Homeಮುಖಪುಟಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

- Advertisement -
- Advertisement -

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಡಿಸೆಂಬರ್ 27 ರಂದು ಡೆಹ್ರಾಡೂನ್‌ನ ಸೆಲಾಕಿ ಪ್ರದೇಶದಲ್ಲಿ ಜನಾಂಗೀಯ ಪ್ರೇರಿತ ದಾಳಿಯಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿದ ತ್ರಿಪುರಾದ 24 ವರ್ಷದ ಎಂಬಿಎ ವಿದ್ಯಾರ್ಥಿ ಅಂಜೆಲ್ ಚಕ್ಮಾ ಅವರ ಕ್ರೂರ ಹತ್ಯೆಯ ನಂತರ ಡಿಸೆಂಬರ್ 28 ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಸುದ್ದಿ ಬಂದಿದೆ.

ಉನಕೋಟಿ ಜಿಲ್ಲೆಯ ಮಚ್ಮಾರಾ ನಿವಾಸಿ ಅಂಜೆಲ್, ಅಗರ್ತಲಾದ ಹೋಲಿ ಕ್ರಾಸ್ ಶಾಲೆಯಲ್ಲಿ ಪದವಿ ಮುಗಿಸಿದ ನಂತರ ಎಂಬಿಎ ಓದಲು ಡೆಹ್ರಾಡೂನ್‌ಗೆ ತೆರಳಿದ್ದರು. ಅವರ ಕಿರಿಯ ಸಹೋದರ ಮೈಕೆಲ್ ಇದ್ದಾಗಲೇ ಅವರನ್ನು ಇರಿದು ಕೊಲ್ಲಲಾಯಿತು. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳಿಗೆ ಮರಣದಂಡನೆ ಅಥವಾ ಕನಿಷ್ಠ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಚಕ್ಮಾ ಕುಟುಂಬ ಒತ್ತಾಯಿಸಿದೆ.

ದೆಹಲಿ ಮೂಲದ ವಕೀಲ ಅನೂಪ್ ಪ್ರಕಾಶ್ ಅವಸ್ಥಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಕೇಂದ್ರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಈ ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಮಾಡಿದೆ.

“ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಈ ರಿಟ್ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ, ಇದು ಆರ್ಟಿಕಲ್ 14, 19(1)(ಎ) ಮತ್ತು (ಜಿ), ಮತ್ತು 21 ರ ಅಡಿಯಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಗಾಗಿ ರಿಟ್‌, ನಿರ್ದೇಶನಗಳು ಅಥವಾ ಆದೇಶಗಳನ್ನು ಹೊರಡಿಸಲು ಕೋರುತ್ತದೆ. ಇದರಿಂದಾಗಿ ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ಭಾರತೀಯ ನಾಗರಿಕರ ವಿರುದ್ಧ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರುತ್ತದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿಯಲ್ಲಿ ಅಂಜೆಲ್ ಚಕ್ಮಾ ಅವರ ಕೊನೆಯ ಮಾತುಗಳು: “ನಾವು ಭಾರತೀಯರು… ಅದನ್ನು ಸಾಬೀತುಪಡಿಸಲು ನಾವು ಯಾವ ಪ್ರಮಾಣಪತ್ರವನ್ನು ತೋರಿಸಬೇಕು” ಎಂಬ ಹೇಳಿಕೆಯನ್ನು ಹೈಲೈಟ್‌ ಮಾಡಲಾಗಿದೆ. ಘರ್ಷಣೆಯು ಮಾರಕ ಹಿಂಸಾಚಾರಕ್ಕೆ ಕಾರಣವಾಗುವ ಮೊದಲು ಅವರ ಸಾಂವಿಧಾನಿಕ ಸಂಬಂಧವನ್ನು ದುರಂತವಾಗಿ ಪ್ರತಿಬಿಂಬಿಸುವ ಹೇಳಿಕೆ ಇದಾಗಿದೆ.

ಅರ್ಜಿಯ ಪ್ರಕಾರ, ದಾಳಿಕೋರರು ಇಬ್ಬರೂ ಸಹೋದರರ ಮೇಲೆ ಹಲ್ಲೆ ನಡೆಸಿ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ. ಅಂಜೆಲ್ ಅವರ ಕುತ್ತಿಗೆ ಮತ್ತು ಬೆನ್ನುಮೂಳೆಗೆ ತೀವ್ರ ಗಾಯಗಳಾಗಿದ್ದವು, ಚಿಕಿತ್ಸೆಯ ಸಮಯದಲ್ಲಿ ಪ್ರಜ್ಞಾಹೀನರಾಗಿದ್ದರು. ತೀವ್ರ ನಿಗಾದಲ್ಲಿ ಹದಿನಾಲ್ಕು ದಿನಗಳಿಗೂ ಹೆಚ್ಚು ಕಾಲ ಕಳೆದ ನಂತರ ನಿಧನರಾದರು. ಅವರ ಸಾವು ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ಮತ್ತು ನ್ಯಾಯದ ಬೇಡಿಕೆಗಳನ್ನು ಹುಟ್ಟುಹಾಕಿತು.

