Homeಮುಖಪುಟಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ತಮಿಳುನಾಡಿನಲ್ಲಿ ಆಕ್ರಮಣಕಾರಿ ಹಿಂದುತ್ವ ರೂಪುಗೊಳ್ಳುವುದು ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯವು 100 ವರ್ಷಗಳ ಹಿಂದೆಯೆ ಧರ್ಮಗಳನ್ನು ಪ್ರಜಾಪ್ರಭುತ್ವಗೊಳಿಸಿದೆ ಎಂದು ರಾಜ್ಯದ ವಿತ್ತ ಸಚಿವ ತ್ಯಾಗರಾಜನ್ ಹೇಳಿದ್ದಾರೆ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯಿಂದಾಗಿ ತಮ್ಮ ಕಂಪನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಬದಲಾಯಿಸಲು ಬಯಸುವ ಉದ್ಯೋಗದಾತರಿಗೆ ತಾವು ಅವಕಾಶ ಕಲ್ಪಿಸಲು ಕೆಲಸ ಮಾಡುವುದಾಗಿ ತಮಿಳುನಾಡು ವಿತ್ತ ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಆಕ್ರಮಣಕಾರಿ ಹಿಂದುತ್ವ ರೂಪುಗೊಳ್ಳುವುದು ತುಂಬಾ ತ್ರಾಸದಾಯಕವಾಗಿದೆ ಎಂದು ಹೇಳಿರುವ ಅವರು, “ರಾಜ್ಯವು 100 ವರ್ಷಗಳ ಹಿಂದೆಯೆ ಧರ್ಮಗಳನ್ನು ಪ್ರಜಾಪ್ರಭುತ್ವಗೊಳಿಸಿದ್ದು, ಅದರ ಮೌಲ್ಯಗಳಿಗೆ ಯಾವುದೇ ರೀತಿಯ ಮೂಲಭೂತವಾದಗಳು ಅಡ್ಡಿಪಡಿಸಲು ಸಾಧ್ಯವಿಲ್ಲ” ರಾಜ್ಯವು 100 ವರ್ಷಗಳ ಹಿಂದೆಯೆ ತನ್ನ ನಂಬಿಕೆಯನ್ನು ಪ್ರಜಾಪ್ರಭುತ್ವಗೊಳಿಸಿದ್ದು, ಅದರ ಮೌಲ್ಯಗಳಿಗೆ ಯಾವುದೇ ರೀತಿಯ ಮೂಲಭೂತವಾದಗಳು ಅಡ್ಡಿಪಡಿಸಲು ಸಾಧ್ಯವಿಲ್ಲಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಡಿಎಂಕೆ ನಾಯಕರು ವಿಶ್ವದೆಲ್ಲೆಡೆಯಿಂದ ರಾಜ್ಯಕ್ಕೆ ಬಂಡವಾಳವನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಇತ್ತೀಚಿನ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ತ್ಯಾಗರಾಜನ್ ಅವರು, ಸರಕು ಮತ್ತು ಸೇವಾ ತೆರಿಗೆಯ ದೋಷಯುಕ್ತ ಅನುಷ್ಠಾನ ಮತ್ತು ಸಂಸ್ಥೆಗಳ ಮೇಲೆ ಒಕ್ಕೂಟ ಸರ್ಕಾರದ ಹೆಚ್ಚುತ್ತಿರುವ ನಿಯಂತ್ರಣದ ಕುರಿತು ಕಳವಳ ವ್ಯಕ್ತಪಡಿಸಿದ್ದಾಗಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

