Homeಕರ್ನಾಟಕಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣ ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ ಎಂದು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

6ನೇ ತರಗತಿ ಫೇಲ್‌ ಆದ ಹುಡುಗನೊಬ್ಬ 2000 ಕೋಟಿ ರೂಗಳ ಬೃಹತ್ ಕಂಪನಿ ಮಾಲೀಕನಾದುದ್ದು ಹೇಗೆ ಎಂದು ಪಾಸಿಟಿವ್ ಸ್ಟೋರಿಯೊಂದನ್ನು ಆಗಸ್ಟ್ 30 ರಂದು ಹ್ಯುಮನ್ಸ್ ಆಫ್ ಬಾಂಬೆ ಪ್ರಕಟಿಸಿತ್ತು. ಅದು ಬೆಂಗಳೂರು ಮೂಲದ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಕ ‘ಐಡಿ ಫ್ರೆಶ್ ಫುಡ್ ಕಂಪನಿ’ ಮತ್ತು ಅದರ ಸಿಇಓ ಮುಸ್ತಾಫ ಪಿ.ಸಿ ಯವರ ಸಂದರ್ಶನದ ಕುರಿತಾಗಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳ ಮಾಧ್ಯಮಗಳು ಇದನ್ನು ವರದಿ ಮಾಡಿದ್ದವು ಮಾತ್ರವಲ್ಲದೇ ಅವು ವೈರಲ್ ಆಗಿದ್ದವು.

ಇದಾದ ಒಂದು ವಾರದಲ್ಲಿ ವಾಟ್ಸಾಪ್ ನಲ್ಲಿ ಕೋಮು ಪ್ರಚೋದಕ ಫಾರ್ವಾಡ್ ಮೆಸೇಜ್ ಒಂದು ಹರಿದಾಡತೊಡಗಿತ್ತು. ಅದರಲ್ಲಿ “ಐಡಿ ಕಂಪನಿಯು ಹಿಟ್ಟು ತಯಾರಿಸುವಾಗ ಅದರ ಪ್ರಮಾಣವನ್ನು ಹೆಚ್ಚಿಸಲು ಹಸುವಿನ ಮೂಳೆ ಮತ್ತು ಕರುವಿನ ಕರುಳನ್ನು ಬೆರೆಸಲಾಗುತ್ತಿದೆ. ಸ್ಥಾಪಕ ಮುಸ್ತಾಫ ಪಿ.ಸಿ ಮತ್ತು ಅವರ ನಾಲ್ವರು ಸಂಬಂಧಿಗಳಾದ ಅಬ್ದುಲ್ ನಜೀರ್, ಶಂಸುದ್ದೀನ್ ಟಿ.ಕೆ, ಜಾಫರ್ ಟಿ.ಕೆ ಮತ್ತು ನೌಸಾದ್ ಟಿ.ಎ ರವರು ಕೇವಲ ಮುಸ್ಲಿಮರನ್ನು ಮಾತ್ರ ನೇಮಕ ಮಾಡಿಕೊಳ್ಳುತ್ತಿದ್ದಾರೆ ಮತ್ತು ಕಂಪನಿಯು ಹಲಾಲ್ ಸರ್ಟಿಫಿಕೆಟ್ ಹೊಂದಿದೆ” ಎಂದು ಪ್ರತಿಪಾದಿಸಲಾಗಿದೆ. ಜೊತೆಗೆ 2014 ರಲ್ಲಿ ಇದು 35 ಕೋಟಿ ರೂಗಳನ್ನು ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದೆ. ಷರಿಯತ್ ಇಸ್ಲಾಂ ಕಾನೂನಿಗೆ ಬದ್ದವಾಗಿದೆ ಎಂದೆಲ್ಲಾ ಲಿಂಕ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಸಂದೇಶ ಹರಿದಾಡುತ್ತಿರುವುದು ಐಡಿ ಫ್ರೆಶ್ ಫುಡ್ ಕಂಪನಿಯ ಗಮನಕ್ಕೆ ಬಂದು ಅದು ಹೇಳಿಕೆ ಬಿಡುಗಡೆ ಮಾಡಿದೆ. “ಐಡಿ ಕಂಪನಿ ಹಿಟ್ಟು ತಯಾರಿಸುವಾಗ ಪ್ರಾಣಿಜನ್ಯವನ್ನು ಬಳಸುತ್ತಿದೆ ಎಂಬ ವಾಟ್ಸಾಪ್ ಸಂದೇಶವು ತಪ್ಪು, ಸುಳ್ಳು ಮಾಹಿತಿ ಮತ್ತು ಆಧಾರರಹಿತವಾಗಿದೆ. ನಾವು ಕೇವಲ ಸಸ್ಯಾಹಾರಿ ಪದಾರ್ಥಗಳನ್ನು ಮಾತ್ರ ಹಿಟ್ಟು ತಯಾರಿಸುವಲ್ಲಿ ಬಳಸುತ್ತೇವೆ. ಐಡಿ ಇಡ್ಲಿ ಮತ್ತು ದೋಸೆ ಹಿಟ್ಟಿನ್ನು ಅಕ್ಕಿ, ಉದ್ದಿನ ಬೇಳೆ, ಮೇಂತ್ಯ ಮತ್ತು ಆರ್‌ಓ ನೀರಿನಿಂದ ಮಾತ್ರ ತಯಾರಿಸುತ್ತೇವೆ. ಅದು 100% ನೈಸರ್ಗಿಕ ಮತ್ತು ಸಸ್ಯಾಹಾರಿಯಾಗಿದೆ. ಇದರಲ್ಲಿ ಯಾವುದೇ ರೀತಿಯ ಪ್ರಾಣಿಜನ್ಯವನ್ನು ನಾವು ಬಳಸುವುದಿಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ನಾವು ಆರೋಗ್ಯಕರ ಮತ್ತು ಅಧಿಕೃತ ಭಾರತೀಯ ಉತ್ಪನ್ನಗಳನ್ನು ಬಳಸಿ ಯಾವುದೇ ರಾಸಾಯನಿಕಗಳು ಅಥವಾ ಸಂರಕ್ಷಕಗಳಿಲ್ಲದೆ ವಿಶ್ವದರ್ಜೆಯ, ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳನ್ನು ಬಳಸಿ ಆಹಾರ ಸುರಕ್ಷತೆ ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ಹಿಟ್ಟನ್ನು ತಯಾರಿಸುತ್ತೇವೆ. ಹಾಗಾಗಿ ಆಧಾರರಹಿತ ಮತ್ತು ನಕಲಿ ಪ್ರಚಾರವನ್ನು ನಂಬಬಾರದು ಎಂದು ಅದು ಮನವಿ ಮಾಡಿದೆ.

