Homeಮುಖಪುಟನ್ಯಾಯಾಲಯ ನಿರ್ಬಂಧ ಉಲ್ಲಂಘಿಸಿ ಕೋಮು ಪ್ರಚೋದಿತ ಹೇಳಿಕೆ: ಮತ್ತೊಮ್ಮೆ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

ನ್ಯಾಯಾಲಯ ನಿರ್ಬಂಧ ಉಲ್ಲಂಘಿಸಿ ಕೋಮು ಪ್ರಚೋದಿತ ಹೇಳಿಕೆ: ಮತ್ತೊಮ್ಮೆ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

- Advertisement -
- Advertisement -

ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ರನ್ನು ಮತ್ತೊಮ್ಮೆ ಪೊಲೀಸರು ಬಂಧಿಸಿದ್ದಾರೆ. ಬಿಡುಗಡೆಗೊಂಡ ನಂತರ ನ್ಯಾಯಾಲಯದ ನಿರ್ಬಂಧದ ಹೊರತಾಗಿಯೂ ವಿಡಿಯೋ ಮೂಲಕ ಕೋಮು ಪ್ರಚೋದಿತ ಹೇಳಿಕೆ ನೀಡಿದ್ದರಿಂದ ಅವರನ್ನು ಮತ್ತೆ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

“ತೆಲಂಗಾಣದ ಪೊಲೀಸರು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯ ಕೈಗೊಂಬೆಯಾಗಿದ್ದಾರೆ. ಅವರ ಬೆಂಬಲಿಗರಿಗೆ ದೇವಾಲಯಗಳ ಮೇಲೆ ಕಲ್ಲು ಎಸೆಯಲು ಮುಕ್ತ ಅವಕಾಶ ನೀಡಲಾಗಿದೆ. ಆದರೂ ಎಫ್‌ಐಆರ್ ಇಲ್ಲ, ಯಾರ ಬಂಧನವಿಲ್ಲ” ಎಂದು ರಾಜಾ ಸಿಂಗ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಸಿಎಂ ಕೆಸಿಆರ್ ಮಗ ಕೆಟಿಆರ್ ನಾಸ್ತಿಕರಾಗಿದ್ದಾರೆ. ಅವರು ಯಾವ ಧರ್ಮವನ್ನೂ ನಂಬುವುದಿಲ್ಲ. ಆದರೆ ಆತನ ಪಕ್ಷ ಮತಗಳಿಗಾಗಿ ಎಐಎಂಐಎಂ ಪಕ್ಷದ ಓವೈಸಿ ಜೊತೆ ಕೈಜೋಡಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಮಿಡಿಯನ್ ಮುನಾವರ್ ಫಾರೂಕಿಯ ಪ್ರದರ್ಶನವನ್ನು ನಾವು ರದ್ದುಗೊಳಿಸಿದ್ದೆವು. ಆತ ಟ್ವಿಟರ್‌ನಲ್ಲಿ ಕೆಟಿಆರ್‌ರನ್ನು ಸಂಪರ್ಕಿಸಿ ಮತ್ತೆ ಪ್ರದರ್ಶನ ಮಾಡಿದ್ದಾರೆ. ಅಲ್ಲಿ 5000 ಪೊಲೀಸರನ್ನು ನಿಯೋಜಿಸಲಾಗಿದೆ. ನಾಲ್ಕು ಐಎಎಸ್ ಅಧಿಕಾರಿಗಳನ್ನು ಹಾಕಿ ಪ್ರದರ್ಶನ ಯಶಸ್ವಿಗೊಳಿಸಲಾಗಿದೆ. ಮುನಾವರ್ ಫಾರೂಕಿಯನ್ನು ಕರೆಸಿ ನಮ್ಮ ದೇವರನ್ನು ಹಂಗಿಸಲಾಗುತ್ತಿದೆ. ಇದೇ ತೆಲಂಗಾಣದಲ್ಲಿ ಕೋಮು ವಾತವರಣ ಇರುವುದಕ್ಕೆ ಕಾರಣ ಎಂದು ರಾಜಾ ಸಿಂಗ್ ಹೇಳಿದ್ದಾರೆ.

ಬಿಜೆಪಿಯು ಅವರನ್ನು ಉಚ್ಛಾಟಿಸುವುದರ ಕುರಿತು ಪ್ರತಿಕ್ರಿಯಿಸಿದ್ದು, “ನಾನು ಯಾವುದೇ ಧರ್ಮದ ವಿರುದ್ಧವಿಲ್ಲ, ವ್ಯಕ್ತಿಗಳ ವಿರುದ್ಧವಿದ್ದೇನೆ ಎಂದು ಪಕ್ಷದ ಮುಖಂಡರಿಗೆ ಮನವರಿಕೆ ಮಾಡಿಕೊಡುತ್ತೇನೆ” ಎಂದು ಅವರು ಹೇಳಿದ್ದಾರೆ.

“ಕೋರ್ಟ್ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ನಿರ್ಭಂದ ವಿಧಿಸಿದೆ. ಆದರೂ ನಾನು ಮಾತನಾಡದೇ ಇರಲು ಸಾಧ್ಯವಿಲ್ಲ. ರಿಸ್ಕ್ ತೆಗೆದುಕೊಂಡು ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ. ಏಕೆಂದರೆ ರಾಷ್ಟ್ರೀಯ ಮಾಧ್ಯಮಗಳು ನನ್ನ ವಿರುದ್ಧ ಪಿತೂರಿ ನಡೆಸಿವೆ ಎಂದು ಆರೋಪಿಸಿದ್ದಾರೆ. ಸದ್ಯ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.

ಇದನ್ನೂ ಓದಿ; ತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...