Homeಮುಖಪುಟಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

- Advertisement -
- Advertisement -

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಡಿಸೆಂಬರ್ 27 ರಂದು ಡೆಹ್ರಾಡೂನ್‌ನ ಸೆಲಾಕಿ ಪ್ರದೇಶದಲ್ಲಿ ಜನಾಂಗೀಯ ಪ್ರೇರಿತ ದಾಳಿಯಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿದ ತ್ರಿಪುರಾದ 24 ವರ್ಷದ ಎಂಬಿಎ ವಿದ್ಯಾರ್ಥಿ ಅಂಜೆಲ್ ಚಕ್ಮಾ ಅವರ ಕ್ರೂರ ಹತ್ಯೆಯ ನಂತರ ಡಿಸೆಂಬರ್ 28 ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಸುದ್ದಿ ಬಂದಿದೆ.

ಉನಕೋಟಿ ಜಿಲ್ಲೆಯ ಮಚ್ಮಾರಾ ನಿವಾಸಿ ಅಂಜೆಲ್, ಅಗರ್ತಲಾದ ಹೋಲಿ ಕ್ರಾಸ್ ಶಾಲೆಯಲ್ಲಿ ಪದವಿ ಮುಗಿಸಿದ ನಂತರ ಎಂಬಿಎ ಓದಲು ಡೆಹ್ರಾಡೂನ್‌ಗೆ ತೆರಳಿದ್ದರು. ಅವರ ಕಿರಿಯ ಸಹೋದರ ಮೈಕೆಲ್ ಇದ್ದಾಗಲೇ ಅವರನ್ನು ಇರಿದು ಕೊಲ್ಲಲಾಯಿತು. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳಿಗೆ ಮರಣದಂಡನೆ ಅಥವಾ ಕನಿಷ್ಠ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಚಕ್ಮಾ ಕುಟುಂಬ ಒತ್ತಾಯಿಸಿದೆ.

ದೆಹಲಿ ಮೂಲದ ವಕೀಲ ಅನೂಪ್ ಪ್ರಕಾಶ್ ಅವಸ್ಥಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಕೇಂದ್ರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಈ ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಮಾಡಿದೆ.

“ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಈ ರಿಟ್ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ, ಇದು ಆರ್ಟಿಕಲ್ 14, 19(1)(ಎ) ಮತ್ತು (ಜಿ), ಮತ್ತು 21 ರ ಅಡಿಯಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಗಾಗಿ ರಿಟ್‌, ನಿರ್ದೇಶನಗಳು ಅಥವಾ ಆದೇಶಗಳನ್ನು ಹೊರಡಿಸಲು ಕೋರುತ್ತದೆ. ಇದರಿಂದಾಗಿ ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ಭಾರತೀಯ ನಾಗರಿಕರ ವಿರುದ್ಧ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರುತ್ತದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿಯಲ್ಲಿ ಅಂಜೆಲ್ ಚಕ್ಮಾ ಅವರ ಕೊನೆಯ ಮಾತುಗಳು: “ನಾವು ಭಾರತೀಯರು… ಅದನ್ನು ಸಾಬೀತುಪಡಿಸಲು ನಾವು ಯಾವ ಪ್ರಮಾಣಪತ್ರವನ್ನು ತೋರಿಸಬೇಕು” ಎಂಬ ಹೇಳಿಕೆಯನ್ನು ಹೈಲೈಟ್‌ ಮಾಡಲಾಗಿದೆ. ಘರ್ಷಣೆಯು ಮಾರಕ ಹಿಂಸಾಚಾರಕ್ಕೆ ಕಾರಣವಾಗುವ ಮೊದಲು ಅವರ ಸಾಂವಿಧಾನಿಕ ಸಂಬಂಧವನ್ನು ದುರಂತವಾಗಿ ಪ್ರತಿಬಿಂಬಿಸುವ ಹೇಳಿಕೆ ಇದಾಗಿದೆ.

ಅರ್ಜಿಯ ಪ್ರಕಾರ, ದಾಳಿಕೋರರು ಇಬ್ಬರೂ ಸಹೋದರರ ಮೇಲೆ ಹಲ್ಲೆ ನಡೆಸಿ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ. ಅಂಜೆಲ್ ಅವರ ಕುತ್ತಿಗೆ ಮತ್ತು ಬೆನ್ನುಮೂಳೆಗೆ ತೀವ್ರ ಗಾಯಗಳಾಗಿದ್ದವು, ಚಿಕಿತ್ಸೆಯ ಸಮಯದಲ್ಲಿ ಪ್ರಜ್ಞಾಹೀನರಾಗಿದ್ದರು. ತೀವ್ರ ನಿಗಾದಲ್ಲಿ ಹದಿನಾಲ್ಕು ದಿನಗಳಿಗೂ ಹೆಚ್ಚು ಕಾಲ ಕಳೆದ ನಂತರ ನಿಧನರಾದರು. ಅವರ ಸಾವು ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ಮತ್ತು ನ್ಯಾಯದ ಬೇಡಿಕೆಗಳನ್ನು ಹುಟ್ಟುಹಾಕಿತು.

