Homeಮುಖಪುಟಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ತಮಿಳುನಾಡಿನಲ್ಲಿ ಆಕ್ರಮಣಕಾರಿ ಹಿಂದುತ್ವ ರೂಪುಗೊಳ್ಳುವುದು ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯವು 100 ವರ್ಷಗಳ ಹಿಂದೆಯೆ ಧರ್ಮಗಳನ್ನು ಪ್ರಜಾಪ್ರಭುತ್ವಗೊಳಿಸಿದೆ ಎಂದು ರಾಜ್ಯದ ವಿತ್ತ ಸಚಿವ ತ್ಯಾಗರಾಜನ್ ಹೇಳಿದ್ದಾರೆ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯಿಂದಾಗಿ ತಮ್ಮ ಕಂಪನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಬದಲಾಯಿಸಲು ಬಯಸುವ ಉದ್ಯೋಗದಾತರಿಗೆ ತಾವು ಅವಕಾಶ ಕಲ್ಪಿಸಲು ಕೆಲಸ ಮಾಡುವುದಾಗಿ ತಮಿಳುನಾಡು ವಿತ್ತ ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಆಕ್ರಮಣಕಾರಿ ಹಿಂದುತ್ವ ರೂಪುಗೊಳ್ಳುವುದು ತುಂಬಾ ತ್ರಾಸದಾಯಕವಾಗಿದೆ ಎಂದು ಹೇಳಿರುವ ಅವರು, “ರಾಜ್ಯವು 100 ವರ್ಷಗಳ ಹಿಂದೆಯೆ ಧರ್ಮಗಳನ್ನು ಪ್ರಜಾಪ್ರಭುತ್ವಗೊಳಿಸಿದ್ದು, ಅದರ ಮೌಲ್ಯಗಳಿಗೆ ಯಾವುದೇ ರೀತಿಯ ಮೂಲಭೂತವಾದಗಳು ಅಡ್ಡಿಪಡಿಸಲು ಸಾಧ್ಯವಿಲ್ಲ” ರಾಜ್ಯವು 100 ವರ್ಷಗಳ ಹಿಂದೆಯೆ ತನ್ನ ನಂಬಿಕೆಯನ್ನು ಪ್ರಜಾಪ್ರಭುತ್ವಗೊಳಿಸಿದ್ದು, ಅದರ ಮೌಲ್ಯಗಳಿಗೆ ಯಾವುದೇ ರೀತಿಯ ಮೂಲಭೂತವಾದಗಳು ಅಡ್ಡಿಪಡಿಸಲು ಸಾಧ್ಯವಿಲ್ಲಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಡಿಎಂಕೆ ನಾಯಕರು ವಿಶ್ವದೆಲ್ಲೆಡೆಯಿಂದ ರಾಜ್ಯಕ್ಕೆ ಬಂಡವಾಳವನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಇತ್ತೀಚಿನ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ತ್ಯಾಗರಾಜನ್ ಅವರು, ಸರಕು ಮತ್ತು ಸೇವಾ ತೆರಿಗೆಯ ದೋಷಯುಕ್ತ ಅನುಷ್ಠಾನ ಮತ್ತು ಸಂಸ್ಥೆಗಳ ಮೇಲೆ ಒಕ್ಕೂಟ ಸರ್ಕಾರದ ಹೆಚ್ಚುತ್ತಿರುವ ನಿಯಂತ್ರಣದ ಕುರಿತು ಕಳವಳ ವ್ಯಕ್ತಪಡಿಸಿದ್ದಾಗಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

