದೇ ಧರ್ಮದ ವಿರುದ್ಧವಿಲ್ಲ, ವ್ಯಕ್ತಿಗಳ ವಿರುದ್ಧವಿದ್ದೇನೆ ಎಂದು ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿಕೊಡುತ್ತೇನೆ” ಎಂದು ಅವರು ಹೇಳಿದ್ದಾರೆ.

“ಕೋರ್ಟ್ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ನಿರ್ಭಂದ ವಿಧಿಸಿದೆ. ಆದರೂ ನಾನು ಮಾತನಾಡದೇ ಇರಲು ಸಾಧ್ಯವಿಲ್ಲ. ರಿಸ್ಕ್ ತೆಗೆದುಕೊಂಡು ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಏಕೆಂದರೆ ರಾಷ್ಟ್ರೀಯ ಮಾಧ್ಯಮಗಳು ನನ್ನ ವಿರುದ್ಧ ಪಿತೂರಿ ನಡೆಸಿವೆ ಎಂದು ಆರೋಪಿಸಿದ್ದಾರೆ. ಸದ್ಯ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

ಇದನ್ನೂ ಓದಿ; ತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...