ಕಾನೂನು ರೂಪಿಸುವವರೆಗೆ ಕನಿಷ್ಠ ಮಧ್ಯಂತರವಾಗಿ ಸೂಕ್ತ ರಿಟ್ ಹೊರಡಿಸುವಂತೆ, ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಲು, ಜನಾಂಗೀಯ ನಿಂದನೆಯನ್ನು ದ್ವೇಷ ಅಪರಾಧಗಳ ಪ್ರತ್ಯೇಕ ವರ್ಗವೆಂದು ಗುರುತಿಸಲು ಮತ್ತು ಅದಕ್ಕೆ ಅನುಗುಣವಾದ ಶಿಕ್ಷೆ ಪ್ರಮಾಣ ನಿರ್ಧರಿಸಬೇಕು ಎಂದು ನ್ಯಾಯಾಲಯವನ್ನು ಒತ್ತಾಯಿಸಲಾಗಿದೆ.

ಜನಾಂಗೀಯ ಅಪರಾಧಗಳನ್ನು ವರದಿ ಮಾಡಲು, ಅದನ್ನು ಪರಿಹರಿಸಲು ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ನೋಡಲ್ ಏಜೆನ್ಸಿ, ಶಾಶ್ವತ ಸಂಸ್ಥೆ, ಆಯೋಗ ಅಥವಾ ನಿರ್ದೇಶನಾಲಯವನ್ನು ರಚಿಸಬೇಕು. ಅಂತಹ ಅಪರಾಧಗಳನ್ನು ಪರಿಹರಿಸಲು ಪ್ರತಿ ಜಿಲ್ಲೆ ಮತ್ತು ಮಹಾನಗರ ಪ್ರದೇಶದಲ್ಲಿ ಮೀಸಲಾದ ವಿಶೇಷ ಪೊಲೀಸ್ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡುವಂತೆಯೂ ಅರ್ಜಿಯಲ್ಲಿ ಕೋರಿದೆ.

ಇದಲ್ಲದೆ, ಜನಾಂಗೀಯ ತಾರತಮ್ಯ ಮತ್ತು ಅದರ ಪರಿಹಾರದ ಕುರಿತು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯಾಗಾರಗಳು, ಚರ್ಚೆಗಳನ್ನು ಆಯೋಜಿಸಲು ಮನವಿಯಲ್ಲಿ ಕರೆ ನೀಡಲಾಗಿದೆ.

ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಪ್ರಸ್ತುತ ತನಿಖೆಯ ಆರಂಭಿಕ ಹಂತದಲ್ಲಿ ಜನಾಂಗೀಯ ಪಕ್ಷಪಾತವನ್ನು ಗುರುತಿಸಲು ಅಥವಾ ದಾಖಲಿಸಲು ಕಾರ್ಯವಿಧಾನವನ್ನು ಹೊಂದಿಲ್ಲ, ಇದರ ಪರಿಣಾಮವಾಗಿ ಅಂತಹ ಅಪರಾಧಗಳನ್ನು ಸಾಮಾನ್ಯ ಅಪರಾಧಗಳೆಂದು ಪರಿಗಣಿಸಲಾಗುತ್ತದೆ.

ಅಂಜೆಲ್ ಚಕ್ಮಾ ಅವರ ಹತ್ಯೆ ಪ್ರತ್ಯೇಕ ಘಟನೆಯಲ್ಲ, ಬದಲಾಗಿ ಈಶಾನ್ಯ ರಾಜ್ಯಗಳ ನಾಗರಿಕರ ವಿರುದ್ಧದ ಜನಾಂಗೀಯ ನಿಂದನೆ ಮತ್ತು ಹಿಂಸಾಚಾರದ ದೀರ್ಘಕಾಲೀನ ಮಾದರಿಯ ಭಾಗವಾಗಿದೆ ಎಂದು ಅರ್ಜಿಯಲ್ಲಿ ಒತ್ತಿ ಹೇಳಲಾಗಿದೆ. 2014 ರಲ್ಲಿ ನೀಡೋ ತಾನಿಯಮ್ ಸಾವು, ಮಹಾನಗರಗಳಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಮೇಲೆ ನಡೆದ ಅನೇಕ ಹಲ್ಲೆಗಳು, ಸಂಸತ್ತಿನ ಉತ್ತರಗಳಲ್ಲಿ ಕೇಂದ್ರವು ಒಪ್ಪಿಕೊಂಡ ಘಟನೆಗಳು ಸೇರಿದಂತೆ ಹಿಂದಿನ ಪ್ರಕರಣಗಳನ್ನು ಇದು ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...