Homeಮುಖಪುಟಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ತಮಿಳುನಾಡಿನಲ್ಲಿ ಆಕ್ರಮಣಕಾರಿ ಹಿಂದುತ್ವ ರೂಪುಗೊಳ್ಳುವುದು ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯವು 100 ವರ್ಷಗಳ ಹಿಂದೆಯೆ ಧರ್ಮಗಳನ್ನು ಪ್ರಜಾಪ್ರಭುತ್ವಗೊಳಿಸಿದೆ ಎಂದು ರಾಜ್ಯದ ವಿತ್ತ ಸಚಿವ ತ್ಯಾಗರಾಜನ್ ಹೇಳಿದ್ದಾರೆ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯಿಂದಾಗಿ ತಮ್ಮ ಕಂಪನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಬದಲಾಯಿಸಲು ಬಯಸುವ ಉದ್ಯೋಗದಾತರಿಗೆ ತಾವು ಅವಕಾಶ ಕಲ್ಪಿಸಲು ಕೆಲಸ ಮಾಡುವುದಾಗಿ ತಮಿಳುನಾಡು ವಿತ್ತ ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಆಕ್ರಮಣಕಾರಿ ಹಿಂದುತ್ವ ರೂಪುಗೊಳ್ಳುವುದು ತುಂಬಾ ತ್ರಾಸದಾಯಕವಾಗಿದೆ ಎಂದು ಹೇಳಿರುವ ಅವರು, “ರಾಜ್ಯವು 100 ವರ್ಷಗಳ ಹಿಂದೆಯೆ ಧರ್ಮಗಳನ್ನು ಪ್ರಜಾಪ್ರಭುತ್ವಗೊಳಿಸಿದ್ದು, ಅದರ ಮೌಲ್ಯಗಳಿಗೆ ಯಾವುದೇ ರೀತಿಯ ಮೂಲಭೂತವಾದಗಳು ಅಡ್ಡಿಪಡಿಸಲು ಸಾಧ್ಯವಿಲ್ಲ” ರಾಜ್ಯವು 100 ವರ್ಷಗಳ ಹಿಂದೆಯೆ ತನ್ನ ನಂಬಿಕೆಯನ್ನು ಪ್ರಜಾಪ್ರಭುತ್ವಗೊಳಿಸಿದ್ದು, ಅದರ ಮೌಲ್ಯಗಳಿಗೆ ಯಾವುದೇ ರೀತಿಯ ಮೂಲಭೂತವಾದಗಳು ಅಡ್ಡಿಪಡಿಸಲು ಸಾಧ್ಯವಿಲ್ಲಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಡಿಎಂಕೆ ನಾಯಕರು ವಿಶ್ವದೆಲ್ಲೆಡೆಯಿಂದ ರಾಜ್ಯಕ್ಕೆ ಬಂಡವಾಳವನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಇತ್ತೀಚಿನ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ತ್ಯಾಗರಾಜನ್ ಅವರು, ಸರಕು ಮತ್ತು ಸೇವಾ ತೆರಿಗೆಯ ದೋಷಯುಕ್ತ ಅನುಷ್ಠಾನ ಮತ್ತು ಸಂಸ್ಥೆಗಳ ಮೇಲೆ ಒಕ್ಕೂಟ ಸರ್ಕಾರದ ಹೆಚ್ಚುತ್ತಿರುವ ನಿಯಂತ್ರಣದ ಕುರಿತು ಕಳವಳ ವ್ಯಕ್ತಪಡಿಸಿದ್ದಾಗಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

