Homeಮುಖಪುಟಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

ಕೋಮು ಉದ್ವಿಗ್ನತೆ: ಒಡಿಶಾದ ಕಟಕ್‌ನಲ್ಲಿ 36 ಗಂಟೆಗಳ ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

- Advertisement -
- Advertisement -

ದುರ್ಗಾ ಮೂರ್ತಿ ಮೆರವಣಿಗೆ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ಬೈಕ್ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆ, ಕೋಮು ಉದ್ವಿಗ್ನತೆ ಹೆಚ್ಚಾಗುವುದನ್ನು ತಡೆಯಲು ಅಧಿಕಾರಿಗಳು ಭಾನುವಾರ (ಅ. 5) ರಾತ್ರಿಯಿಂದ ಒಡಿಶಾದ ಕಟಕ್‌ ನಗರದ ಹಲವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 36 ಗಂಟೆಗಳ ಕರ್ಫ್ಯೂ ವಿಧಿಸಿದ್ದಾರೆ.

ಹಿಂಸಾಚಾರದ ಘಟನೆಗಳಲ್ಲಿ 25 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ವಿಎಚ್‌ಪಿ ಸೋಮವಾರ (ಅ.6)12 ಗಂಟೆಗಳ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ.

“ಶುಕ್ರವಾರ (ಅ. 3) ಸಂಜೆ ದುರ್ಗಾ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳ ನಡುವೆ ವೈಯಕ್ತಿಕ ಜಗಳ ನಡೆದಿತ್ತು. ನಂತರ, ನಾಲ್ವರು ದುಷ್ಕರ್ಮಿಗಳನ್ನು ಬಂಧಿಸಿ ಶನಿವಾರ (ಅ. 4) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ” ಎಂದು ಭಾನುವಾರ (ಅ. 5) ಸಂಜೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಪೊಲೀಸ್ ಆಯುಕ್ತ ಎಸ್. ದೇವ್ ದತ್ತ ಸಿಂಗ್ ಹೇಳಿದ್ದಾರೆ.

“ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಬಗ್ಗೆ ಆತಂಕ ಇದ್ದಿದ್ದರಿಂದ ವಿಎಚ್‌ಪಿ ಭಾನುವಾರ ಕಟಕ್‌ನಲ್ಲಿ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಅನುಮತಿ ನೀಡಿರಲಿಲ್ಲ” ಎಂದು ಅವರು ತಿಳಿಸಿದ್ದಾರೆ.

“ಪೊಲೀಸರು ರ‍್ಯಾಲಿಯನ್ನು ತಡೆಯಲು ಪ್ರಯತ್ನಿಸಿದಾಗ ಉದ್ವಿಗ್ನತೆ ಉಂಟಾಯಿತು. ರ‍್ಯಾಲಿಯು ಕೆಲವು ಸೂಕ್ಷ್ಮ ಪ್ರದೇಶಗಳ ಕಡೆಗೆ ಸಾಗುತ್ತಿತ್ತು, ಅಲ್ಲಿ ಕೋಮು ಉದ್ವಿಗ್ನತೆ ಭುಗಿಲೇಳಬಹುದು ಎಂದು ಪೊಲೀಸರು ದೃಢವಾದ ನಿಲುವನ್ನು ತೆಗೆದುಕೊಂಡು ರ‍್ಯಾಲಿ ಮುಂದೆ ಹೋಗದಂತೆ ತಡೆದರು. ಈ ವೇಳೆ ರ‍್ಯಾಲಿಯಲ್ಲಿದ್ದವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿದರು. ಇದರಿಂದ ಇಪ್ಪತ್ತೈದು ಸಿಬ್ಬಂದಿ ಗಾಯಗೊಂಡರು, ಅವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ” ಎಂದು ದೇವ್ ದತ್ತ ಸಿಂಗ್ ವಿವರಿಸಿದ್ದಾರೆ.

“ದುಷ್ಕರ್ಮಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ ರಬ್ಬರ್ ಗುಂಡುಗಳನ್ನು ಹಾರಿಸಿದರು. ಪ್ರಸ್ತುತ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ” ಎಂದು ಅವರು ಹೇಳಿದ್ದಾರೆ.