“ಒಕ್ಕೂಟ ಸರ್ಕಾರದ ಈ ನಡೆ ದೇಶದಲ್ಲಿ ಭೀಕರ ಪರಿಣಾಮಗಳಿಗೆ ಕಾರಣವಾಗಬಹುದು” ಎಂದು ತ್ಯಾಗರಾಜನ್‌ ಎಚ್ಚರಿಸಿದ್ದು, “ತಮಿಳುನಾಡು ಸರ್ಕಾರವು ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ನಿಗಾ ಇರಿಸಿದೆ. ಪ್ರತಿ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ತಮಿಳುನಾಡನ್ನು ವೈವಿಧ್ಯಗೊಳಿಸಲು ಬಯಸುವ ಐಟಿ ಕಂಪನಿಗಳು ಬೃಹತ್ ಆಸಕ್ತಿಯಿಂದ ಇದೆ. ಜೊತೆಗೆ ನಾವು ಕೂಡಾ ಈಗಾಗಲೇ ರೇಸ್‌ನಲ್ಲಿದ್ದೇವೆ. ಇಂತಹ ಕಂಪೆನಿಗಳನ್ನು ಸಕ್ರಿಯವಾಗಿ ಬೆಳೆಸುವ ಜನರು ನಮ್ಮೊಂದಿಗೆ ಇದ್ದಾರೆ. ನಮ್ಮ ಸರ್ಕಾರವು ಈ ಬಗ್ಗೆ ಕೆಲಸ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ತಮಿಳುನಾಡು ಹೂಡಿಕೆಯಲ್ಲಿ 53% ರಷ್ಟು ಏರಿಕೆ ಕಂಡಿದೆ. ಹಣಕಾಸು ಹೂಡಿಕೆದಾರರು ಮತ್ತು ಕಾರ್ಪೊರೇಟ್‌ಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರವು ಮುಂದಿನ ಆರು ತಿಂಗಳೊಳಗೆ ವಿವಿಧ ದೇಶಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದ ಸ್ಟಾಲಿನ್ ಅವರು, ಇತ್ತೀಚೆಗೆ ವಾಣಿಜ್ಯ ಮುಖ್ಯಸ್ಥರನ್ನು ಭೇಟಿ ಮಾಡಲು ದುಬೈಗೆ ಭೇಟಿ ನೀಡಿದ್ದರು. 6,100 ಕೋಟಿ ರೂಪಾಯಿ ಮೌಲ್ಯದ ಒಪ್ಪಂದ ಪತ್ರಗಳಿಗೆ ಸಹಿ ಹಾಕಲಾಗಿದ್ದು, ಇದರಿಂದಾಗಿ ತಮಿಳುನಾಡಿನಲ್ಲಿ 14,000 ಉದ್ಯೋಗಳು ಸೃಷ್ಟಿಯಾಗಲಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ತಮಿಳುನಾಡಿನಲ್ಲಿ ಬಿಜೆಪಿ ಆಕ್ರಮಣಕಾರಿ ರಾಜಕೀಯಕ್ಕೆ ಪ್ರಯತ್ನಿಸುತ್ತಿದೆ. ಆದರೆ ಸಚಿವ ತ್ಯಾಗರಾಜನ್ ಅವರು ಹಿಂದುತ್ವದ ವಿಸ್ತರಣೆಗೆ ತಮಿಳುನಾಡು ದೊಡ್ಡ ಸವಾಲನ್ನು ಒಡ್ಡುತ್ತದೆ ಎಂದು ಹೇಳಿದ್ದಾರೆ.

“ತಮಿಳುನಾಡಿನಲ್ಲಿ ಹಿಂದುತ್ವ ಬೆಳೆದರೆ, ಅದು ನಮ್ಮ ಜಾತ್ಯತೀತ ಪ್ರಜಾಪ್ರಭುತ್ವಕ್ಕೆ ಅಂತಿಮ ಮೊಳೆಯಾಗುತ್ತದೆ. ಈ ರೀತಿಯ ಪರಿಸ್ಥಿತಿ ರಾಜ್ಯದಲ್ಲಿ ಎಂದಿಗೂ ಸಂಭವಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಮಿಳುನಾಡು ದೇಶದಲ್ಲೇ ಅತ್ಯಂತ ಶ್ರದ್ಧಾಭಕ್ತಿಯ ರಾಜ್ಯವಾಗಿದ್ದು, ಹಿಂದುತ್ವದ ಕಾರಣದಿಂದಲ್ಲ. ನಾವು ಬಹಳ ಹಿಂದೆಯೇ ಧರ್ಮವನ್ನು ಪ್ರಜಾಪ್ರಭುತ್ವಗೊಳಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಇಲ್ಲಿನ ದೇವಸ್ಥಾನಗಳಲ್ಲಿ ಯಾರು ಬೇಕಾದರೂ ಟ್ರಸ್ಟಿ ಆಗಬಹುದು, ಯಾರು ಬೇಕಾದರೂ ದೇವಸ್ಥಾನ ಕಟ್ಟಬಹುದು ಮತ್ತು ಅದನ್ನು ನೋಡಿಕೊಳ್ಳಬಹುದು. ನಾವು ನೂರು ವರ್ಷಗಳ ಹಿಂದೆ ಇಂತಹ ಸಮಸ್ಯೆಗಳನ್ನು ಪರಿಹರಿಸಿದ್ದೇವೆ. ಇತ್ತೀಚಿನ ಪುರಾತತ್ತ್ವ ಶಾಸ್ತ್ರದ ಸಂಶೋಧನೆಗಳ ಪ್ರಕಾರ ನಮ್ಮ ಸಂಸ್ಕೃತಿ 3,000 ವರ್ಷಗಳಷ್ಟು ಹಳೆಯದು. ನಾವು ಯಾವಾಗಲೂ ಯಾವುದೇ ರೀತಿಯ ಮೂಲಭೂತವಾದದಿಂದ ದೂರವಿದ್ದೇವೆ” ಎಂದು ತ್ಯಾಗರಾಜನ್ ಹೇಳಿದ್ದಾರೆ.

ಕೆಟ್ಟ ನೀತಿಗಳು ದೇಶದ ಮೇಲೆ ಶಾಶ್ವತವಾದ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ ಅವರು, ಟರ್ಕಿ ಮತ್ತು ಶ್ರೀಲಂಕಾದಂತಹ ದೇಶಗಳು ಅವುಗಳ ತೀವ್ರತೆಯನ್ನು ಎದುರಿಸಿದ್ದು, ಇದು ಇತರರು ಕಲಿಯುವಂತಹ ಉದಾಹರಣೆಗಳಾಗಿವೆ ಎಂದು ತ್ಯಾಗರಾಜನ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...