“ಒಕ್ಕೂಟ ಸರ್ಕಾರದ ಈ ನಡೆ ದೇಶದಲ್ಲಿ ಭೀಕರ ಪರಿಣಾಮಗಳಿಗೆ ಕಾರಣವಾಗಬಹುದು” ಎಂದು ತ್ಯಾಗರಾಜನ್‌ ಎಚ್ಚರಿಸಿದ್ದು, “ತಮಿಳುನಾಡು ಸರ್ಕಾರವು ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ನಿಗಾ ಇರಿಸಿದೆ. ಪ್ರತಿ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ತಮಿಳುನಾಡನ್ನು ವೈವಿಧ್ಯಗೊಳಿಸಲು ಬಯಸುವ ಐಟಿ ಕಂಪನಿಗಳು ಬೃಹತ್ ಆಸಕ್ತಿಯಿಂದ ಇದೆ. ಜೊತೆಗೆ ನಾವು ಕೂಡಾ ಈಗಾಗಲೇ ರೇಸ್‌ನಲ್ಲಿದ್ದೇವೆ. ಇಂತಹ ಕಂಪೆನಿಗಳನ್ನು ಸಕ್ರಿಯವಾಗಿ ಬೆಳೆಸುವ ಜನರು ನಮ್ಮೊಂದಿಗೆ ಇದ್ದಾರೆ. ನಮ್ಮ ಸರ್ಕಾರವು ಈ ಬಗ್ಗೆ ಕೆಲಸ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ತಮಿಳುನಾಡು ಹೂಡಿಕೆಯಲ್ಲಿ 53% ರಷ್ಟು ಏರಿಕೆ ಕಂಡಿದೆ. ಹಣಕಾಸು ಹೂಡಿಕೆದಾರರು ಮತ್ತು ಕಾರ್ಪೊರೇಟ್‌ಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರವು ಮುಂದಿನ ಆರು ತಿಂಗಳೊಳಗೆ ವಿವಿಧ ದೇಶಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದ ಸ್ಟಾಲಿನ್ ಅವರು, ಇತ್ತೀಚೆಗೆ ವಾಣಿಜ್ಯ ಮುಖ್ಯಸ್ಥರನ್ನು ಭೇಟಿ ಮಾಡಲು ದುಬೈಗೆ ಭೇಟಿ ನೀಡಿದ್ದರು. 6,100 ಕೋಟಿ ರೂಪಾಯಿ ಮೌಲ್ಯದ ಒಪ್ಪಂದ ಪತ್ರಗಳಿಗೆ ಸಹಿ ಹಾಕಲಾಗಿದ್ದು, ಇದರಿಂದಾಗಿ ತಮಿಳುನಾಡಿನಲ್ಲಿ 14,000 ಉದ್ಯೋಗಳು ಸೃಷ್ಟಿಯಾಗಲಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ತಮಿಳುನಾಡಿನಲ್ಲಿ ಬಿಜೆಪಿ ಆಕ್ರಮಣಕಾರಿ ರಾಜಕೀಯಕ್ಕೆ ಪ್ರಯತ್ನಿಸುತ್ತಿದೆ. ಆದರೆ ಸಚಿವ ತ್ಯಾಗರಾಜನ್ ಅವರು ಹಿಂದುತ್ವದ ವಿಸ್ತರಣೆಗೆ ತಮಿಳುನಾಡು ದೊಡ್ಡ ಸವಾಲನ್ನು ಒಡ್ಡುತ್ತದೆ ಎಂದು ಹೇಳಿದ್ದಾರೆ.

“ತಮಿಳುನಾಡಿನಲ್ಲಿ ಹಿಂದುತ್ವ ಬೆಳೆದರೆ, ಅದು ನಮ್ಮ ಜಾತ್ಯತೀತ ಪ್ರಜಾಪ್ರಭುತ್ವಕ್ಕೆ ಅಂತಿಮ ಮೊಳೆಯಾಗುತ್ತದೆ. ಈ ರೀತಿಯ ಪರಿಸ್ಥಿತಿ ರಾಜ್ಯದಲ್ಲಿ ಎಂದಿಗೂ ಸಂಭವಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಮಿಳುನಾಡು ದೇಶದಲ್ಲೇ ಅತ್ಯಂತ ಶ್ರದ್ಧಾಭಕ್ತಿಯ ರಾಜ್ಯವಾಗಿದ್ದು, ಹಿಂದುತ್ವದ ಕಾರಣದಿಂದಲ್ಲ. ನಾವು ಬಹಳ ಹಿಂದೆಯೇ ಧರ್ಮವನ್ನು ಪ್ರಜಾಪ್ರಭುತ್ವಗೊಳಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಇಲ್ಲಿನ ದೇವಸ್ಥಾನಗಳಲ್ಲಿ ಯಾರು ಬೇಕಾದರೂ ಟ್ರಸ್ಟಿ ಆಗಬಹುದು, ಯಾರು ಬೇಕಾದರೂ ದೇವಸ್ಥಾನ ಕಟ್ಟಬಹುದು ಮತ್ತು ಅದನ್ನು ನೋಡಿಕೊಳ್ಳಬಹುದು. ನಾವು ನೂರು ವರ್ಷಗಳ ಹಿಂದೆ ಇಂತಹ ಸಮಸ್ಯೆಗಳನ್ನು ಪರಿಹರಿಸಿದ್ದೇವೆ. ಇತ್ತೀಚಿನ ಪುರಾತತ್ತ್ವ ಶಾಸ್ತ್ರದ ಸಂಶೋಧನೆಗಳ ಪ್ರಕಾರ ನಮ್ಮ ಸಂಸ್ಕೃತಿ 3,000 ವರ್ಷಗಳಷ್ಟು ಹಳೆಯದು. ನಾವು ಯಾವಾಗಲೂ ಯಾವುದೇ ರೀತಿಯ ಮೂಲಭೂತವಾದದಿಂದ ದೂರವಿದ್ದೇವೆ” ಎಂದು ತ್ಯಾಗರಾಜನ್ ಹೇಳಿದ್ದಾರೆ.

ಕೆಟ್ಟ ನೀತಿಗಳು ದೇಶದ ಮೇಲೆ ಶಾಶ್ವತವಾದ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ ಅವರು, ಟರ್ಕಿ ಮತ್ತು ಶ್ರೀಲಂಕಾದಂತಹ ದೇಶಗಳು ಅವುಗಳ ತೀವ್ರತೆಯನ್ನು ಎದುರಿಸಿದ್ದು, ಇದು ಇತರರು ಕಲಿಯುವಂತಹ ಉದಾಹರಣೆಗಳಾಗಿವೆ ಎಂದು ತ್ಯಾಗರಾಜನ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...