ಕಾನೂನು ರೂಪಿಸುವವರೆಗೆ ಕನಿಷ್ಠ ಮಧ್ಯಂತರವಾಗಿ ಸೂಕ್ತ ರಿಟ್ ಹೊರಡಿಸುವಂತೆ, ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಲು, ಜನಾಂಗೀಯ ನಿಂದನೆಯನ್ನು ದ್ವೇಷ ಅಪರಾಧಗಳ ಪ್ರತ್ಯೇಕ ವರ್ಗವೆಂದು ಗುರುತಿಸಲು ಮತ್ತು ಅದಕ್ಕೆ ಅನುಗುಣವಾದ ಶಿಕ್ಷೆ ಪ್ರಮಾಣ ನಿರ್ಧರಿಸಬೇಕು ಎಂದು ನ್ಯಾಯಾಲಯವನ್ನು ಒತ್ತಾಯಿಸಲಾಗಿದೆ.

ಜನಾಂಗೀಯ ಅಪರಾಧಗಳನ್ನು ವರದಿ ಮಾಡಲು, ಅದನ್ನು ಪರಿಹರಿಸಲು ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ನೋಡಲ್ ಏಜೆನ್ಸಿ, ಶಾಶ್ವತ ಸಂಸ್ಥೆ, ಆಯೋಗ ಅಥವಾ ನಿರ್ದೇಶನಾಲಯವನ್ನು ರಚಿಸಬೇಕು. ಅಂತಹ ಅಪರಾಧಗಳನ್ನು ಪರಿಹರಿಸಲು ಪ್ರತಿ ಜಿಲ್ಲೆ ಮತ್ತು ಮಹಾನಗರ ಪ್ರದೇಶದಲ್ಲಿ ಮೀಸಲಾದ ವಿಶೇಷ ಪೊಲೀಸ್ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡುವಂತೆಯೂ ಅರ್ಜಿಯಲ್ಲಿ ಕೋರಿದೆ.

ಇದಲ್ಲದೆ, ಜನಾಂಗೀಯ ತಾರತಮ್ಯ ಮತ್ತು ಅದರ ಪರಿಹಾರದ ಕುರಿತು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯಾಗಾರಗಳು, ಚರ್ಚೆಗಳನ್ನು ಆಯೋಜಿಸಲು ಮನವಿಯಲ್ಲಿ ಕರೆ ನೀಡಲಾಗಿದೆ.

ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಪ್ರಸ್ತುತ ತನಿಖೆಯ ಆರಂಭಿಕ ಹಂತದಲ್ಲಿ ಜನಾಂಗೀಯ ಪಕ್ಷಪಾತವನ್ನು ಗುರುತಿಸಲು ಅಥವಾ ದಾಖಲಿಸಲು ಕಾರ್ಯವಿಧಾನವನ್ನು ಹೊಂದಿಲ್ಲ, ಇದರ ಪರಿಣಾಮವಾಗಿ ಅಂತಹ ಅಪರಾಧಗಳನ್ನು ಸಾಮಾನ್ಯ ಅಪರಾಧಗಳೆಂದು ಪರಿಗಣಿಸಲಾಗುತ್ತದೆ.

ಅಂಜೆಲ್ ಚಕ್ಮಾ ಅವರ ಹತ್ಯೆ ಪ್ರತ್ಯೇಕ ಘಟನೆಯಲ್ಲ, ಬದಲಾಗಿ ಈಶಾನ್ಯ ರಾಜ್ಯಗಳ ನಾಗರಿಕರ ವಿರುದ್ಧದ ಜನಾಂಗೀಯ ನಿಂದನೆ ಮತ್ತು ಹಿಂಸಾಚಾರದ ದೀರ್ಘಕಾಲೀನ ಮಾದರಿಯ ಭಾಗವಾಗಿದೆ ಎಂದು ಅರ್ಜಿಯಲ್ಲಿ ಒತ್ತಿ ಹೇಳಲಾಗಿದೆ. 2014 ರಲ್ಲಿ ನೀಡೋ ತಾನಿಯಮ್ ಸಾವು, ಮಹಾನಗರಗಳಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಮೇಲೆ ನಡೆದ ಅನೇಕ ಹಲ್ಲೆಗಳು, ಸಂಸತ್ತಿನ ಉತ್ತರಗಳಲ್ಲಿ ಕೇಂದ್ರವು ಒಪ್ಪಿಕೊಂಡ ಘಟನೆಗಳು ಸೇರಿದಂತೆ ಹಿಂದಿನ ಪ್ರಕರಣಗಳನ್ನು ಇದು ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...