ಅಗತ್ಯ ಸೇವೆಗಳಿಗೆ ವಿನಾಯಿತಿ

ಭಾನುವಾರ ರಾತ್ರಿ 10 ಗಂಟೆಯಿಂದ 36 ಗಂಟೆಗಳ ಕಾಲ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತರು ಘೋಷಿಸಿದ್ದಾರೆ. ಆರೋಗ್ಯ ಸೇವೆ, ಹಾಲು, ತರಕಾರಿ ಪೂರೈಕೆ, ವಿದ್ಯಾರ್ಥಿಗಳು ಮತ್ತು ಕಚೇರಿಗೆ ಹೋಗುವವರ ಸಂಚಾರ ಸೇರಿದಂತೆ ಅಗತ್ಯ ಸೇವೆಗಳಿವೆ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವೈ.ಬಿ. ಖುರಾನಿಯಾ ಎಚ್ಚರಿಸಿದ್ದಾರೆ. ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಸೂಕ್ತ ನಿಬಂಧನೆಗಳಡಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಹಿಂಸಾಚಾರದ ಹಿನ್ನೆಲೆ ಒಡಿಶಾ ಸರ್ಕಾರ ಕಟಕ್‌ನಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ವಿಎಚ್‌ಪಿ ಸೋಮವಾರ ಮುಂಜಾನೆಯಿಂದ ಸಂಜೆಯವರೆಗೆ ಬಂದ್‌ಗೆ ಕರೆ ನೀಡಿದೆ.

ಶಾಂತಿ ಕಾಪಾಡಲು ಸಿಎಂ ಮನವಿ

ಕಟಕ್‌ನ ವಿಶಿಷ್ಟವಾದ ಸಹೋದರತ್ವದ ಗುರುತನ್ನು ರಕ್ಷಿಸಲು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಮೋಹನ್ ಮಾಝಿ ಜನರಿಗೆ ಮನವಿ ಮಾಡಿದ್ದಾರೆ.

“ಕಟಕ್ ಸಾವಿರ ವರ್ಷಗಳಷ್ಟು ಹಳೆಯದಾದ ನಗರ, ಸಹೋದರತ್ವ ಮತ್ತು ಕೋಮು ಸೌಹಾರ್ದತೆಯ ವಿಶಿಷ್ಟ ಸಂಕೇತ. ಇತ್ತೀಚಿನ ದಿನಗಳಲ್ಲಿ ಕೆಲವು ದುಷ್ಕರ್ಮಿಗಳ ಕೃತ್ಯಗಳಿಂದಾಗಿ ನಗರದಲ್ಲಿ ಶಾಂತಿ ಭಂಗವಾಗಿದ್ದು, ಸಾಮಾನ್ಯ ನಾಗರಿಕರ ಜೀವನಕ್ಕೆ ಸಮಸ್ಯೆ ಉಂಟಾಗಿದೆ. ಸರ್ಕಾರವು ಇಂತಹ ಕಿಡಿಗೇಡಿಗಳ ಮೇಲೆ ನಿಗಾ ಇಡುತ್ತಿದೆ ಮತ್ತು ಕಾನೂನಿನ ಪ್ರಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸಿಎಂ ಮಾಝಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಕಟಕ್ ನಗರ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಇತ್ತೀಚೆಗೆ ಉದ್ವಿಗ್ನತೆ ಉಂಟಾಗಿ ಹಿಂಸಾತ್ಮಕ ಘಟನೆಗಳು ನಡೆದ ನಂತರ, ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳನ್ನು ರವಾನಿಸುವ ಮೂಲಕ ಕೋಮು ಹಿಂಸಾಚಾರವನ್ನು ಹರಡಲು ಇಂಟರ್ನೆಟ್ ದುರುಪಯೋಗದ ಬಗ್ಗೆ ಜಿಲ್ಲಾಡಳಿತವು ಕಳವಳ ವ್ಯಕ್ತಪಡಿಸಿದೆ” ಎಂದು ರಾಜ್ಯ ಗೃಹ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.

ಲಡಾಖ್ ಹತ್ಯೆಗಳ ಕುರಿತು ನ್ಯಾಯಾಂಗ ತನಿಖೆ ನಡೆಯುವವರೆಗೂ ಜೈಲಿನಲ್ಲಿರಲು ಸಿದ್ಧ: ಸೋನಮ್ ವಾಂಗ್ಚುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...