ಬೆಂಗಳೂರು ಮೂಲಕ ಐಡಿ ಕಂಪನಿಯು 2005ರಲ್ಲಿ ಆರಂಭವಾಗಿದ್ದು 45 ಮಾರುಕಟ್ಟೆಗಳನ್ನು ಹೊಂದಿದ್ದು, ಖ್ಯಾತಿ ಗಳಿಸಿದೆ. ಹಲವಾರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಕಂಪನಿಯು 2021ರ ಹಣಕಾಸು ವರ್ಷದಲ್ಲಿ 294 ಕೋಟಿ ರೂ ಲಾಭ ಗಳಿಸಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಅದು ಇತ್ತೀಚೆಗೆ ಬೆಂಗಳೂರು ಬಳಿಯ ಆನೇಕಲ್‌ನಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಬೃಹತ್ ಇಡ್ಲಿ ಮತ್ತು ದೋಸೆ ಹಿಟ್ಟು ತಯಾರಿಸುವ ಘಟಕ ಆರಂಭಿಸಿದೆ.

ಕಂಪನಿಯ ಮಾಲೀಕ ಮುಸ್ಲಿಂ ಆದ ಕಾರಣಕ್ಕೆ ಐಡಿ ಫ್ರೆಶ್ ಫುಡ್ ವಿರುದ್ಧ ವಾಟ್ಸಾಪ್‌ನಲ್ಲಿ ಅಪಪ್ರಚಾರ ಆರಂಭಿಸಲಾಗಿದೆಯೇ ಎಂಬ ಅನುಮಾನವೆದ್ದಿದೆ. ಆದರೆ ಐಡಿ ಕಂಪನಿ ಹೇಳಿಕೆ ನೀಡುವುದರ ಮೂಲಕ ಸ್ಪಷ್ಟೀಕರಣ ನೀಡಿದೆ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...