“ಒಕ್ಕೂಟ ಸರ್ಕಾರದ ಈ ನಡೆ ದೇಶದಲ್ಲಿ ಭೀಕರ ಪರಿಣಾಮಗಳಿಗೆ ಕಾರಣವಾಗಬಹುದು” ಎಂದು ತ್ಯಾಗರಾಜನ್‌ ಎಚ್ಚರಿಸಿದ್ದು, “ತಮಿಳುನಾಡು ಸರ್ಕಾರವು ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ನಿಗಾ ಇರಿಸಿದೆ. ಪ್ರತಿ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ತಮಿಳುನಾಡನ್ನು ವೈವಿಧ್ಯಗೊಳಿಸಲು ಬಯಸುವ ಐಟಿ ಕಂಪನಿಗಳು ಬೃಹತ್ ಆಸಕ್ತಿಯಿಂದ ಇದೆ. ಜೊತೆಗೆ ನಾವು ಕೂಡಾ ಈಗಾಗಲೇ ರೇಸ್‌ನಲ್ಲಿದ್ದೇವೆ. ಇಂತಹ ಕಂಪೆನಿಗಳನ್ನು ಸಕ್ರಿಯವಾಗಿ ಬೆಳೆಸುವ ಜನರು ನಮ್ಮೊಂದಿಗೆ ಇದ್ದಾರೆ. ನಮ್ಮ ಸರ್ಕಾರವು ಈ ಬಗ್ಗೆ ಕೆಲಸ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ತಮಿಳುನಾಡು ಹೂಡಿಕೆಯಲ್ಲಿ 53% ರಷ್ಟು ಏರಿಕೆ ಕಂಡಿದೆ. ಹಣಕಾಸು ಹೂಡಿಕೆದಾರರು ಮತ್ತು ಕಾರ್ಪೊರೇಟ್‌ಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರವು ಮುಂದಿನ ಆರು ತಿಂಗಳೊಳಗೆ ವಿವಿಧ ದೇಶಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದ ಸ್ಟಾಲಿನ್ ಅವರು, ಇತ್ತೀಚೆಗೆ ವಾಣಿಜ್ಯ ಮುಖ್ಯಸ್ಥರನ್ನು ಭೇಟಿ ಮಾಡಲು ದುಬೈಗೆ ಭೇಟಿ ನೀಡಿದ್ದರು. 6,100 ಕೋಟಿ ರೂಪಾಯಿ ಮೌಲ್ಯದ ಒಪ್ಪಂದ ಪತ್ರಗಳಿಗೆ ಸಹಿ ಹಾಕಲಾಗಿದ್ದು, ಇದರಿಂದಾಗಿ ತಮಿಳುನಾಡಿನಲ್ಲಿ 14,000 ಉದ್ಯೋಗಳು ಸೃಷ್ಟಿಯಾಗಲಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ತಮಿಳುನಾಡಿನಲ್ಲಿ ಬಿಜೆಪಿ ಆಕ್ರಮಣಕಾರಿ ರಾಜಕೀಯಕ್ಕೆ ಪ್ರಯತ್ನಿಸುತ್ತಿದೆ. ಆದರೆ ಸಚಿವ ತ್ಯಾಗರಾಜನ್ ಅವರು ಹಿಂದುತ್ವದ ವಿಸ್ತರಣೆಗೆ ತಮಿಳುನಾಡು ದೊಡ್ಡ ಸವಾಲನ್ನು ಒಡ್ಡುತ್ತದೆ ಎಂದು ಹೇಳಿದ್ದಾರೆ.

“ತಮಿಳುನಾಡಿನಲ್ಲಿ ಹಿಂದುತ್ವ ಬೆಳೆದರೆ, ಅದು ನಮ್ಮ ಜಾತ್ಯತೀತ ಪ್ರಜಾಪ್ರಭುತ್ವಕ್ಕೆ ಅಂತಿಮ ಮೊಳೆಯಾಗುತ್ತದೆ. ಈ ರೀತಿಯ ಪರಿಸ್ಥಿತಿ ರಾಜ್ಯದಲ್ಲಿ ಎಂದಿಗೂ ಸಂಭವಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಮಿಳುನಾಡು ದೇಶದಲ್ಲೇ ಅತ್ಯಂತ ಶ್ರದ್ಧಾಭಕ್ತಿಯ ರಾಜ್ಯವಾಗಿದ್ದು, ಹಿಂದುತ್ವದ ಕಾರಣದಿಂದಲ್ಲ. ನಾವು ಬಹಳ ಹಿಂದೆಯೇ ಧರ್ಮವನ್ನು ಪ್ರಜಾಪ್ರಭುತ್ವಗೊಳಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಇಲ್ಲಿನ ದೇವಸ್ಥಾನಗಳಲ್ಲಿ ಯಾರು ಬೇಕಾದರೂ ಟ್ರಸ್ಟಿ ಆಗಬಹುದು, ಯಾರು ಬೇಕಾದರೂ ದೇವಸ್ಥಾನ ಕಟ್ಟಬಹುದು ಮತ್ತು ಅದನ್ನು ನೋಡಿಕೊಳ್ಳಬಹುದು. ನಾವು ನೂರು ವರ್ಷಗಳ ಹಿಂದೆ ಇಂತಹ ಸಮಸ್ಯೆಗಳನ್ನು ಪರಿಹರಿಸಿದ್ದೇವೆ. ಇತ್ತೀಚಿನ ಪುರಾತತ್ತ್ವ ಶಾಸ್ತ್ರದ ಸಂಶೋಧನೆಗಳ ಪ್ರಕಾರ ನಮ್ಮ ಸಂಸ್ಕೃತಿ 3,000 ವರ್ಷಗಳಷ್ಟು ಹಳೆಯದು. ನಾವು ಯಾವಾಗಲೂ ಯಾವುದೇ ರೀತಿಯ ಮೂಲಭೂತವಾದದಿಂದ ದೂರವಿದ್ದೇವೆ” ಎಂದು ತ್ಯಾಗರಾಜನ್ ಹೇಳಿದ್ದಾರೆ.

ಕೆಟ್ಟ ನೀತಿಗಳು ದೇಶದ ಮೇಲೆ ಶಾಶ್ವತವಾದ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ ಅವರು, ಟರ್ಕಿ ಮತ್ತು ಶ್ರೀಲಂಕಾದಂತಹ ದೇಶಗಳು ಅವುಗಳ ತೀವ್ರತೆಯನ್ನು ಎದುರಿಸಿದ್ದು, ಇದು ಇತರರು ಕಲಿಯುವಂತಹ ಉದಾಹರಣೆಗಳಾಗಿವೆ ಎಂದು ತ್ಯಾಗರಾಜನ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...